Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 4:10 - ಕನ್ನಡ ಸಮಕಾಲಿಕ ಅನುವಾದ

10 ಆಗ ನಾನು ಹೇಳಿದ್ದೇನೆಂದರೆ, “ಹಾ, ಸಾರ್ವಭೌಮ ಯೆಹೋವ ದೇವರೇ, ನಿಶ್ಚಯವಾಗಿ ನೀವು ಈ ಜನರಿಗೂ, ಯೆರೂಸಲೇಮಿಗೂ, ‘ನಿಮಗೆ ಸಮಾಧಾನವಾಗುವುದು,’ ಎಂದು ಹೇಳಿ, ಬಹಳ ಮೋಸ ಮಾಡಿದಿರಿ. ಖಡ್ಗವು ಅವರ ಕುತ್ತಿಗೆಗೆ ಬಂದಿದೆ” ಎಂದೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

10 ಆಗ ನಾನು, “ಅಯ್ಯೋ, ಕರ್ತನಾದ ಯೆಹೋವನೇ, ನೀನು ಈ ಜನರಿಗೂ ಮತ್ತು ಯೆರೂಸಲೇಮಿಗೂ, ‘ನಿಮಗೆ ಸಮಾಧಾನವಾಗುವುದು’ ಎಂದು ಹೇಳಿ ನಿಶ್ಚಯವಾಗಿ ಇವರನ್ನು ಬಹಳ ಮೋಸಗೊಳಿಸಿದ್ದಿ; ಖಡ್ಗವು ಪ್ರಾಣದ ಮಟ್ಟಿಗೂ ಇಳಿಯುತ್ತದಲ್ಲಾ” ಅಂದೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

10 ಆಗ ನಾನು, “ಅಯ್ಯೋ, ಸ್ವಾಮಿ ಸರ್ವೇಶ್ವರಾ, ನೀವು ನಿಶ್ಚಯವಾಗಿಯೂ ಈ ಜನರನ್ನು ಹಾಗೂ ಜೆರುಸಲೇಮಿನವರನ್ನು ಮೋಸಗೊಳಿಸಿದ್ದೀರಿ. ‘ನಿಮಗೆ ಸಮಾಧಾನವಾಗುವುದು’ ಎಂದು ಅವರಿಗೆ ಹೇಳಿದಿರಿ, ಆದರೆ ಕತ್ತಿ ಅವರ ಕುತ್ತಿಗೆಗೆ ಬಂದಿದೆ” ಎಂದೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

10 ಆಗ ನಾನು - ಅಯ್ಯೋ, ಕರ್ತನಾದ ಯೆಹೋವನೇ, ನೀನು ಈ ಜನರಿಗೂ ಯೆರೂಸಲೇವಿುಗೂ ನಿಮಗೆ ಸಮಾಧಾನವಾಗುವದೆಂದು ಹೇಳಿ ನಿಶ್ಚಯವಾಗಿ ಇವರನ್ನು ಬಹಳ ಮೋಸಗೊಳಿಸಿದ್ದೀ; ಖಡ್ಗವು ಪ್ರಾಣದ ಮಟ್ಟಿಗೂ ಇಳಿಯುತ್ತದಲ್ಲಾ ಅಂದೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

10 ಆಗ ಯೆರೆಮೀಯನೆಂಬ ನಾನು, “ನನ್ನ ಒಡೆಯನಾದ ಯೆಹೋವನೇ, ನೀನು ಯೆಹೂದ ಮತ್ತು ಜೆರುಸಲೇಮಿನ ಜನರಿಗೆ ಮೋಸ ಮಾಡಿದೆ, ‘ನೀವು ಶಾಂತಿಯಿಂದ ಇರುವಿರಿ’ ಎಂದು ನೀನು ಅವರಿಗೆ ಹೇಳಿದೆ. ಆದರೆ ಈಗ ಅವರ ಕತ್ತಿನ ಮೇಲೆ ಖಡ್ಗ ಇದೆ” ಅಂದೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 4:10
21 ತಿಳಿವುಗಳ ಹೋಲಿಕೆ  

ಆ ಜನರು ಯೆಹೋವ ದೇವರನ್ನು ಅಲ್ಲಗಳೆದಿದ್ದಾರೆ. “ಆತ ಏನು ಮಾಡಿಯಾನು? ನಮಗೆ ಕೇಡು ಬರುವುದೂ ಇಲ್ಲ, ಖಡ್ಗವಾಗಲಿ, ಕ್ಷಾಮವಾಗಲಿ ನಮ್ಮ ಕಣ್ಣಿಗೆ ಬೀಳುವುದೂ ಇಲ್ಲ,


“ಈ ಪಟ್ಟಣವನ್ನು ನನಗೋಸ್ಕರವೂ ನನ್ನ ಸೇವಕನಾದ ದಾವೀದನಿಗೋಸ್ಕರವೂ ಕಾಪಾಡಿ ಅದನ್ನು ರಕ್ಷಿಸುವೆನು.”


ಇದಲ್ಲದೆ, ದೇವರನ್ನು ಒಪ್ಪಿಕೊಳ್ಳಲು ಅವರಿಗೆ ಇಷ್ಟವಿಲ್ಲದ್ದರಿಂದ ಅಲ್ಲದ ಕೃತ್ಯಗಳನ್ನು ನಡೆಸುವವರಾಗುವಂತೆ ದೇವರು ಅನಾಚಾರದ ಮನಸ್ಸಿಗೆ ಅವರನ್ನು ಒಪ್ಪಿಸಿದರು.


ಅವರು ಇಂಥದ್ದನ್ನು ಮಾಡಿದ್ದರಿಂದ ದೇವರು ಅವರನ್ನು ಕೇವಲ ಲಜ್ಜಾಸ್ಪದವಾದ ಕಾಮಾಭಿಲಾಷೆಗೆ ಒಪ್ಪಿಸಿಬಿಟ್ಟರು. ಹೇಗೆಂದರೆ ಅವರ ಸ್ತ್ರೀಯರು ಸಹ ಸ್ವಾಭಾವಿಕವಾದ ಭೋಗವನ್ನು ಬಿಟ್ಟು, ಅಸ್ವಾಭಾವಿಕವಾದದ್ದನ್ನು ಅನುಸರಿಸಿದರು.


ಆದಕಾರಣ ಅವರು ತಮ್ಮ ಹೃದಯದ ದುರಾಶೆಗಳಂತೆ ನಡೆದು ತಮ್ಮ ದೇಹಗಳನ್ನು ಮಲಿನ ಮಾಡಿಕೊಳ್ಳಲಿ ಎಂದು ದೇವರು ಅವರನ್ನು ಅಶುದ್ಧತೆಗೆ ಒಪ್ಪಿಸಿಬಿಟ್ಟರು.


ನಾನು ಪ್ರವಾದಿಸುತ್ತಿರುವಾಗ, ಬೆನಾಯನ ಮಗನಾದ ಪೆಲಟೀಯನು ಸತ್ತನು. ಆಗ ನಾನು ಮುಖ ಕೆಳಗಾಗಿ ಬಿದ್ದು, ಗಟ್ಟಿಯಾಗಿ ಕೂಗಿ, “ಸಾರ್ವಭೌಮ ಯೆಹೋವ ದೇವರೇ, ನೀವು ಇಸ್ರಾಯೇಲಿನಲ್ಲಿ ಉಳಿದವರನ್ನು ಪೂರ್ಣವಾಗಿ ಮುಗಿಸಿಬಿಡುತ್ತೀರೋ?” ಎಂದು ಹೇಳಿದನು.


ಯುವಕರು ಮತ್ತು ವೃದ್ಧರು ಬೀದಿಗಳ ನೆಲದ ಮೇಲೆ ಮಲಗಿದ್ದಾರೆ. ನನ್ನ ಯುವಕರು, ಯುವತಿಯರು ಖಡ್ಗದಿಂದ ಹತರಾಗಿದ್ದಾರೆ. ನಿನ್ನ ಕೋಪದ ದಿನದಲ್ಲಿ ನೀನು ಅವರನ್ನು ಸಾಯಿಸಿರುವಿರಿ, ಕೊಂದುಹಾಕಿದಿರಿ, ಕನಿಕರಿಸಲಿಲ್ಲ.


“ಸಾರ್ವಭೌಮ ಯೆಹೋವ ದೇವರೇ, ಇಗೋ, ನೀವು ನಿಮ್ಮ ಮಹಾ ಬಲದಿಂದಲೂ, ನಿಮ್ಮ ಚಾಚಿದ ಕೈಯಿಂದಲೂ ಆಕಾಶವನ್ನೂ, ಭೂಮಿಯನ್ನೂ ಉಂಟುಮಾಡಿದ್ದೀರಿ. ನಿಮಗೆ ಅಸಾಧ್ಯವಾದ ಕಾರ್ಯ ಯಾವುದೂ ಇಲ್ಲ.


ಆದರೂ ನನ್ನನ್ನು ಅಸಹ್ಯಿಸುವವರಿಗೆ, ಅವರು, ‘ನಿಮಗೆ ಸಮಾಧಾನವಾಗುವುದು, ಎಂದು ಯೆಹೋವ ದೇವರು ಹೇಳಿದ್ದಾರೆ,’ ಎಂದು ಹೇಳುತ್ತಲೇ ಇದ್ದಾರೆ. ತಮ್ಮ ಹೃದಯದ ಹಟದ ಪ್ರಕಾರ ನಡೆದುಕೊಳ್ಳುವವರೆಲ್ಲರಿಗೆ ‘ನಿಮ್ಮ ಮೇಲೆ ಕೇಡು ಬರುವುದಿಲ್ಲ,’ ಎನ್ನುತ್ತಾರೆ.


ಏಕೆಂದರೆ, ಅವರು ನನ್ನ ಜನರ ಗಾಯವನ್ನು ಹಗುರವಾಗಿ ಸ್ವಸ್ಥಮಾಡಿದ್ದಾರೆ. ಸಮಾಧಾನವಿಲ್ಲದಿರುವಾಗ, “ಸಮಾಧಾನ, ಸಮಾಧಾನ,” ಎಂದು ಹೇಳುತ್ತಾರೆ.


ಅವರು ನನ್ನ ಜನರ ಗಾಯವನ್ನು ಹಗುರವಾಗಿ ಸ್ವಸ್ಥಮಾಡಿದ್ದಾರೆ. ಸಮಾಧಾನವಿಲ್ಲದಿರುವಾಗ, ‘ಸಮಾಧಾನ, ಸಮಾಧಾನ,’ ಎಂದು ಹೇಳುತ್ತಾರೆ.


“ನಿನ್ನ ಮಾರ್ಗವೂ, ನಿನ್ನ ಕ್ರಿಯೆಗಳೂ, ಇವುಗಳನ್ನು ನಿನಗೆ ಉಂಟುಮಾಡಿದವು, ಇದೇ ನಿನ್ನ ಶಿಕ್ಷೆ. ಅದು ಕಹಿಯಾದದ್ದಲ್ಲವೋ? ನಿನ್ನ ಹೃದಯಕ್ಕೆ ನಾಟುವುದಿಲ್ಲವೋ?”


ಆಗ ನಾನು, “ಹಾ, ಸಾರ್ವಭೌಮ ಯೆಹೋವ ದೇವರೇ, ಇಗೋ ನಾನು ಮಾತು ಬಲ್ಲವನಲ್ಲ, ನಾನು ಚಿಕ್ಕವನು,” ಎಂದೆನು.


ಯೆಹೋವ ದೇವರೇ, ಏಕೆ ನಮ್ಮನ್ನು ನಿಮ್ಮ ಮಾರ್ಗಗಳಿಂದ ತಪ್ಪಿಹೋಗುವಂತೆ ಅನುಮತಿಸಿದ್ದೀರಿ? ಏಕೆ ನಮ್ಮ ಹೃದಯವನ್ನು ನಿಮಗೆ ಭಯಪಡದ ಹಾಗೆ ಕಠಿಣ ಮಾಡಿದ್ದೀರಿ? ನಿಮ್ಮ ಸೇವಕರಿಗೋಸ್ಕರವೂ, ನಿಮ್ಮ ಬಾಧ್ಯರಾಗಿರುವ ಗೋತ್ರಗಳ ನಿಮಿತ್ತ ನೀವು ಹಿಂದಿರುಗಿರಿ.


ಅವರು ನೋಡುವವರಿಗೆ, “ನೋಡಬೇಡಿರಿ,” ಎಂದು ಪ್ರವಾದಿಗಳಿಗೆ, “ನಿಮಗೆ ದರ್ಶನವಾಗದಿರಲಿ,” ಎನ್ನುತ್ತಾರೆ. ಪ್ರವಾದಿಗಳಿಗೆ, ನಮಗೆ ನ್ಯಾಯವಾದವುಗಳನ್ನು ಪ್ರವಾದಿಸಬೇಡಿರಿ. ನಯವಾದವುಗಳನ್ನೇ ನುಡಿಯಿರಿ. ಮಾಯವಾದವುಗಳನ್ನೇ ಪ್ರವಾದಿಸಿರಿ ಎನ್ನುತ್ತಾರೆ.


ಭೂಲೋಕದಲ್ಲೆಲ್ಲಾ ನನ್ನ ಹಾಗೆ ಯಾರೂ ಇಲ್ಲವೆಂದು ನೀನು ತಿಳಿದುಕೊಳ್ಳುವ ಹಾಗೆ, ಈ ಸಾರಿ ನಾನು ಎಲ್ಲಾ ಉಪದ್ರವಗಳನ್ನು ನಿನ್ನ ಮೇಲೆಯೂ ನಿನ್ನ ಸೇವಕರ ಮೇಲೆಯೂ ನಿನ್ನ ಜನರ ಮೇಲೆಯೂ ಬರಮಾಡುವೆನು.


ಆಗ ಮೋಶೆಯು ಯೆಹೋವ ದೇವರ ಬಳಿಗೆ ಬಂದು, “ಸ್ವಾಮಿ, ಈ ಜನರಿಗೆ ಏಕೆ ಕಷ್ಟವನ್ನು ಕೊಟ್ಟಿದ್ದೀರಿ? ಏಕೆ ನನ್ನನ್ನು ಕಳುಹಿಸಿದಿರಿ?


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು