Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 39:5 - ಕನ್ನಡ ಸಮಕಾಲಿಕ ಅನುವಾದ

5 ಆಗ ಕಸ್ದೀಯರ ದಂಡು ಅವರನ್ನು ಹಿಂದಟ್ಟಿ, ಯೆರಿಕೋವಿನ ಬಯಲು ಸ್ಥಳದಲ್ಲಿ ಚಿದ್ಕೀಯನನ್ನು ಹಿಡಿದರು. ಅನಂತರ ಹಮಾತ್ ನಾಡಿನ ರಿಬ್ಲದಲ್ಲಿರುವ ಬಾಬಿಲೋನಿನ ಅರಸನಾದ ನೆಬೂಕದ್ನೆಚ್ಚರನ ಬಳಿಗೆ ಅವನನ್ನು ತೆಗೆದುಕೊಂಡು ಬಂದು, ಅವನ ಮೇಲೆ ನ್ಯಾಯವನ್ನು ನಿರ್ಣಯಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

5 ಕಸ್ದೀಯರ ಸೈನಿಕರು ಅವರನ್ನು ಹಿಂದಟ್ಟುತ್ತಾ ಯೆರಿಕೋವಿನ ಬಯಲಿನಲ್ಲಿ ಚಿದ್ಕೀಯನನ್ನು ಹಿಡಿದು ಹಮಾತ್ ಸೀಮೆಯ ರಿಬ್ಲದಲ್ಲಿದ್ದ ನೆಬೂಕದ್ನೆಚ್ಚರನೆಂಬ ಬಾಬೆಲಿನ ಅರಸನ ಬಳಿಗೆ ತೆಗೆದುಕೊಂಡು ಬಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

5 ಬಾಬಿಲೋನಿಯದ ಸೈನಿಕರು ಅವರನ್ನು ಹಿಂದಟ್ಟುತ್ತಾ ಜೆರಿಕೋವಿನ ಬೈಲಿನಲ್ಲಿ ಚಿದ್ಕೀಯನನ್ನು ಹಿಡಿದರು. ಹಮಾತ್ ನಾಡಿನ ರಿಬ್ಲದಲ್ಲಿದ್ದ ಬಾಬಿಲೋನಿಯದ ಅರಸ ನೆಬೂಕದ್ನೆಚ್ಚರನ ಬಳಿಗೆ ಅವನನ್ನು ತೆಗೆದುಕೊಂಡು ಬಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

5 ಕಸ್ದೀಯರ ಸೈನಿಕರು ಅವರನ್ನು ಹಿಂದಟ್ಟುತ್ತಾ ಯೆರಿಕೋವಿನ ಬೈಲಿನಲ್ಲಿ ಚಿದ್ಕೀಯನನ್ನು ತಗಲಿ ಹಿಡಿದು ಹಮಾತ್ ಸೀಮೆಯ ರಿಬ್ಲದಲ್ಲಿದ್ದ ನೆಬೂಕದ್ನೆಚ್ಚರನೆಂಬ ಬಾಬೆಲಿನ ಅರಸನ ಬಳಿಗೆ ತೆಗೆದುಕೊಂಡು ಬಂದರು; ಆ ಬಾಬೆಲಿನ ಅರಸನು ಅಲ್ಲಿ ಚಿದ್ಕೀಯನಿಗೆ ಶಿಕ್ಷೆಯನ್ನು ವಿಧಿಸಿ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

5 ಆದರೆ ಬಾಬಿಲೋನಿನ ಸೈನಿಕರು ಚಿದ್ಕೀಯ ಮತ್ತು ಅವನ ಸೈನಿಕರನ್ನು ಬೆನ್ನಟ್ಟಿದರು. ಕಸ್ದೀಯರ ಸೈನಿಕರು ಜೆರಿಕೊವಿನ ಬಯಲಿನಲ್ಲಿ ಚಿದ್ಕೀಯನನ್ನು ಬಂಧಿಸಿ ಬಾಬಿಲೋನಿನ ರಾಜನಾದ ನೆಬೂಕದ್ನೆಚ್ಚರನಲ್ಲಿಗೆ ತೆಗೆದುಕೊಂಡು ಹೋದರು. ಆಗ ನೆಬೂಕದ್ನೆಚ್ಚರನು ಹಮಾತ್ ಸೀಮೆಯ “ರಿಬ್ಲ”ದಲ್ಲಿದ್ದನು. ಆ ಸ್ಥಳದಲ್ಲಿಯೇ ನೆಬೂಕದ್ನೆಚ್ಚರನು ಚಿದ್ಕೀಯನ ಬಗ್ಗೆ ತನ್ನ ನಿರ್ಣಯವನ್ನು ಪ್ರಕಟಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 39:5
26 ತಿಳಿವುಗಳ ಹೋಲಿಕೆ  

ಆದರೆ ಫರೋಹ ನೆಕೋವನು ಇವನನ್ನು ಯೆರೂಸಲೇಮಿನಲ್ಲಿ ಆಳದ ಹಾಗೆ ಹಮಾತ್ ದೇಶದ ರಿಬ್ಲಾ ಎಂಬ ಊರಲ್ಲಿ ಬಂಧಿಸಿಟ್ಟನು. ಯೆಹೂದ್ಯರು ಅವನಿಗೆ ಮೂರು ಸಾವಿರದ ನಾಲ್ಕುನೂರು ಕಿಲೋಗ್ರಾಂ ಬೆಳ್ಳಿಯನ್ನೂ, ಮೂವತ್ತ ನಾಲ್ಕು ಕಿಲೋಗ್ರಾಂ ಬಂಗಾರವನ್ನೂ ದಂಡ ತೆರಬೇಕಾಯಿತು.


ಇಸ್ರಾಯೇಲರು ಗಿಲ್ಗಾಲಿನಲ್ಲಿ ಇಳಿದುಕೊಂಡು ತಿಂಗಳಿನ ಹದಿನಾಲ್ಕನೆಯ ದಿವಸ ಸಂಜೆಯಲ್ಲಿ ಯೆರಿಕೋವಿನ ಬಯಲುಗಳಲ್ಲಿ ಪಸ್ಕವನ್ನು ಆಚರಿಸಿದರು.


“ಹಾಗೆ ನಿನ್ನ ಹೆಂಡತಿಯರನ್ನೂ, ನಿನ್ನ ಮಕ್ಕಳನ್ನೂ ಕಸ್ದೀಯರ ಬಳಿಗೆ ಹೊರಗೆ ತರುವರು. ನೀನು ಅವರ ಕೈಗೆ ತಪ್ಪಿಸಿಕೊಳ್ಳುವುದಿಲ್ಲ. ಬಾಬಿಲೋನಿನ ಅರಸನ ಕೈಯಿಂದ ಸೆರೆಯಾಗುವೆ. ಈ ಪಟ್ಟಣವು ಬೆಂಕಿಯಿಂದ ಸುಟ್ಟುಹೋಗುವುದು,” ಎಂದನು.


ಆದರೆ ನೀನು ಬಾಬಿಲೋನಿನ ಅರಸನ ಪ್ರಧಾನರ ಬಳಿಗೆ ಹೊರಗೆ ಹೋಗದಿದ್ದರೆ, ಈ ಪಟ್ಟಣವು ಕಸ್ದೀಯರ ಕೈಯಲ್ಲಿ ಒಪ್ಪಿಸಲಾಗುವುದು. ಅವರು ಅದನ್ನು ಬೆಂಕಿಯಿಂದ ಸುಡುವರು. ನೀನು ಅವರ ಕೈಯಿಂದ ತಪ್ಪಿಸಿಕೊಳ್ಳುವುದಿಲ್ಲ,’ ” ಎಂದನು.


ಹೆಚ್ಚು ಕಡಿಮೆ ನಾಲ್ವತ್ತು ಸಾವಿರ ಜನರು ಯುದ್ಧಕ್ಕೆ ಸಿದ್ಧರಾಗಿ ಯೆಹೋವ ದೇವರ ಮುಂದೆ ಯುದ್ಧಮಾಡುವುದಕ್ಕೆ ಯೆರಿಕೋವಿನ ಬಯಲುಗಳಿಗೆ ಹಾದುಬಂದರು.


ಯಾರ ವಿಷಯವಾಗಿ ನಾವು ಅವನ ನೆರಳಿನ ಕೆಳಗೆ ಬೇರೆ ಜನಾಂಗಗಳೊಳಗೆ ಬದುಕುವೆವು ಎಂದು ಹೇಳಿಕೊಂಡೆವೋ, ನಮ್ಮ ಮೂಗಿನ ಉಸಿರಾದ ಆ ಯೆಹೋವ ದೇವರ ಅಭಿಷಿಕ್ತನು ಅವರ ಬಲೆಗಳಲ್ಲಿ ಸಿಕ್ಕಿಕೊಂಡನು.


ಯೆಹೂದವೆಂಬಾಕೆಯು ಸಂಕಟದ ನಿಮಿತ್ತವೂ, ಘೋರವಾದ ದಾಸ್ಯದ ನಿಮಿತ್ತವೂ ಸೆರೆಯಾಗಿ ಹೋದಳು. ಆಕೆಯು ಬೇರೆ ಜನಾಂಗಗಳೊಳಗೆ ವಾಸಮಾಡುವವಳಾಗಿ, ವಿಶ್ರಾಂತಿಯನ್ನು ಕಾಣಳು. ಆಕೆಯು ಇಕ್ಕಟ್ಟಿಗೆ ಸಿಕ್ಕಿಕೊಂಡಿರುವಾಗಲೇ ಆಕೆಯ ಹಿಂಸಕರೆಲ್ಲಾ ಆಕೆಯನ್ನು ಹಿಂದಟ್ಟಿ ಹಿಡಿದರು.


ಅದಕ್ಕಿಂತ ಬಿರುಸಾದ ಗಾಳಿ ಆ ಸ್ಥಳಗಳಿಂದ ನನ್ನ ಬಳಿಗೆ ಬರುವುದು. ಈಗಲೂ ನಾನು ಅವರಿಗೆ ವಿರೋಧವಾಗಿ ನ್ಯಾಯತೀರ್ಪುಗಳನ್ನು ಕೊಡುವೆನು.”


ಆದಕಾರಣ ಯೆಹೋವ ದೇವರು ಅಸ್ಸೀರಿಯದ ಅರಸನ ಸೈನ್ಯದ ಅಧಿಪತಿಗಳನ್ನೂ ಅವನ ಮೇಲೆ ಬರಮಾಡಿದರು. ಆ ಅಧಿಪತಿಗಳು ಮನಸ್ಸೆಯ ಮೂಗಿಗೆ ಕೊಂಡಿಗಳನ್ನು ಹಾಕಿ, ಅವನಿಗೆ ಕಂಚಿನ ಸಂಕೋಲೆಗಳಿಂದ ಬಂಧಿಸಿ, ಅವನನ್ನು ಬಾಬಿಲೋನಿಗೆ ಒಯ್ದರು.


ಅವರು ಅರಸನನ್ನು ಹಿಡಿದುಕೊಂಡರು. ರಿಬ್ಲದಲ್ಲಿರುವ ಬಾಬಿಲೋನಿನ ಅರಸನ ಬಳಿಗೆ ತೆಗೆದುಕೊಂಡು ಬಂದು, ಅವನ ಮೇಲೆ ನ್ಯಾಯವನ್ನು ನಿರ್ಣಯಿಸಿದರು.


ಅಸ್ಸೀರಿಯದ ಅರಸನು ಬಾಬಿಲೋನ್, ಕೂತಾ, ಅವ್ವಾ, ಹಮಾತ್, ಸೆಫರ್ವಯಿಮ್ ಊರುಗಳ ಜನರನ್ನು ಬರಮಾಡಿ, ಅವರನ್ನು ಇಸ್ರಾಯೇಲರಿಗೆ ಬದಲಾಗಿ ಸಮಾರ್ಯದ ಪಟ್ಟಣಗಳಲ್ಲಿ ಇರಿಸಿದನು. ಅವರು ಸಮಾರ್ಯವನ್ನು ಸ್ವತಂತ್ರಿಸಿಕೊಂಡು, ಅದರ ಪಟ್ಟಣಗಳಲ್ಲಿ ವಾಸಿಸಿದರು.


ದಾವೀದನು ಹದದೆಜೆರನ ಸಮಸ್ತ ಸೈನ್ಯವನ್ನು ಸೋಲಿಸಿದನೆಂಬ ವರ್ತಮಾನವನ್ನು ಹಮಾತಿನ ಅರಸನಾದ ತೋವು ಕೇಳಿದಾಗ,


ಐದು ಮಂದಿ ಫಿಲಿಷ್ಟಿಯರ ಅಧಿಪತಿಗಳೂ ಸಮಸ್ತ ಕಾನಾನ್ಯರೂ ಸೀದೋನ್ಯರೂ ಬಾಳ್ ಹೆರ್ಮೋನ್ ಬೆಟ್ಟದಿಂದ ಪ್ರಾರಂಭಿಸಿ ಹಮಾತಿನ ಪ್ರದೇಶದವರೆಗೂ ಲೆಬನೋನಿನ ಬೆಟ್ಟದಲ್ಲಿ ವಾಸವಾಗಿರುವ ಹಿವ್ವಿಯರು ಇವರೇ.


ಅದರೊಂದಿಗೆ ಗೆಬಾಲ್ಯರ ಪ್ರಾಂತ್ಯ, ಹೆರ್ಮೋನ್ ಬೆಟ್ಟದ ಕೆಳಗೆ ಇರುವ ಬಾಲ್ಗಾದಿನಿಂದ ಹಮಾತಿನ ದಾರಿಯವರೆಗೂ ಇರುವ ಲೆಬನೋನಿನ ಪೂರ್ವ ಪ್ರದೇಶ.


ಆಗ ಅವರು ಏರಿಹೋಗಿ ಚಿನ್ ಎಂಬ ಮರುಭೂಮಿಯಿಂದ ಹಮಾತಿನ ಕಡೆಯಲ್ಲಿರುವ ರೆಹೋಬಿನವರೆಗೂ ದೇಶವನ್ನು ಸಂಚರಿಸಿ ನೋಡಿದರು.


ಯೆಹೋವ ದೇವರು ಹೇಳುವುದೇನೆಂದರೆ, ತರುವಾಯ ನಾನು ಯೆಹೂದದ ಅರಸನಾದ ಚಿದ್ಕೀಯನನ್ನೂ, ಅವನ ಸೇವಕರನ್ನೂ, ಜನರನ್ನೂ ಈ ಪಟ್ಟಣದಲ್ಲಿ ವ್ಯಾಧಿಯಿಂದಲೂ, ಖಡ್ಗದಿಂದಲೂ, ಕ್ಷಾಮದಿಂದಲೂ ಉಳಿದವರನ್ನು ಬಾಬಿಲೋನಿನ ಅರಸನಾದ ನೆಬೂಕದ್ನೆಚ್ಚರನ ಕೈಗೂ, ಅವರ ಶತ್ರುಗಳ ಕೈಗೂ ಒಪ್ಪಿಸುವೆನು. ಅವನು ಅವರನ್ನು ಖಡ್ಗದ ಬಾಯಿಂದ ಹೊಡೆಯುವನು. ಅವರ ಮೇಲೆ ಕರುಣೆ ಇಡುವುದಿಲ್ಲ, ಕನಿಕರಿಸುವುದಿಲ್ಲ, ಅಂತಃಕರಣ ಪಡುವುದಿಲ್ಲ.’


“ ‘ತಿನ್ನಕೂಡದ ಹಾಗೆ ಅಷ್ಟು ಕೆಟ್ಟವುಗಳಾಗಿರುವ ಆ ಕೆಟ್ಟ ಅಂಜೂರದ ಹಣ್ಣುಗಳ ಹಾಗೆ ನಿಶ್ಚಯವಾಗಿ ನಾನು ಯೆಹೂದದ ಅರಸನಾದ ಚಿದ್ಕೀಯನನ್ನೂ, ಅವನ ಪ್ರಧಾನರನ್ನೂ ಈ ದೇಶದಲ್ಲಿ ಉಳಿಯುವ ಯೆರೂಸಲೇಮಿನ ಶೇಷವನ್ನೂ, ಈಜಿಪ್ಟ್ ದೇಶದಲ್ಲಿ ವಾಸಿಸುವವರನ್ನೂ ಒಪ್ಪಿಸುತ್ತೇನೆ,’ ಎಂದು ಯೆಹೋವ ದೇವರು ಹೇಳುತ್ತಾರೆ.


ಯೆಹೋವ ದೇವರು ಹೀಗೆ ಹೇಳುತ್ತಾರೆ: ‘ಇಗೋ, ನಾನು ಯೆಹೂದದ ಅರಸನಾದ ಚಿದ್ಕೀಯನನ್ನು ಅವನ ಶತ್ರುವಾದಂಥ ಅವನ ಪ್ರಾಣವನ್ನು ಹುಡುಕಿದಂಥ ಬಾಬಿಲೋನಿನ ಅರಸನಾದ ನೆಬೂಕದ್ನೆಚ್ಚರನ ಕೈಯಲ್ಲಿ ಹೇಗೆ ಒಪ್ಪಿಸಿದೆನೋ, ಹಾಗೆಯೇ ಈಜಿಪ್ಟಿನ ಅರಸನಾದ ಫರೋಹ ಹೋಫ್ರನನ್ನು ಅವನ ಪ್ರಾಣವನ್ನು ಹುಡುಕುವ ಅವನ ಶತ್ರುಗಳ ಕೈಯಲ್ಲಿ ಒಪ್ಪಿಸುತ್ತೇನೆ.’ ”


ದಮಸ್ಕದ ವಿಷಯವಾಗಿ: “ಹಮಾತ್ ಮತ್ತು ಅರ್ಪಾದ್ ನಗರಗಳು ಆಶಾಭಂಗಗೊಂಡಿವೆ, ಅವು ಕೆಟ್ಟ ಸುದ್ದಿಯನ್ನು ಕೇಳಿ ಅಧೈರ್ಯಪಟ್ಟಿವೆ; ಸಮುದ್ರದಂತೆ ಕಳವಳಪಡುತ್ತದೆ; ಅದು ಸುಮ್ಮನಿರಲಾರದು.


ಅವರು ರಥಗಳ ಸಂಗಡವಾಗಿಯೂ ಬಂಡಿಗಳ ಸಂಗಡವಾಗಿಯೂ ಜನಗಳ ಸಮೂಹದ ಸಂಗಡವಾಗಿಯೂ ಬಲವುಳ್ಳವರಾಗಿ ತಮ್ಮ ಆಯುಧಗಳೊಂದಿಗೆ ನಿನಗೆ ವಿರುದ್ಧವಾಗಿ ಬರುವರು. ಸುತ್ತಲೂ ಖೇಡ್ಯವನ್ನೂ ಗುರಾಣಿಯನ್ನೂ ಶಿರಸ್ತ್ರಾಣವನ್ನೂ ಹಿಡಿದು ನಿನಗೆ ವಿರುದ್ಧವಾಗಿರುವೆನು. ಇದಲ್ಲದೆ ನಾನು ಅವರಿಗೆ ನ್ಯಾಯತೀರ್ಪಿನ ಅಧಿಕಾರ ಕೊಡುವೆನು. ಅವರು ತಮ್ಮ ನ್ಯಾಯಗಳ ಪ್ರಕಾರ ನಿನಗೆ ನ್ಯಾಯತೀರಿಸುವರು.


ಅವರು ಭಯಂಕರವಾದವರು ಮತ್ತು ಕ್ರೂರವಾದವರು. ಅವರು ತಮಗೆ ತಾವೇ ಕಾನೂನಾಗಿದ್ದಾರೆ. ತಮ್ಮನ್ನು ತಾವೇ ಗೌರವಿಸಿಕೊಳ್ಳುವವರೂ ಆಗಿದ್ದಾರೆ.


ನಿನ್ನ ಅಧಿಕಾರಸ್ಥರೆಲ್ಲ ಒಟ್ಟಿಗೆ ಓಡಿದರೂ ಬಿಲ್ಲುಗಾರರಿಲ್ಲದೆಯೇ ಸೆರೆಯಾಗಿದ್ದಾರೆ. ದೂರದಿಂದ ಓಡಿಬಂದರೂ ನಿನ್ನ ಜನರು ಶತ್ರುವಿನ ಕೈಗೆ ಸಿಕ್ಕಿಬಿದ್ದಿದ್ದಾರೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು