Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 36:12 - ಕನ್ನಡ ಸಮಕಾಲಿಕ ಅನುವಾದ

12 ಅಲ್ಲಿ ಲೇಖಕ ಎಲೀಷಾಮನು, ಶೆಮಾಯನ ಮಗ ದೆಲಾಯನು, ಅಕ್ಬೋರನ ಮಗ ಎಲ್ನಾಥಾನನು, ಶಾಫಾನನ ಮಗ ಗೆಮರೀಯನು, ಹನನ್ಯನ ಮಗ ಚಿದ್ಕೀಯನು ಹೀಗೆ ರಾಜ್ಯಾಧಿಕಾರಿಗಳೆಲ್ಲರೂ ಕುಳಿತುಕೊಂಡಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

12 ಅಲ್ಲಿ ಲೇಖಕನಾದ ಎಲೀಷಾಮನು, ಶೆಮಾಯನ ಮಗನಾದ ದೆಲಾಯನು, ಅಕ್ಬೋರನ ಮಗನಾದ ಎಲ್ನಾಥಾನನು, ಶಾಫಾನನ ಮಗನಾದ ಗೆಮರ್ಯನು, ಹನನೀಯನ ಮಗನಾದ ಚಿದ್ಕೀಯನು ಅಂತು ಪ್ರಧಾನರೆಲ್ಲರೂ ಕುಳಿತುಕೊಂಡಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

12 ಅಲ್ಲಿ ಲೇಖಕ ಎಲೀಷಾಮನು, ಶೆಮಾಯನ ಮಗ ದೆಲಾಯನು, ಅಕ್ಬೋರನ ಮಗ ಎಲ್ನಾಥಾನನು, ಶೆಫಾನನ ಮಗ ಗೆಮರ್ಯನು, ಹನನೀಯನ ಮಗ ಚಿದ್ಕೀಯನು, ಹೀಗೆ ರಾಜ್ಯಾಧಿಕಾರಿಗಳೆಲ್ಲರು ಕುಳಿತುಕೊಂಡಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

12 ಅರಮನೆಯಲ್ಲಿ ಲೇಖಕನ ಕೋಣೆಗೆ ಇಳಿದುಹೋದನು. ಅಲ್ಲಿ ಲೇಖಕನಾದ ಎಲೀಷಾಮನು, ಶೆಮಾಯನ ಮಗನಾದ ದೆಲಾಯನು, ಅಕ್ಬೋರನ ಮಗನಾದ ಎಲ್ನಾಥಾನನು, ಶಾಫಾನನ ಮಗನಾದ ಗೆಮರ್ಯನು, ಹನನೀಯನ ಮಗನಾದ ಚಿದ್ಕೀಯನು, ಅಂತು ಪ್ರಧಾನರೆಲ್ಲರೂ ಕೂತುಕೊಂಡಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

12 ಸುರುಳಿಯಲ್ಲಿದ್ದ ಸಂದೇಶಗಳನ್ನು ಕೇಳಿದ ಕೂಡಲೇ ಅವನು ರಾಜನ ಅರಮನೆಯಲ್ಲಿದ್ದ ಆಸ್ಥಾನದ ಅಧಿಕಾರಿಯ ಕೋಣೆಗೆ ಹೋದನು. ರಾಜನ ಅರಮನೆಯಲ್ಲಿ ಎಲ್ಲಾ ರಾಜಾಧಿಕಾರಿಗಳು ಕುಳಿತುಕೊಂಡಿದ್ದರು. ಆ ಅಧಿಕಾರಿಗಳ ಹೆಸರುಗಳು ಇಂತಿವೆ: ದರ್ಬಾರಿನ ಅಧಿಕಾರಿಯಾದ ಎಲೀಷಾಮನು, ಶೆಮಾಯನ ಮಗನಾದ ದೆಲಾಯನು, ಅಕ್ಬೋರನ ಮಗನಾದ ಎಲ್ನಾಥಾನನು, ಶಾಫಾನನ ಮಗನಾದ ಗೆಮರ್ಯನು, ಹನನೀಯನ ಮಗನಾದ ಚಿದ್ಕೀಯನು ಮತ್ತು ಉಳಿದೆಲ್ಲ ಅಧಿಕಾರಿಗಳು ಅಲ್ಲಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 36:12
13 ತಿಳಿವುಗಳ ಹೋಲಿಕೆ  

ಆದರೆ ಅರಸನಾದ ಯೆಹೋಯಾಕೀಮನು ಈಜಿಪ್ಟ್ ಜನರನ್ನು, ಅಕ್ಬೋರನ ಮಗ ಎಲ್ನಾಥಾನನನ್ನೂ, ಅವನ ಸಂಗಡ ಇನ್ನೂ ಕೆಲವರನ್ನೂ ಈಜಿಪ್ಟಿಗೆ ಕಳುಹಿಸಿದನು.


ಹೀಗಾದರೂ ಎಲ್ನಾಥಾನನೂ, ದೆಲಾಯನೂ, ಗೆಮರೀಯನೂ ಆ ಸುರುಳಿಯನ್ನು ಸುಡಬಾರದೆಂದು ಅರಸನಿಗೆ ಬಿನ್ನಹ ಮಾಡಿದರು; ಆದರೆ ಅವನು ಅವರಿಗೆ ಕಿವಿಗೊಡಲಿಲ್ಲ.


ಇದಲ್ಲದೆ ಅರಸನು ಯಾಜಕನಾದ ಹಿಲ್ಕೀಯನಿಗೂ, ಶಾಫಾನನ ಮಗನಾದ ಅಹೀಕಾಮನಿಗೂ, ಮೀಕಾಯನ ಮಗನಾದ ಅಕ್ಬೋರನಿಗೂ, ಕಾರ್ಯದರ್ಶಿಯಾದ ಶಾಫಾನನಿಗೂ, ಅರಸನ ಸೇವಕನಾದ ಅಸಾಯನಿಗೂ ಆಜ್ಞಾಪಿಸಿ,


ಏಳನೆಯ ತಿಂಗಳಲ್ಲಿ ಅರಸನ ಸಂತಾನದವನೂ, ಅರಸನ ಪ್ರಧಾನರಲ್ಲಿ ಒಬ್ಬನೂ ಆದಂಥ ಎಲೀಷಾಮನ ಮೊಮ್ಮಗನೂ, ನೆತನ್ಯನ ಮಗನೂ ಆದ ಇಷ್ಮಾಯೇಲನು ಅವನ ಸಂಗಡ ಹತ್ತು ಮಂದಿಯೂ ಮಿಚ್ಪದಲ್ಲಿದ್ದ ಅಹೀಕಾಮನ ಮಗ ಗೆದಲ್ಯನ ಬಳಿಗೆ ಬಂದರು. ಅವರು ಮಿಚ್ಪದಲ್ಲಿಯೇ ಊಟಮಾಡುತ್ತಿದ್ದಾಗ,


ಯೆಹೋಯಾಖೀನನು ಅರಸನಾದಾಗ ಹದಿನೆಂಟು ವರ್ಷದವನಾಗಿದ್ದು, ಯೆರೂಸಲೇಮಿನಲ್ಲಿ ಮೂರು ತಿಂಗಳು ಆಳಿದನು. ಅವನ ತಾಯಿಯು ಯೆರೂಸಲೇಮಿನ ಎಲ್ನಾತಾನನ ಮಗಳಾದ ನೆಹುಷ್ಟಾ.


ಯಾಜಕನಾದ ಹಿಲ್ಕೀಯ, ಅಹೀಕಾಮ್, ಅಕ್ಬೋರ್, ಶಾಫಾನ್ ಅಸಾಯ ಎಂಬವರು ಪ್ರವಾದಿನಿ ಹುಲ್ದಳ ಬಳಿಗೆ ವಿಚಾರಿಸಲು ಹೋದರು. ಆಕೆಯು ಹರ್ಹಸನ ಮೊಮ್ಮಗನೂ ತಿಕ್ವನ ಮಗನೂ ರಾಜವಸ್ತ್ರಗಳ ಮೇಲ್ವಿಚಾರಕನೂ ಆದ ಶಲ್ಲೂಮನ ಹೆಂಡತಿ. ಅವಳು ಯೆರೂಸಲೇಮಿನೊಳಗೆ ಹೊಸದಾದ ನಿರ್ಮಿತ ಭಾಗದಲ್ಲಿ ವಾಸವಾಗಿದ್ದಳು.


ಯೋಷೀಯನ ಆಳ್ವಿಕೆಯ ಹದಿನೆಂಟನೆಯ ವರ್ಷದಲ್ಲಿ, ಅರಸನು ಕಾರ್ಯದರ್ಶಿಯಾದ ಮೆಷುಲ್ಲಾಮನ ಮಗ, ಅಚಲ್ಯನ ಮಗನಾದ ಶಾಫಾನನನ್ನು ಯೆಹೋವ ದೇವರ ಆಲಯಕ್ಕೆ ಕಳುಹಿಸಿ,


ಆಗ ಆ ಪ್ರಧಾನರು ಅರಸನಿಗೆ, “ಈ ಮನುಷ್ಯನು ಸಾಯಬೇಕು; ಇವನು ಅವರ ಸಂಗಡ ಇಂಥಾ ಮಾತುಗಳನ್ನು ಆಡಿ, ಈ ಪಟ್ಟಣದಲ್ಲಿ ಉಳಿದ ಎಲ್ಲಾ ಸೈನಿಕರನ್ನೂ, ಎಲ್ಲಾ ಜನರನ್ನೂ ಎದೆಗುಂದುವಂತೆ ಮಾಡುತ್ತಿದ್ದಾನೆ. ಈ ಮನುಷ್ಯನು ಈ ಜನರ ಕ್ಷೇಮವನ್ನಲ್ಲ, ಅವರ ಹಾನಿಯನ್ನೇ ಹಾರೈಸುತ್ತಾನೆ,” ಎಂದು ಹೇಳಿದರು.


ಯೆಹೂದದ ಪ್ರಧಾನರು ಈ ಸಂಗತಿಗಳನ್ನು ಕೇಳಿದಾಗ, ಅರಸನ ಅರಮನೆಯಿಂದ ಯೆಹೋವ ದೇವರ ಆಲಯಕ್ಕೆ ಬಂದು, ಯೆಹೋವ ದೇವರ ಆಲಯದ ಹೊಸ ಬಾಗಿಲಿನ ಪ್ರವೇಶದಲ್ಲಿ ಕುಳಿತುಕೊಂಡರು.


ಇತ್ತ ಯಾಜಕರೂ, ಪ್ರವಾದಿಗಳೂ ಯೆರೆಮೀಯನನ್ನು ಜನರ ಕೈಗೆ ಸಿಕ್ಕಿಸಿ, ಕೊಲ್ಲಿಸಲು ಸಾಧ್ಯವಾಗಲಿಲ್ಲ. ಏಕೆಂದರೆ ಯೆರೆಮೀಯನಿಗೆ ಶಾಫಾನನ ಮಗ ಅಹೀಕಾಮನ ಸಹಾಯ ದೊರಕಿತ್ತು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು