Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 4:2 - ಕನ್ನಡ ಸಮಕಾಲಿಕ ಅನುವಾದ

2 ನೀನು ಸತ್ಯದಿಂದಲೂ ನ್ಯಾಯದಿಂದಲೂ ನೀತಿಯಿಂದಲೂ, ‘ಯೆಹೋವ ದೇವರ ಜೀವದಾಣೆ,’ ಎಂದು ಪ್ರಮಾಣ ಮಾಡುವೆ. ಆಗ ರಾಷ್ಟ್ರಗಳೆಲ್ಲ ನನ್ನಿಂದ ಆಶೀರ್ವಾದ ಪಡೆಯ ಬಯಸುವರು. ನನ್ನಲ್ಲಿಯೇ ಹೆಮ್ಮೆಪಡುವರು.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

2 ‘ಯೆಹೋವನ ಜೀವದಾಣೆ’ ಎಂದು ಸತ್ಯ, ನ್ಯಾಯ ಮತ್ತು ಧರ್ಮಾನುಸಾರವಾಗಿ ನೀನು ಪ್ರಮಾಣ ಮಾಡಿದರೆ, ಜನಾಂಗಗಳು ಆತನಿಂದ ತಮ್ಮನ್ನು ಆಶೀರ್ವದಿಸಿಕೊಂಡು ಆತನಲ್ಲಿ ಹೆಚ್ಚಳಪಡುವರು” ಎಂದು ಹೇಳುತ್ತಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

2 ‘ಸರ್ವೇಶ್ವರ ಸ್ವಾಮಿಯ ಜೀವದಾಣೆ’ ಎಂದು ಸತ್ಯ, ನ್ಯಾಯ, ನೀತಿಗೆ ಅನುಗುಣವಾಗಿ ಪ್ರಮಾಣಮಾಡಿರಿ, ಆಗ ರಾಷ್ಟ್ರಗಳೆಲ್ಲ ನನ್ನಿಂದ ಆಶೀರ್ವಾದ ಪಡೆಯಲು ಆಶಿಸುವರು, ನನ್ನಲ್ಲೇ ಹೆಮ್ಮೆಪಡುವರು.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

2 ಯೆಹೋವನ ಜೀವದಾಣೆ ಎಂದು ಸತ್ಯನ್ಯಾಯ ಧರ್ಮಾನುಸಾರವಾಗಿ ನೀನು ಪ್ರಮಾಣಮಾಡಿದರೆ ಜನಾಂಗಗಳು ಆತನಿಂದ ತಮ್ಮನ್ನು ಆಶೀರ್ವದಿಸಿಕೊಂಡು ಆತನಲ್ಲಿ ಹೆಚ್ಚಳಪಡುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

2 ನೀನು ಹೀಗೆ ಮಾಡಿದರೆ ನನ್ನ ಹೆಸರಿನ ಮೇಲೆ ಪ್ರಮಾಣ ಮಾಡಲು ಶಕ್ತಳಾಗುವೆ. ‘ಹಾದು, ಯೆಹೋವನಾಣೆ’ ಎಂದು ಹೇಳಶಕ್ತಳಾಗುವೆ. ನೀನು ಆ ಪದಗಳನ್ನು ಸತ್ಯವಾಗಿಯೂ ಪ್ರಾಮಾಣಿಕವಾಗಿಯೂ ಸರಿಯಾಗಿ ಉಪಯೋಗಿಸಲು ಸಾಧ್ಯವಾಗುತ್ತದೆ. ನೀನು ಹೀಗೆ ಮಾಡಿದರೆ, ಎಲ್ಲಾ ಜನಾಂಗಗಳು ಯೆಹೋವನ ಆಶೀರ್ವಾದವನ್ನು ಪಡೆಯುತ್ತವೆ. ಆತನ ಕಾರ್ಯಗಳಿಗಾಗಿ ಆತನಿಗೆ ಸ್ತೋತ್ರ ಮಾಡುತ್ತವೆ.”

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 4:2
30 ತಿಳಿವುಗಳ ಹೋಲಿಕೆ  

ಆಗ ದೇಶದಲ್ಲಿ ತನ್ನನ್ನು ಆಶೀರ್ವದಿಸುವವನು, ಸತ್ಯ ದೇವರಲ್ಲಿ ತನ್ನನ್ನು ಆಶೀರ್ವದಿಸಿಕೊಳ್ಳುವನು; ದೇಶದಲ್ಲಿ ಆಣೆ ಇಟ್ಟುಕೊಳ್ಳುವವನು, ಸತ್ಯ ದೇವರಲ್ಲಿ ಆಣೆ ಇಟ್ಟುಕೊಳ್ಳುವನು. ಏಕೆಂದರೆ ಮುಂಚಿನ ಕಷ್ಟಗಳು ಮರೆತು ಹೋಗಿವೆ, ಮತ್ತು ಅವು ನನ್ನ ಕಣ್ಣಿಗೆ ಮರೆಯಾಗಿವೆ.


ಆದರೆ ಹೆಚ್ಚಳ ಪಡುವವನು, ಯೆಹೋವ ದೇವರಾದ ನಾನು ಭೂಮಿಯಲ್ಲಿ ದಯೆಯನ್ನೂ, ನ್ಯಾಯವನ್ನೂ, ನೀತಿಯನ್ನೂ ನಡೆಸುವವನಾಗಿದ್ದೇನೆಂದು ಗ್ರಹಿಸಿ ತಿಳಿದುಕೊಳ್ಳುವುದರಲ್ಲಿಯೇ ಹೆಚ್ಚಳ ಪಡಲಿ. ಇವುಗಳಲ್ಲಿ ನಾನು ಸಂತೋಷಪಡುತ್ತೇನೆ,” ಎಂದು ಯೆಹೋವ ದೇವರು ಹೇಳುತ್ತಾರೆ.


ನೀನು ನನಗೆ ವಿಧೇಯನಾದದ್ದರಿಂದ, ನಿನ್ನ ಸಂತತಿಯ ಮೂಲಕ ಭೂಲೋಕದ ಎಲ್ಲಾ ಜನಾಂಗಗಳಿಗೂ ಆಶೀರ್ವಾದ ಉಂಟಾಗುವುದು,” ಎಂದರು.


ಆದರೆ, “ಹೆಚ್ಚಳ ಪಡುವವನು ಕರ್ತ ದೇವರಲ್ಲಿಯೇ ಹೆಚ್ಚಳ ಪಡಲಿ.”


ಪವಿತ್ರ ವೇದದಲ್ಲಿ ಬರೆದಿರುವಂತೆ, “ಹೆಚ್ಚಳ ಪಡುವವನು ಕರ್ತ ದೇವರಲ್ಲಿಯೇ ಹೆಚ್ಚಳ ಪಡಲಿ.”


ನೀವು ನಿಮ್ಮ ದೇವರಾದ ಯೆಹೋವ ದೇವರಿಗೆ ಭಯಪಡಬೇಕು. ಅವರ ಸೇವೆಮಾಡಿ ಅವರಿಗೆ ಅಂಟಿಕೊಂಡು, ಅವರ ಹೆಸರಿನಲ್ಲಿ ಪ್ರಮಾಣಮಾಡಬೇಕು.


ಯೆಹೂದ್ಯರಲ್ಲದವರನ್ನು ನಂಬಿಕೆಯಿಂದಲೇ ದೇವರು ನೀತಿವಂತರನ್ನಾಗಿ ಮಾಡುವರು ಎಂದು ಪವಿತ್ರ ವೇದವು ಮೊದಲೇ ಕಂಡು, “ನಿನ್ನ ಮೂಲಕ ಎಲ್ಲಾ ಜನಾಂಗಗಳಿಗೂ ಆಶೀರ್ವಾದ ಉಂಟಾಗುವುದು,” ಎಂಬ ಸುವಾರ್ತೆಯನ್ನು ಅಬ್ರಹಾಮನಿಗೆ, ಮುಂಚಿತವಾಗಿಯೇ ಸಾರಿತು.


ಇವರು ಮೊದಲು ಬಾಳನ ಹೆಸರೆತ್ತಿ ಪ್ರಮಾಣಮಾಡುವ ಅಭ್ಯಾಸವನ್ನು ನನ್ನ ಜನರಿಗೆ ಕಲಿಸಿಕೊಟ್ಟ ಪ್ರಕಾರ, ‘ಈಗ ಯೆಹೋವ ದೇವರ ಜೀವದಾಣೆ,’ ಎಂದು ಹೇಳಿ ನನ್ನ ಹೆಸರಿನ ಆಣೆ ಇಟ್ಟುಕೊಳ್ಳುವುದಕ್ಕೆ ನನ್ನ ಜನರ ಮಾರ್ಗಗಳನ್ನು ಜಾಗ್ರತೆಯಾಗಿ ಕಲಿತುಕೊಂಡರೆ, ಆಗ ಅವರು ನನ್ನ ಜನರ ನಡುವೆ ನೆಲೆಗೊಂಡು ವೃದ್ಧಿಯಾಗುವರು.


ಇಸ್ರಾಯೇಲಿನ ಸಂತಾನದವರೆಲ್ಲರೂ ಯೆಹೋವ ದೇವರಲ್ಲಿ ನೀತಿವಂತರಾಗಿ ಹೆಚ್ಚಳಪಡುವರು.


ಅರಸನ ನಾಮವು ಎಂದೆಂದಿಗೂ ಇರಲಿ. ಸೂರ್ಯನಿರುವವರೆಗೂ ಆತನ ಹೆಸರು ಇರಲಿ. ಮನುಷ್ಯರು ಅರಸನಲ್ಲಿ ಆಶೀರ್ವಾದ ಹೊಂದಲಿ. ಎಲ್ಲಾ ಜನಾಂಗಗಳು ಆತನನ್ನು ಭಾಗ್ಯವಂತನೆಂದು ಕರೆಯಲಿ.


ನಾನು ಅವರನ್ನು ತರುವೆನು. ಅವರು ಯೆರೂಸಲೇಮಿನ ಮಧ್ಯದಲ್ಲಿ ವಾಸಿಸುವರು. ಅವರು ನನ್ನ ಜನರಾಗಿರುವರು. ನಾನು ಅವರಿಗೆ ನಂಬಿಗಸ್ತನೂ, ನೀತಿವಂತನೂ ಆದ ದೇವರಾಗಿರುವೆನು.”


ನನ್ನಷ್ಟಕ್ಕೆ ನಾನೇ ಆಣೆಯನ್ನು ಇಟ್ಟಿದ್ದೇನೆ. ನೀತಿಯುಳ್ಳ ವಾಕ್ಯವು ನನ್ನ ಬಾಯಿಂದ ಹೊರಟಿದೆ. ಅದು ಹಿಂದಿರುಗದು. ಪ್ರತಿಯೊಬ್ಬರು ನನ್ನ ಮುಂದೆ ಮೊಣಕಾಲೂರುವರು. ಪ್ರತಿಯೊಂದು ನಾಲಿಗೆಯೂ ಪ್ರತಿಜ್ಞೆ ಮಾಡುವುದು.


ಅದಕ್ಕೆ ಸೊಲೊಮೋನನು, “ನನ್ನ ತಂದೆಯಾಗಿರುವ ನಿಮ್ಮ ಸೇವಕನಾದ ದಾವೀದನು ನಿಮ್ಮ ಮುಂದೆ ನೀತಿಯಿಂದಲೂ, ಯಥಾರ್ಥವಾದ ಹೃದಯವುಳ್ಳವನಾಗಿಯೂ ನಡೆದದ್ದರಿಂದ, ನೀವು ಅವನಿಗೆ ಮಹಾಕರುಣೆಯನ್ನು ತೋರಿಸಿದ್ದೀರಿ. ಈ ಮಹಾಕರುಣೆಯನ್ನು ಮುಂದುವರೆಸುತ್ತಾ ಈ ದಿನ ಅವನ ಸಿಂಹಾಸನದ ಮೇಲೆ ಕುಳಿತುಕೊಳ್ಳಲು ಮಗನನ್ನು ಕೊಟ್ಟಿದ್ದೀರಿ.


ಏಕೆಂದರೆ ದೇವರನ್ನು ಪವಿತ್ರಾತ್ಮರಿಂದ ಆರಾಧಿಸಿ ಕ್ರಿಸ್ತ ಯೇಸುವನ್ನು ಮಹಿಮೆಪಡಿಸುತ್ತಾ ಹರ್ಷಗೊಳ್ಳುವವರೂ ಮಾಂಸದಲ್ಲಿ ಭರವಸೆಯಿಡದ ನಾವೇ ಸುನ್ನತಿಯಾಗಿದ್ದೇವೆ.


ನಿನ್ನನ್ನು ನನಗೆ ಸದಾಕಾಲಕ್ಕೆ ನಿಶ್ಚಿತಾರ್ಥ ಮಾಡಿಕೊಳ್ಳುವೆನು. ನೀತಿಯಿಂದಲೂ, ನ್ಯಾಯದಿಂದಲೂ, ಪ್ರೀತಿಯಿಂದಲೂ, ಅನುಕಂಪದಿಂದಲೂ, ನಿನ್ನನ್ನು ನನಗೆ ನಿಶ್ಚಿತಾರ್ಥ ಮಾಡಿಕೊಳ್ಳುವೆನು.


ಅವರು, ‘ಯೆಹೋವ ದೇವರು ಜೀವದಾಣೆ,’ ಎಂದು ಪ್ರಮಾಣ ಮಾಡಿದರೂ ಆ ಪ್ರಮಾಣ ಸುಳ್ಳಾಗಿಯೇ ಇರುತ್ತದೆ.”


ನ್ಯಾಯ ಪ್ರಿಯ ರಾಜರೇ, ನೀವು ನೀತಿಯನ್ನು ಸ್ಥಿರಪಡಿಸುತ್ತೀರಿ. ನ್ಯಾಯವನ್ನೂ ನೀತಿಯನ್ನೂ ಯಾಕೋಬ್ಯರಲ್ಲಿ ನೀವು ಮನದಟ್ಟಾಗಿಸಿರುವಿರಿ.


ನೀವು ಇಕ್ಕಟ್ಟಿಗೆ ಗುರಿಯಾಗಿ ಇವೆಲ್ಲವುಗಳು ನಿಮಗೆ ಸಂಭವಿಸಿದಾಗ, ಕಡೇ ದಿವಸಗಳಲ್ಲಿ ನಿಮ್ಮ ದೇವರಾದ ಯೆಹೋವ ದೇವರ ಕಡೆಗೆ ತಿರುಗಿಕೊಂಡು ವಿಧೇಯರಾಗಿರಿ.


ಈ ರಾತ್ರಿಯಲ್ಲಿ ಇಲ್ಲಿರು. ನಾಳೆ ಬೆಳಿಗ್ಗೆ ಅವನು ನಿನಗೆ ವಿಮೋಚಕ ಬಂಧುವಿನ ಕರ್ತವ್ಯ ಮಾಡಿದರೆ ಒಳ್ಳೆಯದು. ಅವನು ನಿನಗೆ ವಿಮೋಚಕ ಬಂಧುವಿನ ಕರ್ತವ್ಯ ಮಾಡಲು ಮನಸ್ಸಿಲ್ಲದಿದ್ದರೆ ಯೆಹೋವ ದೇವರ ಜೀವದಾಣೆ, ನಾನೇ ಅದನ್ನು ಮಾಡುವೆನು. ಉದಯಕಾಲದವರೆಗೂ ಇಲ್ಲಿಯೇ ಮಲಗಿರು,” ಎಂದನು.


ಆ ಕಾಲ ಬಂದಾಗ ಯೆರೂಸಲೇಮನ್ನೇ, ‘ಯೆಹೋವ ದೇವರ ಸಿಂಹಾಸನ,’ ಎಂದು ಕರೆಯುವರು. ನನ್ನ ನಾಮ ಮಹತ್ವದ ಸ್ಥಾನವಾದ ಯೆರೂಸಲೇಮಿಗೆ ಸಕಲ ರಾಷ್ಟ್ರಗಳವರು ನೆರೆದು ಬರುವರು. ಆಮೇಲೆ ತಮ್ಮ ದುಷ್ಟ ಹೃದಯದ ನಿಮಿತ್ತ ಹಟಮಾರಿಗಳಂತೆ ನಡೆಯಲಾರರು.


ಏಕೆಂದರೆ ನೀವು ನಿಮ್ಮ ಮಾರ್ಗಗಳನ್ನೂ, ನಿಮ್ಮ ಕ್ರಿಯೆಗಳನ್ನೂ, ಪೂರ್ಣವಾಗಿ ನೆಟ್ಟಗೆ ಮಾಡಿದರೆ; ಮನುಷ್ಯನಿಗೂ, ಅವನ ನೆರೆಯವನಿಗೂ ಪೂರ್ಣವಾಗಿ ನ್ಯಾಯ ನಡೆಸಿದರೆ;


ಆದರೆ ಯೆಹೋವ ದೇವರು ನಿಜವಾದ ದೇವರಾಗಿದ್ದಾರೆ. ಅವರು ಜೀವಸ್ವರೂಪರಾದ ದೇವರೂ, ನಿತ್ಯನಾದ ಅರಸರೂ ಆಗಿದ್ದಾರೆ. ಅವರ ರೌದ್ರದಿಂದ ಭೂಮಿ ಕಂಪಿಸುವುದು. ಅವರ ಉಗ್ರತೆಯನ್ನು ಜನಾಂಗಗಳು ತಾಳಲಾರವು.


ನಾನು ಅವರನ್ನು ಕಿತ್ತು ಹಾಕಿದ ಮೇಲೆ, ನಾನು ಹಿಂದಿರುಗಿ ಅವರನ್ನು ಕರುಣಿಸುವೆನು. ತಮ್ಮ ತಮ್ಮ ಸೊತ್ತಿಗೂ, ತಮ್ಮ ತಮ್ಮ ದೇಶಕ್ಕೂ ಅವರನ್ನು ತಿರುಗಿ ಬರಮಾಡುವೆನು.


ಓ ಯೆಹೋವ ದೇವರೇ, ನನ್ನ ಬಲವೇ, ನನ್ನ ಕೋಟೆಯೇ, ಇಕ್ಕಟ್ಟಿನ ದಿವಸದಲ್ಲಿ ನನ್ನ ಆಶ್ರಯವೇ, ಭೂಮಿಯ ಅಂತ್ಯಗಳಿಂದ ಜಗದ ಕಟ್ಟಕಡೆಯಿಂದ ಜನಾಂಗಗಳು ನಿನ್ನ ಬಳಿಗೆ ಬರುವುವು. “ನಮ್ಮ ಪೂರ್ವಜರು ನಿಶ್ಚಯವಾಗಿ ಸುಳ್ಳಾದದ್ದನ್ನು ಪಾರಂಪರ್ಯವಾಗಿ ಹೊಂದಿದ್ದಾರೆ. ಅವು ವ್ಯರ್ಥವೇ. ಅವುಗಳಲ್ಲಿ ಏನೂ ಪ್ರಯೋಜನವಿಲ್ಲ.


ನಾನು ಈ ಜನರಿಗೆ ಅನುಗ್ರಹಿಸುವ ಎಲ್ಲಾ ಸೌಭಾಗ್ಯಗಳ ಸುದ್ದಿಯನ್ನು ಸಕಲ ಭೂರಾಜ್ಯಗಳು ಕೇಳುವರು. ಈ ನಗರಕ್ಕೆ ನಾನು ನೀಡುವ ಸುಖ ಸಮಾಧಾನಗಳನ್ನು ಅವರು ನೋಡುವರು ಹಾಗೂ ಹೆದರಿ ನಡುಗುವರು. ಇದರಿಂದಾಗಿ ಆ ಎಲ್ಲಾ ರಾಜ್ಯಗಳ ಮುಂದೆ ನನಗೆ ಅದು ಕೀರ್ತಿಯನ್ನು, ಮಹಿಮೆಯನ್ನು ಹಾಗೂ ಆನಂದವನ್ನು ತರುವುದು.’


ಯೆಹೋವ ದೇವರು ಹೀಗೆ ಘೋಷಿಸುತ್ತಾರೆ, “ಈಗಲಾದರೂ ಉಪವಾಸದಿಂದಲೂ ಅಳುವಿಕೆಯಿಂದಲೂ ಗೋಳಾಟದಿಂದಲೂ ನಿಮ್ಮ ಪೂರ್ಣಹೃದಯದಿಂದ ನನ್ನ ಕಡೆಗೆ ತಿರುಗಿಕೊಳ್ಳಿರಿ.”


ನಿಮ್ಮ ದೇವರಾದ ಯೆಹೋವ ದೇವರಿಗೆ ನೀವು ಭಯಪಡಬೇಕು. ಅವರಿಗೆ ಮಾತ್ರವೇ ಸೇವೆ ಸಲ್ಲಿಸಬೇಕು ಮತ್ತು ಅವರ ಹೆಸರಿನಲ್ಲಿ ಆಣೆಯಿಟ್ಟುಕೊಳ್ಳಬೇಕು.


ದಾವೀದನು ಪ್ರಮಾಣಮಾಡಿ, “ನಿನ್ನ ಕಣ್ಣು ಮುಂದೆ ನನಗೆ ದಯೆ ದೊರಕಿತೆಂದು ನಿನ್ನ ತಂದೆಯು ನಿಶ್ಚಲವಾಗಿ ಬಲ್ಲನು. ಆದಕಾರಣ ಅವನು ಯೋನಾತಾನನು ವ್ಯಥೆಪಡದ ಹಾಗೆ, ‘ಅವನು ಇದನ್ನು ತಿಳಿಯಬಾರದು,’ ಎಂದು ಹೇಳುತ್ತಾನೆ. ನಿಶ್ಚಯವಾಗಿ ಯೆಹೋವ ದೇವರಾಣೆ, ನನ್ನ ಪ್ರಾಣದಾಣೆ, ನನಗೂ ಮರಣಕ್ಕೂ ಒಂದು ಹೆಜ್ಜೆ ಮಾತ್ರ ದೂರ ಇದೆ,” ಎಂದನು.


ಸೂರ್ಯೋದಯವು ಮೊದಲುಗೊಂಡು ಅಸ್ತಮಾನದವರೆಗೂ, ನನ್ನ ಹೆಸರು ಎಲ್ಲಾ ಜನಾಂಗಗಳಲ್ಲಿ ಘನವಾಗಿರುವುದು. ಪ್ರತಿಯೊಂದು ಸ್ಥಳದಲ್ಲಿಯೂ ನನ್ನ ಹೆಸರಿಗೆ ಧೂಪವೂ, ಶುದ್ಧ ಕಾಣಿಕೆಯೂ ಅರ್ಪಿಸಲಾಗುವುದು. ಏಕೆಂದರೆ ನನ್ನ ಹೆಸರು ಇತರ ಜನಾಂಗಗಳಲ್ಲಿ ಘನವಾಗಿರುವುದು,” ಎಂದು ಸೇನಾಧೀಶ್ವರ ಯೆಹೋವ ದೇವರು ಹೇಳುತ್ತಾರೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು