Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 34:8 - ಕನ್ನಡ ಸಮಕಾಲಿಕ ಅನುವಾದ

8 ಗುಲಾಮರಿಗೆ ಸ್ವಾತಂತ್ರ್ಯವನ್ನು ಘೋಷಿಸಲು ಅರಸನಾದ ಚಿದ್ಕೀಯನು ಯೆರೂಸಲೇಮಿನ ಎಲ್ಲಾ ಜನರೊಂದಿಗೆ ಒಡಂಬಡಿಕೆಯನ್ನು ಮಾಡಿದ ನಂತರ ಯೆಹೋವ ದೇವರಿಂದ ಯೆರೆಮೀಯನಿಗೆ ಈ ಮಾತು ಬಂದಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

8 ಆ ಮೇಲೆ ಯೆಹೋವನು ಯೆರೆಮೀಯನಿಗೆ ಒಂದು ಮಾತನ್ನು ದಯಪಾಲಿಸಿದನು. ಇಷ್ಟರೊಳಗೆ ಅರಸನಾದ ಚಿದ್ಕೀಯನು ಯೆರೂಸಲೇಮಿನವರೆಲ್ಲರೊಂದಿಗೆ ಸೇರಿ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

8 ಯೆರೆಮೀಯನಿಗೆ ಸರ್ವೇಶ್ವರನಿಂದ ಮತ್ತೊಂದು ವಾಣಿ ಉಂಟಾಯಿತು. ಇಷ್ಟರೊಳಗೆ ಅರಸ ಚಿದ್ಕೀಯನು ಮತ್ತು ಜೆರುಸಲೇಮಿನ ಜನರೆಲ್ಲರು ಸೇರಿ ಒಂದು ಒಪ್ಪಂದ ಮಾಡಿಕೊಂಡಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

8 ಆಮೇಲೆ ಯೆಹೋವನು ಯೆರೆಮೀಯನಿಗೆ ಒಂದು ಮಾತನ್ನು ದಯಪಾಲಿಸಿದನು. ಇಷ್ಟರೊಳಗೆ ಅರಸನಾದ ಚಿದ್ಕೀಯನು ಯೆರೂಸಲೇವಿುನವರೆಲ್ಲರೊಂದಿಗೆ ಸೇರಿ -

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

8 ರಾಜನಾದ ಚಿದ್ಕೀಯನು ಜೆರುಸಲೇಮಿನ ಎಲ್ಲಾ ಜನರೊಂದಿಗೆ ಇಬ್ರಿಯದ ಗುಲಾಮರೆಲ್ಲರನ್ನೂ ಬಿಡುಗಡೆ ಮಾಡುವದಾಗಿ ಮಾತುಕೊಟ್ಟಿದ್ದನು. ಚಿದ್ಕೀಯನು ಹೀಗೆ ಮಾತುಕೊಟ್ಟ ತರುವಾಯ ಯೆಹೋವನಿಂದ ಯೆರೆಮೀಯನಿಗೆ ಒಂದು ಸಂದೇಶ ಬಂದಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 34:8
18 ತಿಳಿವುಗಳ ಹೋಲಿಕೆ  

ಐವತ್ತನೆಯ ವರ್ಷವನ್ನು ಪರಿಶುದ್ಧಮಾಡಿ ದೇಶದಲ್ಲಿ ಎಲ್ಲಾ ನಿವಾಸಿಗಳಿಗೆ ಬಿಡುಗಡೆಯನ್ನು ಪ್ರಕಟಿಸಬೇಕು. ಅದು ನಿಮಗೆ ಐವತ್ತನೆಯ ವರ್ಷದ ವಾರ್ಷಿಕೋತ್ಸವವಾಗಿರಬೇಕು. ನಿಮ್ಮಲ್ಲಿ ಪ್ರತಿಯೊಬ್ಬನು ಅವನವನ ಆಸ್ತಿಗೂ, ಅವನವನ ಕುಟುಂಬಕ್ಕೂ, ಹಿಂದಿರುಗಿ ಹೋಗಬೇಕು.


“ಆದ್ದರಿಂದ ಯೆಹೋವ ದೇವರು ಹೀಗೆ ಹೇಳುತ್ತಾರೆ: ಪ್ರತಿಯೊಬ್ಬನು ತನ್ನ ಸಹೋದರನಿಗೂ, ಪ್ರತಿ ಮನುಷ್ಯನು ತನ್ನ ನೆರೆಯವನಿಗೂ ಬಿಡುಗಡೆಯನ್ನು ಸಾರುವುದರಲ್ಲಿ ನೀವು ನನಗೆ ಕಿವಿಗೊಡಲಿಲ್ಲ. ಇಗೋ, ನಾನು ಖಡ್ಗ, ಬರ, ವ್ಯಾಧಿ ಇವುಗಳಿಗಾಗಿಯೇ ನಿಮಗೆ ಬಿಡುಗಡೆಯನ್ನು ಸಾರುತ್ತೇನೆ ಎಂದು ಯೆಹೋವ ದೇವರು ಹೇಳುತ್ತಾರೆ ಮತ್ತು ಭೂಮಿಯ ಎಲ್ಲಾ ರಾಜ್ಯಗಳಿಗೆ ನಿಮ್ಮನ್ನೂ ತಿರಸ್ಕಾರ ಹೊಂದುವಂತೆ ಮಾಡುವೆನು.


ಅನಂತರ ಯೆಹೋವ ದೇವರ ಜನರಾಗಿರುವಂತೆ ಯೆಹೋಯಾದಾವನು ಯೆಹೋವ ದೇವರಿಗೂ, ಅರಸನಿಗೂ, ಜನರಿಗೂ ಮಧ್ಯೆ ಒಡಂಬಡಿಕೆ ಮಾಡಿದನು. ಹಾಗೆಯೇ ಅರಸನಿಗೂ, ಜನರಿಗೂ ಮಧ್ಯದಲ್ಲಿ ಒಡಂಬಡಿಕೆ ಮಾಡಿಸಿದನು.


ಸಾರ್ವಭೌಮ ಯೆಹೋವ ದೇವರ ಆತ್ಮರು ನನ್ನ ಮೇಲೆ ಇದ್ದಾರೆ. ಏಕೆಂದರೆ ಯೆಹೋವ ದೇವರು ನನ್ನನ್ನು ಬಡವರಿಗೆ ಶುಭಸಂದೇಶವನ್ನು ಸಾರುವುದಕ್ಕೆ ಅಭಿಷೇಕಿಸಿದ್ದಾರೆ. ಮುರಿದ ಹೃದಯಗಳನ್ನು ಕಟ್ಟುವುದಕ್ಕೂ, ಬಂಧಿತರಿಗೆ ಸ್ವಾತಂತ್ರ್ಯವನ್ನು ಘೋಷಿಸಲು ಮತ್ತು ಕೈದಿಗಳಿಗೆ ಕತ್ತಲೆಯಿಂದ ಬಿಡುಗಡೆ ಮಾಡಲು


“ಇದೆಲ್ಲದರ ನಿಮಿತ್ತ ನಾವು ಒಡಂಬಡಿಕೆಯನ್ನು ಸ್ಥಿರಮಾಡಿ ಬರೆಯುತ್ತೇವೆ. ನಮ್ಮ ಪ್ರಧಾನರೂ, ಲೇವಿಯರೂ, ಯಾಜಕರೂ ಅದಕ್ಕೆ ಮುದ್ರೆ ಹಾಕುತ್ತಾರೆ,” ಎಂದು ಪ್ರಾರ್ಥಿಸಿದರು.


ಈಗ ಇಸ್ರಾಯೇಲಿನ ದೇವರಾದ ಯೆಹೋವ ದೇವರ ಉಗ್ರಕೋಪವು ನಮ್ಮನ್ನು ಬಿಟ್ಟುಹೋಗುವ ಹಾಗೆ, ನಾನು ಅವರ ಸಂಗಡ ಒಡಂಬಡಿಕೆಯನ್ನು ಮಾಡಲು ಮನಸ್ಸುಳ್ಳವನಾಗಿದ್ದೇನೆ.


ಅನಂತರ ಯೆಹೋವ ದೇವರ ಜನರಾಗಿರುವಂತೆ ಯೆಹೋಯಾದಾವನು ತನಗೂ, ಸಮಸ್ತ ಜನರಿಗೂ, ಅರಸನಿಗೂ ಒಡಂಬಡಿಕೆ ಮಾಡಿಸಿದನು.


ನಿಮ್ಮ ಸಹೋದರನಾದ ಹಿಬ್ರಿಯನಾಗಲಿ, ಒಬ್ಬ ಹಿಬ್ರಿಯ ಸ್ತ್ರೀಯಾಗಲಿ ನಿಮಗೆ ಗುಲಾಮರಾಗಿ, ಆರು ವರ್ಷ ನಿಮಗೆ ಮಾರಾಟವಾಗಿದ್ದರೆ ಮತ್ತು ಸೇವೆ ಮಾಡಿದ್ದರೆ, ಏಳನೆಯ ವರ್ಷದಲ್ಲಿ ಅವರನ್ನು ಬಿಡುಗಡೆ ಮಾಡಿ ಕಳುಹಿಸಿಬಿಡಿರಿ.


“ನಾನು ಆಯ್ದುಕೊಳ್ಳುವ ಉಪವಾಸವು ಅನ್ಯಾಯದ ಸರಪಣಿಯನ್ನು ಬಿಚ್ಚುವುದೂ, ಭಾರವಾದ ಹೊರೆಯನ್ನು ಬಿಚ್ಚುವುದೂ, ದಬ್ಬಾಳಿಕೆಯಾದವರನ್ನು ಬಿಡಿಸುವುದೂ, ನೊಗಗಳನ್ನೆಲ್ಲಾ ಮುರಿದುಹಾಕುವುದೂ, ಇವೇ ಅಲ್ಲವೋ?


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು