Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 35:13 - ಕನ್ನಡ ಸಮಕಾಲಿಕ ಅನುವಾದ

13 “ಇಸ್ರಾಯೇಲರ ದೇವರೂ, ಸೇನಾಧೀಶ್ವರ ಯೆಹೋವ ದೇವರೂ ಆದ ನಾನು ಹೇಳುವುದು ಇದು: ನೀನು ಹೋಗಿ ಯೆಹೂದ್ಯರಿಗೂ, ಯೆರೂಸಲೇಮಿನ ನಿವಾಸಿಗಳಿಗೂ ಹೀಗೆಂದು ತಿಳಿಸು: ‘ನೀವು ಬುದ್ಧಿ ತಂದುಕೊಂಡು ನನ್ನ ಮಾತುಗಳನ್ನು ಕೇಳುವುದಿಲ್ಲವೇ?’ ಎಂದು ಯೆಹೋವ ದೇವರು ಕೇಳುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

13 “ಇಸ್ರಾಯೇಲರ ದೇವರೂ, ಸೇನಾಧೀಶ್ವರನೂ ಆದ ಯೆಹೋವನು ಇಂತೆನ್ನುತ್ತಾನೆ, ನೀನು ಹೋಗಿ ಯೆಹೂದ್ಯರಿಗೂ, ಯೆರೂಸಲೇಮಿನ ನಿವಾಸಿಗಳಿಗೂ ಹೀಗೆ ಹೇಳು, ‘ಇದರಿಂದ ನೀವು ಬುದ್ಧಿತಂದುಕೊಂಡು ನನ್ನ ಮಾತುಗಳನ್ನು ಕೇಳುವುದಿಲ್ಲವೋ?’ ಎಂದು ಯೆಹೋವನು ಅನ್ನುತ್ತಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

13 “ಇಸ್ರಯೇಲರ ದೇವರೂ ಸೇನಾಧೀಶ್ವರನೂ ಸರ್ವೇಶ್ವರನೂ ಆದ ನಾನು ಹೇಳುವುದು ಇದು: ನೀನು ಹೋಗಿ ಯೆಹೂದ್ಯರಿಗೂ ಜೆರುಸಲೇಮಿನ ನಿವಾಸಿಗಳಿಗೂ ಹೀಗೆಂದು ತಿಳಿಸು: ‘ನೀವು ಬುದ್ಧಿ ತಂದುಕೊಂಡು ನನ್ನ ಮಾತುಗಳನ್ನು ಕೇಳುವುದಿಲ್ಲವೆ?’ ಎನ್ನುತ್ತಾರೆ ಸರ್ವೇಶ್ವರ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

13 ಇಸ್ರಾಯೇಲ್ಯರ ದೇವರೂ ಸೇನಾಧೀಶ್ವರನೂ ಆದ ಯೆಹೋವನು ಇಂತೆನ್ನುತ್ತಾನೆ - ನೀನು ಹೋಗಿ ಯೆಹೂದ್ಯರಿಗೂ ಯೆರೂಸಲೇವಿುನ ನಿವಾಸಿಗಳಿಗೂ ಹೀಗೆ ಹೇಳು - [ಇದರಿಂದ] ನೀವು ಬುದ್ಧಿ ತಂದುಕೊಂಡು ನನ್ನ ಮಾತುಗಳನ್ನು ಕೇಳುವದಿಲ್ಲವೋ ಎಂದು ಯೆಹೋವನು ಅನ್ನುತ್ತಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

13 “ಇಸ್ರೇಲಿನ ದೇವರೂ ಸರ್ವಶಕ್ತನೂ ಆಗಿರುವ ಯೆಹೋವನು ಹೀಗೆ ಹೇಳಿದನು: ಯೆರೆಮೀಯನೇ, ಹೋಗಿ ಈ ಸಂದೇಶವನ್ನು ಯೆಹೂದದ ಮತ್ತು ಜೆರುಸಲೇಮಿನ ಜನರಿಗೆ ತಿಳಿಸು. ನೀವು ಇದರಿಂದ ಒಂದು ಪಾಠವನ್ನು ಕಲಿಯಬೇಕು ಮತ್ತು ನನ್ನ ಸಂದೇಶವನ್ನು ಅನುಸರಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 35:13
12 ತಿಳಿವುಗಳ ಹೋಲಿಕೆ  

ಅವರು ನನಗೆ ಮುಖವನ್ನಲ್ಲ ಬೆನ್ನನ್ನು ತಿರುಗಿಸಿದ್ದಾರೆ. ಆದರೂ ನಾನು ಅವರಿಗೆ ಬೋಧಿಸಿದೆನು. ಪುನಃ ಬೋಧಿಸಿದೆನು. ಆದರೂ ಉಪದೇಶ ಹೊಂದುವುದಕ್ಕೆ ಅವರು ಕಿವಿಗೊಡಲಿಲ್ಲ ಅಥವಾ ಪ್ರತಿಕ್ರಿಯಿಸುವುದಿಲ್ಲ.


ಓ ಯೆಹೋವ ದೇವರೇ, ನಿಮ್ಮ ಕಣ್ಣುಗಳು ಸತ್ಯದ ಮೇಲೆ ಇವೆಯಲ್ಲವೋ? ಅವರನ್ನು ಹೊಡೆದಿರಿ, ಆದರೆ ಅವರಿಗೆ ದುಃಖವಾಗಲಿಲ್ಲ; ಅವರನ್ನು ತುಳಿದಿರಿ, ಆದರೆ ತಿದ್ದುಕೊಳ್ಳಲು ಒಪ್ಪಲಿಲ್ಲ. ತಮ್ಮ ಮುಖಗಳನ್ನು ಬಂಡೆಗಿಂತ ಕಠಿಣ ಮಾಡಿಕೊಂಡಿದ್ದಾರೆ. ಅವರು ಪಶ್ಚಾತ್ತಾಪಕ್ಕೆ ನಿರಾಕರಿಸಿದ್ದಾರೆ.


ಮಾತನಾಡುವ ದೇವರನ್ನು ನೀವು ಅಸಡ್ಡೆ ಮಾಡದಂತೆ ನೋಡಿಕೊಳ್ಳಿರಿ. ಏಕೆಂದರೆ ಭೂಮಿಯ ಮೇಲೆ ಎಚ್ಚರಿಸಿದವರನ್ನು ಅಸಡ್ಡೆ ಮಾಡಿದ್ದಕ್ಕೆ ಅವರು ತಪ್ಪಿಸಿಕೊಳ್ಳದಿದ್ದರೆ, ಪರಲೋಕದಿಂದ ಎಚ್ಚರಿಸುವ ದೇವರಿಂದ ನಾವು ತೊಲಗಿ ಹೋದರೆ, ಹೇಗೆ ತಾನೆ ದಂಡನೆಯಿಂದ ನಾವು ತಪ್ಪಿಸಿಕೊಳ್ಳಬಲ್ಲೆವು?


ಇದನ್ನು ಗ್ರಹಿಸುವ ಜ್ಞಾನಿಯಾದ ಮನುಷ್ಯನು ಯಾರು? ಇದನ್ನು ತಿಳಿಸುವ ಹಾಗೆ ಯೆಹೋವ ದೇವರ ಬಾಯಿ ಯಾರ ಸಂಗಡ ಮಾತನಾಡಿತು? ದೇಶವು ಯಾವುದಕ್ಕಾಗಿ ನಾಶವಾಗಿ ಹಾದು ಹೋಗುವವನಿಲ್ಲದೆ ಮರುಭೂಮಿಯ ಹಾಗೆ ಹಾಳಾಯಿತು?


ನಿಮ್ಮಲ್ಲಿ ಯಾರು ಇವುಗಳಿಗೆ ಕಿವಿಗೊಡುವರು? ಯಾರು ಇನ್ನು ಮುಂದೆ ಆಲಿಸಿ ಕೇಳುವರು?


ಬುದ್ಧಿವಾದವನ್ನು ಕೇಳಿ, ಶಿಕ್ಷಣವನ್ನು ಅಂಗೀಕರಿಸು; ಕಡೆಯಲ್ಲಿ ನೀನು ಜ್ಞಾನಿಯಾಗುವೆ.


ಬೆಳ್ಳಿಗಿಂತ ನನ್ನ ಬೋಧನೆಯನ್ನು ಆರಿಸಿಕೋ ಉತ್ತಮ ಬಂಗಾರಕ್ಕಿಂತ ಮಿಗಿಲಾದ ತಿಳುವಳಿಕೆಯನ್ನು ಪಡೆದುಕೋ.


ಆದ್ದರಿಂದ ಯೆಹೋವ ದೇವರ ವಾಕ್ಯವು ಯೆರೆಮೀಯನಿಗೆ ಉಂಟಾಗಿ,


ಪ್ರವಾದಿಯಾದ ಯೆರೆಮೀಯನು ಯೆಹೂದದ ಸಮಸ್ತ ಜನರಿಗೂ, ಯೆರೂಸಲೇಮಿನ ಎಲ್ಲಾ ನಿವಾಸಿಗಳಿಗೂ ತಿಳಿಸಿದ್ದು ಏನೆಂದರೆ:


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು