Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 4:11 - ಕನ್ನಡ ಸಮಕಾಲಿಕ ಅನುವಾದ

11 ಆ ಸಮಯದಲ್ಲಿ ಈ ಜನರಿಗೂ, ಯೆರೂಸಲೇಮಿಗೂ ಈ ಮಾತುಗಳನ್ನು ತಿಳಿಸಲಾಗುವುದು: “ಒಣ ಗಾಳಿಯು ಮರುಭೂಮಿಯ ಉನ್ನತ ಸ್ಥಳಗಳಿಂದ ನನ್ನ ಜನರ ಪುತ್ರಿಯರ ಕಡೆಗೆ ಬರುತ್ತದೆ. ಅದು ತೂರುವುದಕ್ಕೂ, ಶುದ್ಧಮಾಡುವುದಕ್ಕೂ ಆಗತಕ್ಕದ್ದಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

11 ಈ ಕಾಲದಲ್ಲಿ ಈ ಜನರಿಗೂ ಯೆರೂಸಲೇಮಿಗೂ ಈ ಮಾತಾಗುವುದು, “ಬಿಸಿಗಾಳಿಯು ಅರಣ್ಯದ ಬೋಳುಗುಡ್ಡಗಳಿಂದ ನನ್ನ ಪ್ರಜೆಯೆಂಬ ಯುವತಿಯ ಮೇಲೆ ಬೀಸುತ್ತದೆ; ಅದು ತೂರುವುದಕ್ಕೂ, ಶೋಧಿಸುವುದಕ್ಕೂ ಆಗದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

11 ಆ ದಿನ ಬಂದಾಗ ಈ ಜನರಿಗೂ ಜೆರುಸಲೇಮಿಗೂ ಈ ಮಾತುಗಳನ್ನು ತಿಳಿಸಲಾಗುವುದು; ಬಿಸಿಗಾಳಿ ಒಣಗಾಡಿನ ಗುಡ್ಡಗಳಿಂದ ಬೀಸಿ ದೇವಪ್ರಜೆಯೆಂಬ ಯುವತಿಯ ಮೇಲೆ ಬೀಸುವುದು. ಅದು ಹೊಟ್ಟನ್ನು ತೂರುವುದಕ್ಕೆ ಅಲ್ಲ, ಕಾಳನ್ನು ಶೋಧಿಸುವುದಕ್ಕೆ ಅಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

11 ಆ ಕಾಲದಲ್ಲಿ ಈ ಜನರಿಗೂ ಯೆರೂಸಲೇವಿುಗೂ ಈ ಮಾತಾಗುವದು - ಬಿಸಿಗಾಳಿಯು ಅರಣ್ಯದ ಬೋಳು ಗುಡ್ಡಗಳಿಂದ ನನ್ನ ಪ್ರಜೆಯೆಂಬ ಯುವತಿಯ ಮೇಲೆ ಬೀಸುತ್ತದೆ; ಅದು ತೂರುವದಕ್ಕೂ ಶೋಧಿಸುವದಕ್ಕೂ ಆಗದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

11 ಆ ಸಮಯದಲ್ಲಿ ಯೆಹೂದ ಮತ್ತು ಜೆರುಸಲೇಮಿನ ಜನರಿಗೆ ಒಂದು ಸಂದೇಶವನ್ನು ಕೊಡಲಾಗುವುದು. “ಬೋಳುಬೆಟ್ಟಗಳಿಂದ ಒಂದು ಬಿಸಿಗಾಳಿಯು ಬೀಸುವುದು. ಅದು ಮರಳುಗಾಡಿನಿಂದ ಬೀಸುವುದು. ಇದು ರೈತನು ತೂರಿ ಹೊಟ್ಟಿನಿಂದ ಕಾಳನ್ನು ಬೇರ್ಪಡಿಸಲು ಬೇಕಾಗುವ ಸೌಮ್ಯವಾದ ಗಾಳಿಯಂತಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 4:11
28 ತಿಳಿವುಗಳ ಹೋಲಿಕೆ  

ಎಫ್ರಾಯೀಮು ತನ್ನ ಸಹೋದರರಲ್ಲಿ ಫಲ ಸಮೃದ್ಧವಾಗಿದ್ದರೂ, ಕಾಡಿನಿಂದ ಯೆಹೋವ ದೇವರು ಬೀಸಮಾಡುವ ಪೂರ್ವ ಗಾಳಿಯು ಬರಲು, ಅವನ ಬುಗ್ಗೆಯು ಬತ್ತುವುದು. ಅವನ ಒರತೆಯು ಒಣಗುವುದು. ಅವನ ಬೊಕ್ಕಸಗಳ ನಿಧಿಯನ್ನು ಶತ್ರುಗಳು ಸೂರೆಮಾಡುವರು.


ಹೌದು, ನೆಟ್ಟಿರಲಾಗಿ ಅದು ಸಮೃದ್ಧಿಯಾಗಿರುವುದೇ? ಅದಕ್ಕೆ ಪೂರ್ವದಿಕ್ಕಿನ ಗಾಳಿ ಬಡಿಯುವಾಗ ಅದು ಸಂಪೂರ್ಣವಾಗಿ ಒಣಗುವುದಿಲ್ಲವೇ? ಅದು ಮೊಳೆತ ಪಾತಿಗಳಲ್ಲಿಯೇ ಒಣಗಿ ಹೋಗುವುದಿಲ್ಲವೇ?’ ”


ಮೊರವು ಅವರ ಕೈಯಲ್ಲಿದೆ, ಅವರು ತಮ್ಮ ಕಣವನ್ನು ಶುದ್ಧಮಾಡಿ ಗೋಧಿಯನ್ನು ತಮ್ಮ ಕಣಜದಲ್ಲಿ ಕೂಡಿಸುವರು. ಆದರೆ ಹೊಟ್ಟನ್ನು ಆರಿಸಲಾಗದ ಬೆಂಕಿಯಲ್ಲಿ ಸುಟ್ಟುಹಾಕುವರು,” ಎಂದು ಹೇಳಿದನು.


ಮೊರವು ಅವರ ಕೈಯಲ್ಲಿದೆ, ಅವರು ತಮ್ಮ ಕಣದಲ್ಲಿಯ ರಾಶಿಯನ್ನು ತೂರಿ ಶುದ್ಧಮಾಡಿ ಗೋಧಿಯನ್ನು ಕಣಜದಲ್ಲಿ ತುಂಬಿಕೊಂಡು, ಹೊಟ್ಟನ್ನು ಆರಿಸಲಾಗದ ಬೆಂಕಿಯಲ್ಲಿ ಸುಟ್ಟುಹಾಕುವರು,” ಎಂದು ಹೇಳಿದನು.


ಆದ್ದರಿಂದ ಅವರು ಪ್ರಾತಃಕಾಲದ ಮಂಜಿನ ಹಾಗೆಯೂ, ಬೇಗನೆ ಮಾಯವಾಗುವ ಇಬ್ಬನಿಯ ಹಾಗೆಯೂ, ಸುಳಿಗಾಳಿಯು ಕಣದಿಂದ ಬಡಿದುಕೊಂಡು ಹೋಗುವ ಹೊಟ್ಟಿನ ಹಾಗೆಯೂ, ಚಿಮಿಣಿಯಿಂದ ಹೊರಡುವ ಹೊಗೆಯ ಹಾಗೆಯೂ ಇರುವರು.


ಆದರೆ ಆ ಲತೆಯನ್ನು ರೋಷದಲ್ಲಿ ಕಿತ್ತು ನೆಲಕ್ಕೆ ಬಿಸಾಡಿದರು. ಪೂರ್ವದಿಕ್ಕಿನ ಗಾಳಿಯು ಅದರ ಫಲವನ್ನು ಒಣಗಿಸಿತು. ಅದರ ಬಲವಾದ ಬಳ್ಳಿಗಳು ಮುರಿದು ಒಣಗಿಹೋದವು. ಬೆಂಕಿಯು ಅವುಗಳನ್ನು ಸುಟ್ಟುಹಾಕಿತು.


ನನ್ನ ಜನರ ಅಕ್ರಮದ ದಂಡನೆಯು ಸೊದೋಮಿನ ಪಾಪದ ದಂಡನೆಗಿಂತ ದೊಡ್ಡದು. ಅದು ಕ್ಷಣಮಾತ್ರದಲ್ಲಿ ಕೆಡವಿ ಹಾಕಲಾಯಿತು ಮತ್ತು ಅವಳಿಗೆ ಸಹಾಯಮಾಡಲು ಯಾವ ಕೈಗಳೂ ಇರಲಿಲ್ಲ.


ನರಿಗಳೂ ತಮ್ಮ ಕೆಚ್ಚಲನ್ನು ಹೊರ ಎಳೆದು ತಮ್ಮ ಮರಿಗಳಿಗೆ ಹಾಲು ಕುಡಿಸುತ್ತವೆ. ಆದರೆ ನನ್ನ ಜನರು ಅರಣ್ಯದಲ್ಲಿರುವ ಉಷ್ಟ್ರಪಕ್ಷಿಗಳ ಹಾಗೆ ಕ್ರೂರವಾಗಿದ್ದಾರೆ.


ನನ್ನ ಜನರ ನಾಶದ ನಿಮಿತ್ತವಾಗಿ, ನನ್ನ ಕಣ್ಣಿನಿಂದ ನೀರು ನದಿಯಾಗಿ ಹರಿದು ಹೋಗುತ್ತದೆ.


ನನ್ನ ಕಣ್ಣುಗಳು ಕಣ್ಣೀರಿನಿಂದ ಕುಂದಿ ಹೋಗುತ್ತವೆ. ನನ್ನ ಆತ್ಮವು ಕಳವಳಗೊಂಡಿದೆ. ನನ್ನ ಹೃದಯವು ನೆಲದ ಮೇಲೆ ಹರಡಿದೆ. ಏಕೆಂದರೆ ನನ್ನ ಜನರು ನಾಶವಾಗಿದ್ದಾರೆ. ಮಕ್ಕಳೂ ಶಿಶುಗಳೂ ನಗರದ ಬೀದಿಗಳಲ್ಲಿ ಮೂರ್ಛೆ ಹೋಗಿದ್ದಾರೆ.


ಇಗೋ, ಯೆಹೋವ ದೇವರ ಬಿರುಗಾಳಿಯು ಉಗ್ರವಾಗಿ ಹೊರಟಿದೆ. ಅಘೋರವಾದ ಆ ಬಿರುಗಾಳಿಯು ದುಷ್ಟರ ತಲೆಯ ಮೇಲೆ ಕಠಿಣವಾಗಿ ಬೀಳುವುದು


“ಆದ್ದರಿಂದ ನೀನು ಈ ಮಾತನ್ನು ಅವರಿಗೆ ಹೇಳಬೇಕು. “ ‘ನನ್ನ ಕಣ್ಣುಗಳು ರಾತ್ರಿ ಹಗಲು ಬಿಡದೆ ಕಣ್ಣೀರು ಸುರಿಸಲಿ. ನನ್ನ ಜನರ ಮಗಳಾದ ಕನ್ಯೆಯು ಕ್ರೂರವಾದ ಏಟಿನಿಂದಲೂ, ದೊಡ್ಡ ಪೆಟ್ಟಿನಿಂದಲೂ ಗಾಯಗೊಂಡಿದ್ದಾಳೆ.


ಆದ್ದರಿಂದ ಸೇನಾಧೀಶ್ವರ ಯೆಹೋವ ದೇವರು ಹೇಳುವುದೇನೆಂದರೆ: “ಇಗೋ, ನಾನು ಅವರನ್ನು ಕರಗಿಸಿ ಪರಿಶೋಧಿಸುತ್ತೇನೆ. ಏಕೆಂದರೆ ನನ್ನ ಜನರ ಪಾಪಗಳಿಗೋಸ್ಕರ ನಾನು ಇನ್ನೇನು ಮಾಡಲಿ?


ಓ, ನನ್ನ ತಲೆ ಚಿಲುಮೆಯೂ, ನನ್ನ ಕಣ್ಣುಗಳು ಕಣ್ಣೀರಿನ ಬುಗ್ಗೆಯಾಗಿಯೂ ಇದ್ದರೆ ಒಳ್ಳೆಯದು, ಆಗ ನನ್ನ ಜನರಲ್ಲಿ ಹತರಾದವರ ನಿಮಿತ್ತ ಹಗಲುರಾತ್ರಿ ಅಳುವೆನು.


ದೂರದೇಶದಿಂದ ನನ್ನ ಜನರು ಕೂಗುವ ಮೊರೆಯಿದು: “ಯೆಹೋವ ದೇವರು ಚೀಯೋನಿನಲ್ಲಿ ಇಲ್ಲವೋ? ಅವಳ ಅರಸನು ಅವಳಲ್ಲಿ ಇಲ್ಲವೋ?” ಎಂಬುದೇ ಆದರೂ ಅವರು ತಮ್ಮ ವಿಗ್ರಹಗಳಿಂದಲೂ, ವಿಚಿತ್ರವಾದ ವ್ಯರ್ಥತ್ವಗಳಿಂದಲೂ ನನಗೆ ಕೋಪವನ್ನೆಬ್ಬಿಸಿದ್ದು ಏಕೆ?


ನಾವೆಲ್ಲರೂ ಅಶುದ್ಧನ ಹಾಗೆ ಇದ್ದೇವೆ. ನಮ್ಮ ನೀತಿ ಕಾರ್ಯಗಳೆಲ್ಲಾ ಮೈಲಿಗೆ ವಸ್ತ್ರದ ಹಾಗೆ ಇವೆ. ನಾವೆಲ್ಲರೂ ಎಲೆಯ ಹಾಗೆ ಒಣಗಿಹೋಗಿದ್ದೇವೆ. ನಮ್ಮ ಪಾಪಗಳು ಗಾಳಿಯಂತೆ ನಮ್ಮನ್ನು ಬಡಿದುಕೊಂಡು ಹೋಗಿವೆ.


ನೀನು ಅವುಗಳನ್ನು ತೂರಲು, ಗಾಳಿಯು ಅವುಗಳನ್ನು ಬಡಿದುಕೊಂಡು ಹೋಗುವುದು. ಬಿರುಗಾಳಿಯು ಚೆಲ್ಲಾಪಿಲ್ಲಿ ಮಾಡುವುದು. ನೀನಂತೂ ಯೆಹೋವ ದೇವರಲ್ಲಿ ಸಂತೋಷಿಸಿ, ಇಸ್ರಾಯೇಲಿನ ಪರಿಶುದ್ಧರಲ್ಲಿ ಮಹಿಮೆ ಹೊಂದುವೆ.


ಯುದ್ಧದಿಂದಲೂ ಸೆರೆಯಿಂದಲೂ ಆಕೆಯೊಂದಿಗೆ ತೃಪ್ತರಾಗಿರಿ. ಆತನು ತನ್ನ ಕೋಪದ ಪೆಟ್ಟಿನಿಂದ ಪೂರ್ವದ ಬಿರುಗಾಳಿ ಬೀಸುವಾಗ ಆಗುವಂತೆ, ಆಕೆಯನ್ನು ಹೊರಗೋಡಿಸುವನು.


ಹೀಗಿರಲು ನಾನು ಹೀಗೆ ಹೇಳಿದೆನು, “ನನ್ನ ಕಡೆಯಿಂದ ದೃಷ್ಟಿ ತಿರುಗಿಸಿರಿ. ಬಹು ಸಂಕಟದಿಂದ ನಾನು ಅಳುವೆನು. ಏಕೆಂದರೆ ನನ್ನ ಜನವೆಂಬ ಯುವತಿಯು ಹಾಳಾದ ವಿಷಯದಲ್ಲಿ ನನ್ನನ್ನು ಸಂತೈಸುವುದಕ್ಕೆ ತವಕಗೊಳ್ಳದಿರಿ.”


ಕನಿಕರ ತುಂಬಿದ ಸ್ತ್ರೀಯರ ಕೈಗಳು ತಮ್ಮ ಸ್ವಂತ ಮಕ್ಕಳನ್ನೇ ಬೇಯಿಸಿದವು. ಇವರು ನನ್ನ ಜನರ ನಾಶದಲ್ಲಿ ಅವರಿಗೆ ಆಹಾರವಾದರು.


ಅವರು ದುಷ್ಟರ ಮೇಲೆ ಬೆಂಕಿಯನ್ನೂ ಗಂಧಕವನ್ನೂ ಉರಿಗಾಳಿಯನ್ನೂ ಸುರಿಸಲಿ; ಇವೇ ದುಷ್ಟರ ಪಾಲಾಗಿರಲಿ.


ಅದಕ್ಕಿಂತ ಬಿರುಸಾದ ಗಾಳಿ ಆ ಸ್ಥಳಗಳಿಂದ ನನ್ನ ಬಳಿಗೆ ಬರುವುದು. ಈಗಲೂ ನಾನು ಅವರಿಗೆ ವಿರೋಧವಾಗಿ ನ್ಯಾಯತೀರ್ಪುಗಳನ್ನು ಕೊಡುವೆನು.”


“ಅಡವಿಯ ಗಾಳಿಯಿಂದ ಹಾರಿಹೋಗುವ ಹೊಟ್ಟಿನಂತೆ ಅವರನ್ನು ಚದರಿಸುವೆನು.


ನಾನು ಬಾಬಿಲೋನಿಯರನ್ನು ಎಬ್ಬಿಸುತ್ತೇನೆ. ಅವರು ಉಗ್ರ ಮತ್ತು ಸಾಹಸಿ ಜನರು. ತಮ್ಮದಲ್ಲದ ನಿವಾಸಗಳನ್ನು ವಶಮಾಡಿಕೊಳ್ಳುವುದಕ್ಕೆ ವಿಶಾಲವಾದ ದೇಶದಲ್ಲಿ ಹಾದುಹೋಗುವರು.


ಬಿರುಗಾಳಿಯಂತೆ ಕೊಚ್ಚಿಕೊಳ್ಳುತ್ತಾ ಮುಂದೆ ಸಾಗುವರು. ಅಪರಾಧಿ ಜನರವರು. ಅವರ ಸ್ವಂತ ಬಲ, ಅವರ ದೇವರು.”


ಗಾಳಿಯು ಅವರನ್ನು ತನ್ನ ರೆಕ್ಕೆಗಳಿಂದ ಬಂಧಿಸಿದೆ. ಅವರು ತಮ್ಮ ಬಲಿಗಳಿಂದ ನಾಚಿಕೆಪಡುವರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು