Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 36:5 - ಕನ್ನಡ ಸಮಕಾಲಿಕ ಅನುವಾದ

5 ಆಮೇಲೆ ಯೆರೆಮೀಯನು ಬಾರೂಕನಿಗೆ ಆಜ್ಞಾಪಿಸಿದ್ದೇನೆಂದರೆ, “ನಾನು ಇಲ್ಲಿ ಬಂಧಿಸಲಾಗಿದ್ದೇನೆ. ಯೆಹೋವ ದೇವರ ಆಲಯಕ್ಕೆ ಹೋಗಲಾರೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

5 ಮತ್ತು ಯೆರೆಮೀಯನು ಬಾರೂಕನಿಗೆ, “ಯೆಹೋವನ ಆಲಯದೊಳಗೆ ಪ್ರವೇಶಿಸಲು ನನಗೆ ತಡೆಯಾಗಿದೆ;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

5 ಬಳಿಕ ಯೆರೆಮೀಯನು ಬಾರೂಕನಿಗೆ, “ಸರ್ವೇಶ್ವರನ ಆಲಯದೊಳಗೆ ಪ್ರವೇಶಿಸಲು ನನಗೆ ತಡೆಮಾಡಲಾಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

5 ಮತ್ತು ಯೆರೆಮೀಯನು ಬಾರೂಕನಿಗೆ - ಯೆಹೋವನ ಆಲಯದೊಳಗೆ ಪ್ರವೇಶಿಸಲು ನನಗೆ ತಡೆಯಾಗಿದೆ;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

5 ಆಗ ಯೆರೆಮೀಯನು ಬಾರೂಕನಿಗೆ ಹೀಗೆ ಹೇಳಿದನು: “ಯೆಹೋವನ ಆಲಯಕ್ಕೆ ನಾನು ಹೋಗಲಾರೆ. ಅಲ್ಲಿ ಹೋಗುವದಕ್ಕೆ ಅಪ್ಪಣೆಯಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 36:5
15 ತಿಳಿವುಗಳ ಹೋಲಿಕೆ  

ಯೆಹೋವ ದೇವರ ವಾಕ್ಯವು ಯೆರೆಮೀಯನಿಗೆ ಅವನು ಇನ್ನು ಸೆರೆಮನೆಯ ಅಂಗಳದಲ್ಲಿ ಸೆರೆಯಾಗಿದ್ದಾಗ ಎರಡನೆಯ ಸಾರಿ ಉಂಟಾಯಿತು.


ಆಗ ಬಾಬಿಲೋನಿನ ಅರಸನ ಸೈನ್ಯವು ಯೆರೂಸಲೇಮಿಗೆ ಮುತ್ತಿಗೆ ಹಾಕಿತ್ತು. ಪ್ರವಾದಿಯಾದ ಯೆರೆಮೀಯನು ಯೆಹೂದದ ಅರಸನ ಅರಮನೆಯಲ್ಲಿರುವ ಸೆರೆಮನೆಯ ಅಂಗಳದಲ್ಲಿ ಬಂಧಿಸಲಾಗಿದ್ದನು.


ಅವರು ಕ್ರಿಸ್ತ ಯೇಸುವಿನ ಸೇವಕರೋ? ಅವರಿಗಿಂತ ಹೆಚ್ಚಾಗಿ ನಾನು ಸೇವೆ ಮಾಡಿದ್ದೇನೆ. ನಾನು ಬುದ್ಧಿಹೀನನಂತೆ ಮಾತನಾಡುತ್ತಿದ್ದೇನೆ. ನಾನು ಅತಿಯಾಗಿ ಪ್ರಯಾಸ ಪಟ್ಟಿರುತ್ತೇನೆ. ಅನೇಕಬಾರಿ ಸೆರೆಮನೆಗೆ ಹಾಕಲಾದೆನು. ಬಹು ಕ್ರೂರವಾದ ರೀತಿಯಲ್ಲಿ ಪೆಟ್ಟುಗಳನ್ನು ತಿಂದೆನು. ಅನೇಕಬಾರಿ ಮರಣವನ್ನು ಎದುರಿಸಿದೆನು.


ಇನ್ನೂ ಬೇರೆ ಕೆಲವರು ಅಪಹಾಸ್ಯ, ಕೊರಡೆಯ ಪೆಟ್ಟು ತಿಂದು ಬೇಡಿ ಸೆರೆವಾಸವನ್ನು ಸಹ ಅನುಭವಿಸಿದರು,


ಈ ಸುವಾರ್ತೆಗಾಗಿ ನಾನು ಕಷ್ಟವನ್ನು ಅನುಭವಿಸಿ ದುಷ್ಕರ್ಮಿಯಂತೆ ಬೇಡಿಗಳಿಂದ ಬಂಧಿತನಾಗಿದ್ದೇನೆ. ಆದರೆ ದೇವರ ವಾಕ್ಯಕ್ಕೆ ಬಂಧನವಿಲ್ಲ.


ಏಕೆಂದರೆ ಆ ಸುವಾರ್ತೆಗಾಗಿಯೇ ಸೆರೆಯಲ್ಲಿರುವ ರಾಯಭಾರಿಯಾದ ನಾನು ಅದನ್ನು ಸಾರುವುದರಲ್ಲಿ ಧೈರ್ಯವಾಗಿ ಮಾತನಾಡುವ ಹಂಗಿನಲ್ಲಿದ್ದೇನೆ.


ಈ ಕಾರಣದಿಂದ ಯೆಹೂದ್ಯರಲ್ಲದವರಾಗಿರುವ ನಿಮ್ಮ ನಿಮಿತ್ತ ಕ್ರಿಸ್ತ ಯೇಸುವಿನ ಸೆರೆಯಾಳಾಗಿರುವ ಪೌಲನೆಂಬ ನಾನು ಹೇಳುವುದೇನೆಂದರೆ:


ಈಗ ಇಗೋ, ನಿನ್ನ ಕೈಗೆ ಹಾಕಿದ ಬೇಡಿಗಳನ್ನು ಈ ದಿವಸ ತೆಗೆಸಿದ್ದೇನೆ. ನನ್ನ ಸಂಗಡ ಬಾಬಿಲೋನಿಗೆ ಬರುವುದಕ್ಕೆ ನಿನಗೆ ಒಳ್ಳೆಯದೆಂದು ತೋಚಿದರೆ ಬಾ, ನಾನು ನಿನ್ನನ್ನು ಚೆನ್ನಾಗಿ ನೋಡಿಕೊಳ್ಳುವೆನು; ಆದರೆ ನನ್ನ ಸಂಗಡ ಬಾಬಿಲೋನಿಗೆ ಬರುವುದಕ್ಕೆ ನಿನಗೆ ಕೆಟ್ಟದ್ದೆಂದು ತೋಚಿದರೆ ಅದನ್ನು ಬಿಡು. ಇಗೋ, ದೇಶವೆಲ್ಲಾ ನಿನ್ನ ಮುಂದೆ ಇದೆ; ಎಲ್ಲಿ ಹೋಗುವುದಕ್ಕೆ ನಿನಗೆ ಒಳ್ಳೆಯದೆಂದೂ, ಸರಿಯೆಂದೂ ಕಾಣುತ್ತದೋ, ಅಲ್ಲಿಗೆ ಹೋಗು,” ಎಂಬುದು.


ಈ ಪ್ರಕಾರ ಯೆರೂಸಲೇಮು ಸೆರೆಯಾಗುವ ದಿವಸದವರೆಗೆ ಯೆರೆಮೀಯನು ಸೆರೆಮನೆಯ ಅಂಗಳದಲ್ಲಿ ವಾಸವಾಗಿದ್ದನು. ಯೆರೂಸಲೇಮು ಹಿಡಿಯಲಾಗುವಾಗ ಅಲ್ಲೇ ಇದ್ದನು.


ಆಗ ಅವರು ಯೆರೆಮೀಯನನ್ನು ತಮ್ಮ ವಶಕ್ಕೆ ತೆಗೆದುಕೊಂಡರು. ಸೆರೆಮನೆಯ ಅಂಗಳದಲ್ಲಿದ್ದ ರಾಜವಂಶೀಯನಾದ ಮಲ್ಕೀಯನ ಬಾವಿಯಲ್ಲಿ ನೀರು ಇರಲಿಲ್ಲ. ಕೆಸರು ಮಾತ್ರ ಇತ್ತು. ಯೆರೆಮೀಯನನ್ನು ಕೆಸರಿನಲ್ಲಿ ಹಾಕಿದರು.


ಆಗ ಪ್ರಧಾನರು ಯೆರೆಮೀಯನ ಮೇಲೆ ಕೋಪಗೊಂಡು, ಅವನನ್ನು ಹೊಡೆದು, ಲೇಖಕನಾದ ಯೋನಾತಾನನ ಮನೆಯಲ್ಲಿ ಬಂಧನದಲ್ಲಿ ಇಟ್ಟರು. ಏಕೆಂದರೆ ಅದನ್ನು ಸೆರೆಮನೆಯಾಗಿ ಮಾಡಿದ್ದರು.


ಆಗ ಪಷ್ಹೂರನು ಪ್ರವಾದಿಯಾದ ಯೆರೆಮೀಯನನ್ನು ಹೊಡೆದು, ಅವನನ್ನು ಯೆಹೋವ ದೇವರ ಆಲಯದ ಬಳಿಯಲ್ಲಿದ್ದ ಬೆನ್ಯಾಮೀನನ ಮೇಲ್ಭಾಗದಲ್ಲಿದ್ದ ಬಾಗಿಲಲ್ಲಿದ್ದ ಮರದ ಉಪಕರಣಕ್ಕೆ ಕಟ್ಟಿದರು.


ತರುವಾಯ ನಾನು ಅಡಗಿಕೊಂಡಿದ್ದ ಮೆಹೇಟಬೇಲನ ಮಗನಾದ ದೆಲಾಯ, ಇವನ ಮಗನಾದ ಶೆಮಾಯನ ಮನೆಗೆ ಬಂದೆನು. ಅವನು, “ನಾವಿಬ್ಬರೂ ದೇವರ ಆಲಯದಲ್ಲಿ ಪವಿತ್ರಸ್ಥಾನದೊಳಗೆ ಹೋಗಿ, ಮಂದಿರದ ಬಾಗಿಲನ್ನು ಮುಚ್ಚಿಕೊಳ್ಳೋಣ ಬಾ, ಏಕೆಂದರೆ ಈ ರಾತ್ರಿಯೇ ನಿನ್ನನ್ನು ಕೊಂದುಹಾಕಲು ಬರುತ್ತಾರೆ,” ಎಂದು ಹೇಳಿದನು.


ನನ್ನ ಪರಿಚಿತರನ್ನು ನನ್ನಿಂದ ದೂರಮಾಡಿದ್ದೀರಿ. ನಾನು ಅವರಿಗೆ ಬೇಡವಾಗಿದ್ದೇನೆ. ನಾನು ಬಂಧಿತನಾಗಿದ್ದೇನೆ, ಹೊರಗೆ ಬರಲಾರೆನು.


ಮಹ್ಸೇಯನ ಮೊಮ್ಮಗನೂ, ನೇರೀಯನ ಮಗನೂ ಆದ ಬಾರೂಕನ ಕೈಗೆ ಕೊಟ್ಟೆ. ನನ್ನ ಚಿಕ್ಕಪ್ಪನ ಮಗ ಹನಮೇಲನ ಮುಂದೆ ಕ್ರಯಪತ್ರಕ್ಕೆ ರುಜುಮಾಡಿದ ಸಾಕ್ಷಿಗಳ ಸಮಕ್ಷಮದಲ್ಲಿ ಕಾರಾಗೃಹದ ಅಂಗಳದಲ್ಲಿ ಕುಳಿತಿದ್ದ ಎಲ್ಲ ಯೆಹೂದ್ಯರ ಎದುರಿನಲ್ಲಿ ಈ ಕ್ರಯಪತ್ರವನ್ನು ಕೊಟ್ಟೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು