Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 38:14 - ಕನ್ನಡ ಸಮಕಾಲಿಕ ಅನುವಾದ

14 ಆಗ ಅರಸನಾದ ಚಿದ್ಕೀಯನು ಪ್ರವಾದಿಯಾದ ಯೆರೆಮೀಯನನ್ನು ತನ್ನ ಬಳಿಗೆ ಕರೆಯಿಸಿ, ಯೆಹೋವ ದೇವರ ಆಲಯದಲ್ಲಿರುವ ಮೂರನೆಯ ದ್ವಾರಕ್ಕೆ ಕರೆದುಕೊಂಡು ಹೋದನು. ಆಗ ಅರಸನು ಯೆರೆಮೀಯನಿಗೆ, “ನಾನು ನಿನ್ನಿಂದ ಒಂದು ಕೇಳುತ್ತೇನೆ, ನನಗೆ ಯಾವುದನ್ನಾದರೂ ಬಚ್ಚಿಡಬೇಡ,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

14 ಹೀಗಿರುವಲ್ಲಿ ಅರಸನಾದ ಚಿದ್ಕೀಯನು ಪ್ರವಾದಿಯಾದ ಯೆರೆಮೀಯನನ್ನು ಯೆಹೋವನ ಆಲಯದ ಮೂರನೆಯ ಬಾಗಿಲಿಗೆ ಕರೆತರಿಸಿ, “ನಾನು ನಿನ್ನನ್ನು ಒಂದು ಮಾತು ಕೇಳುವೆನು, ನನಗೆ ಸ್ವಲ್ಪವೂ ಮರೆಮಾಡಬೇಡ”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

14 ಅರಸ ಚಿದ್ಕೀಯನು ಪ್ರವಾದಿ ಯೆರೆಮೀಯನನ್ನು ಸರ್ವೇಶ್ವರನ ಆಲಯದ ಮೂರನೆಯ ಬಾಗಿಲ ಬಳಿಗೆ ಕರೆತರಿಸಿ, “ನಾನು ನಿನ್ನಲ್ಲಿ ಒಂದು ವಿಷಯವನ್ನು ಕೇಳುತ್ತೇನೆ, ನನಗೆ ಏನನ್ನೂ ಮರೆಮಾಡಬೇಡ,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

14 ಹೀಗಿರುವಲ್ಲಿ ಅರಸನಾದ ಚಿದ್ಕೀಯನು ಪ್ರವಾದಿಯಾದ ಯೆರೆಮೀಯನನ್ನು ಯೆಹೋವನ ಆಲಯದ ಮೂರನೆಯ ಬಾಗಿಲಿಗೆ ಕರತರಿಸಿ - ನಾನು ನಿನ್ನನ್ನು ಒಂದು ಕೇಳುವೆನು, ನನಗೆ ಸ್ವಲ್ಪವೂ ಮರೆಮಾಡಬೇಡ ಎನ್ನಲು

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

14 ರಾಜನಾದ ಚಿದ್ಕೀಯನು ಪ್ರವಾದಿಯಾದ ಯೆರೆಮೀಯನನ್ನು ಒಬ್ಬನ ಮೂಲಕ ಯೆಹೋವನ ಆಲಯದ ಮೂರನೇ ಪ್ರವೇಶದ್ವಾರಕ್ಕೆ ಕರೆಸಿದನು. ರಾಜನು ಅವನಿಗೆ, “ಯೆರೆಮೀಯನೇ, ನಾನು ನಿನಗೆ ಒಂದು ವಿಷಯವನ್ನು ಕೇಳಲಿದ್ದೇನೆ. ನನ್ನಿಂದ ಏನನ್ನೂ ಮುಚ್ಚಿಡಬೇಡ. ಎಲ್ಲವನ್ನು ಪ್ರಾಮಾಣಿಕವಾಗಿ ನನಗೆ ಹೇಳು” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 38:14
11 ತಿಳಿವುಗಳ ಹೋಲಿಕೆ  

ಬಳಿಕ ಅರಸ ಚಿದ್ಕೀಯನು ಅವನನ್ನು ಕರೆಯಿಸಿ, ಅರಮನೆಗೆ ಕರೆತಂದನು, “ಯೆಹೋವ ದೇವರಿಂದ ಮಾತು ಉಂಟೋ,” ಎಂದು ಹೇಳಿದನು. ಯೆರೆಮೀಯನು, “ಹೌದು, ಉಂಟು. ನೀನು ಬಾಬಿಲೋನಿನ ಅರಸನ ಕೈಗೆಸಿಕ್ಕಿಬೀಳುವೆ,” ಎಂದನು.


ಆಗ ಅರಸನು ಅವನಿಗೆ, “ನೀನು ಯೆಹೋವ ದೇವರ ಹೆಸರಿನಲ್ಲಿ ಸತ್ಯವನ್ನಲ್ಲದೆ ಬೇರೊಂದು ನನಗೆ ಹೇಳಬಾರದೆಂದು ನಾನು ಎಷ್ಟು ಸಾರಿ ನಿನಗೆ ಆಣೆ ಇಡಬೇಕು?” ಎಂದನು.


ನೀವೇ ನನ್ನ ಬಳಿಗೆ ಬಂದು ನಮ್ಮ ದೇವರಾದ ಯೆಹೋವ ದೇವರನ್ನು ನಮಗಾಗಿ ಪ್ರಾರ್ಥಿಸು, ‘ನಮ್ಮ ದೇವರಾದ ಯೆಹೋವ ದೇವರು ಯಾವ ಅಪ್ಪಣೆ ಕೊಡುತ್ತಾರೋ ಅದನ್ನು ನಮಗೆ ತಿಳಿಸು, ಅದರಂತೆಯೇ ನಡೆಯುವೆವು,’ ಎಂದು ಹೇಳಿ ಮಾರಣಾಂತಿಕ ತಪ್ಪನ್ನು ಮಾಡಿದ್ದೀರಿ.


ಆಗ ಅರಸನು ಅವನಿಗೆ, “ನೀನು ಯೆಹೋವ ದೇವರ ಹೆಸರಿನಲ್ಲಿ ಸತ್ಯವನ್ನಲ್ಲದೆ ಬೇರೊಂದು ನನಗೆ ಹೇಳಬಾರದೆಂದು ನಾನು ಎಷ್ಟು ಸಾರಿ ನಿನಗೆ ಆಣೆ ಇಡಬೇಕು?” ಎಂದನು.


ಯೆಹೋವ ದೇವರ ಆಲಯದ ಪ್ರಾಕಾರದ ಒಳಗೆ ಸಬ್ಬತ್ ದಿನದ ಆರಾಧನೆಗಾಗಿ, ರಾಜರಿಗಾಗಿ ಕಟ್ಟಲಾಗಿದ್ದ ಮಂಟಪವನ್ನು ಹಾಗು ಅರಮನೆಯಿಂದ ದೇವಸ್ಥಾನಕ್ಕೆ ಹೋಗುವ ಹೊರಗಿನ ಬಾಗಿಲನ್ನೂ ಬದಲಾಯಿಸಿದನು, ಇವುಗಳನ್ನೆಲ್ಲ ಅಸ್ಸೀರಿಯದ ಅರಸನ ನಿಮಿತ್ತವಾಗಿ ಆಹಾಜನೇ ಬದಲಾಯಿಸಿದನು.


ಅವನ ಮೇಜಿನ ಭೋಜನವನ್ನೂ, ಅವನ ಅಧಿಪತಿಗಳು ಕುಳಿತಿರುವ ರೀತಿಯನ್ನೂ, ಅವನ ಸೇವಕರು ನಿಂತಿರುವುದನ್ನೂ, ಅವರ ವಸ್ತ್ರಗಳನ್ನೂ, ಅವನ ಪಾನದಾಯಕರನ್ನೂ, ಅವನು ಯೆಹೋವ ದೇವರ ಆಲಯದಲ್ಲಿ ಅರ್ಪಿಸಿದ ದಹನಬಲಿಗಳನ್ನೂ ಕಂಡಾಗ ಅವಳು ವಿಸ್ಮಯಗೊಂಡಳು.


ಇದಕ್ಕೆ ಯೆಹೋವ ದೇವರು, ನಿನಗೆ ಮೇಲಾಗುವಂತೆ ನಿಶ್ಚಯವಾಗಿ ನಿನ್ನನ್ನು ಬಿಡುಗಡೆಮಾಡುವೆನು. ನಿಜನಿಜವಾಗಿ ನಿನ್ನ ಶತ್ರುವನ್ನು ಕೇಡಿನಲ್ಲಿಯೂ, ಇಕ್ಕಟ್ಟಿನಲ್ಲಿಯೂ ನಿನಗೆ ಶರಣಾಗತನನ್ನಾಗಿ ಮಾಡುವೆನು.


ಆಗ ಅರಸನು ಉತ್ತರವಾಗಿ ಆ ಸ್ತ್ರೀಗೆ, “ನಾನು ನಿನ್ನಿಂದ ಕೇಳುವುದನ್ನು ನನಗೆ ಮರೆಮಾಡಬೇಡ,” ಎಂದನು. ಅದಕ್ಕವಳು, “ಅರಸನಾದ ನನ್ನ ಒಡೆಯನು ಮಾತನಾಡಲಿ,” ಎಂದಳು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು