Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 36:4 - ಕನ್ನಡ ಸಮಕಾಲಿಕ ಅನುವಾದ

4 ಆಗ ಯೆರೆಮೀಯನು ನೇರೀಯನ ಮಗ ಬಾರೂಕನನ್ನು ಕರೆದನು. ಬಾರೂಕನು ಯೆರೆಮೀಯನ ಬಾಯಿಂದ ಯೆಹೋವ ದೇವರು ಅವನಿಗೆ ಹೇಳಿದ್ದ ಮಾತುಗಳನ್ನೆಲ್ಲಾ ಕೇಳಿ, ಗ್ರಂಥದ ಸುರುಳಿಯನ್ನು ಬರೆದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

4 ಆಗ ಯೆರೆಮೀಯನು ನೇರೀಯನ ಮಗನಾದ ಬಾರೂಕನನ್ನು ಕರೆಯಿಸಿ ಯೆಹೋವನ ಮಾತುಗಳನ್ನೆಲ್ಲಾ ಹೇಳಲು ಅವನು ಯೆರೆಮೀಯನ ಬಾಯಿಂದ ಬಂದ ಹಾಗೆಯೇ ಅವುಗಳನ್ನು ಗ್ರಂಥದ ಸುರುಳಿಯಲ್ಲಿ ಬರೆದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

4 ಆಗ ಯೆರೆಮೀಯನು ನೇರೀಯನ ಮಗ ಬಾರೂಕನನ್ನು ಕರೆಯಿಸಿ ಸರ್ವೇಶ್ವರನ ಮಾತುಗಳನ್ನೆಲ್ಲ ಹೇಳಿದನು. ಅವನು ಯೆರೆಮೀಯನ ಬಾಯಿಂದ ಬಂದ ಹಾಗೆಯೇ ಅವುಗಳನ್ನು ಗ್ರಂಥದ ಸುರುಳಿಯಲ್ಲಿ ಬರೆದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

4 ಆಗ ಯೆರೆಮೀಯನು ನೇರೀಯನ ಮಗನಾದ ಬಾರೂಕನನ್ನು ಕರೆಯಿಸಿ ಯೆಹೋವನ ಮಾತುಗಳನ್ನೆಲ್ಲಾ ನುಡಿಯಲು ಅವನು ಯೆರೆಮೀಯನ ಬಾಯಿಂದ ಬಂದ ಹಾಗೆಯೇ ಅವುಗಳನ್ನು ಗ್ರಂಥದ ಸುರಳಿಯಲ್ಲಿ ಬರೆದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

4 ಆಗ ಯೆರೆಮೀಯನು ಬಾರೂಕನೆಂಬ ಒಬ್ಬ ವ್ಯಕ್ತಿಯನ್ನು ಕರೆದನು. ಬಾರೂಕನು ನೇರೀಯನ ಮಗ. ಯೆರೆಮೀಯನು ಯೆಹೋವನ ಸಂದೇಶವನ್ನು ಹೇಳುತ್ತಿದ್ದಾಗ ಬಾರೂಕನು ಆ ಸಂದೇಶವನ್ನು ಸುರುಳಿಯ ಮೇಲೆ ಬರೆದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 36:4
22 ತಿಳಿವುಗಳ ಹೋಲಿಕೆ  

ಮಹ್ಸೇಯನ ಮೊಮ್ಮಗನೂ, ನೇರೀಯನ ಮಗನೂ ಆದ ಬಾರೂಕನ ಕೈಗೆ ಕೊಟ್ಟೆ. ನನ್ನ ಚಿಕ್ಕಪ್ಪನ ಮಗ ಹನಮೇಲನ ಮುಂದೆ ಕ್ರಯಪತ್ರಕ್ಕೆ ರುಜುಮಾಡಿದ ಸಾಕ್ಷಿಗಳ ಸಮಕ್ಷಮದಲ್ಲಿ ಕಾರಾಗೃಹದ ಅಂಗಳದಲ್ಲಿ ಕುಳಿತಿದ್ದ ಎಲ್ಲ ಯೆಹೂದ್ಯರ ಎದುರಿನಲ್ಲಿ ಈ ಕ್ರಯಪತ್ರವನ್ನು ಕೊಟ್ಟೆ.


ಇಗೋ, ನಾನು ನೋಡುತ್ತಿದ್ದಂತೆ ಒಂದು ಕೈ ನನ್ನ ಕಡೆಗೆ ಚಾಚಿತ್ತು. ಅದರಲ್ಲಿ ಗ್ರಂಥದ ಸುರುಳಿಯೊಂದು ಕಾಣಿಸಿತು.


ಆಗ ಯೆರೆಮೀಯನು ಮತ್ತೊಂದು ಸುರುಳಿಯನ್ನು ತೆಗೆದುಕೊಂಡು ನೇರೀಯನ ಮಗ ಲೇಖಕನಾದ ಬಾರೂಕನಿಗೆ ಕೊಟ್ಟನು. ಇವನು ಯೆಹೂದದ ಅರಸನಾದ ಯೆಹೋಯಾಕೀಮನು ಬೆಂಕಿಯಲ್ಲಿ ಸುಟ್ಟ ಸುರುಳಿಯ ವಾಕ್ಯಗಳನ್ನೆಲ್ಲಾ ಯೆರೆಮೀಯನ ಬಾಯಿಂದ ಬಂದ ಹಾಗೆ ಬರೆದನು. ಅವುಗಳ ಹಾಗಿರುವ ಅನೇಕ ವಾಕ್ಯಗಳು ಅವುಗಳ ಸಂಗಡ ಕೂಡಿಸಲಾದವು.


ಆದರೆ ಅವರು ನಮ್ಮನ್ನು ಕೊಂದುಹಾಕುವ ಹಾಗೆಯೂ, ನಮ್ಮನ್ನು ಬಾಬಿಲೋನಿಗೆ ಸೆರೆ ಒಯ್ಯುವ ಹಾಗೆಯೂ, ನಮ್ಮನ್ನು ಬಾಬಿಲೋನಿಯರ ಕೈಯಲ್ಲಿ ಒಪ್ಪಿಸಬೇಕೆಂದು ನೇರೀಯನ ಮಗನಾದ ಬಾರೂಕನು ನಿನ್ನನ್ನು ನಮಗೆ ವಿರೋಧವಾಗಿ ಪ್ರೇರೇಪಿಸಿದ್ದಾನೆ,” ಎಂದರು.


ಈ ಪತ್ರವನ್ನು ಬರೆದ ತೆರ್ತ್ಯನೆಂಬ ನಾನು ಕರ್ತನಲ್ಲಿ ನಿಮ್ಮನ್ನು ವಂದಿಸುತ್ತೇನೆ.


ಆಗ ನಾನು ತಿರುಗಿಕೊಂಡು ನನ್ನ ಕಣ್ಣುಗಳನ್ನೆತ್ತಿ ನೋಡಲು, ಹಾರುವ ಸುರುಳಿ ಕಾಣಿಸಿತು.


“ನೀನು ಮತ್ತೊಂದು ಸುರುಳಿಯನ್ನು ತೆಗೆದುಕೊಂಡು ಯೆಹೂದದ ಅರಸನಾದ ಯೆಹೋಯಾಕೀಮನು ಸುಟ್ಟ ಮೊದಲನೆಯ ಸುರುಳಿಯಲ್ಲಿದ್ದ ಮುಂಚಿನ ವಾಕ್ಯಗಳನ್ನೆಲ್ಲಾ ಅದರಲ್ಲಿ ಬರೆ.


ಆದರೆ ಅರಸನು ರಾಜಪುತ್ರ ಯೆರಹ್ಮೇಲನಿಗೂ, ಅಜ್ರಿಯೇಲನ ಮಗನಾದ ಸೆರಾಯನಿಗೂ, ಅಬ್ದೆಯೇಲನ ಮಗ ಶೆಲೆಮ್ಯನಿಗೂ, ಲೇಖಕನಾದ ಬಾರೂಕನನ್ನೂ, ಪ್ರವಾದಿಯಾದ ಯೆರೆಮೀಯನನ್ನೂ ಹಿಡಿಯಬೇಕೆಂದು ಆಜ್ಞಾಪಿಸಿದನು. ಆದರೆ ಯೆಹೋವ ದೇವರು ಅವರನ್ನು ಅಡಗಿಸಿದ್ದರು.


ಆಗ ಯೆಹೂದಿಯು ಬರವಣಿಗೆಯ ಮೂರು ನಾಲ್ಕು ಪುಟಗಳನ್ನು ಓದಿದ ಮೇಲೆ ಅದನ್ನು ಚೂರಿಯಿಂದ ಕೊಯ್ದು, ಅಗ್ಗಿಷ್ಟಿಕೆಯಲ್ಲಿದ್ದ ಬೆಂಕಿಯೊಳಗೆ ಸುರುಳಿಯನ್ನೆಲ್ಲಾ ಅಗ್ಗಿಷ್ಟಿಕೆಯ ಬೆಂಕಿಯಲ್ಲಿ ಸುಟ್ಟುಹೋಗುವವರೆಗೂ ಹಾಕಿಬಿಟ್ಟನು.


ಹೀಗೆ ಅರಸನು ಯೆಹೂದಿಯನ್ನು, ಆ ಸುರುಳಿಯನ್ನು ತೆಗೆದುಕೊಂಡು ಬರುವ ಹಾಗೆ ಕಳುಹಿಸಿದನು; ಅವನು ಅದನ್ನು ಲೇಖಕನಾದ ಎಲೀಷಾಮನ ಕೊಠಡಿಯೊಳಗಿಂದ ತೆಗೆದುಕೊಂಡನು. ಯೆಹೂದಿಯು ಅದನ್ನು ಅರಸನಿಗೂ, ಅರಸನ ಬಳಿಯಲ್ಲಿ ನಿಂತ ಎಲ್ಲಾ ಪ್ರಧಾನರಿಗೂ ಓದಿ ಹೇಳಿದನು.


ಯೆಹೋವ ದೇವರು, “ಒಂದು ದೊಡ್ಡ ಸುರುಳಿಯನ್ನು ತೆಗೆದುಕೊಂಡು ಸಾಮಾನ್ಯ ಲೇಖನಿಯಿಂದಲೇ ಮಹೇರ್ ಶಾಲಾಲ್ ಹಾಷ್ ಬಜ್, ಎಂದರೆ ಸೂರೆಗೆ ಆತುರ, ಕೊಳ್ಳೆಗೆ ಅವಸರ ಎಂದು ಬರೆ,” ಎಂಬುದಾಗಿ ನನಗೆ ಹೇಳಿದರು.


ನಿಶ್ಚಯವಾಗಿ ಆ ದೇಶದ ಮೇಲೆ ನಾನು ಅದಕ್ಕೆ ವಿರೋಧವಾಗಿ ಹೇಳಿದ ನನ್ನ ಎಲ್ಲಾ ವಾಕ್ಯಗಳನ್ನೂ, ಯೆರೆಮೀಯನು ಜನಾಂಗಗಳಿಗೆ ವಿರೋಧವಾಗಿ ಪ್ರವಾದಿಸಿ, ಈ ಪುಸ್ತಕದಲ್ಲಿ ಬರೆದಿರುವ ಎಲ್ಲವನ್ನೂ ಅವರ ಮೇಲೆ ಬರಮಾಡುವೆನು.


“ಇಸ್ರಾಯೇಲಿನ ದೇವರಾದ ಯೆಹೋವ ದೇವರು ಹೀಗೆ ಹೇಳುತ್ತಾರೆ: ‘ನಾನು ನಿನಗೆ ಹೇಳಿದ ವಾಕ್ಯಗಳನ್ನೆಲ್ಲಾ ಒಂದು ಪುಸ್ತಕದಲ್ಲಿ ನೀನು ಬರೆದಿಡು.


ಆದ್ದರಿಂದ ನೀನು ಹೋಗಿ ನನ್ನ ಬಾಯಿಂದ ಕೇಳಿ, ನೀನು ಬರೆದು ಸುರುಳಿಯಲ್ಲಿ ಯೆಹೋವ ದೇವರ ಆಲಯದೊಳಗೆ ಉಪವಾಸದ ದಿವಸದಲ್ಲಿ ಯೆಹೋವ ದೇವರ ವಾಕ್ಯಗಳನ್ನು ಜನರಿಗೆ ಕೇಳುವಂತೆ ಓದಿ ಹೇಳು ಮತ್ತು ತಮ್ಮ ಪಟ್ಟಣಗಳಿಂದ ಬರುವ ಯೆಹೂದದವರೆಲ್ಲರೂ ಕೇಳುವಂತೆಯೂ ಅವುಗಳನ್ನು ಓದಿ ಹೇಳಬೇಕು.


ಅಧಿಕಾರಿಗಳೆಲ್ಲರು ಸೇರಿ ನೆತನ್ಯನ ಮಗನೂ, ಶೆಲೆಮ್ಯನ ಮೊಮ್ಮಗನೂ, ಕೂಷಿಯ ಮರಿಮಗನೂ ಆದ ಯೆಹೂದಿಯನ್ನು ಬಾರೂಕನ ಬಳಿಗೆ ಕಳುಹಿಸಿದನು. “ನೀನು ಜನರ ಮುಂದೆ ಓದಿದ ಸುರುಳಿಯನ್ನು ನಿನ್ನ ಕೈಯಲ್ಲಿ ತೆಗೆದುಕೊಂಡು ಬಾ,” ಎಂದು ಹೇಳಿ ಕಳುಹಿಸಿದರು. ಅಂತೆಯೇ ನೇರೀಯನ ಮಗ ಬಾರೂಕನು ಸುರುಳಿಯನ್ನು ತನ್ನ ಕೈಯಲ್ಲೆ ತೆಗೆದುಕೊಂಡು ಅವರ ಬಳಿಗೆ ಕೂಡಲೇ ಬಂದನು.


ಅರಸನು ಆ ಸುರುಳಿಯನ್ನು ಬಾರೂಕನು ಯೆರೆಮೀಯನ ಬಾಯಿಂದ ಬರೆದಿದ್ದ ವಾಕ್ಯಗಳನ್ನೂ, ಸುಟ್ಟ ಮೇಲೆ ಯೆಹೋವ ದೇವರ ವಾಕ್ಯವು ಯೆರೆಮೀಯನಿಗೆ ಬಂದಿತು:


ಪ್ರವಾದಿಯಾದ ಯೆರೆಮೀಯನು ಮಹ್ಸೇಯನ ಮಗನಾದ ನೇರೀಯನ ಮಗ ಸೆರಾಯನಿಗೆ, ಅವನು ಯೆಹೂದದ ಅರಸನಾದ ಚಿದ್ಕೀಯನ ಸಂಗಡ, ಇವನ ಆಳ್ವಿಕೆಯ ನಾಲ್ಕನೆಯ ವರ್ಷದಲ್ಲಿ ಬಾಬಿಲೋನಿಗೆ ಹೋದಾಗ ಆಜ್ಞಾಪಿಸಿದ ವಾಕ್ಯವು. ಆ ಸೆರಾಯನು ಅಂಗರಕ್ಷಕ ಸೇನೆಯ ನಾಯಕನಾಗಿದ್ದನು.


ಹೀಗೆ ಯೆರೆಮೀಯನು ಬಾಬಿಲೋನಿನ ಮೇಲೆ ಬರುವ ಕೇಡನ್ನೆಲ್ಲಾ ಬಾಬಿಲೋನಿಗೆ ವಿರೋಧವಾಗಿ ಬರೆದಿರುವ ಈ ವಾಕ್ಯಗಳನ್ನೆಲ್ಲಾ ಒಂದು ಗ್ರಂಥದಲ್ಲಿ ಬರೆದನು.


ಬಾಬಿಲೋನಿನ ಅರಸನಾದ ಬೇಲ್ಯಚ್ಚರನ ಮೊದಲನೆಯ ವರ್ಷದಲ್ಲಿ ದಾನಿಯೇಲನು ಹಾಸಿಗೆಯ ಮೇಲೆ ಮಲಗಿದ್ದಾಗ ಕನಸನ್ನೂ, ದರ್ಶನಗಳನ್ನೂ ಕಂಡು, ತನ್ನ ಕನಸಿನ ತಾತ್ಪರ್ಯವನ್ನು ಬರೆದಿಟ್ಟನು.


ಈಗ ಹೋಗಿ ಇದನ್ನು ಅದರ ಮುಂದೆ ಹಲಗೆಯಲ್ಲಿ ಬರೆ. ಅದನ್ನು ಸುರುಳಿಯಲ್ಲಿ ಬರೆಯಿರಿ, ಮುಂದೆ ಬರುವ ನಿತ್ಯಕಾಲಕ್ಕಾಗಿ ಶಾಶ್ವತ ಸಾಕ್ಷಿಯಾಗಿರಲಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು