Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 38:19 - ಕನ್ನಡ ಸಮಕಾಲಿಕ ಅನುವಾದ

19 ಆಗ ಅರಸನಾದ ಚಿದ್ಕೀಯನು ಯೆರೆಮೀಯನಿಗೆ, “ನಾನು ಕಸ್ದೀಯರಿಗೆ ಒಳಗಾಗಿರುವ ಯೆಹೂದ್ಯರ ವಿಷಯ ಅಂಜುತ್ತೇನೆ. ಒಂದು ವೇಳೆ ಅವರು ನನ್ನನ್ನು ಅವರ ಕೈಯಲ್ಲಿ ಒಪ್ಪಿಸಿಯಾರು. ಆಗ ಅವರು ನನ್ನನ್ನು ಹಿಂಸಿಸಬಹುದು,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

19 ಇದನ್ನು ಕೇಳಿ ಅರಸನಾದ ಚಿದ್ಕೀಯನು ಯೆರೆಮೀಯನಿಗೆ, “ಕಸ್ದೀಯರು ತಮ್ಮನ್ನು ಮೊರೆಹೊಕ್ಕಿರುವ ಯೆಹೂದ್ಯರಿಗೆ ನನ್ನನ್ನು ಒಪ್ಪಿಸುವರೋ ಏನೋ; ಅವರು ನನ್ನನ್ನು ಹಿಂಸಿಸಬಹುದು ಎಂದು ಶಂಕೆಪಡುತ್ತೇನೆ” ಎಂದು ಉತ್ತರಕೊಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

19 ಇದನ್ನು ಕೇಳಿದ ಅರಸ ಚಿದ್ಕೀಯನು ಯೆರೆಮೀಯನಿಗೆ, “ಬಾಬಿಲೋನಿಯದವರು ತಮ್ಮನ್ನು ಮರೆಹೊಕ್ಕಿರುವ ಯೆಹೂದ್ಯರಿಗೆ ನನ್ನನ್ನು ಒಪ್ಪಿಸಬಹುದು. ಅವರು ನನ್ನನ್ನು ಹಿಂಸಿಸಬಹುದು ಎಂಬ ಸಂಶಯ ನನಗಿದೆ,” ಎಂದು ಉತ್ತರಕೊಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

19 ಇದನ್ನು ಕೇಳಿ ಅರಸನಾದ ಚಿದ್ಕೀಯನು ಯೆರೆಮೀಯನಿಗೆ - ಕಸ್ದೀಯರು ತಮ್ಮನ್ನು ಮರೆಹೊಕ್ಕಿರುವ ಯೆಹೂದ್ಯರಿಗೆ ನನ್ನನ್ನು ಒಪ್ಪಿಸುವರೋ ಏನೋ; ಅವರು ನನ್ನನ್ನು ಹಿಂಸಿಸಿಯಾರು ಎಂದು ಶಂಕೆಪಡುತ್ತೇನೆ ಎಂದುತ್ತರಕೊಡಲು

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

19 ಆಗ ಚಿದ್ಕೀಯನು, “ನಾನು ಈಗಾಗಲೇ ಬಾಬಿಲೋನಿನ ಸೈನ್ಯದ ಕಡೆಗೆ ಸೇರಿದ ಯೆಹೂದ್ಯರಿಗೆ ಹೆದರುತ್ತೇನೆ. ಆ ಸೈನಿಕರು ನನ್ನನ್ನು ಯೆಹೂದದ ಆ ಜನರಿಗೆ ಒಪ್ಪಿಸಿಕೊಡಬಹುದು ಮತ್ತು ಅವರು ನನಗೆ ಕೇಡುಮಾಡಬಹುದು; ನನ್ನನ್ನು ಹಿಂಸಿಸಬಹುದು ಎಂದು ಭಯವಾಗುತ್ತದೆ” ಎಂದು ಯೆರೆಮೀಯನಿಗೆ ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 38:19
17 ತಿಳಿವುಗಳ ಹೋಲಿಕೆ  

ಆದರೂ ಅಧಿಕಾರಿಗಳಲ್ಲಿ ಅನೇಕರು ಆ ಸಮಯದಲ್ಲಿ ಯೇಸುವನ್ನು ನಂಬಿದರು. ಆದರೆ ಫರಿಸಾಯರ ನಿಮಿತ್ತ ತಾವು ಸಭಾಮಂದಿರದಿಂದ ಬಹಿಷ್ಕಾರ ಆಗಬಾರದೆಂದು ಅವರು ತಮ್ಮ ನಂಬಿಕೆಯನ್ನು ಬಹಿರಂಗವಾಗಿ ಅರಿಕೆ ಮಾಡಲಿಲ್ಲ.


ಇಗೋ, ಯೆಹೂದದ ಅರಸನ ಅರಮನೆಯಲ್ಲಿ ಉಳಿದ ಹೆಂಗಸರೆಲ್ಲರು ಬಾಬಿಲೋನಿನ ಅರಸನ ಪ್ರಧಾನರ ಬಳಿಗೆ ಹೊರಗೆ ಕರೆತರಲಾಗಿ ಹೇಳುವುದೇನೆಂದರೆ, “ನಿನ್ನ ಸ್ನೇಹಿತರು ನಿನ್ನನ್ನು ಪ್ರೇರೇಪಿಸಿ, ನಿನ್ನನ್ನು ಗೆದ್ದಿದ್ದಾರೆ. ನಿನ್ನ ಕಾಲುಗಳು ಕೆಸರಿನಲ್ಲಿ ಹೂತಿರುವುದನ್ನು ನೋಡಿ, ಹಿಂದಿರುಗಿದ್ದಾರೆಂದು ನಿಂದಿಸುವರು.


“ನೀನು ಯಾರಿಗೆ ಹೆದರಿ, ಬೆದರಿ, ನನ್ನನ್ನು ಮರೆತು, ನನಗೆ ಸುಳ್ಳಾಡಿ ಮೋಸ ಮಾಡಿರುವೆ. ಇಂಥ ದ್ರೋಹಕ್ಕೂ ನೀನು ಹಿಂಜರಿಯಲಿಲ್ಲವಲ್ಲಾ! ಬಹುಕಾಲದಿಂದ ನಾನು ಸುಮ್ಮನೆ ಇದ್ದುದರಿಂದಲೇ, ನೀನು ನನ್ನನ್ನು ಗೌರವಿಸದೆ ಇರುವುದಕ್ಕೆ ಕಾರಣವಲ್ಲವೆ?


ಆಗ ಪಟ್ಟಣದೊಳಗೆ ಉಳಿದವರನ್ನೂ, ಮೊದಲೇ ತನ್ನನ್ನು ಮೊರೆ ಹೋದವರನ್ನೂ, ಇತರ ಸಮಸ್ತ ಜನರನ್ನೂ ಕಾವಲಿನವರ ಅಧಿಪತಿಯಾದ ನೆಬೂಜರದಾನನು ಬಾಬಿಲೋನಿಗೆ ಸೆರೆಹಿಡಿದು ಕರೆದುಕೊಂಡು ಹೋದನು.


ಆದಕಾರಣ ಅವನು ತನ್ನ ಆಯುಧಗಳನ್ನು ಹೊರುವವನಿಗೆ, “ಈ ಸುನ್ನತಿ ಇಲ್ಲದವರು ಬಂದು ನನ್ನನ್ನು ಅವಮಾನ ಮಾಡದ ಹಾಗೆ ನೀನು ನಿನ್ನ ಖಡ್ಗವನ್ನು ಹಿರಿದು, ನನ್ನನ್ನು ತಿವಿ,” ಎಂದನು. ಆದರೆ ಅವನ ಆಯುಧ ಹೊರುವವನು ಬಹು ಭಯಪಟ್ಟದ್ದರಿಂದ ಹಾಗೆ ಮಾಡದೆ ಹೋದನು. ಆಗ ಸೌಲನು ತನ್ನ ಖಡ್ಗವನ್ನು ತೆಗೆದುಕೊಂಡು ಅದರ ಮೇಲೆ ಬಿದ್ದನು.


ಖಂಡಿತವಾಗಿಯೂ ಮನುಷ್ಯನ ಭಯವು ಒಂದು ಉರುಲಾಗಿರುವುದು; ಯೆಹೋವ ದೇವರಲ್ಲಿ ಭರವಸವಿಡುವವನು, ಸಂರಕ್ಷಣೆ ಹೊಂದುವನು.


ಆಗ ಸೌಲನು ಸಮುಯೇಲನಿಗೆ, “ನಾನು ಯೆಹೋವ ದೇವರ ಆಜ್ಞೆಯನ್ನೂ, ನಿನ್ನ ಮಾತುಗಳನ್ನೂ ಮೀರಿದ್ದರಿಂದ ನಾನು ಪಾಪಮಾಡಿದೆನು. ನಾನು ಜನರಿಗೆ ಭಯಪಟ್ಟು ಅವರ ಮಾತನ್ನು ಕೇಳಿದೆನು.


ಅಲ್ಲಿ ಅವರು ಸಂಭ್ರಮವಾಗಿರುವಾಗ, “ನಮ್ಮ ಮುಂದೆ ಮನೋರಂಜನೆಗಾಗಿ ಸಂಸೋನನನ್ನು ಕರೆದುಕೊಂಡು ಬನ್ನಿರಿ,” ಎಂದರು. ಅವರು ಸಂಸೋನನನ್ನು ಸೆರೆಮನೆಯಿಂದ ಕರೆತಂದಾಗ, ಅವನು ಅವರ ಮುಂದೆ ವಿನೋದ ಮಾಡಬೇಕಾಯಿತು. ಅವರು ಅವನನ್ನು ಸ್ತಂಭಗಳ ನಡುವೆ ನಿಲ್ಲಿಸಿದ್ದರು.


ಆಗ ಅವನು ಶೀಘ್ರವಾಗಿ ತನ್ನ ಆಯುಧಗಳನ್ನು ಹೊರುವ ಸೇವಕನನ್ನು ಕರೆದು ಅವನಿಗೆ, “ಒಬ್ಬ ಸ್ತ್ರೀಯು ಕೊಂದಳೆಂದು ಮನುಷ್ಯರು ನನ್ನನ್ನು ಕುರಿತು ಹೇಳದ ಹಾಗೆ ನೀನು ನಿನ್ನ ಖಡ್ಗದಿಂದ ಇರಿದು, ನನ್ನನ್ನು ಕೊಲ್ಲು,” ಎಂದು ಅವನಿಗೆ ಹೇಳಿದನು. ಹಾಗೆಯೇ ಅವನ ಸೇವಕನು ಅವನನ್ನು ತಿವಿದು ಹಾಕಿದನು. ಅವನು ಮರಣಹೊಂದಿದನು.


ಆಗ ಅರಸನಾದ ಚಿದ್ಕೀಯನು, “ಇಗೋ, ಅವನು ನಿಮ್ಮ ಕೈಯಲ್ಲಿ ಇದ್ದಾನೆ; ನಿಮಗೆ ವಿರೋಧವಾಗಿ ಅರಸನು ಏನು ಮಾಡುವುದಿಲ್ಲ,” ಎಂದನು.


ನಾನು ದೊಡ್ಡ ಸಮೂಹಕ್ಕೆ ಹೆದರಿದೆನೋ? ಕುಲಗಳ ಅವಹೇಳನಕ್ಕೆ ಕಳವಳಗೊಂಡರೂ, ಬಾಗಿಲಿನಿಂದ ಹೊರಗೆ ಹೋಗದೆ ಮೌನವಾಗಿದ್ದೆನೋ?


ಹೀಗೆಯೇ ಓಟಗಾರರು ಎಫ್ರಾಯೀಮನ, ಮನಸ್ಸೆಯ ದೇಶದಲ್ಲಿ ಜೆಬುಲೂನ್ ಪರ್ಯಂತರ ಸಂಚರಿಸಿ, ಪಟ್ಟಣ ಪಟ್ಟಣವನ್ನು ಹಾದುಹೋದರು. ಆದರೆ ಜನರು ಇವರನ್ನು ನೋಡಿ ನಕ್ಕು ಗೇಲಿ ಮಾಡಿದರು.


ನಾವು ಗೋಡೆಯನ್ನು ಪುನಃ ಕಟ್ಟುವ ವರ್ತಮಾನವನ್ನು ಸನ್ಬಲ್ಲಟನು ಕೇಳಿದಾಗ, ಅವನು ಕೋಪಗೊಂಡು, ಯೆಹೂದ್ಯರಿಗೆ ಗೇಲಿಮಾಡಿ,


ಓ ಯೆಹೋವ ದೇವರೇ, ನೀವು ನನ್ನನ್ನು ಮರುಳಾಗಿಸಿದಿರಿ. ನಾನು ಮರುಳಾದೆನು. ನೀವು ನನಗಿಂತ ಬಲಿಷ್ಠನಾಗಿದ್ದು ಜಯಿಸಿದಿರಿ. ನಾನು ಪ್ರತಿದಿನ ಪರಿಹಾಸ್ಯಕ್ಕೆ ಗುರಿಯಾಗಿದ್ದೇನೆ. ಪ್ರತಿಯೊಬ್ಬನು ನನ್ನನ್ನು ಹಾಸ್ಯಮಾಡುತ್ತಾನೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು