Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 38:20 - ಕನ್ನಡ ಸಮಕಾಲಿಕ ಅನುವಾದ

20 ಆದರೆ ಯೆರೆಮೀಯನು, “ಅವರು ನಿನ್ನನ್ನು ಒಪ್ಪಿಸುವುದಿಲ್ಲ” ನಾನು ನಿನಗೆ ಹೇಳುವ ಯೆಹೋವ ದೇವರ ವಾಕ್ಯವನ್ನು ಮಾತ್ರ ಕೇಳು; ಆಗ ನಿನಗೆ ಒಳ್ಳೆಯದಾಗುವುದು. ನಿನ್ನ ಪ್ರಾಣ ಬದುಕುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

20 ಅದಕ್ಕೆ ಯೆರೆಮೀಯನು, “ನಿನ್ನನ್ನು ಒಪ್ಪಿಸರು; ಪ್ರಭುವೇ, ನಾನು ನಿನಗೆ ಹೇಳಿರುವ ಯೆಹೋವನ ಮಾತನ್ನು ಕೈಗೊಳ್ಳು; ಕೈಗೊಂಡರೆ ಪ್ರಾಣ ಉಳಿಯುವುದು, ಸುಖವೂ ಆಗುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

20 ಇದನ್ನು ಕೇಳಿದ ಯೆರೆಮೀಯನು, “ಇಲ್ಲ, ತಮ್ಮನ್ನು ಅವರ ಕೈಗೆ ಒಪ್ಪಿಸುವುದಿಲ್ಲ. ದಯವಿಟ್ಟು ನಾನು ತಮಗೆ ಹೇಳಿರುವ ಸರ್ವೇಶ್ವರನ ವಾಕ್ಯದಂತೆ ನಡೆದುಕೊಳ್ಳಿ. ನಡೆದುಕೊಂಡರೆ ತಮ್ಮ ಪ್ರಾಣ ಉಳಿಯುವುದು, ಒಳ್ಳೆಯದಾಗುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

20 ಯೆರೆಮೀಯನು - ನಿನ್ನನ್ನು ಒಪ್ಪಿಸರು; ಜೀಯಾ, ನಾನು ನಿನಗೆ ಹೇಳಿರುವ ಯೆಹೋವನ ಮಾತನ್ನು ಕೈಕೊಳ್ಳು; ಕೈಕೊಂಡರೆ ಪ್ರಾಣವುಳಿಯುವದು, ಸುಖವೂ ಆಗುವದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

20 ಆದರೆ ಯೆರೆಮೀಯನು, “ರಾಜನಾದ ಚಿದ್ಕೀಯನೇ, ಆ ಸೈನಿಕರು ನಿನ್ನನ್ನು ಯೆಹೂದದ ಆ ಜನರಿಗೆ ಒಪ್ಪಿಸುವುದಿಲ್ಲ. ನಾನು ಹೇಳಿದಂತೆ ಮಾಡಿ ಯೆಹೋವನ ಆಜ್ಞಾಪಾಲನೆ ಮಾಡು. ಆಗ ನಿನಗೆಲ್ಲ ಒಳ್ಳೆಯದಾಗುವುದು ಮತ್ತು ನಿನ್ನ ಪ್ರಾಣ ಉಳಿಯುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 38:20
20 ತಿಳಿವುಗಳ ಹೋಲಿಕೆ  

ಆದ್ದರಿಂದ ಅರಸನೇ, ನನ್ನ ಆಲೋಚನೆಯು ನಿನಗೆ ಸರಿಯಾದದ್ದಾಗಿರಲಿ. ಸರಿಯಾದದ್ದನ್ನು ಮಾಡುವುದರಿಂದ ನಿನ್ನ ಪಾಪಗಳನ್ನು ಬಿಟ್ಟುಬಿಡು. ದಬ್ಬಾಳಿಕೆಯಾದವರಿಗೆ ದಯೆ ತೋರುವುದರಿಂದ ನಿನ್ನ ದುಷ್ಟತ್ವವನ್ನು ಬಿಟ್ಟುಬಿಡು. ಹೀಗಾದರೆ ಒಂದು ವೇಳೆ ನಿನ್ನ ಸಮೃದ್ಧಿ ಮುಂದುವರಿಯುವುದು.”


ಹೀಗಿರುವುದರಿಂದ ನಿಮ್ಮ ಮಾರ್ಗಗಳನ್ನೂ, ನಿಮ್ಮ ಕೃತ್ಯಗಳನ್ನೂ ತಿದ್ದಿಕೊಳ್ಳಿರಿ. ನಿಮ್ಮ ದೇವರಾದ ಯೆಹೋವ ದೇವರ ಮಾತಿಗೆ ವಿಧೇಯರಾಗಿರಿ. ಆಗ ಯೆಹೋವ ದೇವರು ನಿಮಗೆ ವಿರೋಧವಾಗಿ ಮಾತನಾಡಿದ ಕೇಡಿನ ವಿಷಯಕ್ಕಾಗಿ ತಮ್ಮ ಮನಸ್ಸನ್ನು ಬದಲಾಯಿಸಿಕೊಳ್ಳುವರು.


ಕಿವಿಯನ್ನು ಇತ್ತ ತಿರುಗಿಸಿರಿ, ನನ್ನ ಬಳಿಗೆ ಬನ್ನಿರಿ, ಆಲಿಸಿದರೆ ಬದುಕಿ ಬಾಳುವಿರಿ. ದಾವೀದನಿಗೆ ಖಂಡಿತವಾಗಿ ವಾಗ್ದಾನ ಮಾಡಿದ ಕೃಪಾವರಗಳನ್ನು ನಿಮಗೆ ಕೊಡುತ್ತೇನೆಂಬ ಶಾಶ್ವತವಾದ ಒಡಂಬಡಿಕೆಯನ್ನು ನಿಮ್ಮೊಂದಿಗೆ ಮಾಡಿಕೊಳ್ಳುವೆನು.


ಅವರು ಉದಯದಲ್ಲಿ ಎದ್ದು ತೆಕೋವದ ಮರುಭೂಮಿಗೆ ಹೊರಟರು. ಅವರು ಹೊರಟು ಹೋಗುತ್ತಿರುವಾಗ ಯೆಹೋಷಾಫಾಟನು ನಿಂತುಕೊಂಡು, “ಯೆಹೂದದವರೇ, ಯೆರೂಸಲೇಮಿನ ನಿವಾಸಿಗಳೇ, ನನ್ನ ಮಾತನ್ನು ಕೇಳಿರಿ. ನಿಮ್ಮ ದೇವರಾದ ಯೆಹೋವ ದೇವರನ್ನು ನಂಬಿ ಸ್ಥಿರವಾಗಿರಿ. ದೇವರ ಪ್ರವಾದಿಗಳನ್ನು ನಂಬಿರಿ, ಆಗ ಜಯ ಹೊಂದುವಿರಿ,” ಎಂದನು.


ಪೌಲನು, “ಅಲ್ಪ ಕಾಲದಲ್ಲಾಗಲಿ, ದೀರ್ಘಕಾಲದಲ್ಲಾಗಲಿ ನೀವಷ್ಟೇ ಅಲ್ಲ, ನನ್ನ ಮಾತುಗಳನ್ನು ಇಂದು ಆಲಿಸುತ್ತಿರುವ ಪ್ರತಿಯೊಬ್ಬರೂ ಈ ಬೇಡಿಗಳನ್ನು ಹೊರತು ನನ್ನಂತೆಯೇ ಆಗಬೇಕೆಂದು ದೇವರನ್ನು ಪ್ರಾರ್ಥಿಸುತ್ತೇನೆ,” ಎಂದನು.


ನೀವು ವಾಕ್ಯದ ಪ್ರಕಾರ ನಡೆಯುವವರಾಗಿರಿ, ಅದನ್ನು ಕೇಳುವವರು ಮಾತ್ರವೇ ಆಗಿದ್ದು ನಿಮ್ಮನ್ನು ನೀವೇ ಮೋಸಗೊಳಿಸಿಕೊಳ್ಳಬೇಡಿರಿ.


ನೀವು ಹೊಂದಿರುವ ದೇವರ ಕೃಪೆಯನ್ನು ವ್ಯರ್ಥಮಾಡಿಕೊಳ್ಳಬೇಡಿರೆಂದು ದೇವರ ಜೊತೆಕೆಲಸದವರಾದ ನಾವು ನಿಮ್ಮಲ್ಲಿ ಬೇಡಿಕೊಳ್ಳುತ್ತೇವೆ,


ಆದ್ದರಿಂದ ನಾವು ಕ್ರಿಸ್ತ ಯೇಸುವಿನ ರಾಯಭಾರಿಗಳಾಗಿದ್ದೇವೆ. ದೇವರೇ ನಮ್ಮ ಮೂಲಕ ನಿಮಗೆ ಕರೆ ನೀಡುತ್ತಾರೆ. ಆದ್ದರಿಂದ ಕ್ರಿಸ್ತ ಯೇಸುವಿನ ಪರವಾಗಿ ನಿಮ್ಮನ್ನು ಬೇಡಿಕೊಳ್ಳುವುದೇನೆಂದರೆ: ದೇವರೊಡನೆ ಸಮಾಧಾನ ಮಾಡಿಕೊಳ್ಳಿರಿ.


ಕರ್ತನ ಭಯಭಕ್ತಿಯನ್ನು ಅರಿತಿರುವ ಕಾರಣ, ಜನರ ಮನವೊಲಿಸಲು ನಾವು ಪ್ರಯತ್ನಿಸುತ್ತೇವೆ. ನಾವು ಎಂಥವರೆಂದು ದೇವರು ಚೆನ್ನಾಗಿ ಬಲ್ಲವರಾಗಿದ್ದಾರೆ. ಅದು ನಿಮ್ಮ ಮನಸ್ಸಾಕ್ಷಿಗೂ ತಿಳಿದಿದೆ ಎಂದು ನಾನು ನಂಬುತ್ತೇನೆ.


ಕಬ್ಬಿಣ ಕರಗಿಸುವ ಕುಲುಮೆಯಂತಿದ್ದ ಈಜಿಪ್ಟ್ ದೇಶದಿಂದ ನಿಮ್ಮ ಪೂರ್ವಜರನ್ನು ನಾನು ಬರಮಾಡಿದಾಗ, ನೀವು ನನ್ನ ಮಾತನ್ನು ಕೇಳಿ, ನಾನು ನಿಮಗೆ ಆಜ್ಞಾಪಿಸಿರುವ ವಿಧಿಗಳನ್ನೆಲ್ಲಾ ಕೈಗೊಂಡರೆ, ನನ್ನ ಪ್ರಜೆಯಾಗುವಿರಿ; ನಾನು ನಿಮ್ಮ ದೇವರಾಗಿರುವೆನು.


ನಿನ್ನ ದೆಸೆಯಿಂದ ನನಗೆ ಒಳ್ಳೆಯದಾಗಿ, ನನ್ನ ಪ್ರಾಣವು ಉಳಿಯುವಂತೆ ನೀನು ನನ್ನ ಸಹೋದರಿ ಎಂದು ದಯಮಾಡಿ ಹೇಳಬೇಕು,” ಎಂದು ಹೇಳಿದನು.


ಆ ಪಟ್ಟಣವನ್ನು ನೋಡಿರಿ. ನಾನು ಅಲ್ಲಿಗೆ ಓಡಿಹೋಗಲು ಸಮೀಪವಾಗಿದೆ ಮತ್ತು ಅದು ಸಣ್ಣದು. ನಾನು ತಪ್ಪಿಸಿಕೊಂಡು ಅಲ್ಲಿಗೆ ಹೋಗುತ್ತೇನೆ. ಇದರಿಂದ ನನ್ನ ಪ್ರಾಣವು ಉಳಿಯುವುದು,” ಎಂದನು.


ಆದರೆ ನಾನು ಇದನ್ನು ಅವರಿಗೆ, “ನನ್ನ ಶಬ್ದಕ್ಕೆ ವಿಧೇಯರಾಗಿರಿ. ಆಗ ನಾನು ನಿಮ್ಮ ದೇವರಾಗಿರುವೆನು; ನೀವು ನನ್ನ ಜನರಾಗಿರುವಿರಿ; ನಿಮಗೆ ಒಳ್ಳೆಯದಾಗುವಂತೆ ನಾನು ನಿಮಗೆ ಆಜ್ಞಾಪಿಸಿದ ಎಲ್ಲಾ ಮಾರ್ಗಗಳಲ್ಲಿ ನಡೆಯಿರಿ,” ಎಂದು ಆಜ್ಞಾಪಿಸಿ ಹೇಳಿದೆನು.


ಆದರೆ ಅವರು ಕೇಳಲಿಲ್ಲ, ಕಿವಿಗೊಡಲಿಲ್ಲ. ತಮ್ಮ ಕೆಟ್ಟ ಹೃದಯದ ಕಲ್ಪನೆಯಂತೆ ನಡೆದುಕೊಂಡರು. ಆದ್ದರಿಂದ ಅವರು ಮಾಡಬೇಕೆಂದು ನಾನು ಆಜ್ಞಾಪಿಸಿದಂಥ, ಅವರು ಮಾಡುವಂಥ, ಈ ಒಡಂಬಡಿಕೆಯ ಶಾಪಗಳನ್ನೆಲ್ಲಾ ಅವರ ಮೇಲೆ ಬರಮಾಡುವೆನು.’ ”


ಆದರೆ ನೀನು ಶರಣಾಗತಿಯನ್ನು ನಿರಾಕರಿಸಿದರೆ, ಯೆಹೋವ ದೇವರು ನನಗೆ ತೋರಿಸಿದ ಮಾತು ಇದೇ:


ನನ್ನ ತಂದೆ ನನಗೆ ಬೋಧಿಸಿ ಹೇಳಿದ್ದೇನೆಂದರೆ, “ನನ್ನ ಮಾತುಗಳನ್ನು ಮನಃಪೂರ್ವಕವಾಗಿ ಪಾಲಿಸು; ನನ್ನ ಆಜ್ಞೆಗಳನ್ನು ಕೈಗೊಳ್ಳು, ಆಗ ನೀನು ಬಾಳುವೆ.


ನನ್ನ ಆಜ್ಞೆಗಳನ್ನು ಅನುಸರಿಸಿ ಬಾಳು; ನಿನ್ನ ಕಣ್ಣುಗುಡ್ಡೆಯಂತೆ ನನ್ನ ಕಟ್ಟಳೆಗಳನ್ನು ಕಾಪಾಡು.


ಯೆಹೋವ ದೇವರು ಇಸ್ರಾಯೇಲಿನ ಮನೆಯವರಿಗೆ ಹೀಗೆ ಹೇಳುತ್ತಾರೆ: “ನೀವು ನನ್ನನ್ನು ಹುಡುಕಿರಿ ಮತ್ತು ಬದುಕಿಕೊಳ್ಳಿರಿ.


ನೀವು ಯೆಹೋವ ದೇವರನ್ನು ಹುಡುಕಿರಿ ಮತ್ತು ಬದುಕಿರಿ. ಇಲ್ಲದಿದ್ದರೆ, ಆತನು ಬೆಂಕಿಯಂತೆ ಯೋಸೇಫನ ಗೋತ್ರಗಳಲ್ಲಿ ಪ್ರವೇಶಿಸುವನು. ಅದು ದಹಿಸಿಬಿಡುವುದು, ಅದನ್ನು ಆರಿಸುವವರು ಬೇತೇಲಿನಲ್ಲಿ ಯಾರೂ ಇರುವುದಿಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು