Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 37:15 - ಕನ್ನಡ ಸಮಕಾಲಿಕ ಅನುವಾದ

15 ಆಗ ಪ್ರಧಾನರು ಯೆರೆಮೀಯನ ಮೇಲೆ ಕೋಪಗೊಂಡು, ಅವನನ್ನು ಹೊಡೆದು, ಲೇಖಕನಾದ ಯೋನಾತಾನನ ಮನೆಯಲ್ಲಿ ಬಂಧನದಲ್ಲಿ ಇಟ್ಟರು. ಏಕೆಂದರೆ ಅದನ್ನು ಸೆರೆಮನೆಯಾಗಿ ಮಾಡಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

15 ಆ ಪ್ರಧಾನರು ಯೆರೆಮೀಯನ ಮೇಲೆ ಕೋಪಗೊಂಡು ಅವನನ್ನು ಹೊಡೆಯಿಸಿ, ತಾವು ಬಂದಿಖಾನೆಯನ್ನಾಗಿ ಮಾಡಿದ್ದ ಲೇಖಕನಾದ ಯೆಹೋನಾಥಾನನ ಮನೆಯಲ್ಲಿ ಸೆರೆಹಾಕಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

15 ಆ ಅಧಿಕಾರಿಗಳು ಯೆರೆಮೀಯನ ಮೇಲೆ ಕೋಪಗೊಂಡು ಅವನನ್ನು ಹೊಡೆಯಿಸಿ, ತಾವು ಬಂದಿಖಾನೆಯನ್ನಾಗಿ ಮಾಡಿದ್ದ ಲೇಖಕ ಯೆಹೋನಾಥಾನನ ಮನೆಯಲ್ಲಿ ಸೆರೆಹಾಕಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

15 ಆ ಪ್ರಧಾನರು ಯೆರೆಮೀಯನ ಮೇಲೆ ಕೋಪಗೊಂಡು ಅವನನ್ನು ಹೊಡೆಯಿಸಿ ತಾವು ಬಂದಿಖಾನೆಯನ್ನಾಗಿ ಮಾಡಿದ್ದ ಲೇಖಕನಾದ ಯೆಹೋನಾಥಾನನ ಮನೆಯಲ್ಲಿ ಸೆರೆಹಾಕಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

15 ಆ ಅಧಿಕಾರಿಗಳು ಯೆರೆಮೀಯನ ಮೇಲೆ ತುಂಬಾ ಕೋಪಗೊಂಡರು. ಯೆರೆಮೀಯನನ್ನು ಹೊಡೆಯಬೇಕೆಂದು ಅವರು ಆಜ್ಞೆಯಿತ್ತರು. ಆಮೇಲೆ ಅವರು ಯೆರೆಮೀಯನನ್ನು ಸೆರೆಮನೆಯಲ್ಲಿಟ್ಟರು. ಆ ಸೆರೆಮನೆಯು ಯೆಹೋನಾಥಾನನೆಂಬುವನ ಮನೆಯಲ್ಲಿತ್ತು. ಯೆಹೋನಾಥಾನನು ಯೆಹೂದದ ರಾಜನ ಲಿಫಿಗಾರನಾಗಿದ್ದನು. ಯೆಹೋನಾಥಾನನ ಮನೆಯನ್ನು ಸೆರೆಮನೆಯನ್ನಾಗಿ ಮಾಡಲಾಗಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 37:15
27 ತಿಳಿವುಗಳ ಹೋಲಿಕೆ  

ನೀನು ಅವರಿಗೆ, ‘ನನ್ನನ್ನು ತಿರುಗಿ ಯೋನಾತಾನನ ಮನೆಗೆ ನಾನು ಅಲ್ಲಿ ಸಾಯುವ ಹಾಗೆ ತೆಗೆದುಕೊಂಡು ಹೋಗಬೇಡವೆಂದು ಅರಸನ ಮುಂದೆ ಬಿನ್ನಹ ಮಾಡಿದೆನೆಂದು ಹೇಳು,’ ಎಂದು ಹೇಳಿದನು.”


ಅವರು ಅಪೊಸ್ತಲರನ್ನು ಬಂಧಿಸಿ ಸಾರ್ವಜನಿಕ ಸೆರೆಮನೆಯಲ್ಲಿ ಹಾಕಿಸಿದರು.


“ಆಗ ಗೇಣಿಗೆದಾರರು ಅವನ ಸೇವಕರನ್ನು ಹಿಡಿದು ಒಬ್ಬನನ್ನು ಹೊಡೆದು, ಇನ್ನೊಬ್ಬನನ್ನು ಕೊಂದುಹಾಕಿದರು. ಮತ್ತೊಬ್ಬನ ಮೇಲೆ ಕಲ್ಲೆಸೆದರು.


ಆಗ ಪ್ರಧಾನರೂ ಜನರೆಲ್ಲರೂ ಯಾಜಕರಿಗೂ ಪ್ರವಾದಿಗಳಿಗೂ, “ಈ ಮನುಷ್ಯನು ಮರಣದಂಡನೆಗೆ ತಕ್ಕವನಲ್ಲ. ಏಕೆಂದರೆ ನಮ್ಮ ದೇವರಾದ ಯೆಹೋವ ದೇವರ ಹೆಸರಿನಲ್ಲಿ ನಮ್ಮ ಸಂಗಡ ಮಾತನಾಡಿದ್ದಾನೆ,” ಎಂದರು.


‘ನಾನು ಸಮಾಧಾನವಾಗಿ ತಿರುಗಿ ಬರುವವರೆಗೂ ನೀವು ಇವನನ್ನು ಸೆರೆಮನೆಯಲ್ಲಿಟ್ಟು, ಅವನಿಗೆ ರೊಟ್ಟಿ ಮತ್ತು ನೀರನ್ನು ಬಿಟ್ಟು ಮತ್ತೇನೂ ಕೊಡಬೇಡಿರೆಂದು ಅರಸನು ಹೇಳಿದ್ದಾನೆ’ ಎಂದು ತಿಳಿಸು,” ಎಂದನು.


ಆಗ ಆಸನು ದರ್ಶಿಯ ಮೇಲೆ ಕೋಪಗೊಂಡು ಅವನನ್ನು ಸೆರೆಮನೆಯಲ್ಲಿ ಹಾಕಿಸಿದನು. ಇದರ ನಿಮಿತ್ತ ಅವನ ಮೇಲೆ ರೌದ್ರವುಳ್ಳವನಾಗಿದ್ದನು. ಇದಲ್ಲದೆ ಅದೇ ಕಾಲದಲ್ಲಿ ಆಸನು ಜನರಲ್ಲಿ ಕೆಲವರನ್ನು ಬಾಧಿಸಿದನು.


ಆಗ ಯೋಸೇಫನ ಯಜಮಾನನು ಅವನನ್ನು ಹಿಡಿದುಕೊಂಡು, ರಾಜನ ಕೈದಿಗಳನ್ನಿಡುವ ಸೆರೆಮನೆಯಲ್ಲಿ ಹಾಕಿದನು. ಯೋಸೇಫನು ಆ ಸೆರೆಮನೆಯಲ್ಲಿದ್ದನು.


ನಿನಗೆ ಸಂಭವಿಸುವುದಕ್ಕಿರುವ ಬಾಧೆಗಳಿಗೆ ಭಯಪಡಬೇಡ. ಇಗೋ, ನಿಮ್ಮನ್ನು ಪರೀಕ್ಷಿಸಲು, ಸೈತಾನನು ನಿಮ್ಮಲ್ಲಿ ಕೆಲವರನ್ನು ಸೆರೆಮನೆಯೊಳಗೆ ಹಾಕುವುದಕ್ಕೆ ಇದ್ದಾನೆ. ಹತ್ತು ದಿವಸಗಳ ತನಕ ನಿಮಗೆ ಸಂಕಟವಿರುವುದು. ನೀನು ಸಾಯುವವರೆಗೆ ನಂಬಿಗಸ್ತನಾಗಿರು. ನಾನು ನಿನಗೆ ಜೀವದ ಕಿರೀಟವನ್ನು ಕೊಡುವೆನು.


ಅವರು ಗಮಲಿಯೇಲನ ಸಲಹೆಯನ್ನು ಒಪ್ಪಿದರು. ಅವರು ಅಪೊಸ್ತಲರನ್ನು ಕರೆಯಿರಿ ಅವರನ್ನು ಛಡಿಗಳಿಂದ ಹೊಡೆಸಿ, ಯೇಸುವಿನ ಹೆಸರಿನಲ್ಲಿ ಮಾತನಾಡಬಾರದೆಂದು ಆಜ್ಞಾಪಿಸಿ ಬಿಡುಗಡೆ ಮಾಡಿದರು.


ಅವನು, “ಈ ಹೆಸರಿನಲ್ಲಿ ಉಪದೇಶ ಮಾಡಬಾರದೆಂದು ನಾವು ನಿಮಗೆ ಕಟ್ಟುನಿಟ್ಟಾಗಿ ಅಪ್ಪಣೆಕೊಟ್ಟೆವು. ಇಗೋ ನೀವಾದರೋ ನಿಮ್ಮ ಬೋಧನೆಯಿಂದ ಇಡೀ ಯೆರೂಸಲೇಮನ್ನು ತುಂಬಿಸಿರುವಿರಿ. ಅಲ್ಲದೆ ಈ ಮನುಷ್ಯನನ್ನು ಕೊಂದು ರಕ್ತ ಸುರಿಸಿದ ಅಪರಾಧಕ್ಕೆ ನಮ್ಮನ್ನು ನೀವು ಹೊಣೆಮಾಡಲು ಉದ್ದೇಶಿಸಿದ್ದೀರಿ,” ಎಂದು ಹೇಳಿದನು.


ಯೇಸು ಇವುಗಳನ್ನು ಹೇಳಿದಾಗ, ಹತ್ತಿರ ನಿಂತಿದ್ದ ಕಾವಲಾಳುಗಳಲ್ಲಿ ಒಬ್ಬನು ಯೇಸುವಿನ ಕೆನ್ನೆಗೆ ಹೊಡೆದು, “ನೀನು ಮಹಾಯಾಜಕನಿಗೆ ಹೀಗೆ ಉತ್ತರ ಕೊಡುತ್ತೀಯೋ?” ಎಂದನು.


ಇದಲ್ಲದೆ ಅವರು ಯೇಸುವಿನ ಕಣ್ಣಿಗೆ ಬಟ್ಟೆ ಕಟ್ಟಿ, ಅವರ ಮುಖದ ಮೇಲೆ ಹೊಡೆದು ಯೇಸುವಿಗೆ, “ನಿನ್ನನ್ನು ಹೊಡೆದವರು ಯಾರು? ಪ್ರವಾದನೆ ಹೇಳು,” ಎಂದರು.


ಆದ್ದರಿಂದ ನೋಡಿರಿ, ನಾನು ಪ್ರವಾದಿಗಳನ್ನೂ ಜ್ಞಾನಿಗಳನ್ನೂ ನಿಯಮ ಬೋಧಕರನ್ನೂ ನಿಮ್ಮ ಬಳಿಗೆ ಕಳುಹಿಸುತ್ತೇನೆ. ಅವರಲ್ಲಿ ಕೆಲವರನ್ನು ಕೊಲ್ಲುವಿರಿ, ಶಿಲುಬೆಗೆ ಏರಿಸುವಿರಿ. ಕೆಲವರನ್ನು ನೀವು ನಿಮ್ಮ ಸಭಾಮಂದಿರಗಳಲ್ಲಿ ಕೊರಡೆಗಳಿಂದ ಹೊಡೆದು ಅವರನ್ನು ಪಟ್ಟಣದಿಂದ ಪಟ್ಟಣಕ್ಕೆ ಅಟ್ಟಿ ಹಿಂಸಿಸುವಿರಿ.


ಆಗ ಅವರು ಯೆರೆಮೀಯನನ್ನು ತಮ್ಮ ವಶಕ್ಕೆ ತೆಗೆದುಕೊಂಡರು. ಸೆರೆಮನೆಯ ಅಂಗಳದಲ್ಲಿದ್ದ ರಾಜವಂಶೀಯನಾದ ಮಲ್ಕೀಯನ ಬಾವಿಯಲ್ಲಿ ನೀರು ಇರಲಿಲ್ಲ. ಕೆಸರು ಮಾತ್ರ ಇತ್ತು. ಯೆರೆಮೀಯನನ್ನು ಕೆಸರಿನಲ್ಲಿ ಹಾಕಿದರು.


ಆದ್ದರಿಂದ ಈಗ ಕಿವಿಗೊಡು. ನನ್ನ ಒಡೆಯನಾದ ಅರಸನೇ, ನನ್ನ ವಿಜ್ಞಾಪನೆ ನಿನ್ನ ಮುಂದೆ ಅಂಗೀಕಾರವಾಗಲಿ. ಲೇಖಕನಾದ ಯೋನಾತಾನನ ಮನೆಗೆ ನಾನು ಅಲ್ಲಿ ಸಾಯದ ಹಾಗೆ ನನ್ನನ್ನು ತಿರುಗಿ ಕಳುಹಿಸಬೇಡ,” ಎಂದನು.


ಆದರೂ ಯೆಹೋವ ದೇವರೇ, ಅವರು ನನ್ನನ್ನು ಸಾಯಿಸುವುದಕ್ಕೆ ನನಗೆ ವಿರೋಧವಾಗಿ ಮಾಡಿದ ಆಲೋಚನೆಯನ್ನೆಲ್ಲಾ ನೀವು ಬಲ್ಲಿರಿ. ಅವರ ಅಕ್ರಮವನ್ನು ಮನ್ನಿಸಬೇಡಿ. ಅವರ ಪಾಪಗಳನ್ನು ನಿನ್ನ ಸನ್ನಿಧಿಯೊಳಗಿಂದ ಅಳಿಸಿಬಿಡಬೇಡಿರಿ. ಅವರು ನಿಮ್ಮ ಮುಂದೆ ಎಡವಿಬೀಳಲಿ. ನಿಮ್ಮ ಕೋಪದ ಕಾಲದಲ್ಲಿ ಅವರಿಗೆ ತಕ್ಕದ್ದನ್ನು ಮಾಡಿರಿ.


ಆಗ ಯೆರೆಮೀಯನು ಜನರೊಳಗೆ ಬರುತ್ತಾ ಹೋಗುತ್ತಾ ಇದ್ದನು. ಏಕೆಂದರೆ ಅವರು ಅವನನ್ನು ಸೆರೆಮನೆಯಲ್ಲಿ ಇಡಲಿಲ್ಲ.


ಆಗ ಬಾಬಿಲೋನಿನ ಅರಸನ ಸೈನ್ಯವು ಯೆರೂಸಲೇಮಿಗೆ ಮುತ್ತಿಗೆ ಹಾಕಿತ್ತು. ಪ್ರವಾದಿಯಾದ ಯೆರೆಮೀಯನು ಯೆಹೂದದ ಅರಸನ ಅರಮನೆಯಲ್ಲಿರುವ ಸೆರೆಮನೆಯ ಅಂಗಳದಲ್ಲಿ ಬಂಧಿಸಲಾಗಿದ್ದನು.


ಯೆರೆಮೀಯನು ಸೆರೆಮನೆಯ ಅಂಗಳದಲ್ಲಿರುವಾಗ ಯೆಹೋವ ದೇವರ ವಾಕ್ಯವು ಅವನಿಗೆ ಹೇಳಿದ್ದೇನೆಂದರೆ:


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು