Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 34:20 - ಕನ್ನಡ ಸಮಕಾಲಿಕ ಅನುವಾದ

20 ಅವರ ಶತ್ರುಗಳ ಕೈಯಲ್ಲಿಯೂ, ಅವರ ಪ್ರಾಣವನ್ನು ಹುಡುಕುವವರ ಕೈಯಲ್ಲಿಯೂ ಒಪ್ಪಿಸುವೆನು. ಅವರ ಹೆಣಗಳು ಆಕಾಶದ ಪಕ್ಷಿಗಳಿಗೂ, ಕಾಡುಮೃಗಗಳಿಗೂ ಆಹಾರವಾಗುವುವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

20 ಕರುವಿನ ಹೋಳುಗಳ ನಡುವೆ ಹಾದುಹೋದ ದೇಶದ ಸಕಲ ಜನರು, ಇವರೆಲ್ಲರನ್ನೂ ಇವರ ಪ್ರಾಣವನ್ನು ಹುಡುಕುವ ಶತ್ರುಗಳ ಕೈಗೆ ಕೊಡುವೆನು; ಇವರ ಹೆಣಗಳು ಆಕಾಶ ಪಕ್ಷಿಗಳಿಗೂ, ಭೂಜಂತುಗಳಿಗೂ ಆಹಾರವಾಗುವವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

20 ಇವರೆಲ್ಲರನ್ನು ಶತ್ರುಗಳ ವಶಕ್ಕೆ ಒಪ್ಪಿಸುವೆನು. ಇವರ ಪ್ರಾಣವನ್ನು ಹುಡುಕುವ ಶತ್ರುಗಳ ಕೈಗೆ ಕೊಡುವೆನು. ಇವರ ಹೆಣಗಳು ಆಕಾಶದ ಪಕ್ಷಿಗಳಿಗೂ ಭೂಜಂತುಗಳಿಗೂ ಆಹಾರವಾಗುವುವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

20 ಇವರೆಲ್ಲರನ್ನೂ ಇವರ ಪ್ರಾಣವನ್ನು ಹುಡುಕುವ ಶತ್ರುಗಳ ಕೈಗೆ ಕೊಡುವೆನು; ಇವರ ಹೆಣಗಳು ಆಕಾಶಪಕ್ಷಿಗಳಿಗೂ ಭೂಜಂತುಗಳಿಗೂ ಆಹಾರವಾಗುವವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

20 ಆದ್ದರಿಂದ ನಾನು ಆ ಜನರನ್ನು ಅವರ ವೈರಿಗಳಿಗೆ ಮತ್ತು ಅವರನ್ನು ಕೊಲ್ಲಲು ಇಚ್ಛಿಸುವ ಪ್ರತಿಯೊಬ್ಬರಿಗೆ ಕೊಡುತ್ತೇನೆ. ಆ ಜನರ ದೇಹಗಳು ಗಾಳಿಯಲ್ಲಿ ಹಾರಾಡುವ ಪಕ್ಷಿಗಳಿಗೂ ಭೂಮಿಯ ಮೇಲಿನ ಕಾಡುಪ್ರಾಣಿಗಳಿಗೂ ಆಹಾರವಾಗುವವು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 34:20
25 ತಿಳಿವುಗಳ ಹೋಲಿಕೆ  

ಈ ಜನರ ಹೆಣಗಳು ಆಕಾಶದ ಪಕ್ಷಿಗಳಿಗೂ ಕಾಡುಮೃಗಗಳಿಗೂ ಆಹಾರವಾಗುವುವು. ಯಾರೂ ಅವುಗಳನ್ನು ಬೆದರಿಸುವುದಿಲ್ಲ.


“ ‘ನಾನು ಈ ಸ್ಥಳದಲ್ಲಿ ಯೆಹೂದದ, ಯೆರೂಸಲೇಮಿನ ಆಲೋಚನೆಯನ್ನು ಶೂನ್ಯ ಮಾಡುವೆನು. ಅವರ ಶತ್ರುಗಳ ಮುಂದೆಯೂ, ಅವರ ಪ್ರಾಣವನ್ನು ಹುಡುಕುವವರ ಕೈಯಿಂದಲೂ ಅವರನ್ನು ಖಡ್ಗದಿಂದ ಬೀಳುವಂತೆ ಮಾಡುವೆನು. ಅವರ ಹೆಣಗಳನ್ನು ಆಕಾಶದ ಪಕ್ಷಿಗಳಿಗೂ, ಕಾಡುಮೃಗಗಳಿಗೂ ಆಹಾರವಾಗಿ ಕೊಡುವೆನು.


“ಅವರು ಮರಣಕರವಾದ ಬೇನೆಗಳಿಂದ ಸಾಯುವರು. ಅವರಿಗೋಸ್ಕರ ಗೋಳಾಟ ಆಗುವುದಿಲ್ಲ. ಅವರಿಗೆ ಸಮಾಧಿಯಾಗುವುದಿಲ್ಲ. ಭೂಮಿಯ ಮೇಲೆ ಅವರು ಗೊಬ್ಬರವಾಗುವರು. ಖಡ್ಗದಿಂದಲೂ ಕ್ಷಾಮದಿಂದಲೂ ಸಂಹಾರವಾಗುವರು. ಅವರ ಹೆಣಗಳು ಆಕಾಶದ ಪಕ್ಷಿಗಳಿಗೂ ಕಾಡುಮೃಗಗಳಿಗೂ ಆಹಾರವಾಗುವುವು.”


ಆದ್ದರಿಂದ ನಿನ್ನ ಪ್ರಾಣವನ್ನು ಹುಡುಕುವ ಅನಾತೋತಿನ ಮನುಷ್ಯರಿಗೆ ನೀನು, “ನಮ್ಮ ಕೈಯಿಂದ ಸಾಯದ ಹಾಗೆ ಯೆಹೋವ ದೇವರ ಹೆಸರಿನಲ್ಲಿ ಪ್ರವಾದನೆ ಹೇಳಬೇಡ,” ಅನ್ನುವವರಿಗೆ ಯೆಹೋವ ದೇವರು ಹೇಳುವುದೇನೆಂದರೆ,


ಬಾಷನ ಕಡೆಯವರಲ್ಲಿ ಪಟ್ಟಣದೊಳಗೆ ಸಾಯುವವನನ್ನು ನಾಯಿಗಳು ತಿನ್ನುವುವು. ಅವನ ಕಡೆಯವನಲ್ಲಿ ಹೊಲದೊಳಗೆ ಸಾಯುವವನನ್ನು ಆಕಾಶದ ಪಕ್ಷಿಗಳು ತಿನ್ನುವುವು,” ಎಂಬುದೇ ಆ ವಾಕ್ಯ.


ನಿನ್ನ ಪ್ರಾಣವನ್ನು ಹುಡುಕುವವರ ಕೈಗೂ, ನೀನು ಹೆದರಿಕೊಂಡವರ ಕೈಗೂ ಅಂದರೆ ಬಾಬಿಲೋನಿನ ಅರಸನಾದ ನೆಬೂಕದ್ನೆಚ್ಚರನ ಕೈಗೆ ಹಾಗೂ ಬಾಬಿಲೋನಿಯ ಕೈಗೆ ಒಪ್ಪಿಸಿ ಬಿಡುತ್ತೇನೆ.


ಯೆಹೋವ ದೇವರು ಹೇಳುವುದೇನೆಂದರೆ, ತರುವಾಯ ನಾನು ಯೆಹೂದದ ಅರಸನಾದ ಚಿದ್ಕೀಯನನ್ನೂ, ಅವನ ಸೇವಕರನ್ನೂ, ಜನರನ್ನೂ ಈ ಪಟ್ಟಣದಲ್ಲಿ ವ್ಯಾಧಿಯಿಂದಲೂ, ಖಡ್ಗದಿಂದಲೂ, ಕ್ಷಾಮದಿಂದಲೂ ಉಳಿದವರನ್ನು ಬಾಬಿಲೋನಿನ ಅರಸನಾದ ನೆಬೂಕದ್ನೆಚ್ಚರನ ಕೈಗೂ, ಅವರ ಶತ್ರುಗಳ ಕೈಗೂ ಒಪ್ಪಿಸುವೆನು. ಅವನು ಅವರನ್ನು ಖಡ್ಗದ ಬಾಯಿಂದ ಹೊಡೆಯುವನು. ಅವರ ಮೇಲೆ ಕರುಣೆ ಇಡುವುದಿಲ್ಲ, ಕನಿಕರಿಸುವುದಿಲ್ಲ, ಅಂತಃಕರಣ ಪಡುವುದಿಲ್ಲ.’


ಯಾರೊಬ್ಬಾಮನವರಲ್ಲಿ ಯಾವನು ಪಟ್ಟಣದಲ್ಲಿ ಸಾಯುವನೋ ಅವನನ್ನು ನಾಯಿಗಳು ತಿಂದುಬಿಡುವವು. ಹೊಲದಲ್ಲಿ ಸಾಯುವವನನ್ನು ಆಕಾಶದ ಪಕ್ಷಿಗಳು ತಿಂದುಬಿಡುವವು,’ ಎಂದು ಯೆಹೋವ ದೇವರು ಹೇಳಿದ್ದಾರೆ.


ಯೆಹೋವ ದೇವರು ನಿನ್ನನ್ನು ನನ್ನ ಕೈಯಲ್ಲಿ ಒಪ್ಪಿಸಿಕೊಡುವರು; ನಾನು ನಿನ್ನನ್ನು ಹೊಡೆದುಬಿಟ್ಟು, ನಿನ್ನ ತಲೆಯನ್ನು ನಿನ್ನಿಂದ ತೆಗೆದುಹಾಕಿ, ಫಿಲಿಷ್ಟಿಯರ ದಂಡಿನ ಹೆಣಗಳನ್ನು ಈ ದಿನ ಆಕಾಶದ ಪಕ್ಷಿಗಳಿಗೂ ಕಾಡುಮೃಗಗಳಿಗೂ ಆಹಾರವಾಗಿ ಕೊಡುವೆನು. ಈ ದಿನ ಇಸ್ರಾಯೇಲರಲ್ಲಿ ದೇವರು ಇದ್ದಾರೆಂದು ಭೂಲೋಕದವರೆಲ್ಲರೂ ತಿಳಿಯುವರು.


ದಾವೀದನಿಗೆ, “ನೀನು ನನ್ನ ಬಳಿಗೆ ಬಾ; ನಿನ್ನ ಮಾಂಸವನ್ನು ಆಕಾಶದ ಪಕ್ಷಿಗಳಿಗೂ, ಕಾಡುಮೃಗಗಳಿಗೂ ಆಹಾರವಾಗಿ ಕೊಡುವೆನು,” ಎಂದನು.


ಆಗ ನಾನು ನಿನ್ನನ್ನು ನೆಲದ ಮೇಲೆ ಹಾಕಿಬಿಡುವೆನು. ಬಯಲಿನ ಮೇಲೆ ಬಿಸಾಡುವೆನು. ಆಕಾಶದ ಪಕ್ಷಿಗಳನ್ನೆಲ್ಲಾ ನಿನ್ನ ಮೇಲೆ ಕೂರಿಸಿ, ಸಮಸ್ತ ಭೂಮಿಯ ಮೇಲಿನ ಮೃಗಗಳನ್ನು ನಿನ್ನಿಂದ ತೃಪ್ತಿಪಡಿಸುವೆನು.


ನಿನ್ನನ್ನೂ ನಿನ್ನ ನದಿಗಳ ಮೀನುಗಳನ್ನೂ ಅರಣ್ಯದಲ್ಲಿ ಹಾಕುವೆನು. ನೀನು ಬಯಲುಗಳ ಮೇಲೆ ಬಿದ್ದಿರುವೆ; ನಿನ್ನನ್ನು ಯಾರೂ ಹೊರುವುದೂ ಇಲ್ಲ, ಸೇರಿಸುವುದೂ ಇಲ್ಲ. ನಿನ್ನನ್ನೂ ನಿನ್ನ ನದಿಯ ಎಲ್ಲಾ ಮೀನುಗಳನ್ನೂ ಕಾಡಿನ ಪಾಲುಮಾಡುವೆನು. ಭೂಮಿಯ ಮೇಲಿರುವ ಮೃಗಗಳಿಗೂ ಆಕಾಶದ ಪಕ್ಷಿಗಳಿಗೂ ನಿನ್ನನ್ನು ಆಹಾರವನ್ನಾಗಿ ಕೊಟ್ಟಿದ್ದೇನೆ.


ಏಕೆಂದರೆ ಏಲಾಮನ್ನು ಅವರ ಶತ್ರುಗಳ ಮುಂದೆಯೂ, ಅವರ ಪ್ರಾಣವನ್ನು ಹುಡುಕುವವರ ಮುಂದೆಯೂ ಹೆದರುವಂತೆ ಮಾಡುವೆನು; ಅವರ ಮೇಲೆ ಕೇಡನ್ನೂ, ನನ್ನ ಕೋಪದ ಉಗ್ರವನ್ನೂ ಬರಮಾಡುವೆನು,” ಎಂದು ಯೆಹೋವ ದೇವರು ಹೇಳುತ್ತಾರೆ. “ಅವನನ್ನು ಮುಗಿಸಿಬಿಡುವವರೆಗೆ ಖಡ್ಗವನ್ನು ಅವರ ಹಿಂದೆ ಕಳುಹಿಸುವೆನು.


ಯೆಹೋವ ದೇವರು ಹೀಗೆ ಹೇಳುತ್ತಾರೆ: ‘ಇಗೋ, ನಾನು ಯೆಹೂದದ ಅರಸನಾದ ಚಿದ್ಕೀಯನನ್ನು ಅವನ ಶತ್ರುವಾದಂಥ ಅವನ ಪ್ರಾಣವನ್ನು ಹುಡುಕಿದಂಥ ಬಾಬಿಲೋನಿನ ಅರಸನಾದ ನೆಬೂಕದ್ನೆಚ್ಚರನ ಕೈಯಲ್ಲಿ ಹೇಗೆ ಒಪ್ಪಿಸಿದೆನೋ, ಹಾಗೆಯೇ ಈಜಿಪ್ಟಿನ ಅರಸನಾದ ಫರೋಹ ಹೋಫ್ರನನ್ನು ಅವನ ಪ್ರಾಣವನ್ನು ಹುಡುಕುವ ಅವನ ಶತ್ರುಗಳ ಕೈಯಲ್ಲಿ ಒಪ್ಪಿಸುತ್ತೇನೆ.’ ”


ಹೀಗೆ ಅರಸನಾದ ಚಿದ್ಕೀಯನು ಯೆರೆಮೀಯನಿಗೆ ಅಂತರಂಗದಲ್ಲಿ ಪ್ರಮಾಣಮಾಡಿ, “ನಮಗೆ ಈ ಪ್ರಾಣವನ್ನು ಉಂಟುಮಾಡಿದ ಯೆಹೋವ ದೇವರ ಜೀವದಾಣೆ, ನಾನು ನಿನ್ನನ್ನು ಕೊಂದುಹಾಕುವುದಿಲ್ಲ; ನಿನ್ನ ಪ್ರಾಣವನ್ನು ಹುಡುಕುವ ಈ ಮನುಷ್ಯರ ಕೈಯಲ್ಲಿ ಒಪ್ಪಿಸುವುದಿಲ್ಲ,” ಎಂದನು.


ಆಗ ನೀನು ನಿರ್ಜನನಾದಾಗ ಏನು ಮಾಡುವೆ? ನೀನು ಕಡುಕೆಂಪು ಬಣ್ಣದ ವಸ್ತ್ರವನ್ನು ತೊಟ್ಟುಕೊಂಡರೇನು? ಚಿನ್ನದ ಆಭರಣಗಳಿಂದ ನಿನ್ನನ್ನು ಅಲಂಕರಿಸಿಕೊಂಡರೇನು? ಕಾಡಿಗೆಯಿಂದ ಕಣ್ಣುಗಳನ್ನು ಅಗಲಿಸಿಕೊಂಡು ಶೃಂಗರಿಸಿಕೊಂಡರೇನು? ನೀವು ವ್ಯರ್ಥವಾಗಿ ನಿನ್ನನ್ನು ಅಲಂಕರಿಸಿಕೊಳ್ಳುತ್ತಿ. ನಿನ್ನ ಪ್ರೇಮಿಗಳು ನಿನ್ನನ್ನು ತಿರಸ್ಕರಿಸುತ್ತಾರೆ; ಅವರು ನಿನ್ನನ್ನು ಕೊಲ್ಲಲು ಬಯಸುತ್ತಾರೆ.


ನಿಮ್ಮ ಹೆಣಗಳು ಆಕಾಶದ ಎಲ್ಲಾ ಪಕ್ಷಿಗಳಿಗೂ ಕಾಡುಮೃಗಗಳಿಗೂ ಆಹಾರವಾಗುವುದು. ಯಾರೂ ಅವುಗಳನ್ನು ಬೆದರಿಸಿ ಓಡಿಸುವುದಿಲ್ಲ.


ನಿಮ್ಮ ಸೇವಕರ ಹೆಣಗಳನ್ನು ಆಕಾಶದ ಪಕ್ಷಿಗಳಿಗೂ ನಿಮ್ಮ ಭಕ್ತರ ಮಾಂಸವನ್ನು ಭೂಮಿಯ ಮೃಗಗಳಿಗೂ ಆಹಾರವಾಗಿ ಕೊಟ್ಟಿದ್ದಾರೆ.


ನನ್ನ ಸೊತ್ತು ನನಗೆ ಚಿತ್ರವರ್ಣದ ಪಕ್ಷಿಯಾಯಿತು. ಸುತ್ತಲಾಗಿ ಹದ್ದುಗಳು ಅದಕ್ಕೆ ವಿರೋಧವಾಗಿವೆ. ಬನ್ನಿ, ಕಾಡುಮೃಗಗಳನ್ನೆಲ್ಲಾ ಕೂಡಿಸಿರಿ, ನುಂಗುವುದಕ್ಕೆ ಅವುಗಳನ್ನು ತನ್ನಿರಿ.


“ಏಕೆಂದರೆ ಸಾರ್ವಭೌಮ ಯೆಹೋವ ದೇವರು ಹೀಗೆ ಹೇಳುತ್ತಾರೆ, ನೀನು ಹಗೆಮಾಡುವವರ ಕೈಯಲ್ಲಿಯೂ ಯಾರ ಕಡೆಯಿಂದ ನಿನ್ನ ಮನಸ್ಸು ಕುಂದಿಹೋಯಿತೋ ಅವರ ಕೈಯಲ್ಲಿಯೂ ನಿನ್ನನ್ನು ಒಪ್ಪಿಸುತ್ತೇನೆ.


ಆ ಬಾಬಿಲೋನಿಯದ ಅರಸನು ಅಲ್ಲೇ ಚಿದ್ಕೀಯನಿಗೆ ಶಿಕ್ಷೆಯನ್ನು ವಿಧಿಸಿ, ಅವನ ಮಕ್ಕಳನ್ನು ಅವನ ಕಣ್ಣೆದುರಿಗೇ ವಧಿಸಿದನು. ಯೆಹೂದದ ಎಲ್ಲಾ ಶ್ರೇಷ್ಠರನ್ನೂ ರಿಬ್ಲದಲ್ಲಿ ಕೊಲ್ಲಿಸಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು