Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 4:19 - ಕನ್ನಡ ಸಮಕಾಲಿಕ ಅನುವಾದ

19 ಓ, ನನ್ನ ಕರುಳು, ನನ್ನ ಕರುಳು! ನಾನು ನೋವಿನಿಂದ ನರಳುತ್ತೇನೆ. ನನ್ನ ಹೃದಯವು ನನ್ನಲ್ಲಿ ತಳಮಳಗೊಂಡಿದೆ. ನಾನು ಮೌನವಾಗಿರಲಾರೆನು; ಓ ನನ್ನ ಪ್ರಾಣವೇ, ತುತೂರಿ ಶಬ್ದವನ್ನೂ, ಯುದ್ಧದ ಆರ್ಭಟವನ್ನೂ ಕೇಳುತ್ತಿರುವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

19 ಹಾ, ನನ್ನ ಕರುಳು! ಕರುಳು! ಯಾತನೆಪಡುತ್ತದೆ; ಆಹಾ, ನನ್ನ ಗುಂಡಿಗೆಯ ಪಕ್ಕಗಳು! ನನ್ನ ಹೃದಯವು ನನ್ನೊಳಗೆ ತಳಮಳಗೊಂಡಿದೆ! ನಾನು ಬಾಯಿಮುಚ್ಚಿಕೊಂಡಿರಲಾರೆ; ನನ್ನ ಆತ್ಮವೇ, ನೀನು ತುತ್ತೂರಿಯ ಶಬ್ದವನ್ನೂ, ಯುದ್ಧದ ಘೋಷವನ್ನೂ ಕೇಳುತ್ತಿಯಲ್ಲಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

19 ಅಯ್ಯೋ, ನನ್ನ ಕರುಳು ಯಾತನೆಯಿಂದ ಕಿತ್ತುಬರುವಂತಿದೆ. ಅಕಟಾ ! ನನ್ನ ಗುಂಡಿಗೆಯ ಪಕ್ಕೆಗಳು ಸೀಳುವಂತಿದೆ, ಹೃದಯ ತಳಮಳಗೊಂಡಿದೆ ! ಇನ್ನು ಬಾಯಿಮುಚ್ಚಿಕೊಂಡಿರಲು ನನ್ನಿಂದಾಗದು; ನನ್ನ ಮನವೇ, ಕಾಳಗದ ಕಹಳೆಯನ್ನೂ ಯುದ್ಧದ ಕೋಲಾಹಲವನ್ನೂ ಕೇಳುತ್ತಿರುವೆ, ಅಲ್ಲವೆ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

19 ಹಾ, ನನ್ನ ಕರುಳು! ಕರುಳು! ಯಾತನೆಪಡುತ್ತೇನೆ; ಆಹಾ, ನನ್ನ ಗುಂಡಿಗೆಯ ಪಕ್ಕಗಳು! ನನ್ನ ಹೃದಯವು ನನ್ನೊಳಗೆ ತಳಮಳಗೊಂಡಿದೆ! ನಾನು ಬಾಯಿಮುಚ್ಚಿಕೊಂಡಿರಲಾರೆ; ನನ್ನ ಆತ್ಮವೇ, ನೀನು ತುತೂರಿಯ ಶಬ್ದವನ್ನೂ ಯುದ್ಧಘೋಷವನ್ನೂ ಕೇಳುತ್ತೀಯಲ್ಲಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

19 ಅಯ್ಯೋ, ನನ್ನ ದುಃಖ ಮತ್ತು ಚಿಂತೆ ನನ್ನ ಹೊಟ್ಟೆಯಲ್ಲಿ ಸಂಕಟವನ್ನು ಉಂಟುಮಾಡುತ್ತಿವೆ. ನೋವಿನಿಂದ ನಾನು ಬಾಗಿಹೋಗಿದ್ದೇನೆ. ನಾನು ತುಂಬ ಹೆದರಿಕೊಂಡಿದ್ದೇನೆ. ನನ್ನ ಹೃದಯವು ಒಳಗೆ ತಳಮಳಗೊಳ್ಳುತ್ತಿದೆ. ನಾನು ಬಾಯಿ ಮುಚ್ಚಿಕೊಂಡಿರಲಾರೆ. ಏಕೆಂದರೆ, ನಾನು ತುತ್ತೂರಿಯ ಶಬ್ದವನ್ನು ಕೇಳಿದ್ದೇನೆ. ಆ ತುತ್ತೂರಿಯು ಸೈನ್ಯವನ್ನು ಯುದ್ಧಕ್ಕೆ ಕರೆಯುತ್ತಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 4:19
48 ತಿಳಿವುಗಳ ಹೋಲಿಕೆ  

ನಾನು ಕೇಳಿದಾಗ ನನ್ನ ಹೃದಯ ಬಡಿದುಕೊಂಡಿತು; ಆ ಶಬ್ದಕ್ಕೆ ನನ್ನ ತುಟಿಗಳು ಕದಲಿದವು; ನನ್ನ ಎಲುಬುಗಳು ಕ್ಷಯಗೊಂಡವು; ನನ್ನ ಕಾಲುಗಳು ನಡುಗಿದವು; ಆದರೂ ನಮ್ಮ ಮೇಲೆ ದಾಳಿಮಾಡುವ ಜನರ ಮೇಲೆ ನಾಶನ ಬರುವುದನ್ನು ನೋಡಲು ತಾಳ್ಮೆಯಿಂದ ಕಾದಿರುವೆನು.


ಹೀಗಿರಲು ನಾನು ಹೀಗೆ ಹೇಳಿದೆನು, “ನನ್ನ ಕಡೆಯಿಂದ ದೃಷ್ಟಿ ತಿರುಗಿಸಿರಿ. ಬಹು ಸಂಕಟದಿಂದ ನಾನು ಅಳುವೆನು. ಏಕೆಂದರೆ ನನ್ನ ಜನವೆಂಬ ಯುವತಿಯು ಹಾಳಾದ ವಿಷಯದಲ್ಲಿ ನನ್ನನ್ನು ಸಂತೈಸುವುದಕ್ಕೆ ತವಕಗೊಳ್ಳದಿರಿ.”


ಆದ್ದರಿಂದ ಮೋವಾಬಿನ ನಿಮಿತ್ತ ನನ್ನ ಹೃದಯವೂ, ಕೀರ್ ಹೆರೆಸೆಥ್ ನಿಮಿತ್ತ ನನ್ನ ಅಂತರಂಗವೂ ಕಿನ್ನರಿಯಂತೆ ಮಿಡಿಯುತ್ತಾ ದುಃಖಿಸುತ್ತಿದೆ.


ಬೆಟ್ಟಗಳಿಗೋಸ್ಕರ ನಾನು ಅಳುವಿಕೆಯನ್ನೂ, ದುಃಖವನ್ನೂ, ಮರುಭೂಮಿಯ ಸ್ಥಳಗಳಿಗೋಸ್ಕರ ಗೋಳಾಟವನ್ನೂ ಎತ್ತುವೆನು. ಅವುಗಳ ಮೂಲಕ ಹಾದುಹೋಗದಂತೆ ಅವು ಸುಟ್ಟುಹೋಗಿದೆ. ದನಗಳ ಕೂಗು ಕಿವಿಗೆ ಬೀಳುವುದಿಲ್ಲ. ಆಕಾಶದ ಪಕ್ಷಿಗಳೂ, ಮೃಗಗಳೂ ಸಹ ಓಡಿ ಹೋಗಿವೆ.


ಓ, ನನ್ನ ತಲೆ ಚಿಲುಮೆಯೂ, ನನ್ನ ಕಣ್ಣುಗಳು ಕಣ್ಣೀರಿನ ಬುಗ್ಗೆಯಾಗಿಯೂ ಇದ್ದರೆ ಒಳ್ಳೆಯದು, ಆಗ ನನ್ನ ಜನರಲ್ಲಿ ಹತರಾದವರ ನಿಮಿತ್ತ ಹಗಲುರಾತ್ರಿ ಅಳುವೆನು.


ಆದ್ದರಿಂದ ನನ್ನ ಸೊಂಟಗಳು ನೋವಿನಿಂದ ತುಂಬಿವೆ. ಹೆರುವವಳ ವೇದನೆಗಳಂತಿರುವ ವೇದನೆಗಳು ನನ್ನನ್ನು ಹಿಡಿದಿವೆ. ಕಿವಿ ಕಿವುಡಾಗುವಷ್ಟು ಸಂಕಟಪಡುತ್ತೇನೆ. ಕಣ್ಣು ಕುರುಡಾಗುವಷ್ಟು ಭ್ರಾಂತನಾಗಿದ್ದೇನೆ.


ನನ್ನ ಮಕ್ಕಳೇ, ಕ್ರಿಸ್ತ ಯೇಸುವು ನಿಮ್ಮಲ್ಲಿ ರೂಪುಗೊಳ್ಳುವ ತನಕ ನಾನು ನಿಮಗಾಗಿ ಪುನಃ ಪ್ರಸವವೇದನೆ ಪಡುತ್ತೇನೆ.


ದಾನಿಯೇಲನಾದ ನಾನು ಬಳಲಿ ಕೆಲವು ದಿನಗಳವರೆಗೂ ಅಸ್ವಸ್ಥನಾದೆನು. ಅನಂತರ ನಾನು ಎದ್ದು, ಅರಸನ ಕೆಲಸ ಕಾರ್ಯಗಳನ್ನು ಮಾಡಿದೆನು. ನಾನು ಆ ದರ್ಶನದ ಬಗ್ಗೆ ಬೆಚ್ಚಿಬೆರಗಾದೆನು. ಅದರ ಅರ್ಥವನ್ನೇ ಗ್ರಹಿಸಿಕೊಳ್ಳಲಾಗಲಿಲ್ಲ.


“ದಾನಿಯೇಲನೆಂಬ ನಾನು ನನ್ನ ಆತ್ಮದಲ್ಲಿ ನೊಂದುಕೊಂಡೆನು. ನನ್ನ ಮನಸ್ಸಿನಲ್ಲಿ ಹಾದುಹೋದ ದರ್ಶನಗಳ ನಿಮಿತ್ತ ಕಳವಳಗೊಂಡೆನು.


ನನ್ನ ಹೃದಯವು ಮೋವಾಬಿನ ನಿಮಿತ್ತ ಕೂಗುತ್ತದೆ. ಅಲ್ಲಿಂದ ಪಲಾಯನವಾದವರು ಚೋಗರ್ ಕಡೆಗೂ ಎಗ್ಲತ್ ಶೆಲಿಶೀಯ ಕಡೆಗೂ ಓಡಿಹೋಗುವರು. ಲೂಹೀತ್ ದಿಣ್ಣೆಯನ್ನು ಅಳುತ್ತಾ ಹತ್ತುವರು. ಏಕೆಂದರೆ ಹೊರೊನಯಿಮ್ ಊರಿನ ದಾರಿಯಲ್ಲಿ ನಡೆಯುತ್ತಾ ನಾಶವಾದೆವಲ್ಲಾ ಎಂದು ದನಿಗೈಯುವರು.


ನನ್ನ ಮನವೇ, ನೀನು ವಿಶ್ರಾಂತಿಯಿಂದಿರು; ಏಕೆಂದರೆ ಯೆಹೋವ ದೇವರು ನಿನಗೆ ಉಪಕಾರಿಯಾಗಿದ್ದಾರೆ.


ಪ್ರಿಯರೇ, ನನ್ನ ಹೃದಯದ ಬಯಕೆಯು, ನಾನು ದೇವರಿಗೆ ಸಲ್ಲಿಸುವ ಪ್ರಾರ್ಥನೆಯು ಇಸ್ರಾಯೇಲರು ರಕ್ಷಣೆ ಹೊಂದಬೇಕೆಂಬುದೇ.


ಪಟ್ಟಣದಲ್ಲಿ ಕಹಳೆಯನ್ನು ಊದಿದರೆ, ಜನರು ಹೆದರುವುದಿಲ್ಲವೇ? ಯೆಹೋವ ದೇವರಿಂದಲ್ಲದೆ ಪಟ್ಟಣಕ್ಕೆ ಕೇಡು ತಟ್ಟುವುದುಂಟೇ?


“ಇಷ್ಟರಲ್ಲಿ ಇದರ ಪ್ರಸ್ತಾಪವು ಮುಗಿಯಿತು. ದಾನಿಯೇಲನೆಂಬ ನನಗೆ ನನ್ನ ಆಲೋಚನೆಗಳು ಬಹಳವಾಗಿ ಕಳವಳಪಡಿಸಿದವು. ನನ್ನ ಮುಖವು ಕಳೆಗುಂದಿತು. ಆದರೂ ಈ ಸಂಗತಿಯನ್ನು ನನ್ನ ಹೃದಯದಲ್ಲಿ ಇಟ್ಟುಕೊಂಡೆನು.”


ನನ್ನ ಕಣ್ಣುಗಳು ಕಣ್ಣೀರಿನಿಂದ ಕುಂದಿ ಹೋಗುತ್ತವೆ. ನನ್ನ ಆತ್ಮವು ಕಳವಳಗೊಂಡಿದೆ. ನನ್ನ ಹೃದಯವು ನೆಲದ ಮೇಲೆ ಹರಡಿದೆ. ಏಕೆಂದರೆ ನನ್ನ ಜನರು ನಾಶವಾಗಿದ್ದಾರೆ. ಮಕ್ಕಳೂ ಶಿಶುಗಳೂ ನಗರದ ಬೀದಿಗಳಲ್ಲಿ ಮೂರ್ಛೆ ಹೋಗಿದ್ದಾರೆ.


ಇವುಗಳ ನಿಮಿತ್ತ ನಾನು ಅಳುತ್ತೇನೆ. ನನ್ನ ಕಣ್ಣೀರು ಕಣ್ಣಿನಿಂದ ತುಂಬಿ ಹರಿಯುತ್ತದೆ. ಏಕೆಂದರೆ ನನ್ನನ್ನು ಆದರಿಸುವವರೂ, ನನ್ನ ಪ್ರಾಣವನ್ನು ಬದುಕಿಸುವ ಆದರಿಕರೂ ನನ್ನಿಂದ ದೂರವಾಗಿದ್ದಾರೆ. ನನ್ನ ಮಕ್ಕಳು ಹಾಳಾಗಿದ್ದಾರೆ. ಏಕೆಂದರೆ ನನ್ನ ಶತ್ರುವು ಜಯಿಸಿದ್ದಾನೆ.


ಪ್ರವಾದಿಗಳ ನಿಮಿತ್ತ: ನನ್ನ ಹೃದಯವು ನನ್ನಲ್ಲಿ ಮುರಿದಿದೆ. ನನ್ನ ಎಲುಬುಗಳೆಲ್ಲಾ ಕದಲುತ್ತವೆ. ಯೆಹೋವ ದೇವರ ನಿಮಿತ್ತವೂ, ಆತನ ಪರಿಶುದ್ಧ ವಾಕ್ಯಗಳ ನಿಮಿತ್ತವೂ, ಮತ್ತನಾದ ಮನುಷ್ಯನ ಹಾಗೆಯೂ, ದ್ರಾಕ್ಷಾರಸಕ್ಕೆ ಒಳಗಾದ ಪುರುಷನ ಹಾಗೆಯೂ ಇದ್ದೇನೆ.


“ಆಗ ನಾನು ಆತನನ್ನು ಕುರಿತು ಏನೂ ಹೇಳುವುದಿಲ್ಲ. ಆತನ ಹೆಸರಿನಲ್ಲಿ ಇನ್ನು ಮಾತನಾಡುವುದೇ ಇಲ್ಲ,” ಎಂದು ಅಂದುಕೊಂಡೆನು. ಆದರೆ ಆತನ ವಾಕ್ಯವು ನನ್ನ ಎಲುಬುಗಳಲ್ಲಿ ಮುಚ್ಚಲಾಗಿರುವ ಸುಡುವ ಬೆಂಕಿಯ ಹಾಗೆ ನನ್ನ ಹೃದಯದಲ್ಲಿ ಇತ್ತು. ಬಿಗಿ ಹಿಡಿದು ದಣಿದೆನು. ನನ್ನಿಂದ ಆಗದೆ ಹೋಯಿತು.


ನೀವು ಕೇಳದಿದ್ದರೆ, ನನ್ನ ಆತ್ಮವು ಗುಟ್ಟಾದ ಸ್ಥಳದಲ್ಲಿ ನಿಮ್ಮ ಗರ್ವದ ನಿಮಿತ್ತ ಗೋಳಾಡುವುದು, ಯೆಹೋವ ದೇವರ ಮಂದೆಯು ಸೆರೆಯಾಗಿ ಹೋದದ್ದರಿಂದ ಬಹಳವಾಗಿ ಅಳುವೆನು. ನನ್ನ ನೇತ್ರವು ಅಶ್ರುಧಾರೆಯನ್ನು ಸುರಿಸುವುದು.


ಎಷ್ಟರವರೆಗೆ ನಾನು ಯುದ್ಧದ ಧ್ವಜವನ್ನು ನೋಡುತ್ತಿರಲಿ? ತುತೂರಿಯ ಶಬ್ದವನ್ನು ಎಷ್ಟರವರೆಗೆ ನಾನು ಕೇಳಲಿ?


“ಯೆಹೂದದಲ್ಲಿ ಪ್ರಚಾರಪಡಿಸಿರಿ, ಯೆರೂಸಲೇಮಿನಲ್ಲಿ ಪ್ರಕಟಿಸಿರಿ, ‘ಇಡೀ ದೇಶದಲ್ಲಿ ತುತೂರಿ ಊದಿರಿ!’ ಎಂದು ಹೇಳಿರಿ. ಗಟ್ಟಿಯಾಗಿ ಹೀಗೆ ಕೂಗಿರಿ, ‘ಕೂಡಿಕೊಂಡು ಕೋಟೆಯುಳ್ಳ ಪಟ್ಟಣಗಳಲ್ಲಿ ಪ್ರವೇಶಿಸೋಣ!’ ಎಂದು ಹೇಳಿರಿ.


ಯೆಹೋವ ದೇವರನ್ನು ಸ್ತುತಿಸಿರಿ. ನನ್ನ ಪ್ರಾಣವೇ, ಯೆಹೋವ ದೇವರನ್ನು ಸ್ತುತಿಸು.


ನಿಮ್ಮ ನಿಯಮವನ್ನು ಕೈಗೊಳ್ಳದೇ ಇರುವಾಗ ನನ್ನ ಕಣ್ಣಿನಿಂದ ಕಣ್ಣೀರು ಧಾರೆಯಾಗಿ ಹರಿಯುತ್ತಿವೆ.


ನಿಮ್ಮ ನಿಯಮವನ್ನು ಬಿಟ್ಟುಬಿಡುವ ದುಷ್ಟರ ನಿಮಿತ್ತ, ರೋಷವು ನನ್ನನ್ನು ಆವರಿಸಿಕೊಂಡಿದೆ.


ನನ್ನ ಮನವೇ, ಯೆಹೋವ ದೇವರನ್ನು ಕೊಂಡಾಡು; ನನ್ನ ಅಂತರಾತ್ಮವೇ ಅವರ ಪರಿಶುದ್ಧ ನಾಮವನ್ನು ಸ್ತುತಿಸು.


ನಾನು ಯೆಹೋವ ದೇವರಿಗೆ, “ನೀವೇ ನನ್ನ ಕರ್ತ; ನಿಮ್ಮನ್ನು ಬಿಟ್ಟು ನನಗಿಲ್ಲ ಒಳಿತು,” ಎಂದು ಹೇಳಿದೆನು.


ಕೀಷೋನ್ ನದಿಯು, ಆ ಹಳೆಯದಾದ ಕೀಷೋನ್ ನದಿಯು ಅವರನ್ನು ಬಡಿದುಕೊಂಡು ಹೋಯಿತು. ನನ್ನ ಪ್ರಾಣವೇ, ನೀನು ಬಲವನ್ನು ತುಳಿದು ಹಾಕಿದೆ.


ನಿಮ್ಮ ದೇಶದಲ್ಲಿ ನಿಮ್ಮನ್ನು ಉಪದ್ರವಪಡಿಸುವ ವೈರಿಗೆ ವಿರೋಧವಾಗಿ ಯುದ್ಧಕ್ಕೆ ಹೊರಡುವಾಗ ಜನರನ್ನು ಎಚ್ಚರಿಸುವಂತೆ ತುತೂರಿಗಳನ್ನು ಆರ್ಭಟವಾಗಿ ಊದಬೇಕು. ಆಗ ನಿಮ್ಮ ದೇವರಾದ ಯೆಹೋವ ದೇವರು ನಿಮ್ಮನ್ನು ನೆನಪು ಮಾಡಿಕೊಂಡು ಶತ್ರುಗಳಿಂದ ನಿಮ್ಮನ್ನು ಬಿಡಿಸುವನು.


ನನ್ನ ಮನವೇ, ಅವರ ಆಲೋಚನೆಗೆ ಒಳಪಡಬೇಡ. ನನ್ನ ಪ್ರಾಣವೇ, ಅವರ ಕೂಟಗಳಲ್ಲಿ ಸೇರಬೇಡ. ಅವರು ತಮ್ಮ ಕೋಪದಲ್ಲಿ ಮನುಷ್ಯರನ್ನು ಕೊಂದರು, ಮದದಿಂದ ಎತ್ತುಗಳನ್ನು ಊನಪಡಿಸಿದರು.


ತುತೂರಿಯನ್ನು ಸ್ಪಷ್ಟವಾಗಿ ಊದದಿದ್ದರೆ, ಯಾರು ತಾನೇ ಯುದ್ಧಕ್ಕೆ ಸನ್ನದ್ಧರಾಗುವರು?


ಅದರ ಕೀರ್ತಿಯನ್ನು ಕೇಳಿದ್ದೇವೆ; ನಮ್ಮ ಕೈಗಳು ಜೋಲಾಡುತ್ತವೆ, ಸಂಕಟವೂ, ಹೆರುವವಳಂತಿರುವ ನೋವೂ ನಮ್ಮನ್ನು ಹಿಡಿಯಿತು.


ನನ್ನ ಜನರು ತುಳಿತಕ್ಕೆ ಒಳಗಾದದ್ದರಿಂದ ನಾನೂ ತುಳಿತಕ್ಕೆ ಒಳಗಾದೆನು. ದುಃಖಿಸಿದೆನು. ಭಯವು ನನ್ನನ್ನು ಹಿಡಿಯಿತು.


ನೀವು, ‘ಇಲ್ಲ, ನಾವು ಈಜಿಪ್ಟ್ ದೇಶಕ್ಕೆ ಹೋಗುತ್ತೇವೆ; ಅಲ್ಲಿ ನಾವು ಯುದ್ಧವನ್ನು ನೋಡುವುದಿಲ್ಲ, ತುತೂರಿಯ ಶಬ್ದವನ್ನು ಕೇಳುವುದಿಲ್ಲ, ರೊಟ್ಟಿಯ ವಿಷಯ ಕ್ಷಾಮವಾಗುವುದಿಲ್ಲ.’ ಅಲ್ಲಿ ವಾಸಮಾಡುವೆವೆಂದು ಹೇಳಿದರೆ,


ಆದ್ದರಿಂದ ಇಗೋ, ದಿನಗಳು ಬರುವುವು,” ಎಂದು ಯೆಹೋವ ದೇವರು ಹೇಳುತ್ತಾರೆ. “ಆಗ ನಾನು ಅಮ್ಮೋನನ ಮಕ್ಕಳು ರಬ್ಬಾದಲ್ಲಿ ಯುದ್ಧದ ಆರ್ಭಟವನ್ನು ಕೇಳುವಂತೆ ಮಾಡುವೆನು; ಅದು ಹಾಳು ದಿಬ್ಬವಾಗುವುದು; ಅದಕ್ಕೆ ಸೇರಿದ ಗ್ರಾಮಗಳು ಬೆಂಕಿಯಿಂದ ಸುಟ್ಟುಹೋಗುವುವು. ಆಗ ಇಸ್ರಾಯೇಲು ತನ್ನ ಬಾಧ್ಯಸ್ಥರ ಬಾಧ್ಯವನ್ನು ಹೊಂದುವುದು,” ಎಂದು ಯೆಹೋವ ದೇವರು ಹೇಳುತ್ತಾರೆ.


ಯುದ್ಧದ ಶಬ್ದವೂ, ದೊಡ್ಡ ನಾಶನವೂ ದೇಶದಲ್ಲಿ ಇರುವುದು.


ಆಗ ಬೇಲ್ತೆಶಚ್ಚರನೆಂಬ ಹೆಸರುಳ್ಳ ದಾನಿಯೇಲನು ಒಂದು ಗಳಿಗೆ ವಿಸ್ಮಿತನಾಗಿ ತನ್ನ ಆಲೋಚನೆಗಳಲ್ಲಿ ಕಳವಳಗೊಂಡನು. ಆಗ ಅರಸನು ಮಾತನಾಡಿ, “ಬೇಲ್ತೆಶಚ್ಚರನೇ, ಕನಸಾದರೂ, ಅದರ ಅರ್ಥವಾದರೂ ನಿನ್ನನ್ನು ಕಳವಳಪಡಿಸದಿರಲಿ,” ಎಂದನು. ಬೇಲ್ತೆಶಚ್ಚರನು ಉತ್ತರವಾಗಿ, “ನನ್ನ ಒಡೆಯನೇ, ಆ ಕನಸು ನಿನ್ನ ವೈರಿಗಳಿಗೂ, ಅದರ ಅರ್ಥವು ನಿನ್ನ ಶತ್ರುಗಳಿಗೂ ಆಗಲಿ.


ಆಗ ಅವನು ತನ್ನ ತಂದೆಗೆ, “ನನ್ನ ತಲೆ, ನನ್ನ ತಲೆ,” ಎಂದನು. ತಂದೆಯು ತನ್ನ ಸೇವಕನಿಗೆ, “ಅವನನ್ನು ಅವನ ತಾಯಿಯ ಬಳಿಗೆ ಎತ್ತಿಕೊಂಡು ಹೋಗು,” ಎಂದನು.


ದೇವರ ಮನುಷ್ಯನಾದ ಎಲೀಷನು ಹಜಾಯೇಲನು ಮುಜುಗರಕ್ಕೆ ಒಳಗಾಗುವವರೆಗೂ ಅವನನ್ನು ದಿಟ್ಟಿಸಿ ನೋಡುತ್ತಿದ್ದನು. ನಂತರ ದೇವರ ಮನುಷ್ಯನು ಅಳತೊಡಗಿದನು.


ನನ್ನ ಹೃದಯವು ಬಡಿದುಕೊಳ್ಳುತ್ತಿದೆ, ಗಾಬರಿಗೊಂಡಿದೆ. ನಡುಗುವಿಕೆಯು ನನ್ನನ್ನು ಕಳವಳಗೊಳಿಸಿದೆ, ನಾ ಬಯಸಿದ ಸಂಜೆಯೇ ನನಗೆ ಭಯಭ್ರಾಂತಿಯಾಗಿ ಮಾಡಿದ್ದಾನೆ.


ದುಃಖದ ನಿಮಿತ್ತ ನನ್ನನ್ನು ಆಧರಿಸಿ ಕೊಳ್ಳಲು ನಾನು ಮನಸ್ಸು ಮಾಡಿದಾಗ, ನನ್ನ ಹೃದಯವು ನನ್ನಲ್ಲಿ ಕುಂದಿಹೋಗಿದೆ.


ಯೆಹೋವ ದೇವರೇ ನೋಡು, ಏಕೆಂದರೆ ನಾನು ಇಕ್ಕಟ್ಟಿನಲ್ಲಿದ್ದೇನೆ. ನನ್ನ ಆತ್ಮವು ಕಳವಳಗೊಂಡಿದೆ. ನನ್ನ ಹೃದಯವು ನನ್ನೊಂದಿಗೆ ತಿರುಗಿಕೊಂಡಿದೆ. ಏಕೆಂದರೆ ನಾನು ಘೋರವಾಗಿ ಬಿದ್ದಿದ್ದೇನೆ. ಹೊರಗೆ ಖಡ್ಗದಿಂದ ಸಂಹಾರ, ಮನೆಯೊಳಗೆ ಮರಣ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು