Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 4:1 - ಕನ್ನಡ ಸಮಕಾಲಿಕ ಅನುವಾದ

1 “ಇಸ್ರಾಯೇಲೇ, ನೀನು ಹಿಂದಿರುಗುವಿಯಾದರೆ ನನ್ನ ಕಡೆ ಹಿಂದಿರುಗಿ ಬಾ,” ಎಂದು ಯೆಹೋವ ದೇವರು ನುಡಿಯುತ್ತಾರೆ. “ನೀನು ನಿನ್ನ ಅಸಹ್ಯಗಳನ್ನು ನನ್ನ ಎದುರಿನಿಂದ ತೆಗೆದುಬಿಟ್ಟರೆ, ಅಲೆದಾಡದೆ ಇರುವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

1 ಯೆಹೋವನು, “ಇಸ್ರಾಯೇಲೇ, ನೀನು ತಿರುಗಿಕೊಂಡರೆ ನನ್ನ ಬಳಿಗೇ ಬರುವಿ; ನನ್ನ ಕಣ್ಣೆದುರಿನಿಂದ ನಿನ್ನ ಅಸಹ್ಯವಸ್ತುಗಳನ್ನು ತೆಗೆದುಬಿಟ್ಟರೆ, ನೀನು ಇನ್ನು ದಿಕ್ಕು ದೆಸೆಗಳಿಲ್ಲದೆ ನರಳುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

1 ಸರ್ವೇಶ್ವರ ಸ್ವಾಮಿ ಹೀಗೆನ್ನುತ್ತಾರೆ : “ಇಸ್ರಯೇಲಿನ ಜನರೇ, ನೀವು ಹಿಂದಿರುಗುವಿರಾದರೆ ನನ್ನ ಬಳಿಗೆ ಬನ್ನಿ. ಅಸಹ್ಯವಾದ ನಿಮ್ಮ ಮೂರ್ತಿ ಪೂಜಾವಸ್ತುಗಳನ್ನು ನನ್ನ ಕಣ್ಣೆದುರಿನಿಂದ ತೆಗೆದುಬಿಡಿ. ಆಗ ನೀವು ಅತ್ತಿತ್ತ ತೂರಾಡಲಾರಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

1 ಯೆಹೋವನು ಹೀಗನ್ನುತ್ತಾನೆ - ಇಸ್ರಾಯೇಲೇ, ನೀನು ಹಿಂದಿರುಗುವಿಯಾದರೆ ನನ್ನ ಬಳಿಗೇ ಬರುವಿ; ನನ್ನ ಕಣ್ಣೆದುರಿನಿಂದ ನಿನ್ನ ಅಸಹ್ಯವಸ್ತುಗಳನ್ನು ತೆಗೆದುಬಿಟ್ಟರೆ ನೀನು ಇನ್ನು ದಿಕ್ಕಾಪಾಲಾಗಿರುವದಿಲ್ಲ;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

1 ಇದು ಯೆಹೋವನ ಸಂದೇಶ: “ಇಸ್ರೇಲೇ, ನೀನು ಹಿಂತಿರುಗಿ ಬರಲು ಇಚ್ಛಿಸಿದರೆ ನನ್ನಲ್ಲಿಗೆ ಹಿಂತಿರುಗಿ ಬಾ. ನಿನ್ನ ವಿಗ್ರಹಗಳನ್ನು ಎಸೆದುಬಿಡು. ನನ್ನಿಂದ ದೂರಸರಿದು ಅಲೆದಾಡಬೇಡ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 4:1
38 ತಿಳಿವುಗಳ ಹೋಲಿಕೆ  

ಯೆಹೋವ ದೇವರು ಹೀಗೆ ಘೋಷಿಸುತ್ತಾರೆ, “ಈಗಲಾದರೂ ಉಪವಾಸದಿಂದಲೂ ಅಳುವಿಕೆಯಿಂದಲೂ ಗೋಳಾಟದಿಂದಲೂ ನಿಮ್ಮ ಪೂರ್ಣಹೃದಯದಿಂದ ನನ್ನ ಕಡೆಗೆ ತಿರುಗಿಕೊಳ್ಳಿರಿ.”


“ಭ್ರಷ್ಟರಾದ ಮಕ್ಕಳೇ, ನೀವು ತಿರುಗಿಕೊಳ್ಳಿರಿ; ನಿಮ್ಮ ಭ್ರಷ್ಟತನವನ್ನು ನಾನು ಸ್ವಸ್ಥ ಮಾಡುವೆನು.” “ಇಗೋ, ನಿಮ್ಮ ಬಳಿಗೆ ಬರುತ್ತೇವೆ, ಏಕೆಂದರೆ ನೀವು ಯೆಹೋವ ದೇವರು, ನಮ್ಮ ದೇವರಾಗಿದ್ದೀರಿ.


ಈಗ ಅವರು ತಮ್ಮ ವ್ಯಭಿಚಾರವನ್ನು ಮತ್ತು ನಿಮ್ಮ ರಾಜರ ಅಂತ್ಯಕ್ರಿಯೆಯ ವಿಧಿಗಳನ್ನು ಬಿಟ್ಟುಬಿಡಿ, ನಾನು ಅವರ ಮಧ್ಯದಲ್ಲಿ ಎಂದೆಂದಿಗೂ ವಾಸಿಸುತ್ತೇನೆ.


ಅವರು ಹೇಳಿದ್ದೇನೆಂದರೆ: “ನಿಮ್ಮ ನಿಮ್ಮ ಕೆಟ್ಟ ಮಾರ್ಗವನ್ನೂ, ನಿಮ್ಮ ಕೆಟ್ಟ ದೃಶ್ಯಗಳ ಕೆಟ್ಟತನವನ್ನೂ ಬಿಟ್ಟು ಮತ್ತೆ ತಿರುಗಿಕೊಳ್ಳಿರಿ. ಆಗ ಯೆಹೋವ ದೇವರು ನಿಮಗೂ, ನಿಮ್ಮ ತಂದೆಗಳಿಗೂ ಕೊಟ್ಟ ದೇಶದಲ್ಲಿ ಎಂದೆಂದಿಗೂ ವಾಸಿಸುವಿರಿ.


ನೀನು ಹೋಗಿ ಉತ್ತರ ದಿಕ್ಕಿಗೆ ಈ ಮಾತುಗಳನ್ನು ಸಾರು. “ ‘ಭ್ರಷ್ಟಳಾದ ಇಸ್ರಾಯೇಲೇ, ತಿರುಗಿಕೋ,’ ಎಂದು ಯೆಹೋವ ದೇವರು ಕರೆಯುತ್ತಾರೆ. ‘ನಾನು ನನ್ನ ಕೋಪವನ್ನು ನಿಮ್ಮ ಮೇಲೆ ಬೀಳ ಮಾಡುವುದಿಲ್ಲ. ಏಕೆಂದರೆ ನಾನು ಕರುಣಾಸಾಗರನು,’ ಎಂದು ಯೆಹೋವ ದೇವರು ಹೇಳುತ್ತಾರೆ. ‘ನಾನು ಎಂದೆಂದಿಗೂ ಕೋಪವಿಟ್ಟುಕೊಳ್ಳುವುದಿಲ್ಲ.


“ಒಬ್ಬನು ತನ್ನ ಹೆಂಡತಿಯನ್ನು ವಿಚ್ಛೇದನಮಾಡಿದರೆ, ಅವಳು ಅವನನ್ನು ಬಿಟ್ಟು ಹೋಗಿ ಬೇರೆಯವನ ಜೊತೆ ಇದ್ದರೆ, ಅವನು ಅವಳನ್ನು ಮತ್ತೆ ಸೇರಿಸಿಕೊಳ್ಳುವನೋ? ಸೇರಿಸಿಕೊಂಡರೆ, ಆ ದೇಶವು ಸಂಪೂರ್ಣವಾಗಿ ಅಪವಿತ್ರವಾಗುವುದಿಲ್ಲವೋ? ಆದರೆ ನೀನು ನಿನ್ನ ಅನೇಕ ಪ್ರೇಮಿಗಳ ಸಂಗಡ ವೇಶ್ಯೆಯಂತೆ ಇದ್ದೀ. ನೀನು ಈಗ ನನ್ನ ಬಳಿಗೆ ಹಿಂತಿರುಗುವೆಯಾ?” ಎಂದು ಯೆಹೋವ ದೇವರು ಹೇಳುತ್ತಾರೆ.


ಆಗ ಯಾಕೋಬನು ತನ್ನ ಮನೆಯವರಿಗೂ, ತನ್ನ ಸಂಗಡ ಇದ್ದವರೆಲ್ಲರಿಗೂ, “ನಿಮ್ಮ ಮಧ್ಯದಲ್ಲಿರುವ ಅನ್ಯದೇವರುಗಳನ್ನು ತೆಗೆದುಹಾಕಿ ಶುದ್ಧರಾಗಿರಿ, ನೀವು ನಿಮ್ಮ ಬಟ್ಟೆಗಳನ್ನು ಬದಲಾಯಿಸಿರಿ.


ಇಸ್ರಾಯೇಲೇ, ನಿನ್ನ ದೇವರಾದ ಯೆಹೋವ ದೇವರ ಕಡೆಗೆ ತಿರುಗಿಕೋ. ಏಕೆಂದರೆ ನಿನ್ನ ಪಾಪಗಳೇ, ನಿನ್ನ ಬೀಳುವಿಕೆಗೆ ಕಾರಣ.


“ನಿಮ್ಮ ತಾಯಿಯ ಸಂಗಡ ವಾದಮಾಡಿರಿ, ಅವಳೊಂದಿಗೆ ವಾದಮಾಡಿರಿ, ಏಕೆಂದರೆ ಅವಳು ನನ್ನ ಹೆಂಡತಿಯಲ್ಲ, ಮತ್ತು ನಾನು ಅವಳ ಗಂಡನಲ್ಲ. ಅವಳು ತನ್ನ ವ್ಯಭಿಚಾರದ ನೋಟವನ್ನು ಮತ್ತು ತನ್ನ ಸ್ತನಗಳ ಮಧ್ಯದಿಂದ ಅಪನಂಬಿಗಸ್ತಿಕೆಯನ್ನು ತ್ಯಜಿಸಲಿ.


ನಾನು ಮೋಶೆಯ ಮುಖಾಂತರ ಆಜ್ಞಾಪಿಸಿದ ಎಲ್ಲಾ ಅಪ್ಪಣೆಗಳನ್ನೂ, ಕಾನೂನುಗಳನ್ನೂ, ವಿಧಿಗಳನ್ನೂ ಕೈಗೊಂಡು ನಡೆಯುವುದರಲ್ಲಿ ಅವರು ಜಾಗರೂಕರಾಗಿದ್ದರೆ, ನಾನು ಅವರ ಪಿತೃಗಳಿಗೆ ನೇಮಕ ಮಾಡಿದ ದೇಶವನ್ನು ಪುನಃ ಇಸ್ರಾಯೇಲರು ಬಿಟ್ಟುಹೋಗುವಂತೆ ಮಾಡುವುದಿಲ್ಲ,” ಎಂದು ಹೇಳಿದ್ದರು.


ಆಸನು ಆ ಮಾತುಗಳನ್ನೂ, ಪ್ರವಾದಿಯಾದ ಓದೇದನ ಮಗ ಅಜರ್ಯನ ಪ್ರವಾದನಾ ಮಾತುಗಳನ್ನೂ ಕೇಳಿದಾಗ, ಅವನು ಬಲಗೊಂಡು ಯೆಹೂದ ಬೆನ್ಯಾಮೀನಿನ ಸಮಸ್ತ ದೇಶದೊಳಗಿಂದಲೂ, ಎಫ್ರಾಯೀಮನ ಬೆಟ್ಟದಲ್ಲಿ ತಾನು ಹಿಡಿದ ಪಟ್ಟಣಗಳೊಳಗಿಂದಲೂ ಅಸಹ್ಯ ವಿಗ್ರಹಗಳನ್ನು ತೆಗೆದುಹಾಕಿ, ಯೆಹೋವ ದೇವರ ದ್ವಾರಾಂಗಳದ ಮುಂದೆ ಇದ್ದ ಯೆಹೋವ ದೇವರ ಬಲಿಪೀಠವನ್ನು ನೂತನಪಡಿಸಿದನು.


ಇದಲ್ಲದೆ ಯಾಜಕನಾದ ಹಿಲ್ಕೀಯನು ಯೆಹೋವ ದೇವರ ಆಲಯದಲ್ಲಿ ಕಂಡುಕೊಂಡ ಗ್ರಂಥದಲ್ಲಿ ಬರೆದಿದ್ದ ನಿಯಮದ ಮಾತುಗಳನ್ನು ಯೋಷೀಯನು ಈಡೇರಿಸುವಂತೆ ಯೆಹೂದ ದೇಶದಲ್ಲಿಯೂ, ಯೆರೂಸಲೇಮಿನಲ್ಲಿಯೂ ಭೂತಪ್ರೇತಗಳನ್ನು ವಿಚಾರಿಸುವವರನ್ನೂ, ಮಂತ್ರಗಾರರನ್ನೂ, ಮನೆದೇವರುಗಳನ್ನೂ, ವಿಗ್ರಹಗಳನ್ನೂ, ಸಮಸ್ತ ಅಸಹ್ಯಕರವಾದವುಗಳನ್ನೂ ತೆಗೆದುಹಾಕಿಬಿಟ್ಟನು.


ಇದಲ್ಲದೆ ಯೆರೂಸಲೇಮಿನ ಮುಂದೆ ವಿಘ್ನ ಬೆಟ್ಟದ ದಕ್ಷಿಣದಲ್ಲಿದ್ದ ಸೀದೋನ್ಯರ ಅಸಹ್ಯಕರವಾದ ಅಷ್ಟೋರೆತಿಗೂ, ಮೋವಾಬ್ಯರ ಅಸಹ್ಯಕರವಾದ ಕೆಮೋಷನಿಗೂ, ಅಮ್ಮೋನ್ಯರ ಅಸಹ್ಯಕರವಾದ ಮಿಲ್ಕೋಮನಿಗೂ ಇಸ್ರಾಯೇಲಿನ ಅರಸನಾದ ಸೊಲೊಮೋನನು ಕಟ್ಟಿಸಿದ ಉನ್ನತ ಪೂಜಾಸ್ಥಳಗಳನ್ನೂ ಯೋಷೀಯನು ಅಶುದ್ಧ ಮಾಡಿದನು.


ಆಗ ಸಮುಯೇಲನು ಇಸ್ರಾಯೇಲ್ ಮನೆಯವರಿಗೆಲ್ಲಾ ಮಾತನಾಡಿ, “ನೀವು ನಿಮ್ಮ ಪೂರ್ಣಹೃದಯದಿಂದ ಯೆಹೋವ ದೇವರ ಕಡೆಗೆ ತಿರುಗಿ, ನಿಮ್ಮಲ್ಲಿರುವ ಅನ್ಯದೇವರುಗಳನ್ನೂ, ಅಷ್ಟೋರೆತನ್ನೂ ನಿಮ್ಮ ಮಧ್ಯದಲ್ಲಿಂದ ತೆಗೆದುಹಾಕಿ, ನಿಮ್ಮ ಹೃದಯವನ್ನು ಯೆಹೋವ ದೇವರಿಗೆ ಸಿದ್ಧಮಾಡಿ, ಅವರೊಬ್ಬರನ್ನೇ ಸೇವಿಸಿದರೆ ಅವರು ನಿಮ್ಮನ್ನು ಫಿಲಿಷ್ಟಿಯರ ಕೈಗಳೊಳಗಿಂದ ತಪ್ಪಿಸುವರು,” ಎಂದನು.


ಅವರು ಅನ್ಯದೇವರುಗಳನ್ನು ತಮ್ಮ ಮಧ್ಯದಲ್ಲಿಂದ ತೊರೆದುಬಿಟ್ಟು, ಯೆಹೋವ ದೇವರನ್ನು ಸೇವಿಸಿದರು. ಆಗ ಯೆಹೋವ ದೇವರು ಇಸ್ರಾಯೇಲಿನ ಕಷ್ಟಕ್ಕೋಸ್ಕರ ಮನಸ್ಸಿನಲ್ಲಿ ಬಹಳ ನೊಂದುಕೊಂಡರು.


ಅವರು ಮಹೋನ್ನತನಾದಾತನ ಕಡೆಗೆ ತಿರುಗಿಕೊಳ್ಳುವುದಿಲ್ಲ. ಅವರು ಮೋಸದ ಬಿಲ್ಲಿನ ಹಾಗೆ ಇದ್ದಾರೆ. ಅವರ ನಾಯಕರು ನಾಲಿಗೆಯ ಹುಚ್ಚು ಕೂಗಾಟದಿಂದ, ಖಡ್ಗದಿಂದ ಬೀಳುವರು. ಇದೇ ಈಜಿಪ್ಟ್ ದೇಶದಲ್ಲಿ ಅವರಿಗಿರುವ ನಿಂದೆಯಾಗಿದೆ.


ಸಾಲಕ್ಕೆ ಬಡ್ಡಿ ತೆಗೆದುಕೊಂಡು, ಲಾಭ ಪಡೆಯುವವನು ಆಗಿದ್ದರೆ, ಅವನು ಬದುಕುವನೋ? ಅವನು ಬದುಕುವುದಿಲ್ಲ, ಅವನು ಈ ಅಸಹ್ಯಗಳನ್ನೆಲ್ಲಾ ಮಾಡಿದ್ದರಿಂದ ಅವನು ಸಾಯುವುದು ನಿಶ್ಚಯ; ತನ್ನ ಮರಣಕ್ಕೆ ತಾನೇ ಕಾರಣ.


“ಅವರು ಅಲ್ಲಿಗೆ ಹಿಂತಿರುಗಿ ಮತ್ತು ಅದರಲ್ಲಿರುವ ಎಲ್ಲಾ ಅನುಪಯುಕ್ತ ಆಕೃತಿಗಳನ್ನು ಮತ್ತು ಅಸಹ್ಯಕರ ವಿಗ್ರಹಗಳನ್ನು ತೆಗೆದುಹಾಕುತ್ತಾರೆ.


ಒಂದು ವೇಳೆ ಯೆಹೂದದ ಮನೆತನದವರು ನಾನು ಅವರಿಗೆ ಮಾಡುವುದಕ್ಕೆ ನೆನಸುವ ಕೇಡನ್ನೆಲ್ಲಾ ಕೇಳಿ ನಾನು ಅವರ ಅಕ್ರಮವನ್ನೂ, ಅವರ ಪಾಪವನ್ನೂ ಮನ್ನಿಸುವ ಹಾಗೆ ತಮ್ಮ ತಮ್ಮ ಮಾರ್ಗಗಳನ್ನು ಬಿಟ್ಟು ತಿರುಗಿಕೊಂಡಾರು,” ಎಂದನು.


ಇದಲ್ಲದೆ, ನಾನು ನನ್ನ ದಾಸರಾದ ಪ್ರವಾದಿಗಳನ್ನೆಲ್ಲಾ ನಿಮ್ಮ ಬಳಿಗೆ ನಿರಂತರವಾಗಿ ಕಳುಹಿಸುತ್ತಾ ಬಂದೆ. “ನೀವೆಲ್ಲರೂ ನಿಮ್ಮ ನಿಮ್ಮ ದುರ್ಮಾರ್ಗಗಳಿಂದ ಹಿಂದಿರುಗಿ, ನಿಮ್ಮ ನಡತೆಗಳನ್ನು ಸರಿಪಡಿಸಿಕೊಳ್ಳಿರಿ. ಅನ್ಯದೇವತೆಗಳನ್ನು ಹಿಂಬಾಲಿಸಿ ಪೂಜಿಸದಿರಿ. ಹಾಗೆ ಮಾಡಿದರೆ ನಾನು ನಿಮಗೂ, ನಿಮ್ಮ ಪೂರ್ವಜರಿಗೂ ಅನುಗ್ರಹಿಸಿದ ನಾಡಿನಲ್ಲಿ ವಾಸಿಸುವಿರಿ ಎಂದು ಅವರ ಮುಖಾಂತರ ಎಚ್ಚರಿಸಿದೆ.” ಆದರೆ ನೀವು ಕೇಳಲಿಲ್ಲ. ಕಿವಿಗೊಡಲೂ ಇಲ್ಲ.


‘ನಾನು ಅವರನ್ನು ಅಸಹ್ಯಪಡಿಸುತ್ತೇನೆ. ನಿಂದೆಗೂ, ಗಾದೆಗೂ, ಹಾಸ್ಯಕ್ಕೂ, ಶಾಪಕ್ಕೂ ಗುರಿಮಾಡಿ ಅವರನ್ನು ಭೂಮಿಯ ಸಮಸ್ತ ರಾಜ್ಯಗಳಿಂದ ತೆಗೆದು ಕೇಡಿಗೆ ಒಪ್ಪಿಸುವೆನು.


ಅವರನ್ನು ಹಿಜ್ಕೀಯನ ಮಗನಾದ ಯೆಹೂದದ ಅರಸನಾದ ಮನಸ್ಸೆಯು ಯೆರೂಸಲೇಮಿನಲ್ಲಿ ನಡಿಸಿದ್ದಕ್ಕೆ ಪ್ರತಿಫಲವಾಗಿ ನಾನು ಭೂಮಿಯ ಎಲ್ಲಾ ರಾಜ್ಯಗಳಿಗೆ ಚದರಿ ಹೋಗುವಂತೆ ಮಾಡುವೆನು.


ಯೆಹೂದದವರೇ, ಯೆರೂಸಲೇಮಿನ ನಿವಾಸಿಗಳೇ, ಯೆಹೋವ ದೇವರಿಗೋಸ್ಕರ ಸುನ್ನತಿ ಮಾಡಿಕೊಳ್ಳಿರಿ; ನಿಮ್ಮ ಹೃದಯಗಳ ಮುಂದೊಗಲನ್ನು ತೆಗೆದುಹಾಕಿರಿ. ಇಲ್ಲದಿದ್ದರೆ ನನ್ನ ಉಗ್ರವು ಬೆಂಕಿಯ ಹಾಗೆ ಹೊರಟು, ನಿಮ್ಮ ಕ್ರಿಯೆಗಳ ಕೆಟ್ಟತನದ ನಿಮಿತ್ತ ಯಾರೂ ಆರಿಸಲಾಗದ ಹಾಗೆ ಉರಿಯುವುದು.”


“ಓ ಭ್ರಷ್ಟರಾದ ಜನರೇ, ತಿರುಗಿಕೊಳ್ಳಿರಿ,” ಎಂದು ಯೆಹೋವ ದೇವರು ನುಡಿಯುತ್ತಾರೆ. “ಏಕೆಂದರೆ, ನಾನು ನಿಮಗೆ ಪತಿ. ಪಟ್ಟಣದೊಳಗಿಂದ ಒಬ್ಬನನ್ನು, ಗೋತ್ರದೊಳಗಿಂದ ಇಬ್ಬರನ್ನು ತೆಗೆದುಕೊಂಡು, ಚೀಯೋನಿಗೆ ಕರೆದುಕೊಂಡು ಬರುವೆನು.


ಇಸ್ರಾಯೇಲರೇ, ನೀವು ಯಾರಿಗೆ ಅಗಾಧ ದ್ರೋಹವನ್ನು ಮಾಡಿದ್ದೀರೋ, ಆತನ ಕಡೆಗೆ ತಿರುಗಿಕೊಳ್ಳಿರಿ.


“ಆದ್ದರಿಂದ ನೀವು ಈಗ ಯೆಹೋವ ದೇವರಿಗೆ ಭಯಪಟ್ಟು ಯಥಾರ್ಥದಲ್ಲಿಯೂ ಸತ್ಯದಲ್ಲಿಯೂ ಅವರನ್ನು ಸೇವಿಸಿರಿ. ನಿಮ್ಮ ಪೂರ್ವಜರು ಯೂಫ್ರೇಟೀಸ್ ನದಿಯ ಆಚೆಯಲ್ಲಿಯೂ ಈಜಿಪ್ಟಿನಲ್ಲಿಯೂ ಸೇವಿಸಿದ ದೇವರುಗಳನ್ನು ತೊರೆದುಬಿಟ್ಟು ಯೆಹೋವ ದೇವರನ್ನೇ ನೀವು ಸೇವಿಸಿರಿ.


“ಯೆಹೋವ ದೇವರಿಗೆ ಅಸಹ್ಯವಾಗಿರುವ ವಿಗ್ರಹವನ್ನಾಗಲಿ, ಎರಕ ಹೊಯ್ದದ್ದನ್ನಾಗಲಿ ಮಾಡಿಕೊಂಡು, ಶಿಲ್ಪಿಯ ಕೈಯಿಂದ ಮಾಡಿಸಿ, ಗುಪ್ತವಾಗಿ ನಿಲ್ಲಿಸಿಕೊಂಡವನು ಶಾಪಗ್ರಸ್ತನು,” ಎಂದು ಹೇಳಿದಾಗ, ಎಲ್ಲಾ ಜನರು, “ಆಮೆನ್,” ಎಂದು ಹೇಳಬೇಕು.


ನೀವು ಇಕ್ಕಟ್ಟಿಗೆ ಗುರಿಯಾಗಿ ಇವೆಲ್ಲವುಗಳು ನಿಮಗೆ ಸಂಭವಿಸಿದಾಗ, ಕಡೇ ದಿವಸಗಳಲ್ಲಿ ನಿಮ್ಮ ದೇವರಾದ ಯೆಹೋವ ದೇವರ ಕಡೆಗೆ ತಿರುಗಿಕೊಂಡು ವಿಧೇಯರಾಗಿರಿ.


ಇಸ್ರಾಯೇಲಿನ ದೇವರಾಗಿರುವ ಸೇನಾಧೀಶ್ವರ ಯೆಹೋವ ದೇವರು ಹೀಗೆ ಹೇಳುತ್ತಾರೆ, ನಿಮ್ಮ ಮಾರ್ಗಗಳನ್ನೂ, ನಿಮ್ಮ ಕ್ರಿಯೆಗಳನ್ನೂ ನೆಟ್ಟಗೆಮಾಡಿರಿ. ಆಗ ನಿಮ್ಮನ್ನು ಈ ಸ್ಥಳದಲ್ಲಿ ವಾಸಿಸುವಂತೆ ಮಾಡುವೆನು.


ಏಕೆಂದರೆ ನೀವು ನಿಮ್ಮ ಮಾರ್ಗಗಳನ್ನೂ, ನಿಮ್ಮ ಕ್ರಿಯೆಗಳನ್ನೂ, ಪೂರ್ಣವಾಗಿ ನೆಟ್ಟಗೆ ಮಾಡಿದರೆ; ಮನುಷ್ಯನಿಗೂ, ಅವನ ನೆರೆಯವನಿಗೂ ಪೂರ್ಣವಾಗಿ ನ್ಯಾಯ ನಡೆಸಿದರೆ;


ನಾನು ನಿಮ್ಮನ್ನು ಈ ಸ್ಥಳದಲ್ಲಿ ಎಂದರೆ, ನಾನು ನಿಮ್ಮ ಪಿತೃಗಳಿಗೆ ಕೊಟ್ಟ ದೇಶದಲ್ಲಿ ಎಂದೆಂದಿಗೂ ವಾಸಿಸುವಂತೆ ಮಾಡುವೆನು.


ಆದಕಾರಣ ಯೆಹೋವ ದೇವರು ಹೀಗೆನ್ನುತ್ತಾರೆ: ನೀನು ಮಾನಸಾಂತರಪಟ್ಟರೆ, ನೀನು ನನಗೆ ಸೇವೆಮಾಡುವಂತೆ ನಾನು ನಿನ್ನನ್ನು ಪುನಃಸ್ಥಾಪಿಸುವೆನು. ನೀನು ತುಚ್ಛವಾದವುಗಳಿಗೆ ಬದಲಾಗಿ ಅಮೂಲ್ಯವಾದವುಗಳನ್ನೇ ಮಾತನಾಡುತ್ತಿದ್ದರೆ, ನೀನು ನನ್ನ ಬಾಯಿಯ ಹಾಗಿರುವೆ. ಅವರು ನಿನ್ನ ಕಡೆಗೆ ತಿರುಗಲಿ, ಆದರೆ ನೀನು ಅವರ ಕಡೆಗೆ ಹಿಂದಿರುಗಬೇಡ.


“ಹೀಗಿರುವುದರಿಂದ ಈಗ ಯೆಹೂದದ ಮನುಷ್ಯರಿಗೂ, ಯೆರೂಸಲೇಮಿನ ನಿವಾಸಿಗಳಿಗೂ ನೀನು ಹೇಳಬೇಕಾದದ್ದೇನೆಂದರೆ, ‘ಯೆಹೋವ ದೇವರು ಹೀಗೆ ಹೇಳುತ್ತಾರೆ: ಇಗೋ, ನಾನು ನಿಮಗೆ ವಿರೋಧವಾಗಿ ಕೆಟ್ಟದ್ದನ್ನು ಕಲ್ಪಿಸುತ್ತಾ ಇದ್ದೇನೆ. ನಿಮಗೆ ವಿರೋಧವಾಗಿ ಉಪಾಯವನ್ನು ಆಲೋಚಿಸುತ್ತಾ ಇದ್ದೇನೆ. ನಿಮ್ಮ ನಿಮ್ಮ ಕೆಟ್ಟ ಮಾರ್ಗಗಳನ್ನು ಬಿಟ್ಟು ಹಿಂದಿರುಗಿರಿ. ನಿಮ್ಮ ಮಾರ್ಗಗಳನ್ನೂ, ನಿಮ್ಮ ಕ್ರಿಯೆಗಳನ್ನೂ ಒಳ್ಳೆಯದಾಗಿ ಮಾಡಿರಿ.


ನಿಮ್ಮ ಪಿತೃಗಳ ಹಾಗಿರಬೇಡಿರಿ; ಅವರಿಗೆ ಪೂರ್ವದ ಪ್ರವಾದಿಗಳು ಕೂಗಿ, ನಿಮ್ಮ ಕೆಟ್ಟ ಮಾರ್ಗಗಳನ್ನೂ, ನಿಮ್ಮ ಕೆಟ್ಟ ಕ್ರಿಯೆಗಳನ್ನೂ ಬಿಟ್ಟು ತಿರುಗಿರಿ ಎಂದು ಸರ್ವಶಕ್ತರಾದ ಯೆಹೋವ ದೇವರು ಪ್ರಕಟಿಸುತ್ತಾರೆಂದು ಹೇಳಿದರು; ಆದರೆ ಅವರು ಕೇಳಲಿಲ್ಲ. ನನ್ನಲ್ಲಿ ಲಕ್ಷ್ಯವಿಡಲಿಲ್ಲ ಎಂದು ಯೆಹೋವ ದೇವರು ಹೇಳುತ್ತಾರೆ.


ಹೀಗೆ ಯೋಷೀಯನು ಇಸ್ರಾಯೇಲರಿಗೆ ಇದ್ದ ಎಲ್ಲಾ ದೇಶಗಳೊಳಗಿಂದ ಸಮಸ್ತ ಅಸಹ್ಯಗಳನ್ನು ತೆಗೆದುಹಾಕಿ, ಇಸ್ರಾಯೇಲಿನಲ್ಲಿ ಸಿಕ್ಕಿದವರೆಲ್ಲರೂ ತಮ್ಮ ದೇವರಾದ ಯೆಹೋವ ದೇವರನ್ನು ಸೇವಿಸುವ ಹಾಗೆ ಮಾಡಿದನು. ಅವನ ದಿವಸಗಳೆಲ್ಲಾ ಅವರು ತಮ್ಮ ಪಿತೃಗಳ ದೇವರಾದ ಯೆಹೋವ ದೇವರನ್ನು ಹಿಂಬಾಲಿಸುವುದನ್ನು ಬಿಡದೆ ಇದ್ದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು