Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 37:1 - ಕನ್ನಡ ಸಮಕಾಲಿಕ ಅನುವಾದ

1 ಯೋಷೀಯನ ಮಗ ಚಿದ್ಕೀಯನು ಬಾಬಿಲೋನಿನ ಅರಸನಾದ ನೆಬೂಕದ್ನೆಚ್ಚರನಿಂದ ಯೆಹೂದ ದೇಶದ ಅರಸನನ್ನಾಗಿ ಮಾಡಿದನು. ಅವನು ಯೆಹೋಯಾಕೀಮನ ಮಗ ಕೊನ್ಯನಿಗೆ ಬದಲಾಗಿ, ಅರಸನಾಗಿ ಆಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

1 ಯೋಷೀಯನ ಮಗನಾದ ಚಿದ್ಕೀಯನು ಬಾಬೆಲಿನ ಅರಸನಾದ ನೆಬೂಕದ್ನೆಚ್ಚರನಿಂದ ಯೆಹೂದ ದೇಶದ ಪಟ್ಟಕ್ಕೆ ತರಲ್ಪಟ್ಟು ಯೆಹೋಯಾಕೀಮನ ಮಗನಾದ ಕೊನ್ಯನಿಗೆ ಬದಲಾಗಿ ರಾಜ್ಯವಾಳುತ್ತಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

1 ಯೋಷೀಯನ ಮಗ ಚಿದ್ಕೀಯನು ಯೆಹೋಯಾಕೀಮನ ಮಗ ಕೊನ್ಯನಿಗೆ ಬದಲಾಗಿ ರಾಜ್ಯವಾಳುತ್ತಿದ್ದನು. ಬಾಬಿಲೋನಿನ ಅರಸ ನೆಬೂಕದ್ನೆಚ್ಚರನು ಅವನನ್ನು ಜುದೇಯದ ನಾಡಿಗೆ ಅರಸನನ್ನಾಗಿಸಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

1 ಯೋಷೀಯನ ಮಗನಾದ ಚಿದ್ಕೀಯನು ಬಾಬೆಲಿನ ಅರಸನಾದ ನೆಬೂಕದ್ನೆಚ್ಚರನಿಂದ ಯೆಹೂದದೇಶದ ಪಟ್ಟಕ್ಕೆ ತರಲ್ಪಟ್ಟು ಯೆಹೋಯಾಕೀಮನ ಮಗನಾದ ಕೊನ್ಯನಿಗೆ ಬದಲಾಗಿ ರಾಜ್ಯವಾಳುತ್ತಿದ್ದಾಗ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

1 ನೆಬೂಕದ್ನೆಚ್ಚರನು ಬಾಬಿಲೋನಿನ ರಾಜನಾಗಿದ್ದನು. ನೆಬೂಕದ್ನೆಚ್ಚರನು ಯೆಹೋಯಾಕೀಮನ ಮಗನಾದ ಕೊನ್ಯನ ಸ್ಥಾನದಲ್ಲಿ ಚಿದ್ಕೀಯನನ್ನು ಯೆಹೂದದ ರಾಜನನ್ನಾಗಿ ನೇಮಿಸಿದ್ದನು. ಚಿದ್ಕೀಯನು ರಾಜನಾದ ಯೋಷೀಯನ ಮಗನಾಗಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 37:1
11 ತಿಳಿವುಗಳ ಹೋಲಿಕೆ  

“ನನ್ನ ಜೀವದಾಣೆ, ಯೆಹೋಯಾಕೀಮನ ಮಗ ಯೆಹೂದದ ಅರಸನಾದ ಕೊನ್ಯನು ನನ್ನ ಬಲಗೈಯ ಮುದ್ರೆ ಉಂಗುರವಾಗಿದ್ದರೂ, ನಿನ್ನನ್ನು ಅಲ್ಲಿಂದ ಕಿತ್ತುಹಾಕಿ,


ಬಾಬಿಲೋನಿನ ಅರಸನು ಯೆಹೋಯಾಖೀನನ ಚಿಕ್ಕಪ್ಪನಾದ ಮತ್ತನ್ಯನನ್ನು ಅವನಿಗೆ ಬದಲಾಗಿ ಅರಸನನ್ನಾಗಿ ಮಾಡಿ, ಅವನಿಗೆ ಚಿದ್ಕೀಯನೆಂದು ಬೇರೆ ಹೆಸರನ್ನಿಟ್ಟನು.


ಆಗ ಯೆಹೂದದ ಅರಸನಾದ ಯೆಹೋಯಾಖೀನನೂ, ಅವನ ತಾಯಿಯೂ, ಅವನ ಸೇವಕರೂ, ಅವನ ಪ್ರಧಾನರೂ, ಅವನ ಕಂಚುಕಿಯರೂ ಅಧಿಕಾರಿಗಳ ಸಹಿತವಾಗಿ ಬಾಬಿಲೋನಿನ ಅರಸನಾದ ನೆಬೂಕದ್ನೆಚ್ಚರನಿಗೆ ಶರಣಾದರು. ಬಾಬಿಲೋನಿನ ಅರಸನು ತನ್ನ ಆಳಿಕೆಯ ಎಂಟನೆಯ ವರ್ಷದಲ್ಲಿ ಯೆಹೋಯಾಕೀನನನ್ನು ಸೆರೆಹಿಡಿದನು.


ಯೆಹೂದದ ಅರಸನಾದ ಯೆಹೋಯಾಖೀನನ ಸೆರೆಯ ಮೂವತ್ತೇಳನೆಯ ವರ್ಷದ ಹನ್ನೆರಡನೆಯ ತಿಂಗಳಿನ ಇಪ್ಪತ್ತೈದನೆಯ ದಿವಸದಲ್ಲಿ ಆದದ್ದೇನೆಂದರೆ, ಬಾಬಿಲೋನಿನ ಅರಸನಾದ ಎವೀಲ್ಮೆರೋದಕನು ತನ್ನ ಆಳ್ವಿಕೆಯ ಮೊದಲನೆಯ ವರ್ಷದಲ್ಲಿ, ಅವನು ಯೆಹೂದದ ಅರಸನಾದ ಯೆಹೋಯಾಖೀನನನ್ನು ಸೆರೆಮನೆಯಿಂದ ಬಿಡಿಸಿದನು.


ಬಾಬಿಲೋನಿನ ಅರಸನಾದ ನೆಬೂಕದ್ನೆಚ್ಚರನು, ಯೆಹೂದದ ಅರಸನಾದ ಯೆಹೋಯಾಕೀಮನ ಮಗನಾದ ಯೆಕೊನ್ಯನನ್ನೂ, ಯೆಹೂದದ ಪ್ರಧಾನರನ್ನೂ, ಬಡಗಿಯರನ್ನೂ, ಕಮ್ಮಾರರನ್ನೂ ಯೆರೂಸಲೇಮಿನಿಂದ ಬಾಬಿಲೋನಿಗೆ ಸೆರೆಗೆ ಒಯ್ದನು. ಯೆಹೋವ ದೇವರ ದೇವಾಲಯದ ಮುಂದೆ ಇಟ್ಟಿರುವ ಎರಡು ಬುಟ್ಟಿ ಅಂಜೂರದ ಹಣ್ಣುಗಳನ್ನು ಯೆಹೋವ ದೇವರು ನನಗೆ ತೋರಿಸಿದರು.


ಕೊನ್ಯನೆಂಬ ಈ ಮನುಷ್ಯನು ಹೀನವಾಗಿ ಒಡೆದುಹೋದ ಮಡಿಕೆಯೆ? ಮೆಚ್ಚುಗೆ ಇಲ್ಲದ ಪಾತ್ರೆಯೆ? ಏಕೆ ಕೊನ್ಯನೂ, ಅವನ ಸಂತಾನವೂ ಬೀದಿಪಾಲಾಗಿದ್ದಾರೆ, ತಮಗೆ ತಿಳಿಯದ ದೇಶಕ್ಕೆ ಗಡಿಪಾರಾಗಿದ್ದಾರೆ?


ಅರಸನಾದ ಚಿದ್ಕೀಯನು ಮಲ್ಕೀಯನ ಮಗ ಪಷ್ಹೂರನನ್ನೂ, ಮಾಸೇಯನ ಮಗನಾದ ಯಾಜಕನಾದ ಚೆಫನ್ಯನನ್ನೂ ಯೆರೆಮೀಯನ ಬಳಿಗೆ ಕಳುಹಿಸಿ,


“ಇಸ್ರಾಯೇಲಿನ ದೇವರಾದ ಯೆಹೋವ ದೇವರು ಹೀಗೆ ಹೇಳುತ್ತಾರೆ: ನೀನು ಹೋಗಿ ಯೆಹೂದದ ಅರಸನಾದ ಚಿದ್ಕೀಯನ ಸಂಗಡ ಮಾತನಾಡಿ ಅವನಿಗೆ ಹೇಳತಕ್ಕದ್ದೇನೆಂದರೆ: ‘ಯೆಹೋವ ದೇವರು ಹೀಗೆ ಹೇಳುತ್ತಾರೆ. ಇಗೋ, ನಾನು ಈ ಪಟ್ಟಣವನ್ನು ಬಾಬಿಲೋನಿನ ಅರಸನ ಕೈಗೆ ಒಪ್ಪಿಸುವೆನು. ಅವನು ಅದನ್ನು ಬೆಂಕಿಯಿಂದ ಸುಡುವನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು