Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 36:10 - ಕನ್ನಡ ಸಮಕಾಲಿಕ ಅನುವಾದ

10 ಆಗ ಬಾರೂಕನು ಪುಸ್ತಕದಿಂದ ಯೆರೆಮೀಯನ ವಾಕ್ಯಗಳನ್ನು ಯೆಹೋವ ದೇವರ ಆಲಯದಲ್ಲಿ ಲೇಖಕನಾಗಿರುವ ಶಾಫಾನನ ಮಗನಾಗಿರುವ ಗೆಮರೀಯನ ಕೊಠಡಿಯಲ್ಲಿ ಮೇಲಿನ ಅಂಗಳದಲ್ಲಿ, ಯೆಹೋವ ದೇವರ ಆಲಯದ ಹೊಸ ಬಾಗಿಲಿನ ಪ್ರವೇಶದಲ್ಲಿ ಎಲ್ಲಾ ಜನರು ಕೇಳುವಂತೆ ಓದಿ ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

10 ಆಗ ಬಾರೂಕನು ಯೆಹೋವನ ಆಲಯದೊಳಗೆ ಮೇಲಣ ಪ್ರಾಕಾರದಲ್ಲಿ ಹೊಸ ಬಾಗಿಲ ಹತ್ತಿರ ಲೇಖಕನಾದ ಶಾಫಾನನ ಮಗನಾಗಿರುವ ಗೆಮರ್ಯನ ಕೋಣೆಯಲ್ಲಿ ಸುರುಳಿಯಲ್ಲಿನ ಯೆರೆಮೀಯನ ಮಾತುಗಳನ್ನು ಎಲ್ಲಾ ಜನರಿಗೂ ಕೇಳಿಸುವಂತೆ ಓದಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

10 ಆಗ ಬಾರೂಕನು ಸರ್ವೇಶ್ವರನ ಆಲಯದೊಳಗೆ, ಮೇಲಣ ಪ್ರಾಕಾರದಲ್ಲಿ, ಹೊಸಬಾಗಿಲ ಹತ್ತಿರ, ಲೇಖಕ ಶಾಫಾನನ ಮಗ ಗೆಮರ್ಯನ ಕೊಠಡಿಯಲ್ಲಿ ಸುರುಳಿಯಲ್ಲಿನ ಯೆರೆಮೀಯನ ಮಾತುಗಳನ್ನು ಜನರೆಲ್ಲರಿಗೂ ಕೇಳಿಸುವಂತೆ ಓದಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

10 ಆಗ ಬಾರೂಕನು ಯೆಹೋವನ ಆಲಯದೊಳಗೆ ಮೇಲಣ ಪ್ರಾಕಾರದಲ್ಲಿ ಹೊಸ ಬಾಗಿಲ ಹತ್ತಿರ ಲೇಖಕನಾದ ಶಾಫಾನನ ಮಗನಾಗಿರುವ ಗೆಮರ್ಯನ ಕೋಣೆಯಲ್ಲಿ ಸುರಳಿಯಲ್ಲಿನ ಯೆರೆಮೀಯನ ಮಾತುಗಳನ್ನು ಎಲ್ಲಾ ಜನರಿಗೂ ಕೇಳಿಸುವಂತೆ ಓದಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

10 ಆ ಸಂದರ್ಭದಲ್ಲಿ ಯೆರೆಮೀಯನು ಹೇಳಿದ ಆ ಸಂದೇಶವನ್ನು ಬಾರೂಕನು ಓದಿದನು. ಅವನು ಯೆಹೋವನ ಆಲಯದಲ್ಲಿ ಆ ಸುರುಳಿಯನ್ನು ಓದಿದನು. ಯೆಹೋವನ ಆಲಯದಲ್ಲಿದ್ದ ಎಲ್ಲಾ ಜನರು ಕೇಳುವಂತೆ ಬಾರೂಕನು ಆ ಸುರುಳಿಯನ್ನು ಓದಿದನು. ಆ ಸುರುಳಿಯನ್ನು ಓದುವಾಗ ಬಾರೂಕನು ಮೇಲಿನ ಪ್ರಾಕಾರದಲ್ಲಿದ್ದ ಗೆಮರ್ಯನ ಕೋಣೆಯಲ್ಲಿದ್ದನು. ಆ ಕೋಣೆಯು ಪವಿತ್ರ ಆಲಯದ ಹೊಸ ಬಾಗಿಲಿನ ಹತ್ತಿರ ಇತ್ತು. ಗೆಮರ್ಯನು ಶಾಫಾನನ ಮಗನಾಗಿದ್ದನು. ಗೆಮರ್ಯನು ಯೆಹೋವನ ಆಲಯದಲ್ಲಿ ಯೆಹೂದ್ಯ ಧರ್ಮಶಾಸ್ತ್ರಜ್ಞನಾಗಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 36:10
17 ತಿಳಿವುಗಳ ಹೋಲಿಕೆ  

ಶಾಫಾನನ ಮೊಮ್ಮಗನೂ, ಗೆಮರೀಯನ ಮಗನೂ ಆದ ಮೀಕಾಯನು ಸುರುಳಿಯಿಂದ ಓದಲಾದ ಯೆಹೋವ ದೇವರ ವಾಕ್ಯಗಳನ್ನು ಕೇಳಿದನು. ಅಲ್ಲಿಂದ ಅರಮನೆಯಲ್ಲಿದ್ದ ಲೇಖಕನ ಕೊಠಡಿಗೆ ಇಳಿದು ಹೋದನು.


ಇದಲ್ಲದೆ ಪಟ್ಟಣದೊಳಗಿಂದ ಸೈನಿಕರ ಮೇಲಿದ್ದ ಒಬ್ಬ ಅಧಿಕಾರಿಯನ್ನೂ, ಅರಸನ ಏಳುಮಂದಿ ಸಲಹೆಗಾರರನ್ನೂ, ಯುದ್ಧಕ್ಕೆ ಹೋಗತಕ್ಕವರ ಪಟ್ಟಿಮಾಡುವ ಸೇನಾಧಿಪತಿಯ ಲೇಖಕನನ್ನೂ, ಪಟ್ಟಣದ ಮಧ್ಯದಲ್ಲಿ ಸಿಕ್ಕಿದ ದೇಶದ ಜನರಲ್ಲಿ ಅರವತ್ತು ಮಂದಿಯನ್ನೂ ತೆಗೆದುಕೊಂಡನು.


ಯೆಹೂದದ ಪ್ರಧಾನರು ಈ ಸಂಗತಿಗಳನ್ನು ಕೇಳಿದಾಗ, ಅರಸನ ಅರಮನೆಯಿಂದ ಯೆಹೋವ ದೇವರ ಆಲಯಕ್ಕೆ ಬಂದು, ಯೆಹೋವ ದೇವರ ಆಲಯದ ಹೊಸ ಬಾಗಿಲಿನ ಪ್ರವೇಶದಲ್ಲಿ ಕುಳಿತುಕೊಂಡರು.


ಹೀಗಾದರೂ ಎಲ್ನಾಥಾನನೂ, ದೆಲಾಯನೂ, ಗೆಮರೀಯನೂ ಆ ಸುರುಳಿಯನ್ನು ಸುಡಬಾರದೆಂದು ಅರಸನಿಗೆ ಬಿನ್ನಹ ಮಾಡಿದರು; ಆದರೆ ಅವನು ಅವರಿಗೆ ಕಿವಿಗೊಡಲಿಲ್ಲ.


ಅಹೀಟೂಬನ ಮಗ ಚಾದೋಕನೂ ಅಬಿಯಾತರನ ಮಗ ಅಹೀಮೆಲೆಕನೂ ಯಾಜಕರಾಗಿದ್ದರು. ಸೆರಾಯನು ಕಾರ್ಯದರ್ಶಿಯಾಗಿದ್ದನು.


ಆಗ ನೇರೀಯನ ಮಗ ಬಾರೂಕನು ಪ್ರವಾದಿಯಾದ ಯೆರೆಮೀಯನು ತನಗೆ ಆಜ್ಞಾಪಿಸಿದ್ದನ್ನೆಲ್ಲಾ ಮಾಡಿ, ಸುರುಳಿಯಲ್ಲಿನ ಯೆಹೋವ ದೇವರ ವಾಕ್ಯಗಳನ್ನು ಯೆಹೋವ ದೇವರ ಆಲಯದಲ್ಲಿ ಓದಿದನು.


ಆದ್ದರಿಂದ ನೀನು ಹೋಗಿ ನನ್ನ ಬಾಯಿಂದ ಕೇಳಿ, ನೀನು ಬರೆದು ಸುರುಳಿಯಲ್ಲಿ ಯೆಹೋವ ದೇವರ ಆಲಯದೊಳಗೆ ಉಪವಾಸದ ದಿವಸದಲ್ಲಿ ಯೆಹೋವ ದೇವರ ವಾಕ್ಯಗಳನ್ನು ಜನರಿಗೆ ಕೇಳುವಂತೆ ಓದಿ ಹೇಳು ಮತ್ತು ತಮ್ಮ ಪಟ್ಟಣಗಳಿಂದ ಬರುವ ಯೆಹೂದದವರೆಲ್ಲರೂ ಕೇಳುವಂತೆಯೂ ಅವುಗಳನ್ನು ಓದಿ ಹೇಳಬೇಕು.


ಕರೆದುಕೊಂಡು ಯೆಹೋವ ದೇವರ ಆಲಯಕ್ಕೆ ದ್ವಾರಪಾಲಕನಾದ ಶಲ್ಲೂಮನ ಮಗನಾದ ಮಾಸೇಯನ ಕೊಠಡಿಯ ಮೇಲಿರುವ ಪ್ರಧಾನರ ಕೊಠಡಿಯ ಬಳಿಯಲ್ಲಿರುವ ದೇವರ ಮನುಷ್ಯನಾದ ಇಗ್ದಲ್ಯನ ಮಗನಾದ ಹಾನಾನನ ಪುತ್ರರ ಕೊಠಡಿಗೆ ತಂದು,


ಯೆಹೂದದ ಅರಸನಾದ ಚಿದ್ಕೀಯನು ಬಾಬಿಲೋನಿನ ಅರಸನಾದ ನೆಬೂಕದ್ನೆಚ್ಚರನ ಬಳಿಗೆ ಕಳುಹಿಸಿದ ಶಾಫಾನನ ಮಗ ಎಲ್ಲಾಸನ ಕೈಯಿಂದಲೂ ಹಿಲ್ಕೀಯನ ಮಗನಾದ ಗೆಮರೀಯನ ಕೈಯಿಂದಲೂ ಕಳುಹಿಸಿದ ಪತ್ರ:


ಇತ್ತ ಯಾಜಕರೂ, ಪ್ರವಾದಿಗಳೂ ಯೆರೆಮೀಯನನ್ನು ಜನರ ಕೈಗೆ ಸಿಕ್ಕಿಸಿ, ಕೊಲ್ಲಿಸಲು ಸಾಧ್ಯವಾಗಲಿಲ್ಲ. ಏಕೆಂದರೆ ಯೆರೆಮೀಯನಿಗೆ ಶಾಫಾನನ ಮಗ ಅಹೀಕಾಮನ ಸಹಾಯ ದೊರಕಿತ್ತು.


ಆಗ ಅರಮನೆಯ ಮೇಲ್ವಿಚಾರಕನಾದ ಹಿಲ್ಕೀಯನ ಮಗ ಎಲ್ಯಾಕೀಮನೂ, ಕಾರ್ಯದರ್ಶಿಯಾದ ಶೆಬ್ನನೂ, ದಾಖಲೆಗಾರನಾದ ಆಸಾಫನ ಮಗ ಯೋವ ಎಂಬವನೂ ತಮ್ಮ ಬಟ್ಟೆಗಳನ್ನು ಹರಿದುಕೊಂಡು ಹಿಜ್ಕೀಯನ ಬಳಿಗೆ ಬಂದು ಸೈನ್ಯಾಧಿಕಾರಿಯಾದ ರಬ್ಷಾಕೆ ಹೇಳಿದ ಮಾತುಗಳನ್ನು ಅವನಿಗೆ ತಿಳಿಸಿದರು.


ಆದರೂ ಪೂಜಾಸ್ಥಳಗಳನ್ನು ತೆಗೆದುಹಾಕಲಿಲ್ಲ ಆದ್ದರಿಂದ ಜನರು ಪೂಜಾಸ್ಥಳಗಳ ಮೇಲೆ ಬಲಿಗಳನ್ನೂ ಧೂಪಗಳನ್ನೂ ಅರ್ಪಿಸುವುದನ್ನು ಮುಂದುವರೆಸಿದ್ದರು. ಯೋತಾಮನು ಯೆಹೋವ ದೇವರ ಆಲಯದ ಮೇಲಿನ ಬಾಗಿಲನ್ನು ಕಟ್ಟಿಸಿದನು.


ಶೆವನು ಕಾರ್ಯದರ್ಶಿಯಾಗಿದ್ದನು. ಚಾದೋಕನೂ ಅಬಿಯಾತರನೂ ಯಾಜಕರಾಗಿದ್ದರು.


ಅವನು ಒಳಗಿನ ಅಂಗಳವನ್ನು ಕೆತ್ತಿದ ಕಲ್ಲುಗಳಿಂದ ಮೂರು ಸಾಲುಗಳಾಗಿಯೂ ದೇವದಾರಿನ ಸ್ತಂಭಗಳಿಂದ ಒಂದು ಸಾಲಾಗಿಯೂ ಕಟ್ಟಿಸಿದನು.


ಆದರೆ ಅವರು ನಮ್ಮನ್ನು ಕೊಂದುಹಾಕುವ ಹಾಗೆಯೂ, ನಮ್ಮನ್ನು ಬಾಬಿಲೋನಿಗೆ ಸೆರೆ ಒಯ್ಯುವ ಹಾಗೆಯೂ, ನಮ್ಮನ್ನು ಬಾಬಿಲೋನಿಯರ ಕೈಯಲ್ಲಿ ಒಪ್ಪಿಸಬೇಕೆಂದು ನೇರೀಯನ ಮಗನಾದ ಬಾರೂಕನು ನಿನ್ನನ್ನು ನಮಗೆ ವಿರೋಧವಾಗಿ ಪ್ರೇರೇಪಿಸಿದ್ದಾನೆ,” ಎಂದರು.


ಕೊಠಡಿಗಳೂ ಅವುಗಳ ಪ್ರವೇಶಗಳೂ ಬಾಗಿಲುಗಳ ಕಂಬಗಳ ಬಳಿಯಲ್ಲಿ, ದಹನಬಲಿಯನ್ನು ತೊಳೆಯುವಲ್ಲಿ ಇದ್ದವು;


ಯೋಷೀಯನ ಆಳ್ವಿಕೆಯ ಹದಿನೆಂಟನೆಯ ವರ್ಷದಲ್ಲಿ, ಅರಸನು ಕಾರ್ಯದರ್ಶಿಯಾದ ಮೆಷುಲ್ಲಾಮನ ಮಗ, ಅಚಲ್ಯನ ಮಗನಾದ ಶಾಫಾನನನ್ನು ಯೆಹೋವ ದೇವರ ಆಲಯಕ್ಕೆ ಕಳುಹಿಸಿ,


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು