Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 37:17 - ಕನ್ನಡ ಸಮಕಾಲಿಕ ಅನುವಾದ

17 ಬಳಿಕ ಅರಸ ಚಿದ್ಕೀಯನು ಅವನನ್ನು ಕರೆಯಿಸಿ, ಅರಮನೆಗೆ ಕರೆತಂದನು, “ಯೆಹೋವ ದೇವರಿಂದ ಮಾತು ಉಂಟೋ,” ಎಂದು ಹೇಳಿದನು. ಯೆರೆಮೀಯನು, “ಹೌದು, ಉಂಟು. ನೀನು ಬಾಬಿಲೋನಿನ ಅರಸನ ಕೈಗೆಸಿಕ್ಕಿಬೀಳುವೆ,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

17 ಆಮೇಲೆ ಅರಸನಾದ ಚಿದ್ಕೀಯನು ಅವನನ್ನು ಕರೆಕಳುಹಿಸಿ, “ಯೆಹೋವನಿಂದ ದೈವೋಕ್ತಿಯು ದೊರೆಯಿತೋ?” ಎಂದು ತನ್ನ ಮನೆಯಲ್ಲಿ ರಹಸ್ಯವಾಗಿ ವಿಚಾರಿಸಲು ಯೆರೆಮೀಯನು, “ಹೌದು, ದೊರೆಯಿತು, ನೀನು ಬಾಬೆಲಿನ ಅರಸನ ಕೈಯಲ್ಲಿ ಸಿಕ್ಕಿಬೀಳುವಿ” ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

17 ಬಳಿಕ ಅರಸ ಚಿದ್ಕೀಯನು ಅವನನ್ನು ಕರೆಯಿಸಿ, “ದೇವರಿಂದ ಯಾವುದಾದರು ಸಂದೇಶ ದೊರೆಯಿತೊ?” ಎಂದು ಮನೆಯಲ್ಲಿ ಗುಟ್ಟಾಗಿ ವಿಚಾರಿಸಿದನು. ಯೆರೆಮೀಯನು, “ಹೌದು, ದೊರೆಯಿತು. ತಾವು ಬಾಬಿಲೋನಿನ ಅರಸನ ಕೈಗೆ ಸಿಕ್ಕಿಬೀಳುವಿರಿ,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

17 ಅರಸನಾದ ಚಿದ್ಕೀಯನು ಅವನನ್ನು ಕರತರಿಸಿ ಯೆಹೋವನಿಂದ ದೈವೋಕ್ತಿಯು ದೊರೆಯಿತೋ ಎಂದು ತನ್ನ ಮನೆಯಲ್ಲಿ ರಹಸ್ಯವಾಗಿ ವಿಚಾರಿಸಲು ಯೆರೆಮೀಯನು - ಹೌದು, ದೊರೆಯಿತು, ನೀನು ಬಾಬೆಲಿನ ಅರಸನ ಕೈಯಲ್ಲಿ ಸಿಕ್ಕಿ ಬೀಳುವಿ ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

17 ಆಗ ರಾಜನಾದ ಚಿದ್ಕೀಯನು ಯೆರೆಮೀಯನನ್ನು ತನ್ನ ಅರಮನೆಗೆ ಕರೆತರಿಸಿದನು. ಚಿದ್ಕೀಯನು ಯೆರೆಮೀಯನೊಂದಿಗೆ ರಹಸ್ಯವಾಗಿ ಮಾತನಾಡಿ, “ಯೆಹೋವನಿಂದ ಏನಾದರೂ ಸಂದೇಶವಿದೆಯೊ?” ಎಂದು ಕೇಳಿದನು. “ಹೌದು, ಯೆಹೋವನಿಂದ ಒಂದು ಸಂದೇಶವಿದೆ. ಚಿದ್ಕೀಯನೇ, ನಿನ್ನನ್ನು ಬಾಬಿಲೋನಿನ ರಾಜನಿಗೆ ಒಪ್ಪಿಸಲಾಗುವುದು” ಎಂದು ಯೆರೆಮೀಯನು ಉತ್ತರಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 37:17
25 ತಿಳಿವುಗಳ ಹೋಲಿಕೆ  

ಯೆಹೋವ ದೇವರು ಹೇಳುವುದೇನೆಂದರೆ, ತರುವಾಯ ನಾನು ಯೆಹೂದದ ಅರಸನಾದ ಚಿದ್ಕೀಯನನ್ನೂ, ಅವನ ಸೇವಕರನ್ನೂ, ಜನರನ್ನೂ ಈ ಪಟ್ಟಣದಲ್ಲಿ ವ್ಯಾಧಿಯಿಂದಲೂ, ಖಡ್ಗದಿಂದಲೂ, ಕ್ಷಾಮದಿಂದಲೂ ಉಳಿದವರನ್ನು ಬಾಬಿಲೋನಿನ ಅರಸನಾದ ನೆಬೂಕದ್ನೆಚ್ಚರನ ಕೈಗೂ, ಅವರ ಶತ್ರುಗಳ ಕೈಗೂ ಒಪ್ಪಿಸುವೆನು. ಅವನು ಅವರನ್ನು ಖಡ್ಗದ ಬಾಯಿಂದ ಹೊಡೆಯುವನು. ಅವರ ಮೇಲೆ ಕರುಣೆ ಇಡುವುದಿಲ್ಲ, ಕನಿಕರಿಸುವುದಿಲ್ಲ, ಅಂತಃಕರಣ ಪಡುವುದಿಲ್ಲ.’


ಆಗ ಅರಸನಾದ ಚಿದ್ಕೀಯನು, “ಇಗೋ, ಅವನು ನಿಮ್ಮ ಕೈಯಲ್ಲಿ ಇದ್ದಾನೆ; ನಿಮಗೆ ವಿರೋಧವಾಗಿ ಅರಸನು ಏನು ಮಾಡುವುದಿಲ್ಲ,” ಎಂದನು.


ಅರಸನಾದ ಚಿದ್ಕೀಯನು ಶೆಲೆಮ್ಯನ ಮಗನಾದ ಯೆಹೂಕಲನನ್ನೂ, ಯಾಜಕನಾದ ಮಾಸೇಯನ ಮಗನಾದ ಚೆಫನ್ಯನನ್ನೂ, ಪ್ರವಾದಿಯಾದ ಯೆರೆಮೀಯನ ಬಳಿಗೆ ಕಳುಹಿಸಿ, “ನಮಗೋಸ್ಕರ ನಮ್ಮ ದೇವರಾದ ಯೆಹೋವ ದೇವರನ್ನು ಪ್ರಾರ್ಥಿಸು,” ಎಂದು ಹೇಳಿಸಿದನು.


“ ‘ತಿನ್ನಕೂಡದ ಹಾಗೆ ಅಷ್ಟು ಕೆಟ್ಟವುಗಳಾಗಿರುವ ಆ ಕೆಟ್ಟ ಅಂಜೂರದ ಹಣ್ಣುಗಳ ಹಾಗೆ ನಿಶ್ಚಯವಾಗಿ ನಾನು ಯೆಹೂದದ ಅರಸನಾದ ಚಿದ್ಕೀಯನನ್ನೂ, ಅವನ ಪ್ರಧಾನರನ್ನೂ ಈ ದೇಶದಲ್ಲಿ ಉಳಿಯುವ ಯೆರೂಸಲೇಮಿನ ಶೇಷವನ್ನೂ, ಈಜಿಪ್ಟ್ ದೇಶದಲ್ಲಿ ವಾಸಿಸುವವರನ್ನೂ ಒಪ್ಪಿಸುತ್ತೇನೆ,’ ಎಂದು ಯೆಹೋವ ದೇವರು ಹೇಳುತ್ತಾರೆ.


ಆಗ ಅರಸನು ಅವನಿಗೆ, “ನೀನು ಯೆಹೋವ ದೇವರ ಹೆಸರಿನಲ್ಲಿ ಸತ್ಯವನ್ನಲ್ಲದೆ ಬೇರೊಂದು ನನಗೆ ಹೇಳಬಾರದೆಂದು ನಾನು ಎಷ್ಟು ಸಾರಿ ನಿನಗೆ ಆಣೆ ಇಡಬೇಕು?” ಎಂದನು.


ಏಕೆಂದರೆ, ಯೋಹಾನನು ನೀತಿವಂತನು ಮತ್ತು ಪವಿತ್ರ ಮನುಷ್ಯನು ಎಂದು ತಿಳಿದು ಹೆರೋದನು ಭಯಪಟ್ಟು ಅವನನ್ನು ಸುರಕ್ಷಿತವಾಗಿಟ್ಟಿದ್ದನು. ಯೋಹಾನನು ಹೇಳಿದ್ದನ್ನು ಹೆರೋದನು ಕೇಳಿದಾಗಲೆಲ್ಲಾ ಅವನಿಗೆ ಗಲಿಬಿಲಿಯಾಗುತ್ತಿತ್ತು. ಆದರೂ ಅವನ ಮಾತನ್ನು ಕೇಳಲು ಇಷ್ಟಪಡುತ್ತಿದ್ದನು.


ಇದಕ್ಕೆ ಯೆಹೋವ ದೇವರು, ನಿನಗೆ ಮೇಲಾಗುವಂತೆ ನಿಶ್ಚಯವಾಗಿ ನಿನ್ನನ್ನು ಬಿಡುಗಡೆಮಾಡುವೆನು. ನಿಜನಿಜವಾಗಿ ನಿನ್ನ ಶತ್ರುವನ್ನು ಕೇಡಿನಲ್ಲಿಯೂ, ಇಕ್ಕಟ್ಟಿನಲ್ಲಿಯೂ ನಿನಗೆ ಶರಣಾಗತನನ್ನಾಗಿ ಮಾಡುವೆನು.


ಅವನು ಅರಸನ ಬಳಿಗೆ ಬಂದಾಗ ಅರಸನು ಅವನಿಗೆ, “ಮೀಕಾಯೆಹುವೇ, ನಾವು ಗಿಲ್ಯಾದಿನ ರಾಮೋತ್ ವಿರುದ್ಧವಾಗಿ ಯುದ್ಧಕ್ಕೆ ಹೋಗಬಹುದೋ ಅಥವಾ ಬೇಡವೋ?” ಎಂದನು. ಆಗ ಅವನು, “ಹೋಗಿ ಜಯ ಹೊಂದಿರಿ. ಯೆಹೋವ ದೇವರು ಅದನ್ನು ಅರಸನ ಕೈಯಲ್ಲಿ ಒಪ್ಪಿಸಿಕೊಡುವರು,” ಎಂದನು.


ಆಗ ಬಾಬಿಲೋನಿಯರ ದಂಡು ಅರಸನಾದ ಚಿದ್ಕೀಯನನ್ನು ಯೆರಿಕೋವಿನ ಬಯಲಿನಲ್ಲಿ ಹಿಂದಟ್ಟಿದರು; ಅಷ್ಟರಲ್ಲಿ ಅವನ ಸೈನಿಕರೆಲ್ಲ ಅವನನ್ನು ಬಿಟ್ಟು ಚದರಿಹೋಗಿದ್ದರು.


ಕೇಡಿನ ಮೇಲೆ ಕೇಡು ಬರುವುದು, ಸುದ್ದಿಯ ಮೇಲೆ ಸುದ್ದಿ ಬರುವುದು, ಅವರು ಪ್ರವಾದಿಯಿಂದ ದರ್ಶನವನ್ನು ಹುಡುಕುವರು. ಆದರೆ ಯಾಜಕರಿಂದ ನಿಯಮ ಬೋಧನೆಯು ಅಡಗಿಹೋಗುವುದು, ಹಿರಿಯರಿಂದ ಸಮಾಲೋಚನೆಯು ಇಲ್ಲವಾಗುವುದು.


ಅವನ ಸಂಗಡ ಮೋವಾಬಿನ ಪ್ರಧಾನರೂ ಅವನ ದಹನಬಲಿಯ ಹತ್ತಿರ ನಿಂತುಕೊಂಡಿದ್ದರು. ಬಾಲಾಕನು ಅವನಿಗೆ, “ಯೆಹೋವ ದೇವರು ಏನು ಹೇಳಿದ್ದಾರೆ,” ಎಂದನು.


ಅವರು ಚಿದ್ಕೀಯನ ಮಕ್ಕಳನ್ನು ಅವನ ಕಣ್ಣೆದುರಿಗೇ ವಧಿಸಿದರು. ತರುವಾಯ ಅವನ ಕಣ್ಣುಗಳನ್ನು ಕೀಳಿಸಿ, ಅವನಿಗೆ ಬೇಡಿಹಾಕಿಸಿ ಅವನನ್ನು ಬಾಬಿಲೋನಿಗೆ ತೆಗೆದುಕೊಂಡು ಹೋದರು.


ಆಗ ಕುರುಬರಿಗೆ ಓಡಿ ಹೋಗುವುದಕ್ಕೂ, ಮಂದೆಯ ಪ್ರಮುಖರಿಗೆ ತಪ್ಪಿಸಿಕೊಳ್ಳುವುದಕ್ಕೂ ಮಾರ್ಗವಿಲ್ಲದೆ ಹೋಗುವುದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು