Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 36:7 - ಕನ್ನಡ ಸಮಕಾಲಿಕ ಅನುವಾದ

7 ಒಂದು ವೇಳೆ ಅವರ ವಿಜ್ಞಾಪನೆ ಯೆಹೋವ ದೇವರ ಮುಂದೆ ಬಂದೀತು. ಅವರು ತಮ್ಮ ತಮ್ಮ ಕೆಟ್ಟ ಮಾರ್ಗಗಳನ್ನು ಬಿಟ್ಟು ತಿರುಗಿಕೊಂಡಾರು. ಏಕೆಂದರೆ ಯೆಹೋವ ದೇವರು ಈ ಜನರಿಗೆ ವಿರೋಧವಾಗಿ ಪ್ರಕಟಿಸಿರುವ ಕೋಪವೂ, ಉರಿಯೂ ಅಪಾರವಾಗಿದೆ.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

7 ಅವರು ಒಂದು ವೇಳೆ ಯೆಹೋವನಿಗೆ ಶರಣಾಗತರಾಗಿ ತಮ್ಮ ದುರ್ಮಾರ್ಗಗಳಿಂದ ಹಿಂದಿರುಗಿಯಾರು; ಯೆಹೋವನು ಈ ಜನರ ಮೇಲೆ ತೀರಿಸಬೇಕೆಂದು ಪ್ರಕಟಿಸಿರುವ ಕೋಪ ಮತ್ತು ರೋಷಗಳು ಅಪಾರವಾಗಿವೆ” ಎಂದು ಅಪ್ಪಣೆಕೊಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

7 ಅವರು ಒಂದು ವೇಳೆ ಸರ್ವೇಶ್ವರನಿಗೆ ಶರಣಾಗತರಾಗಿ ತಮ್ಮ ದುರ್ಮಾರ್ಗಗಳಿಂದ ಹಿಂದಿರುಗಬಹುದು. ಏಕೆಂದರೆ, ಸರ್ವೇಶ್ವರ ಆ ಜನರ ವಿರುದ್ಧ ತೋರಿಸಬೇಕೆಂದಿರುವ ಕೋಪಾಕ್ರೋಶ ಭಯಾನಕವಾಗಿದೆ,” ಎಂದು ಆಜ್ಞಾಪಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

7 ಅವರು ಒಂದು ವೇಳೆ ಯೆಹೋವನಿಗೆ ಶರಣಾಗತರಾಗಿ ತಮ್ಮ ದುರ್ಮಾರ್ಗಗಳಿಂದ ಹಿಂದಿರುಗಿಯಾರು; ಯೆಹೋವನು ಈ ಜನರ ಮೇಲೆ ತೀರಿಸಬೇಕೆಂದು ಪ್ರಕಟಿಸಿರುವ ಕೋಪರೋಷಗಳು ಅಪಾರವಾಗಿವೆ ಎಂದು ಅಪ್ಪಣೆಕೊಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

7 ಬಹುಶಃ ಆ ಜನರು ತಮಗೆ ಸಹಾಯಮಾಡೆಂದು ಯೆಹೋವನನ್ನು ಪ್ರಾರ್ಥಿಸಬಹುದು. ಆಗ ಪ್ರತಿಯೊಬ್ಬನೂ ದುಷ್ಕೃತ್ಯ ಮಾಡುವದನ್ನು ನಿಲ್ಲಿಸಬಹುದು. ಆ ಜನರ ಮೇಲೆ ತನಗೆ ಬಹಳ ಕೋಪಬಂದಿದೆ ಎಂದು ಯೆಹೋವನು ಪ್ರಕಟಿಸಿದ್ದಾನೆ.”

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 36:7
36 ತಿಳಿವುಗಳ ಹೋಲಿಕೆ  

ಒಂದು ವೇಳೆ ಯೆಹೂದದ ಮನೆತನದವರು ನಾನು ಅವರಿಗೆ ಮಾಡುವುದಕ್ಕೆ ನೆನಸುವ ಕೇಡನ್ನೆಲ್ಲಾ ಕೇಳಿ ನಾನು ಅವರ ಅಕ್ರಮವನ್ನೂ, ಅವರ ಪಾಪವನ್ನೂ ಮನ್ನಿಸುವ ಹಾಗೆ ತಮ್ಮ ತಮ್ಮ ಮಾರ್ಗಗಳನ್ನು ಬಿಟ್ಟು ತಿರುಗಿಕೊಂಡಾರು,” ಎಂದನು.


ಅಪರಾಧಗಳನ್ನು ಅರಿಕೆಮಾಡಿ, ನನ್ನ ಮುಖವನ್ನು ಹುಡುಕುವವರೆಗೂ, ನಾನು ತಿರುಗಿಕೊಂಡು ನನ್ನ ಗುಹೆಗೆ ಹೋಗುವೆನು. ಅವರ ಕಷ್ಟದಲ್ಲಿ ಅವರು ನನ್ನನ್ನು ಬೇಗ ಹುಡುಕುವರು.”


ಯೆಹೋವ ದೇವರು ತಮ್ಮ ರೋಷವನ್ನು ತೀರಿಸಿದ್ದಾರೆ. ಅವರು ತಮ್ಮ ಉಗ್ರವಾದ ಕೋಪವನ್ನು ಸುರಿದಿದ್ದಾರೆ. ಚೀಯೋನಿನಲ್ಲಿ ಹೊತ್ತಿಸಿದ ಬೆಂಕಿಯು ಅದರ ಅಸ್ತಿವಾರಗಳನ್ನು ತಿಂದುಬಿಟ್ಟಿತು.


ನಾನೇ ಚಾಚಿದ ಕೈಯಿಂದಲೂ, ಬಲವಾದ ತೋಳಿನಿಂದಲೂ, ಕೋಪದಿಂದಲೂ, ಉಗ್ರದಿಂದಲೂ, ಮಹಾರೌದ್ರದಿಂದಲೂ ನಿಮಗೆ ವಿರೋಧವಾಗಿ ಯುದ್ಧಮಾಡುವೆನು.


ಯೆಹೂದದವರೇ, ಯೆರೂಸಲೇಮಿನ ನಿವಾಸಿಗಳೇ, ಯೆಹೋವ ದೇವರಿಗೋಸ್ಕರ ಸುನ್ನತಿ ಮಾಡಿಕೊಳ್ಳಿರಿ; ನಿಮ್ಮ ಹೃದಯಗಳ ಮುಂದೊಗಲನ್ನು ತೆಗೆದುಹಾಕಿರಿ. ಇಲ್ಲದಿದ್ದರೆ ನನ್ನ ಉಗ್ರವು ಬೆಂಕಿಯ ಹಾಗೆ ಹೊರಟು, ನಿಮ್ಮ ಕ್ರಿಯೆಗಳ ಕೆಟ್ಟತನದ ನಿಮಿತ್ತ ಯಾರೂ ಆರಿಸಲಾಗದ ಹಾಗೆ ಉರಿಯುವುದು.”


ಏಕೆಂದರೆ ಅವರು ನನ್ನನ್ನು ಬಿಟ್ಟುಬಿಟ್ಟು, ತಮ್ಮ ಸಮಸ್ತ ಕ್ರಿಯೆಗಳಿಂದ ನನಗೆ ಕೋಪವನ್ನು ಎಬ್ಬಿಸುವಂತೆ ಇತರ ದೇವರುಗಳಿಗೆ ಧೂಪವನ್ನು ಸುಟ್ಟಿದ್ದಾರೆ. ಆದ್ದರಿಂದ ನನ್ನ ಕೋಪವು ಈ ಸ್ಥಳದ ಮೇಲೆ ಹೊತ್ತಿ ಉರಿಯುತ್ತಿದೆ, ಅದು ಆರಿಹೋಗುವುದಿಲ್ಲ.’


“ನೀವು ಹೋಗಿ ಸಿಕ್ಕಿದ ಈ ಗ್ರಂಥದ ವಾಕ್ಯಗಳ ಕುರಿತು ನನಗೋಸ್ಕರವೂ, ಜನರಿಗೋಸ್ಕರವೂ, ಸಮಸ್ತ ಯೆಹೂದ್ಯರಿಗೋಸ್ಕರವೂ ಯೆಹೋವ ದೇವರ ಬಳಿಯಲ್ಲಿ ವಿಚಾರಿಸಿರಿ. ಏಕೆಂದರೆ ನಮ್ಮನ್ನು ಕುರಿತು ಬರೆದಿರುವ ಎಲ್ಲವನ್ನೂ ಕೈಗೊಂಡು ನಡೆಯಲು ನಮ್ಮ ಪಿತೃಗಳು ಈ ಗ್ರಂಥದ ಮಾತುಗಳನ್ನು ಕೇಳದೆ ಹೋದುದರಿಂದ, ದೇವರ ಮಹಾಕೋಪಕ್ಕೆ ಪಾತ್ರರಾಗಿದ್ದೇವೆ,” ಎಂದನು.


ನಿಮ್ಮ ಪಿತೃಗಳ ಹಾಗಿರಬೇಡಿರಿ; ಅವರಿಗೆ ಪೂರ್ವದ ಪ್ರವಾದಿಗಳು ಕೂಗಿ, ನಿಮ್ಮ ಕೆಟ್ಟ ಮಾರ್ಗಗಳನ್ನೂ, ನಿಮ್ಮ ಕೆಟ್ಟ ಕ್ರಿಯೆಗಳನ್ನೂ ಬಿಟ್ಟು ತಿರುಗಿರಿ ಎಂದು ಸರ್ವಶಕ್ತರಾದ ಯೆಹೋವ ದೇವರು ಪ್ರಕಟಿಸುತ್ತಾರೆಂದು ಹೇಳಿದರು; ಆದರೆ ಅವರು ಕೇಳಲಿಲ್ಲ. ನನ್ನಲ್ಲಿ ಲಕ್ಷ್ಯವಿಡಲಿಲ್ಲ ಎಂದು ಯೆಹೋವ ದೇವರು ಹೇಳುತ್ತಾರೆ.


ಆದರೆ ಮನುಷ್ಯರೂ ಮೃಗಗಳೂ ಗೋಣಿತಟ್ಟು ಹಾಕಿಕೊಂಡು, ಜೋರಾದ ಧ್ವನಿಯಿಂದ ದೇವರಿಗೆ ಮೊರೆಯಿಡಲಿ. ಎಲ್ಲರೂ ತಮ್ಮ ತಮ್ಮ ದುರ್ಮಾರ್ಗಗಳನ್ನೂ, ತಮ್ಮ ತಮ್ಮ ಕೈಗಳಲ್ಲಿರುವ ಹಿಂಸಾಚಾರವನ್ನೂ ಬಿಟ್ಟು ತಿರುಗಲಿ.


ಮೋಶೆಯ ನಿಯಮದಲ್ಲಿ ಬರೆದಿರುವ ಪ್ರಕಾರ, ಈ ಎಲ್ಲಾ ವಿನಾಶ ನಮ್ಮ ಮೇಲೆ ಬಂದಿದೆ. ಆದರೂ ನಾವು ನಮ್ಮ ಅಕ್ರಮಗಳನ್ನು ಬಿಟ್ಟು, ತಿರುಗಿಕೊಂಡು ನಿಮ್ಮ ಸತ್ಯವನ್ನು ತಿಳಿದುಕೊಳ್ಳುವಂತೆ, ನಮ್ಮ ದೇವರಾದ ಯೆಹೋವ ದೇವರ ದಯೆಯನ್ನು ಬೇಡಿಕೊಳ್ಳಲಿಲ್ಲ.


ಅವರು ಬೆಳ್ಳಿ, ತಾಮ್ರ, ಕಬ್ಬಿಣ, ಸೀಸ ಮತ್ತು ತಗಡುಗಳನ್ನು ಹೇಗೆ ಒರೆಯೊಳಗೆ ಕೂಡಿಸಿ, ಅದಕ್ಕೆ ಬೆಂಕಿಯನ್ನು ಊದಿ ಕರಗಿಸುವರೋ, ಹಾಗೆಯೇ ನಾನು ನಿಮ್ಮನ್ನು ನನ್ನ ಕೋಪದಲ್ಲಿ ಮತ್ತು ನನ್ನ ರೋಷದಲ್ಲಿ ಒಟ್ಟುಗೂಡಿಸಿ ನಿಮ್ಮನ್ನು ನಗರದೊಳಗೆ ಹಾಕಿ ಕರಗಿಸುತ್ತೇನೆ.


ಸಾರ್ವಭೌಮ ಯೆಹೋವ ದೇವರು ಹೇಳುವುದೇನೆಂದರೆ, ನನ್ನ ಜೀವದಾಣೆ, ನಿಶ್ಚಯವಾಗಿ ಬಲವಾದ ಕೈಯಿಂದಲೂ, ಚಾಚಿದ ತೋಳಿನಿಂದಲೂ, ಸುರಿಸಿದ ರೋಷದಿಂದಲೂ ನಾನು ನಿಮ್ಮ ಮೇಲೆ ಅಧಿಕಾರ ನಡೆಸುತ್ತೇನೆ.


“ ‘ಆದ್ದರಿಂದ ಸಾರ್ವಭೌಮ ಯೆಹೋವ ದೇವರು ಹೀಗೆ ಹೇಳುತ್ತಾರೆ: ಅದನ್ನು ನನ್ನ ರೋಷದಲ್ಲಿ ಬಿರುಗಾಳಿಯಿಂದ ಸೀಳಿಬಿಡುವೆನು. ಅದನ್ನು ನಾಶಪಡಿಸುವ ಹಾಗೆ ನನ್ನ ಕೋಪದಿಂದ ವಿಪರೀತ ಮಳೆಯೂ, ನನ್ನ ಉರಿಯಿಂದ ಕಲ್ಮಳೆಯ ಕಲ್ಲುಗಳು ಸುರಿಯುವುವು.


ಆದ್ದರಿಂದ ನಾನು ಸಹ ರೋಷದಿಂದಲೇ ಇರುವೆನು. ನಾನು ಅವರನ್ನು ಕನಿಕರಿಸುವುದೂ ಇಲ್ಲ, ನಾನು ಅವರನ್ನು ಉಳಿಸುವುದೂ ಇಲ್ಲ. ಅವರು ನನ್ನ ಕಿವಿಗಳಲ್ಲಿ ಮಹಾಧ್ವನಿಯಿಂದ ಕಿರುಚಿದರೂ, ನಾನು ಅವರನ್ನು ಕೇಳಿಸಿಕೊಳ್ಳುವುದೂ ಇಲ್ಲ,” ಎಂದನು.


“ಈ ಪ್ರಕಾರ ನನ್ನ ಕೋಪವನ್ನು ತೀರಿಸಿಕೊಳ್ಳುವೆನು. ನನ್ನ ರೋಷವನ್ನು ಅವರ ಮೇಲೆ ಕಾರಿ, ಸಮಾಧಾನ ಹೊಂದುವೆನು. ಹೀಗೆ ನಾನು ನನ್ನ ರೋಷವನ್ನು ಅವರ ಮೇಲೆ ತೀರಿಸಿದ ತರುವಾಯ, ಯೆಹೋವ ದೇವರಾದ ನಾನು ರೋಷದಿಂದ ಮಾತನಾಡಿದ್ದೇನೆ ಎಂದು ಅವರು ತಿಳಿಯುವರು.


ಒಂದು ವೇಳೆ ಅವರು ಕೇಳಿ, ನಾನು ಅವರ ಕೃತ್ಯಗಳ ಕೆಟ್ಟತನದ ನಿಮಿತ್ತ ಅವರಿಗೆ ಮಾಡುವುದಕ್ಕೆ ಆಲೋಚಿಸಿದ ಕೇಡಿನ ವಿಷಯ ಪಶ್ಚಾತ್ತಾಪ ಪಡುವ ಹಾಗೆ ತಮ್ಮ ತಮ್ಮ ಕೆಟ್ಟ ಮಾರ್ಗವನ್ನು ಬಿಟ್ಟು ತಿರುಗಿಕೊಂಡಾರು.


ಅವರು ಹೇಳಿದ್ದೇನೆಂದರೆ: “ನಿಮ್ಮ ನಿಮ್ಮ ಕೆಟ್ಟ ಮಾರ್ಗವನ್ನೂ, ನಿಮ್ಮ ಕೆಟ್ಟ ದೃಶ್ಯಗಳ ಕೆಟ್ಟತನವನ್ನೂ ಬಿಟ್ಟು ಮತ್ತೆ ತಿರುಗಿಕೊಳ್ಳಿರಿ. ಆಗ ಯೆಹೋವ ದೇವರು ನಿಮಗೂ, ನಿಮ್ಮ ತಂದೆಗಳಿಗೂ ಕೊಟ್ಟ ದೇಶದಲ್ಲಿ ಎಂದೆಂದಿಗೂ ವಾಸಿಸುವಿರಿ.


“ಇಸ್ರಾಯೇಲಿನ ದೇವರಾದ ಸೇನಾಧೀಶ್ವರ ಯೆಹೋವ ದೇವರು ಹೀಗೆ ಹೇಳುತ್ತಾನೆ: ‘ಇಗೋ, ನಾನು ಈ ಪಟ್ಟಣದ ಮೇಲೆಯೂ, ಅದರ ಎಲ್ಲಾ ಊರುಗಳ ಮೇಲೆಯೂ, ಅದಕ್ಕೆ ವಿರೋಧವಾಗಿ ಹೇಳಿದ ಕೇಡನ್ನೆಲ್ಲಾ ತರಿಸುತ್ತೇನೆ. ಏಕೆಂದರೆ ಅವರು ನನ್ನ ಮಾತುಗಳನ್ನು ಕೇಳದ ಹಾಗೆ ತಮ್ಮ ಹೃದಯಗಳನ್ನು ಕಠಿಣ ಮಾಡಿಕೊಂಡಿದ್ದಾರೆ, ಎಂಬುದೇ.’ ”


“ನೀನು ಈ ಜನರಿಗೆ ಈ ಮಾತುಗಳನ್ನೆಲ್ಲಾ ತಿಳಿಸಿದ ಮೇಲೆ ಅವರು ನಿನಗೆ, ‘ಏಕೆ ಯೆಹೋವ ದೇವರು ನಮ್ಮ ಮೇಲೆ ಈ ದೊಡ್ಡ ಕೇಡನ್ನು ಮಾತಾಡಿದ್ದಾರೆ? ನಮ್ಮ ಅಕ್ರಮ ಏನು? ನಾವು ನಮ್ಮ ದೇವರಾದ ಯೆಹೋವ ದೇವರಿಗೆ ವಿರೋಧವಾಗಿ ಮಾಡಿರುವ ಪಾಪವೇನು?’ ಎಂದು ಹೇಳಿದರೆ, ನೀನು ಅವರಿಗೆ ಹೀಗೆ ಹೇಳಬೇಕು:


ಅಲ್ಲದೆ ಯೆಹೂದದ ಅರಸನೂ ಯೋಷೀಯನ ಮಗನೂ ಆದ ಯೆಹೋಯಾಕೀಮನ ಕಾಲದಿಂದ ಯೆಹೂದದ ಅರಸನೂ ಯೋಷೀಯನ ಮಗನೂ ಆದ ಚಿದ್ಕೀಯನ ಕಾಲದ ಆಳ್ವಿಕೆಯ ಹನ್ನೊಂದನೆಯ ವರ್ಷದ ಐದನೆಯ ತಿಂಗಳಿನಲ್ಲಿ ಯೆರೂಸಲೇಮಿನವರು ಸೆರೆ ಹೋಗುವ ತನಕ ಯೆಹೋವ ದೇವರ ವಾಕ್ಯವು ಒದಗುತ್ತಿತ್ತು.


“ನೀವು ಹೋಗಿ ಸಿಕ್ಕಿದ ಈ ಗ್ರಂಥದ ವಾಕ್ಯಗಳ ಕುರಿತು ನನಗೋಸ್ಕರವೂ, ಇಸ್ರಾಯೇಲ್ ಮತ್ತು ಯೆಹೂದದಲ್ಲಿ ಉಳಿದವರಿಗೋಸ್ಕರವೂ ಯೆಹೋವ ದೇವರ ಬಳಿಯಲ್ಲಿ ವಿಚಾರಿಸಿರಿ. ಏಕೆಂದರೆ ನಮ್ಮನ್ನು ಕುರಿತು ಬರೆದಿರುವ ಎಲ್ಲವನ್ನೂ ಕೈಗೊಂಡು ನಡೆಯಲು ನಮ್ಮ ಪಿತೃಗಳು ಈ ಗ್ರಂಥದ ಮಾತುಗಳನ್ನು ಕೇಳದೆ ಹೋದುದರಿಂದ, ನಮ್ಮ ಮೇಲೆ ಸುರಿದ ಯೆಹೋವ ದೇವರ ಕೋಪವು ದೊಡ್ಡದಾಗಿದೆ,” ಎಂದು ಹೇಳಿದನು.


ಆ ದಿವಸದಲ್ಲಿ ನಾನು ಅವರ ಮೇಲೆ ಕೋಪಗೊಂಡು ಅವರನ್ನು ಬಿಟ್ಟುಬಿಟ್ಟು, ನನ್ನ ಮುಖವನ್ನು ಅವರಿಗೆ ಮರೆಮಾಡುವೆನು. ವಿರೋಧಿಗಳು ಅವರನ್ನು ನುಂಗಿಬಿಡುವರು. ಬಹಳ ಕೇಡುಗಳೂ, ಇಕ್ಕಟ್ಟುಗಳೂ ಅವರಿಗೆ ಸಂಭವಿಸುವುದು. ಆ ದಿವಸದಲ್ಲಿ ಅವರು, ‘ನಮ್ಮ ದೇವರು ನಮ್ಮ ಮಧ್ಯದಲ್ಲಿ ಇಲ್ಲದ ಕಾರಣ ನಮಗೆ ಕೇಡುಗಳು,’ ಎಂದು ಹೇಳುವರು.


ಆಗ ಯೆಹೋವ ದೇವರು ಮೋಶೆಗೆ, “ನೀನು ಮೃತನಾಗಿ, ನಿನ್ನ ಪಿತೃಗಳ ಸಂಗಡ ಸೇರುವಿ. ಈ ಜನರು ದೇವದ್ರೋಹಿಗಳಾಗಿ, ಅವರು ಪ್ರವೇಶಿಸುವ ದೇಶದ ಅನ್ಯದೇವರುಗಳನ್ನು ಅನುಸರಿಸಿ ಪೂಜೆ ಮಾಡಿ, ನನ್ನನ್ನು ಬಿಟ್ಟು ನಾನು ಅವರ ಸಂಗಡ ಮಾಡಿದ ಒಡಂಬಡಿಕೆಯನ್ನು ಮೀರುವರು.


ಆದ್ದರಿಂದ ಈಗ ಕಿವಿಗೊಡು. ನನ್ನ ಒಡೆಯನಾದ ಅರಸನೇ, ನನ್ನ ವಿಜ್ಞಾಪನೆ ನಿನ್ನ ಮುಂದೆ ಅಂಗೀಕಾರವಾಗಲಿ. ಲೇಖಕನಾದ ಯೋನಾತಾನನ ಮನೆಗೆ ನಾನು ಅಲ್ಲಿ ಸಾಯದ ಹಾಗೆ ನನ್ನನ್ನು ತಿರುಗಿ ಕಳುಹಿಸಬೇಡ,” ಎಂದನು.


ಪ್ರವಾದಿಯಾದ ಯೆರೆಮೀಯನಿಗೆ, “ನಮ್ಮ ವಿಜ್ಞಾಪನೆ ನಿಮ್ಮ ಮುಂದೆ ಬರಲಿ. ನಿನ್ನ ಕಣ್ಣುಗಳು ನಮ್ಮನ್ನು ನೋಡುವ ಪ್ರಕಾರ, ನಾವು ಅನೇಕರೊಳಗಿಂದ ಕೆಲವರೇ ಉಳಿದಿದ್ದೇವಲ್ಲಾ? ನಮಗೋಸ್ಕರವೂ ಎಂದರೆ ಈ ಸಮಸ್ತ ಶೇಷಕ್ಕೋಸ್ಕರವೂ,


“ಆದ್ದರಿಂದ ಮನುಷ್ಯಪುತ್ರನೇ, ನೀನು ಸಲಕರಣೆಗಳನ್ನು ಸಿದ್ಧಮಾಡಿ, ಹಗಲಿನಲ್ಲಿ ಅವರ ದೃಷ್ಟಿಯಿಂದ ತೊಲಗಿಹೋಗು, ಹೌದು, ಅವರ ಕಣ್ಣುಗಳ ಮುಂದೆಯೇ ನಿನ್ನ ಸ್ಥಳವನ್ನು ಬಿಟ್ಟು ಬೇರೊಂದು ಸ್ಥಳಕ್ಕೆ ಹೋಗು. ಅವರು ದ್ರೋಹಿಗಳಾದವರ ಮನೆತನದವರಾದರೂ, ಒಂದು ವೇಳೆ ಅರ್ಥಮಾಡಿಕೊಳ್ಳಬಹುದು.


ನನ್ನ ದೇವರೇ, ನೀವು ಕಿವಿಗೊಟ್ಟು ಕೇಳಿರಿ. ನಿಮ್ಮ ಕಣ್ಣುಗಳನ್ನು ತೆರೆದು ನಮ್ಮ ನಾಶವನ್ನೂ, ನಿಮ್ಮ ಹೆಸರಿನಿಂದ ಕರೆಯಲಾಗುವ ಈ ಹಾಳಾಗಿರುವ ಪಟ್ಟಣವನ್ನೂ ನೋಡಿರಿ. ಏಕೆಂದರೆ ನಾವು ನಮ್ಮ ನೀತಿಗೋಸ್ಕರವಲ್ಲ, ನಿಮ್ಮ ಮಹಾ ಕರುಣೆಗಾಗಿಯೇ ನಮ್ಮ ವಿಜ್ಞಾಪನೆಗಳನ್ನು ನಿಮ್ಮ ಮುಂದೆ ಅರ್ಪಿಸುತ್ತೇವೆ.


ಯೆಹೋವ ದೇವರು ಹೀಗೆ ಘೋಷಿಸುತ್ತಾರೆ, “ಈಗಲಾದರೂ ಉಪವಾಸದಿಂದಲೂ ಅಳುವಿಕೆಯಿಂದಲೂ ಗೋಳಾಟದಿಂದಲೂ ನಿಮ್ಮ ಪೂರ್ಣಹೃದಯದಿಂದ ನನ್ನ ಕಡೆಗೆ ತಿರುಗಿಕೊಳ್ಳಿರಿ.”


ನಿಮ್ಮ ಬಟ್ಟೆಗಳನ್ನಲ್ಲ, ನಿಮ್ಮ ಹೃದಯಗಳನ್ನು ಹರಿದುಕೊಂಡು, ನಿಮ್ಮ ದೇವರಾದ ಯೆಹೋವ ದೇವರ ಕಡೆಗೆ ತಿರುಗಿಕೊಳ್ಳಿರಿ. ಅವರು ದಯೆಯೂ ಕರುಣೆಯೂ, ದೀರ್ಘಶಾಂತಿಯೂ ಮಹಾ ಪ್ರೀತಿಯೂ ಉಳ್ಳವರಾಗಿ ಮಾಡಬೇಕೆಂದಿರುವ ಕೇಡಿಗೆ ಮನಮರುಗುತ್ತಾರೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು