Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 36:3 - ಕನ್ನಡ ಸಮಕಾಲಿಕ ಅನುವಾದ

3 ಒಂದು ವೇಳೆ ಯೆಹೂದದ ಮನೆತನದವರು ನಾನು ಅವರಿಗೆ ಮಾಡುವುದಕ್ಕೆ ನೆನಸುವ ಕೇಡನ್ನೆಲ್ಲಾ ಕೇಳಿ ನಾನು ಅವರ ಅಕ್ರಮವನ್ನೂ, ಅವರ ಪಾಪವನ್ನೂ ಮನ್ನಿಸುವ ಹಾಗೆ ತಮ್ಮ ತಮ್ಮ ಮಾರ್ಗಗಳನ್ನು ಬಿಟ್ಟು ತಿರುಗಿಕೊಂಡಾರು,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

3 ಒಂದು ವೇಳೆ ಯೆಹೂದ ವಂಶದವರು ನಾನು ಅವರಿಗೆ ಮಾಡಬೇಕೆಂದಿರುವ ಕೇಡನ್ನು ಕೇಳಿ ತಮ್ಮ ತಮ್ಮ ದುರ್ಮಾರ್ಗಗಳಿಂದ ಹಿಂದಿರುಗಬಹುದು; ಹಿಂದಿರುಗಿದರೆ ಅವರ ಪಾಪ ಮತ್ತು ಅಪರಾಧಗಳನ್ನು ಕ್ಷಮಿಸಿಬಿಡುವೆನು” ಎಂಬ ಮಾತನ್ನು ತಿಳಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

3 ಬಹುಶಃ, ಯೆಹೂದ ವಂಶದವರು ನಾನು ಅವರಿಗೆ ಮಾಡಬೇಕೆಂದಿರುವ ಕೇಡನ್ನಾದರು ಕೇಳಿ ತಮ್ಮ ದುರ್ಮಾರ್ಗಗಳನ್ನು ಬಿಟ್ಟು ಹಿಂದಿರುಗಬಹುದು. ಹಿಂದಿರುಗಿದರೆ, ಅವರ ಪಾಪಾಪರಾಧಗಳನ್ನು ಕ್ಷಮಿಸಿಬಿಡುವೆನು.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

3 ಒಂದು ವೇಳೆ ಯೆಹೂದ ವಂಶದವರು ನಾನು ಅವರಿಗೆ ಮಾಡಬೇಕೆಂದಿರುವ ಕೇಡನ್ನು ಕೇಳಿ ತಮ್ಮ ತಮ್ಮ ದುರ್ಮಾರ್ಗಗಳಿಂದ ಹಿಂದಿರುಗಿಯಾರು; ಹಿಂದಿರುಗಿದರೆ ಅವರ ಪಾಪಾಪರಾಧಗಳನ್ನು ಕ್ಷವಿುಸಿಬಿಡುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

3 ನಾನು ಮಾಡಬೇಕೆಂದು ಯೋಚಿಸಿರುವುದನ್ನು ಯೆಹೂದ ಕುಲದವರು ಕೇಳಿಸಿಕೊಳ್ಳಬಹುದು. ಅವರು ಮಾಡುತ್ತಿರುವ ದುಷ್ಕೃತ್ಯಗಳನ್ನು ನಿಲ್ಲಿಸಬಹುದು. ಅವರು ಹಾಗೆ ಮಾಡಿದರೆ ಅವರು ಮಾಡಿದ ಪಾಪಗಳನ್ನು ನಾನು ಕ್ಷಮಿಸುವೆನು.”

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 36:3
35 ತಿಳಿವುಗಳ ಹೋಲಿಕೆ  

ನಾನು ಆ ಜನಾಂಗಕ್ಕೆ ವಿರೋಧವಾಗಿ ಮಾತನಾಡಿದ ತನ್ನ ಕೆಟ್ಟತನವನ್ನು ಬಿಟ್ಟು ತಿರುಗಿದರೆ, ನಾನು ಅದಕ್ಕೆ ಮಾಡಬೇಕೆಂದು ಯೋಚಿಸಿದ ಕೆಟ್ಟದ್ದನ್ನು ಕುರಿತು ಮನಸ್ಸನ್ನು ಬದಲಾಯಿಸುವೆನು.


ಆದ್ದರಿಂದ ನಿಮ್ಮ ಪಾಪಗಳು ತೊಳೆದುಹೋಗುವಂತೆ ಪಶ್ಚಾತ್ತಾಪಪಟ್ಟು, ದೇವರ ಕಡೆಗೆ ತಿರುಗಿಕೊಳ್ಳಿರಿ. ಆಗ ನಿಮ್ಮ ಪಾಪಗಳು ಪರಿಹಾರವಾಗಿ ಕರ್ತ ದೇವರಿಂದ ವಿಶ್ರಾಂತಿಯ ಕಾಲಗಳು ನಿಮಗೆ ಒದಗಿ ಬರುವವು.


“ಆದ್ದರಿಂದ ಮನುಷ್ಯಪುತ್ರನೇ, ನೀನು ಸಲಕರಣೆಗಳನ್ನು ಸಿದ್ಧಮಾಡಿ, ಹಗಲಿನಲ್ಲಿ ಅವರ ದೃಷ್ಟಿಯಿಂದ ತೊಲಗಿಹೋಗು, ಹೌದು, ಅವರ ಕಣ್ಣುಗಳ ಮುಂದೆಯೇ ನಿನ್ನ ಸ್ಥಳವನ್ನು ಬಿಟ್ಟು ಬೇರೊಂದು ಸ್ಥಳಕ್ಕೆ ಹೋಗು. ಅವರು ದ್ರೋಹಿಗಳಾದವರ ಮನೆತನದವರಾದರೂ, ಒಂದು ವೇಳೆ ಅರ್ಥಮಾಡಿಕೊಳ್ಳಬಹುದು.


ಒಂದು ವೇಳೆ ಅವರು ಕೇಳಿ, ನಾನು ಅವರ ಕೃತ್ಯಗಳ ಕೆಟ್ಟತನದ ನಿಮಿತ್ತ ಅವರಿಗೆ ಮಾಡುವುದಕ್ಕೆ ಆಲೋಚಿಸಿದ ಕೇಡಿನ ವಿಷಯ ಪಶ್ಚಾತ್ತಾಪ ಪಡುವ ಹಾಗೆ ತಮ್ಮ ತಮ್ಮ ಕೆಟ್ಟ ಮಾರ್ಗವನ್ನು ಬಿಟ್ಟು ತಿರುಗಿಕೊಂಡಾರು.


ನಿಮ್ಮ ದೇವರಾದ ಯೆಹೋವ ದೇವರ ಕಡೆಗೆ ತಿರುಗಿಕೊಂಡು, ನೀವೂ, ನಿಮ್ಮ ಮಕ್ಕಳೂ, ನಾನು ಈ ಹೊತ್ತು ನಿಮಗೆ ಆಜ್ಞಾಪಿಸುವ ಮಾತುಗಳಿಗೆ, ನೀವು ನಿಮ್ಮ ಪೂರ್ಣಹೃದಯದಿಂದಲೂ, ನಿಮ್ಮ ಪೂರ್ಣಪ್ರಾಣದಿಂದಲೂ ದೇವರಿಗೆ ವಿಧೇಯರಾಗಬೇಕು.


ಒಂದು ವೇಳೆ ಅವರ ವಿಜ್ಞಾಪನೆ ಯೆಹೋವ ದೇವರ ಮುಂದೆ ಬಂದೀತು. ಅವರು ತಮ್ಮ ತಮ್ಮ ಕೆಟ್ಟ ಮಾರ್ಗಗಳನ್ನು ಬಿಟ್ಟು ತಿರುಗಿಕೊಂಡಾರು. ಏಕೆಂದರೆ ಯೆಹೋವ ದೇವರು ಈ ಜನರಿಗೆ ವಿರೋಧವಾಗಿ ಪ್ರಕಟಿಸಿರುವ ಕೋಪವೂ, ಉರಿಯೂ ಅಪಾರವಾಗಿದೆ.”


ಕರ್ತದೇವರು ತಮ್ಮ ವಾಗ್ದಾನದ ವಿಷಯವಾಗಿ ತಡಮಾಡುತ್ತಾರೆಂಬದಾಗಿ ಕೆಲವರು ಎಣಿಸುವ ಪ್ರಕಾರ ಅವರು ತಡಮಾಡುವವರಲ್ಲ. ಆದರೆ ಯಾವನಾದರೂ ನಾಶವಾಗುವುದರಲ್ಲಿ ಅವರು ಇಷ್ಟಪಡದೆ ಎಲ್ಲರೂ ಪಶ್ಚಾತ್ತಾಪಡಬೇಕೆಂದು ಅಪೇಕ್ಷಿಸುವವರಾಗಿದ್ದು ನಮ್ಮ ಕಡೆಗೆ ದೀರ್ಘಶಾಂತರಾಗಿದ್ದಾರೆ.


ನೀನು ಅವರ ಕಣ್ಣುಗಳನ್ನು ತೆರೆದು, ಅವರನ್ನು ಕತ್ತಲೆಯಿಂದ ಬೆಳಕಿಗೂ ಸೈತಾನನ ಅಧಿಕಾರದಿಂದ ದೇವರ ಕಡೆಗೂ ತಿರುಗಿಸಿ ಪಾಪಕ್ಷಮಾಪಣೆಯನ್ನು ಪಡೆಯುವಂತೆ ಮಾಡಿ, ನನ್ನಲ್ಲಿ ವಿಶ್ವಾಸವಿದ್ದು ಶುದ್ಧೀಕರಣ ಹೊಂದಿದವರ ಮಧ್ಯದಲ್ಲಿ ಹಕ್ಕುಬಾಧ್ಯತೆಯನ್ನು ಪಡೆಯುವಂತೆ ಮಾಡಬೇಕೆಂದು ನಿನ್ನನ್ನು ಕಳುಹಿಸುತ್ತಿದ್ದೇನೆ,’ ಎಂದರು.


ಈ ಕಾರಣದಿಂದ, “ ‘ಅವರು ಕಣ್ಣಿದ್ದರೂ ಕಾಣುವುದಿಲ್ಲ. ಕೇಳಿಸಿಕೊಳ್ಳುತ್ತಿದ್ದರೂ ಗ್ರಹಿಸುವುದಿಲ್ಲ. ಹಾಗೆ ಮಾಡುವುದಾದರೆ, ಅವರು ದೇವರ ಕಡೆಗೆ ತಿರುಗಿಕೊಂಡು ಕ್ಷಮೆಹೊಂದುತ್ತಿದ್ದರು!’” ಎಂದರು.


ಇದಲ್ಲದೆ, ನಾನು ನನ್ನ ದಾಸರಾದ ಪ್ರವಾದಿಗಳನ್ನೆಲ್ಲಾ ನಿಮ್ಮ ಬಳಿಗೆ ನಿರಂತರವಾಗಿ ಕಳುಹಿಸುತ್ತಾ ಬಂದೆ. “ನೀವೆಲ್ಲರೂ ನಿಮ್ಮ ನಿಮ್ಮ ದುರ್ಮಾರ್ಗಗಳಿಂದ ಹಿಂದಿರುಗಿ, ನಿಮ್ಮ ನಡತೆಗಳನ್ನು ಸರಿಪಡಿಸಿಕೊಳ್ಳಿರಿ. ಅನ್ಯದೇವತೆಗಳನ್ನು ಹಿಂಬಾಲಿಸಿ ಪೂಜಿಸದಿರಿ. ಹಾಗೆ ಮಾಡಿದರೆ ನಾನು ನಿಮಗೂ, ನಿಮ್ಮ ಪೂರ್ವಜರಿಗೂ ಅನುಗ್ರಹಿಸಿದ ನಾಡಿನಲ್ಲಿ ವಾಸಿಸುವಿರಿ ಎಂದು ಅವರ ಮುಖಾಂತರ ಎಚ್ಚರಿಸಿದೆ.” ಆದರೆ ನೀವು ಕೇಳಲಿಲ್ಲ. ಕಿವಿಗೊಡಲೂ ಇಲ್ಲ.


ನಾನೇ ಯೆಹೋವನೆಂದು ನನ್ನನ್ನು ತಿಳಿದುಕೊಳ್ಳುವುದಕ್ಕೆ ಅವರಿಗೆ ಹೃದಯವನ್ನು ಕೊಡುವೆನು. ಅವರು ನನ್ನ ಜನರಾಗಿರುವರು. ನಾನು ಅವರ ದೇವರಾಗಿರುವೆನು. ಏಕೆಂದರೆ ಅವರು ತಮ್ಮ ಪೂರ್ಣಹೃದಯದಿಂದ ನನ್ನ ಬಳಿಗೆ ಹಿಂದಿರುಗಿಕೊಳ್ಳುವರು.


“ಹೀಗಿರುವುದರಿಂದ ಈಗ ಯೆಹೂದದ ಮನುಷ್ಯರಿಗೂ, ಯೆರೂಸಲೇಮಿನ ನಿವಾಸಿಗಳಿಗೂ ನೀನು ಹೇಳಬೇಕಾದದ್ದೇನೆಂದರೆ, ‘ಯೆಹೋವ ದೇವರು ಹೀಗೆ ಹೇಳುತ್ತಾರೆ: ಇಗೋ, ನಾನು ನಿಮಗೆ ವಿರೋಧವಾಗಿ ಕೆಟ್ಟದ್ದನ್ನು ಕಲ್ಪಿಸುತ್ತಾ ಇದ್ದೇನೆ. ನಿಮಗೆ ವಿರೋಧವಾಗಿ ಉಪಾಯವನ್ನು ಆಲೋಚಿಸುತ್ತಾ ಇದ್ದೇನೆ. ನಿಮ್ಮ ನಿಮ್ಮ ಕೆಟ್ಟ ಮಾರ್ಗಗಳನ್ನು ಬಿಟ್ಟು ಹಿಂದಿರುಗಿರಿ. ನಿಮ್ಮ ಮಾರ್ಗಗಳನ್ನೂ, ನಿಮ್ಮ ಕ್ರಿಯೆಗಳನ್ನೂ ಒಳ್ಳೆಯದಾಗಿ ಮಾಡಿರಿ.


ಆಗ ಸಮುಯೇಲನು ಇಸ್ರಾಯೇಲ್ ಮನೆಯವರಿಗೆಲ್ಲಾ ಮಾತನಾಡಿ, “ನೀವು ನಿಮ್ಮ ಪೂರ್ಣಹೃದಯದಿಂದ ಯೆಹೋವ ದೇವರ ಕಡೆಗೆ ತಿರುಗಿ, ನಿಮ್ಮಲ್ಲಿರುವ ಅನ್ಯದೇವರುಗಳನ್ನೂ, ಅಷ್ಟೋರೆತನ್ನೂ ನಿಮ್ಮ ಮಧ್ಯದಲ್ಲಿಂದ ತೆಗೆದುಹಾಕಿ, ನಿಮ್ಮ ಹೃದಯವನ್ನು ಯೆಹೋವ ದೇವರಿಗೆ ಸಿದ್ಧಮಾಡಿ, ಅವರೊಬ್ಬರನ್ನೇ ಸೇವಿಸಿದರೆ ಅವರು ನಿಮ್ಮನ್ನು ಫಿಲಿಷ್ಟಿಯರ ಕೈಗಳೊಳಗಿಂದ ತಪ್ಪಿಸುವರು,” ಎಂದನು.


ಆದರೆ ನೀವು ಪುನಃ ಯೆಹೋವ ದೇವರ ಮಾತನ್ನು ಕೇಳಿ, ನಾನು ಈ ಹೊತ್ತು ನಿಮಗೆ ಆಜ್ಞಾಪಿಸುವ ಅವರ ಎಲ್ಲಾ ಆಜ್ಞೆಗಳಂತೆ ನಡೆಯುವಿರಿ.


ಈ ಜನರ ಹೃದಯವು ಕಠೋರವಾಗಿದೆ; ಇವರ ಕಿವಿಗಳು ಕೇಳದ ಹಾಗೆ ಮಂದವಾಗಿವೆ, ಇವರು ತಮ್ಮ ಕಣ್ಣುಗಳನ್ನು ಮುಚ್ಚಿಕೊಂಡಿದ್ದಾರೆ. ಇಲ್ಲವಾದರೆ ಅವರು ತಮ್ಮ ಕಣ್ಣುಗಳಿಂದ ನೋಡಿ, ಕಿವಿಗಳಿಂದ ಕೇಳಿಸಿಕೊಂಡು, ತಮ್ಮ ಹೃದಯದಿಂದ ತಿಳಿದು, ನನ್ನ ಕಡೆಗೆ ತಿರುಗಿಕೊಂಡಿದ್ದರೆ, ನಾನು ಅವರನ್ನು ಸ್ವಸ್ಥಪಡಿಸುತ್ತಿದ್ದೆನು,’ ಎಂಬುದೇ.


ಆದರೆ ಮೊದಲು ದಮಸ್ಕದಲ್ಲಿದ್ದವರಿಗೂ ಆಮೇಲೆ ಯೆರೂಸಲೇಮಿನಲ್ಲಿಯೂ ಯೂದಾಯದ ಎಲ್ಲಾ ಕಡೆಗಳಲ್ಲಿ ಇದ್ದವರಿಗೂ ಯೆಹೂದ್ಯರಲ್ಲದವರಿಗೂ ನಾನು ಬೋಧಿಸಿದೆನು. ಅವರು ಪಶ್ಚಾತ್ತಾಪಪಟ್ಟು ದೇವರ ಕಡೆಗೆ ತಿರುಗಿಕೊಂಡು, ಪಶ್ಚಾತ್ತಾಪಕ್ಕೆ ಯೋಗ್ಯ ಕೃತ್ಯಗಳನ್ನು ನಡೆಸಬೇಕೆಂದು ನಾನು ಘೋಷಿಸಿದೆನು.


“ಆಗ ದ್ರಾಕ್ಷಿಯ ತೋಟದ ಯಜಮಾನನು, ‘ನಾನೇನು ಮಾಡಲಿ? ನಾನು ನನ್ನ ಪ್ರಿಯ ಮಗನನ್ನೇ ಕಳುಹಿಸುವೆನು, ಬಹುಶಃ ಅವರು ಅವನಿಗಾದರೂ ಮರ್ಯಾದೆಕೊಟ್ಟಾರು,’ ಎಂದುಕೊಂಡನು.


ಈ ಜನರ ಹೃದಯವು ಕಠೋರವಾಗಿದೆ; ಇವರ ಕಿವಿಗಳು ಕೇಳದ ಹಾಗೆ ಮಂದವಾಗಿವೆ, ಇವರು ತಮ್ಮ ಕಣ್ಣುಗಳನ್ನು ಮುಚ್ಚಿಕೊಂಡಿದ್ದಾರೆ. ಇಲ್ಲವಾದರೆ ತಾವು ಕಣ್ಣಿನಿಂದ ಕಂಡು, ಕಿವಿಯಿಂದ ಕೇಳಿ. ತಮ್ಮ ಹೃದಯದಿಂದ ತಿಳಿದು, ನನ್ನ ಕಡೆಗೆ ತಿರುಗಿಕೊಂಡಿದ್ದರೆ, ನಾನು ಅವರನ್ನು ಸ್ವಸ್ಥಪಡಿಸುತ್ತಿದ್ದೆನು,’ ಎಂಬುದೇ.


ದೇಶದ ದೀನರೇ, ಅವರ ಆಜ್ಞೆಗಳನ್ನು ಕೈಕೊಂಡು ನಡೆಯುವವರೆಲ್ಲರೇ ಯೆಹೋವ ದೇವರನ್ನು ಹುಡುಕಿರಿ. ನೀತಿಯನ್ನು ಹುಡುಕಿರಿ, ವಿನಯವನ್ನು ಹುಡುಕಿರಿ. ಒಂದು ವೇಳೆ ಯೆಹೋವ ದೇವರ ಕೋಪದ ದಿವಸದಲ್ಲಿ ಆಶ್ರಯ ಹೊಂದುವಿರಿ.


ದುಷ್ಟನು ಸಾಯುವುದರಲ್ಲಿ ನನಗೆ ಸ್ವಲ್ಪ ಸಂತೋಷವಿರುವುದೋ?” ಎಂದು ಸಾರ್ವಭೌಮ ಯೆಹೋವ ದೇವರು ಹೇಳುತ್ತಾನೆ. “ಅವನು ತನ್ನ ದುರ್ಮಾರ್ಗಗಳನ್ನು ಬಿಟ್ಟು ಬದುಕಿದರೆ ನನಗೆ ಸಂತೋಷವಲ್ಲವೇ?


ಯೆರೂಸಲೇಮಿನ ಪ್ರವಾದಿಗಳಲ್ಲಿ ಭಯಂಕರವಾದದ್ದನ್ನು ನೋಡಿದ್ದೇನೆ. ಅವರು ವ್ಯಭಿಚಾರ ಮಾಡಿ, ಸುಳ್ಳಿನಲ್ಲಿ ನಡೆದುಕೊಂಡದ್ದಲ್ಲದೆ, ದುಷ್ಟರು ತಮ್ಮ ದುಷ್ಟತ್ವವನ್ನು ಬಿಟ್ಟು ತಿರುಗದ ಹಾಗೆ ಅವರ ಕೈಗಳನ್ನು ಬಲಪಡಿಸುತ್ತಾರೆ. ಅವರೆಲ್ಲರೂ ನನಗೆ ಸೊದೋಮಿನ ಹಾಗೆಯೂ, ಅದರ ನಿವಾಸಿಗಳು ಗೊಮೋರದ ಹಾಗೆಯೂ ಇದ್ದಾರೆ.”


ತಮ್ಮ ಕಣ್ಣುಗಳಿಂದ ನೋಡದಂತೆಯೂ, ತಮ್ಮ ಕಿವಿಗಳಿಂದ ಕೇಳದಂತೆಯೂ, ತಮ್ಮ ಹೃದಯದಿಂದ ಗ್ರಹಿಸಿ ತಿರುಗಿಕೊಂಡು ಸ್ವಸ್ಥವಾಗದಂತೆಯೂ ಈ ಜನರ ಹೃದಯವನ್ನು ಕಠಿಣಗೊಳಿಸಿ, ಅವರ ಕಿವಿಯನ್ನು ಮಂದಗೊಳಿಸಿ, ಅವರ ಕಣ್ಣುಗಳನ್ನು ಮೊಬ್ಬಾಗಿಸು,” ಎಂದು ನನಗೆ ಹೇಳಿದರು.


ಆದರೆ ನೀವು ನನ್ನ ಕಡೆಗೆ ತಿರುಗಿಕೊಂಡು ನನ್ನ ಆಜ್ಞೆಗಳನ್ನು ಅನುಸರಿಸಿ, ಅವುಗಳ ಪ್ರಕಾರ ನಡೆದರೆ, ನಿಮ್ಮಲ್ಲಿರುವವರು ಆಕಾಶದ ಅಂತ್ಯದವರೆಗೂ ಸೆರೆಯಾಗಿ ಹೋಗಿದ್ದರೂ, ನಾನು ಅಲ್ಲಿಂದ ಅವರನ್ನು ಕೂಡಿಸಿ, ನನ್ನ ಹೆಸರನ್ನಿಡಲು ಆಯ್ದುಕೊಂಡ ಸ್ಥಳಕ್ಕೆ ಅವರನ್ನು ಬರಮಾಡುವೆನು,’ ಎಂದು ಹೇಳಿದ್ದೀರಿ.


ಅವರು ನನಗೆ ಭಯಪಟ್ಟು, ನನ್ನ ಆಜ್ಞೆಗಳನ್ನೆಲ್ಲಾ ಎಂದೆಂದಿಗೂ ಕೈಗೊಳ್ಳುವಂಥ ಹೃದಯವು ಅವರಲ್ಲಿದ್ದರೆ ಎಷ್ಟೋ ಒಳ್ಳೆಯದು. ಆಗ ಅವರಿಗೂ, ಅವರ ಮಕ್ಕಳಿಗೂ ಎಂದೆಂದಿಗೂ ಒಳ್ಳೆಯದಾಗುವುದು.”


ನನ್ನಲ್ಲಿ ಕೇಡಿನ ಮಾರ್ಗವಿದೆಯೋ ಎಂದು ನೋಡಿರಿ, ನನ್ನನ್ನು ನಿತ್ಯ ಮಾರ್ಗದಲ್ಲಿ ನಡೆಸಿರಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು