Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 36:26 - ಕನ್ನಡ ಸಮಕಾಲಿಕ ಅನುವಾದ

26 ಆದರೆ ಅರಸನು ರಾಜಪುತ್ರ ಯೆರಹ್ಮೇಲನಿಗೂ, ಅಜ್ರಿಯೇಲನ ಮಗನಾದ ಸೆರಾಯನಿಗೂ, ಅಬ್ದೆಯೇಲನ ಮಗ ಶೆಲೆಮ್ಯನಿಗೂ, ಲೇಖಕನಾದ ಬಾರೂಕನನ್ನೂ, ಪ್ರವಾದಿಯಾದ ಯೆರೆಮೀಯನನ್ನೂ ಹಿಡಿಯಬೇಕೆಂದು ಆಜ್ಞಾಪಿಸಿದನು. ಆದರೆ ಯೆಹೋವ ದೇವರು ಅವರನ್ನು ಅಡಗಿಸಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

26 ಮತ್ತು ಅರಸನು ರಾಜವಂಶೀಯನಾದ ಎರಖ್ಮೆಯೇಲ, ಅಜ್ರಿಯೇಲನ ಮಗನಾದ ಸೆರಾಯ, ಅಬ್ದೆಯೇಲನ ಮಗನಾದ ಶಲೆಮ್ಯ ಇವರಿಗೆ ಲೇಖಕನಾದ ಬಾರೂಕನನ್ನೂ ಮತ್ತು ಪ್ರವಾದಿಯಾದ ಯೆರೆಮೀಯನನ್ನೂ ಹಿಡಿಯಬೇಕೆಂದು ಅಪ್ಪಣೆಕೊಟ್ಟನು; ಆದರೆ ಯೆಹೋವನು ಅವರನ್ನು ಮರೆಯಲ್ಲಿಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

26 ಬದಲಿಗೆ ರಾಜವಂಶೀಯನಾದ ಎರಖ್ಮೆಯೇಲ, ಅಜ್ರಿಯೇಲನ ಮಗ ಸೆರಾಯ, ಅಬ್ದೆಯೇಲನ ಮಗ ಶಲೆಮ್ಯ, ಇವರಿಗೆ ಲೇಖಕನಾದ ಬಾರೂಕನನ್ನು ಮತ್ತು ಪ್ರವಾದಿ ಯೆರೆಮೀಯನನ್ನು ಸೆರೆಹಿಡಿಯಬೇಕೆಂದು ಆಜ್ಞಾಪಿಸಿದನು. ಆದರೆ ಸರ್ವೇಶ್ವರ ಅವರನ್ನು ಮರೆಯಲ್ಲಿಟ್ಟಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

26 ಮತ್ತು ಅರಸನು ರಾಜವಂಶೀಯನಾದ ಎರಖ್ಮೆಯೇಲ, ಅಜ್ರಿಯೇಲನ ಮಗನಾದ ಸೆರಾಯ, ಅಬ್ದೆಯೇಲನ ಮಗನಾದ ಶಲೆಮ್ಯ, ಇವರಿಗೆ ಲೇಖಕನಾದ ಬಾರೂಕನನ್ನೂ ಪ್ರವಾದಿಯಾದ ಯೆರೆಮೀಯನನ್ನೂ ಹಿಡಿಯಬೇಕೆಂದು ಅಪ್ಪಣೆಕೊಟ್ಟನು; ಆದರೆ ಯೆಹೋವನು ಅವರನ್ನು ಮರೆಯಲ್ಲಿಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

26 ರಾಜನಾದ ಯೆಹೋಯಾಕೀಮನು ಲಿಪಿಕಾರನಾದ ಬಾರೂಕನನ್ನು ಮತ್ತು ಪ್ರವಾದಿಯಾದ ಯೆರೆಮೀಯನನ್ನು ಬಂಧಿಸಬೇಕೆಂದು ರಾಜವಂಶೀಯನಾದ ಎರಖ್ಮೆಯೇಲ, ಅಜ್ರಿಯೇಲನ ಮಗನಾದ ಸೆರಾಯ, ಅಬ್ದೆಯೇಲನ ಮಗನಾದ ಶೆಲೆಮ್ಯ ಇವರಿಗೆ ಆಜ್ಞೆಯನ್ನು ಕೊಟ್ಟನು. ಆದರೆ ಅವರಿಂದ ಬಾರೂಕನನ್ನು ಮತ್ತು ಯೆರೆಮೀಯನನ್ನು ಹುಡುಕಲಾಗಲಿಲ್ಲ. ಯಾಕೆಂದರೆ ಯೆಹೋವನು ಅವರನ್ನು ಬಚ್ಚಿಟ್ಟಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 36:26
34 ತಿಳಿವುಗಳ ಹೋಲಿಕೆ  

ಮಹೋನ್ನತ ದೇವರ ಆಶ್ರಯದಲ್ಲಿ ವಾಸಿಸುವವರು ಸರ್ವಶಕ್ತರ ನೆರಳಿನಲ್ಲಿ ವಿಶ್ರಮಿಸುವರು.


ಅದಕ್ಕೆ ಅವನು, “ಸರ್ವಶಕ್ತ ದೇವರಾದ ಯೆಹೋವ ದೇವರೇ, ಇಸ್ರಾಯೇಲರಿಗೋಸ್ಕರ ನಾನು ಬಹು ರೋಷವುಳ್ಳವನಾಗಿದ್ದೇನೆ. ಏಕೆಂದರೆ ಇಸ್ರಾಯೇಲರು ನಿಮ್ಮ ಒಡಂಬಡಿಕೆಯನ್ನು ಬಿಟ್ಟು, ನಿಮ್ಮ ಬಲಿಪೀಠಗಳನ್ನು ಕೆಡವಿ, ನಿಮ್ಮ ಪ್ರವಾದಿಗಳನ್ನು ಖಡ್ಗದಿಂದ ಕೊಂದುಹಾಕಿದ್ದಾರೆ. ನಾನೊಬ್ಬನೇ ಉಳಿದಿದ್ದೇನೆ. ಆದರೆ ಅವರು ನನ್ನ ಪ್ರಾಣವನ್ನೂ ತೆಗೆಯಲು ಹುಡುಕುತ್ತಿದ್ದಾರೆ,” ಎಂದನು.


ಅದಕ್ಕೆ ಅವನು, “ಸರ್ವಶಕ್ತ ದೇವರಾದ ಯೆಹೋವ ದೇವರೇ, ಇಸ್ರಾಯೇಲರಿಗೋಸ್ಕರ ನಾನು ಬಹು ರೋಷವುಳ್ಳವನಾಗಿದ್ದೇನೆ. ಏಕೆಂದರೆ ಇಸ್ರಾಯೇಲರು ನಿಮ್ಮ ಒಡಂಬಡಿಕೆಯನ್ನು ಬಿಟ್ಟು, ನಿಮ್ಮ ಬಲಿಪೀಠಗಳನ್ನು ಕೆಡವಿ, ನಿಮ್ಮ ಪ್ರವಾದಿಗಳನ್ನು ಖಡ್ಗದಿಂದ ಕೊಂದುಹಾಕಿದ್ದಾರೆ. ನಾನೊಬ್ಬನೇ ಉಳಿದಿದ್ದೇನೆ. ಆದರೆ ಅವರು ನನ್ನ ಪ್ರಾಣವನ್ನೂ ತೆಗೆಯಲು ಹುಡುಕುತ್ತಿದ್ದಾರೆ,” ಎಂದನು.


“ನೀನು ಈ ಸ್ಥಳವನ್ನು ಬಿಟ್ಟು ಪೂರ್ವದಿಕ್ಕಿಗೆ ಹೋಗಿ, ಯೊರ್ದನಿಗೆ ಎದುರಿಗಿರುವ ಕೆರೀತ್ ಹಳ್ಳದ ಬಳಿಯಲ್ಲಿ ಅಡಗಿಕೊಂಡಿರು.


ಆಗ ಪೇತ್ರನು ಸಂಪೂರ್ಣವಾಗಿ ಎಚ್ಚರಗೊಂಡು, “ಈಗ ಕರ್ತದೇವರು ತಮ್ಮ ದೂತನನ್ನು ಕಳುಹಿಸಿ ಹೆರೋದನ ಹಿಡಿತದಿಂದಲೂ ಯೆಹೂದ್ಯ ಜನರು ನಿರೀಕ್ಷಿಸುತ್ತಿದ್ದ ಎಲ್ಲಾ ಕೇಡಿನಿಂದಲೂ ನನ್ನನ್ನು ಉಳಿಸಿ ಕಾಪಾಡಿರುವರು ಎಂದು ಈಗ ನನಗೆ ಗೊತ್ತಾಗಿದೆ,” ಎಂದುಕೊಂಡನು.


ನನ್ನ ಜನರೇ, ಹೋಗಿರಿ. ನಿಮ್ಮ ಕೋಣೆಗಳಲ್ಲಿ ಸೇರಿ, ಬಾಗಿಲನ್ನು ಮುಚ್ಚಿಕೊಳ್ಳಿರಿ. ಸ್ವಲ್ಪ ಹೊತ್ತು ರೋಷವು ಹಾದುಹೋಗುವ ತನಕ ಅಡಗಿಕೊಂಡಿರಿ.


ದುರ್ಮಾರ್ಗಿಗಳ ಗುಪ್ತ ಆಲೋಚನೆಗಳಿಗೂ, ದುಷ್ಟರ ಒಳಸಂಚಿಗೂ ನನ್ನನ್ನು ಮರೆಮಾಡಿರಿ.


ಕೇಡಿನ ಸಮಯದಲ್ಲಿ ಯೆಹೋವ ದೇವರು ನನ್ನನ್ನು ತಮ್ಮ ಗುಡಾರದಲ್ಲಿ ಬಚ್ಚಿಡುವರು. ತಮ್ಮ ಪರಿಶುದ್ಧ ಗುಡಾರದಲ್ಲಿ ನನ್ನನ್ನು ಮರೆಮಾಡುವರು. ಎತ್ತರವಾದ ಬಂಡೆಯ ಮೇಲೆ ನನ್ನನ್ನು ನಿಲ್ಲಿಸುವರು.


ಯೇಸು ದೇವಾಲಯದ ಕಾಣಿಕೆ ಪೆಟ್ಟಿಗೆಗಳನ್ನಿಟ್ಟ ಸ್ಥಳದಲ್ಲಿ ಬೋಧಿಸುತ್ತಿದ್ದಾಗ ಈ ಮಾತುಗಳನ್ನು ಹೇಳಿದರು. ಆದರೆ ಯೇಸುವಿನ ಸಮಯ ಇನ್ನೂ ಬಾರದಿದ್ದ ಕಾರಣ ಯಾರೂ ಅವರನ್ನು ಬಂಧಿಸಲಿಲ್ಲ.


ಆಗ ಪ್ರಧಾನರು ಬಾರೂಕನಿಗೆ, “ನೀನೂ, ಯೆರೆಮೀಯನೂ ಹೋಗಿ ಅಡಗಿಕೊಳ್ಳಿರಿ; ನೀವು ಎಲ್ಲಿದ್ದೀರೆಂಬುದು ಯಾರಿಗೂ ಗೊತ್ತಾಗಬಾರದು,” ಎಂದರು.


ಆಮೇಲೆ ಯೆರೆಮೀಯನು ಬಾರೂಕನಿಗೆ ಆಜ್ಞಾಪಿಸಿದ್ದೇನೆಂದರೆ, “ನಾನು ಇಲ್ಲಿ ಬಂಧಿಸಲಾಗಿದ್ದೇನೆ. ಯೆಹೋವ ದೇವರ ಆಲಯಕ್ಕೆ ಹೋಗಲಾರೆನು.


ದೇವರೇ ನನ್ನನ್ನು ಕರುಣಿಸಿರಿ, ನನ್ನನ್ನು ಕರುಣಿಸಿರಿ. ನನ್ನ ಪ್ರಾಣವು ನಿಮ್ಮನ್ನು ಆಶ್ರಯಿಸಿಕೊಂಡಿದೆ; ಆಪತ್ತುಗಳು ದಾಟುವವರೆಗೂ ನಿಮ್ಮ ರೆಕ್ಕೆಗಳ ನೆರಳನ್ನೇ ನಾನು ಆಶ್ರಯಿಸಿಕೊಳ್ಳುತ್ತೇನೆ.


ನೀವು ನನಗೆ ಮರೆಮಾಡುವ ಸ್ಥಳವಾಗಿರುವಿರಿ; ಇಕ್ಕಟ್ಟಿನಿಂದ ನನ್ನನ್ನು ಕಾಯುತ್ತೀರಿ; ವಿಮೋಚನಾ ಧ್ವನಿಗಳಿಂದ ನೀವು ನನ್ನನ್ನು ಸುತ್ತುವರಿಯುತ್ತೀರಿ.


ಈಜೆಬೆಲಳು ಯೆಹೋವ ದೇವರ ಪ್ರವಾದಿಗಳನ್ನು ಕೊಲ್ಲುತ್ತಿದ್ದಾಗ, ಓಬದ್ಯನು ನೂರು ಮಂದಿ ಪ್ರವಾದಿಗಳನ್ನು ತೆಗೆದುಕೊಂಡು, ಐವತ್ತು ಮಂದಿಯಾಗಿ ಅವರನ್ನು ಗವಿಯಲ್ಲಿ ಬಚ್ಚಿಟ್ಟು, ಅವರಿಗೆ ಆಹಾರವನ್ನೂ, ನೀರನ್ನೂ ಕೊಟ್ಟು, ಅವರನ್ನು ಸಂರಕ್ಷಣೆ ಮಾಡುತ್ತಾ ಇದ್ದನು.


ಆಗ ಮುಖ್ಯಯಾಜಕರೂ ಫರಿಸಾಯರೂ ಯೇಸುವನ್ನು ಬಂಧಿಸುವಂತೆ ಆತನ ಸುಳಿವು ಯಾರಿಗಾದರೂ ತಿಳಿದಿದ್ದರೆ ಅವರು ತಮಗೆ ತಿಳಿಸಬೇಕೆಂದು ಅಪ್ಪಣೆ ಕೊಟ್ಟಿದ್ದರು.


ಆಗ ಅವರು ಯೇಸುವಿನ ಮೇಲೆ ಎಸೆಯಲು ಕಲ್ಲುಗಳನ್ನು ಎತ್ತಿಕೊಂಡರು. ಆದರೆ ಯೇಸು ಅಡಗಿಕೊಂಡು ದೇವಾಲಯದೊಳಗಿಂದ ಹೊರಟು ಹೋದರು.


ಯೇಸುವಿನ ವಿಷಯವಾಗಿ ಜನರು ತಮ್ಮತಮ್ಮೊಳಗೆ ಮಾತನಾಡುವುದನ್ನು ಫರಿಸಾಯರು ಕೇಳಿದರು. ಫರಿಸಾಯರು ಮತ್ತು ಮುಖ್ಯಯಾಜಕರು ಯೇಸುವನ್ನು ಬಂಧಿಸಲು ಕಾವಲುಗಾರರನ್ನು ಕಳುಹಿಸಿದರು.


“ನಾನು ನಿಮ್ಮ ಜನರನ್ನು ದಂಡಿಸಿದ್ದು ವ್ಯರ್ಥವಾಯಿತು. ಅವರು ಶಿಕ್ಷೆಯನ್ನು ತೆಗೆದುಕೊಳ್ಳಲಿಲ್ಲ. ನಿಮ್ಮ ಸ್ವಂತ ಖಡ್ಗವು ನಾಶಮಾಡುವ ಸಿಂಹದಂತೆ ನಿಮ್ಮ ಪ್ರವಾದಿಗಳನ್ನು ನುಂಗಿಬಿಟ್ಟಿವೆ.


ಅವರು ನಿನಗೆ ವಿರೋಧವಾಗಿ ಯುದ್ಧಮಾಡುವರು. ಆದರೆ ನಿನ್ನನ್ನು ಗೆಲ್ಲುವುದಿಲ್ಲ. ಏಕೆಂದರೆ ನಿನ್ನನ್ನು ತಪ್ಪಿಸುವುದಕ್ಕೆ ನಾನೇ ನಿನ್ನ ಸಂಗಡ ಇದ್ದೇನೆ,” ಇದು ಯೆಹೋವ ದೇವರ ನುಡಿ.


“ನೀನೆದ್ದು ಸೀದೋನಿಗೆ ಹೊಂದಿದ ಚಾರೆಪತಕ್ಕೆ ಹೋಗಿ ಅಲ್ಲಿ ವಾಸವಾಗಿರು. ನಿನ್ನನ್ನು ಸಂರಕ್ಷಣೆ ಮಾಡಲು ಅಲ್ಲಿರುವ ಒಬ್ಬ ವಿಧವೆಗೆ ಆಜ್ಞಾಪಿಸಿದ್ದೇನೆ,” ಎಂದರು.


ಯೆಹೋವ ದೇವರು, ನೀವು ಹೋಗುವಾಗಲೂ ಬರುವಾಗಲೂ ಇಂದಿಗೂ ಎಂದೆಂದಿಗೂ ನಿಮ್ಮನ್ನು ಕಾಪಾಡುವರು.


ಆಗ ಇಸ್ರಾಯೇಲಿನ ಅರಸನು ಹೇಳಿದ್ದೇನೆಂದರೆ, “ನೀವು ಮೀಕಾಯನನ್ನು ಹಿಡಿದು ಪಟ್ಟಣದ ಅಧಿಪತಿಯಾದ ಆಮೋನನ ಬಳಿಗೂ, ಅರಸನ ಮಗನಾದ ಯೋವಾಷನ ಬಳಿಗೂ ತೆಗೆದುಕೊಂಡುಹೋಗಿ,


ಆದರೆ ಅರಸನಾದ ಯೆಹೋರಾಮನ ಮಗಳೂ ಅಹಜ್ಯನ ಸಹೋದರಿಯೂ ಆದ ಯೆಹೋಷೆಬಳು ಹತರಾಗುವುದಕ್ಕಿದ್ದ ಅರಸನ ಮಕ್ಕಳ ಮಧ್ಯದಿಂದ ಅಹಜ್ಯನ ಮಗನಾದ ಯೋವಾಷನನ್ನು ಕದ್ದುಕೊಂಡು ಹೋಗಿ ಅವನು ಹತನಾಗದ ಹಾಗೆ ಅವನನ್ನೂ ಅವನ ದಾದಿಯನ್ನೂ ಅತಲ್ಯಳಿಗೆ ಕಾಣದ ಹಾಗೆ ಮಲಗುವ ಕೋಣೆಯಲ್ಲಿ ಬಚ್ಚಿಟ್ಟಳು.


‘ನಾನು ಸಮಾಧಾನವಾಗಿ ತಿರುಗಿ ಬರುವವರೆಗೂ ನೀವು ಇವನನ್ನು ಸೆರೆಮನೆಯಲ್ಲಿಟ್ಟು, ಅವನಿಗೆ ರೊಟ್ಟಿ ಮತ್ತು ನೀರನ್ನು ಬಿಟ್ಟು ಮತ್ತೇನೂ ಕೊಡಬೇಡಿರೆಂದು ಅರಸನು ಹೇಳಿದ್ದಾನೆ’ ಎಂದು ತಿಳಿಸು,” ಎಂದನು.


“ನನ್ನ ಅಭಿಷಿಕ್ತರನ್ನು ಮುಟ್ಟಬೇಡಿರಿ, ನನ್ನ ಪ್ರವಾದಿಗಳಿಗೆ ಕೇಡು ಮಾಡಬೇಡಿರಿ.”


ಇತ್ತ ಯಾಜಕರೂ, ಪ್ರವಾದಿಗಳೂ ಯೆರೆಮೀಯನನ್ನು ಜನರ ಕೈಗೆ ಸಿಕ್ಕಿಸಿ, ಕೊಲ್ಲಿಸಲು ಸಾಧ್ಯವಾಗಲಿಲ್ಲ. ಏಕೆಂದರೆ ಯೆರೆಮೀಯನಿಗೆ ಶಾಫಾನನ ಮಗ ಅಹೀಕಾಮನ ಸಹಾಯ ದೊರಕಿತ್ತು.


ಆಗ ಅವರು ಯೆರೆಮೀಯನನ್ನು ತಮ್ಮ ವಶಕ್ಕೆ ತೆಗೆದುಕೊಂಡರು. ಸೆರೆಮನೆಯ ಅಂಗಳದಲ್ಲಿದ್ದ ರಾಜವಂಶೀಯನಾದ ಮಲ್ಕೀಯನ ಬಾವಿಯಲ್ಲಿ ನೀರು ಇರಲಿಲ್ಲ. ಕೆಸರು ಮಾತ್ರ ಇತ್ತು. ಯೆರೆಮೀಯನನ್ನು ಕೆಸರಿನಲ್ಲಿ ಹಾಕಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು