Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 34:4 - ಕನ್ನಡ ಸಮಕಾಲಿಕ ಅನುವಾದ

4 “ ‘ಆದರೂ ಯೆಹೂದದ ಅರಸನಾದ ಚಿದ್ಕೀಯನೇ, ಯೆಹೋವ ದೇವರ ವಾಗ್ದಾನವನ್ನು ಕೇಳು. ನಿನ್ನನ್ನು ಕುರಿತು ಯೆಹೋವ ದೇವರು ಹೀಗೆ ಹೇಳುತ್ತಾರೆ: ನೀನು ಖಡ್ಗದಿಂದ ಸಾಯುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

4 ಆದರೂ ಯೆಹೂದದ ಅರಸನಾದ ಚಿದ್ಕೀಯನೇ, ಯೆಹೋವನ ಮಾತನ್ನು ಕೈಗೊಳ್ಳು; ಯೆಹೋವನು ನಿನ್ನ ವಿಷಯವಾಗಿ ಇಂತೆನ್ನುತ್ತಾನೆ, ನೀನು ಕೇಳಿ ಕೈಕೊಂಡರೆ ಖಡ್ಗದಿಂದ ಹತನಾಗುವುದಿಲ್ಲ; ಸುಖವಾಗಿ ಸಾಯುವಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

4 ಆದರೂ ಜುದೇಯದ ಅರಸನಾದ ಚಿದ್ಕೀಯನೇ, ಸರ್ವೇಶ್ವರನ ಮಾತನ್ನು ಕೈಗೊಳ್ಳು; ಸರ್ವೇಶ್ವರ ನಿನ್ನ ವಿಷಯವಾಗಿ ಹೀಗೆನ್ನುತ್ತಾರೆ - ನೀನು ಕತ್ತಿಯಿಂದ ಹತನಾಗುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

4 ಆದರೂ ಯೆಹೂದದ ಅರಸನಾದ ಚಿದ್ಕೀಯನೇ, ಯೆಹೋವನ ಮಾತನ್ನು ಕೈಕೊಳ್ಳು; ಯೆಹೋವನು ನಿನ್ನ ವಿಷಯವಾಗಿ ಇಂತೆನ್ನುತ್ತಾನೆ - [ನೀನು ಕೇಳಿ ಕೈಕೊಂಡರೆ] ಖಡ್ಗದಿಂದ ಹತನಾಗುವದಿಲ್ಲ; ಸುಖವಾಗಿ ಸಾಯುವಿ;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

4 ಯೆಹೂದದ ರಾಜನಾದ ಚಿದ್ಕೀಯನೇ, ಯೆಹೋವನ ವಾಗ್ದಾನವನ್ನು ಕೇಳು. ಯೆಹೋವನು ನಿನ್ನ ಬಗ್ಗೆ ಹೀಗೆ ಹೇಳುತ್ತಾನೆ. ನಿನ್ನನ್ನು ಖಡ್ಗದಿಂದ ಕೊಲ್ಲಲಾಗುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 34:4
7 ತಿಳಿವುಗಳ ಹೋಲಿಕೆ  

ನೀನು ಅವನ ಕೈಯೊಳಗಿಂದ ತಪ್ಪಿಸಿಕೊಳ್ಳುವುದಿಲ್ಲ. ಆದರೆ ನಿಶ್ಚಯವಾಗಿ ಹಿಡಿಯಲಾಗಿ, ಅವನ ಕೈವಶವಾಗುವೆ. ನೀವು ಬಾಬಿಲೋನಿನ ಅರಸನನ್ನು ಪ್ರತ್ಯಕ್ಷವಾಗಿ ಕಾಣುವಿರಿ. ಅವನು ನಿಮ್ಮೊಂದಿಗೆ ಮುಖಾಮುಖಿಯಾಗಿ ಮಾತನಾಡುವನು. ನೀನು ಬಾಬಿಲೋನಿಗೆ ಹೋಗುವಿ.


ನೀನು ಶಾಂತಿಯುತವಾಗಿ ಸಾಯುವೆ. ನಿನಗಿಂತ ಮೊದಲು ಆಳಿದ ನಿನ್ನ ಪಿತೃಗಳಾದ ಅರಸರನ್ನು ಗೌರವಿಸಲು ಬೆಂಕಿಯನ್ನು ಹೊತ್ತಿಸಿದ ಪ್ರಕಾರ ನಿನಗೂ ಹಾಕುವರು. “ಅಯ್ಯೋ, ಒಡೆಯನೇ,” ಎಂದು ಹೇಳಿ ನಿನಗೋಸ್ಕರ ಗೋಳಾಡುವರು. ನಾನೇ ಈ ವಾಗ್ದಾನವನ್ನು ಮಾಡಿದ್ದೇನೆಂದು ಯೆಹೋವ ದೇವರು ಹೇಳುತ್ತಾರೆ.’ ”


ಆಗ ಮೀಕಾಯನು, “ಆದ್ದರಿಂದ ಯೆಹೋವ ದೇವರ ವಾಕ್ಯವನ್ನು ಕೇಳು. ಯೆಹೋವ ದೇವರು ತಮ್ಮ ಸಿಂಹಾಸನದ ಮೇಲೆ ಕುಳಿತುಕೊಂಡಿರುವುದನ್ನೂ ಆಕಾಶದ ಸಮಸ್ತ ಸೈನ್ಯವು ಅವರ ಬಲಗಡೆ ಮತ್ತು ಎಡಗಡೆಯಲ್ಲಿ ನಿಂತಿರುವುದನ್ನೂ ನಾನು ಕಂಡೆನು.


ಓ ಯಾಕೋಬಿನ ಮನೆತನವೇ, ಇಸ್ರಾಯೇಲಿನ ಮನೆತನದ ಎಲ್ಲಾ ಕುಲಗಳೇ, ಯೆಹೋವ ದೇವರ ವಾಕ್ಯವನ್ನು ನೀವು ಕೇಳಿರಿ.


“ಯೆಹೋವ ದೇವರ ಆಲಯದ ಬಾಗಿಲಲ್ಲಿ ನಿಂತುಕೊಂಡು ಈ ವಾಕ್ಯವನ್ನು ಅಲ್ಲಿ ಸಾರು: “ ‘ಯೆಹೂದ್ಯರೇ, ಯೆಹೋವ ದೇವರನ್ನು ಆರಾಧಿಸುವುದಕ್ಕೆ ಈ ಬಾಗಿಲುಗಳಲ್ಲಿ ಸೇರುವವರೇ, ಯೆಹೋವ ದೇವರ ವಾಕ್ಯವನ್ನು ಕೇಳಿರಿ.


ಆ ಅರಸನು ಚಿದ್ಕೀಯನನ್ನು ಬಾಬಿಲೋನಿಗೆ ಕೊಂಡು ಒಯ್ಯುವನು. ನಾನು ಅವನಿಗೆ ದಯೆತೋರಿಸುವವರೆಗೂ ಅವನು ಅಲ್ಲಿಯೇ ಇರುವನು. ನೀವು ಬಾಬಿಲೋನಿಯರೊಡನೆ ಯುದ್ಧಮಾಡಿದರೂ ಜಯವಾಗದು. ಇದು ಯೆಹೋವ ದೇವರ ನುಡಿ,’ ಎಂದು ಹೇಳುತ್ತಿರುವೆ, ಏಕೆ?” ಎಂದು ಆಪಾದಿಸಿ ಸೆರೆಯಲ್ಲಿ ಇಟ್ಟಿದ್ದನು.


ಇಸ್ರಾಯೇಲರೇ, ಯೆಹೋವ ದೇವರ ವಾಕ್ಯವನ್ನು ಕೇಳಿರಿ: ದೇಶದ ನಿವಾಸಿಗಳಾದ ನಿಮ್ಮ ಮೇಲೆ ಯೆಹೋವ ದೇವರು ಆಪಾದನೆ ಹೊರಿಸಿದ್ದಾರೆ. “ಏಕೆಂದರೆ ದೇಶದಲ್ಲಿ ಸತ್ಯವೂ ಇಲ್ಲ, ದಯೆಯೂ ಇಲ್ಲ, ದೇವರ ತಿಳುವಳಿಕೆಯೂ ಇಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು