Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 4:3 - ಕನ್ನಡ ಸಮಕಾಲಿಕ ಅನುವಾದ

3 ಏಕೆಂದರೆ ಯೆಹೋವ ದೇವರು ಯೆಹೂದದ ಮತ್ತು ಯೆರೂಸಲೇಮಿನ ಜನರಿಗೆ ಹೀಗೆ ಹೇಳುತ್ತಾರೆ: “ಯೆರೂಸಲೇಮಿನ ನಿವಾಸಿಗಳೇ, ಯೆಹೂದದ ಮನುಷ್ಯರೇ, ನಿಮ್ಮ ಬಂಜರು ಭೂಮಿಯನ್ನು ಗೆಯ್ಯಿರಿ. ಮುಳ್ಳುಗಳಲ್ಲಿ ಬೀಜ ಬಿತ್ತಬೇಡಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

3 ಯೆಹೋವನು ಯೆಹೂದದವರಿಗೂ ಮತ್ತು ಯೆರೂಸಲೇಮಿನವರಿಗೂ, “ಪಾಳು ಬಿದ್ದಿರುವ ನಿಮ್ಮ ಭೂಮಿಯನ್ನು ಉತ್ತು ಹದಮಾಡಿ, ಮುಳ್ಳುಗಳಲ್ಲಿ ಬಿತ್ತಬೇಡಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

3 ಜುದೇಯದವರಿಗೂ ಜೆರುಸಲೇಮಿನವರಿಗೂ ಸರ್ವೇಶ್ವರ ಹೇಳುವುದೇನೆಂದರೆ - “ಪಾಳುಬಿದ್ದ ನಿಮ್ಮ ಹೊಲಗದ್ದೆಗಳನ್ನು ಉತ್ತು ಹದಮಾಡಿ, ಮುಳ್ಳುಗಳ ನಡುವೆ ಬಿತ್ತಬೇಡಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

3 ಯೆಹೋವನು ಯೆಹೂದದವರಿಗೂ ಯೆರೂಸಲೇವಿುನವರಿಗೂ ಹೀಗೆ ಹೇಳುತ್ತಾನೆ - ಗೆಯ್ಯದ ನಿಮ್ಮ ಭೂವಿುಯನ್ನು ಗೆಯ್ಯಿರಿ, ಮುಳ್ಳುಗಳಲ್ಲಿ ಬಿತ್ತಬೇಡಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

3 ಯೆಹೂದ ಜನಾಂಗದ ಜನರಿಗೂ ಜೆರುಸಲೇಮ್ ನಗರದ ಜನರಿಗೂ ಯೆಹೋವನು ಹೀಗೆ ಹೇಳುತ್ತಾನೆ: “ನಿಮ್ಮ ಹೊಲಗಳಲ್ಲಿ ನೇಗಿಲು ಹೊಡೆದಿಲ್ಲ, ಆ ಹೊಲಗಳನ್ನು ನೇಗಿಲು ಹೊಡೆದು ಸ್ವಚ್ಛಮಾಡಿರಿ. ಮುಳ್ಳುಗಳಲ್ಲಿ ಬೀಜಗಳನ್ನು ಬಿತ್ತಬೇಡಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 4:3
10 ತಿಳಿವುಗಳ ಹೋಲಿಕೆ  

ನಿಮಗಾಗಿ ನೀತಿಯ ಬೀಜವನ್ನು ಬಿತ್ತಿರಿ. ಪ್ರೀತಿಯ ಫಲವನ್ನು ಕೊಯ್ಯಿರಿ. ಹಾಳಾಗಿ ಬೀಳುಬಿದ್ದ ನಿಮ್ಮ ಭೂಮಿಯನ್ನು ಅಗೆಯಿರಿ. ಏಕೆಂದರೆ ಆತನು ಬಂದು ನಿಮ್ಮ ಮೇಲೆ ನೀತಿಯನ್ನು ಸುರಿಸುವವರೆಗೂ ಯೆಹೋವ ದೇವರನ್ನು ಹುಡುಕುವ ಸಮಯ ಇದೇ.


ಬೀಜ ಬಿದ್ದ ಮುಳ್ಳುನೆಲವು ಯಾರೆಂದರೆ ವಾಕ್ಯವನ್ನು ಕೇಳಿದ ಮೇಲೆ ಮುಂದುವರಿದು, ಈ ಜೀವನದ ಚಿಂತೆಗಳಿಂದಲೂ ಐಶ್ವರ್ಯಗಳಿಂದಲೂ ಮತ್ತು ಭೋಗಗಳಿಂದಲೂ ಅದುಮಿಬಿಟ್ಟು, ಪರಿಪಕ್ವತೆಗೆ ಫಲಕೊಡದಿದ್ದವರು.


ಇನ್ನು ಕೆಲವು ಮುಳ್ಳುಗಿಡಗಳ ಮಧ್ಯದಲ್ಲಿ ಬಿದ್ದವು, ಆಗ ಮುಳ್ಳುಗಿಡಗಳು ಅವುಗಳೊಂದಿಗೆ ಬೆಳೆದು ಅವುಗಳನ್ನು ಅಡಗಿಸಿಬಿಟ್ಟವು.


ಕೆಲವು ಬೀಜಗಳು ಮುಳ್ಳುಗಿಡಗಳ ಮಧ್ಯದಲ್ಲಿ ಬಿದ್ದವು, ಆ ಮುಳ್ಳುಗಿಡಗಳು ಬೆಳೆದು ಅವುಗಳನ್ನು ಅಡಗಿಸಿಬಿಟ್ಟವು.


ಮತ್ತೆ ಕೆಲವು ಬೀಜಗಳು ಮುಳ್ಳುಗಿಡಗಳ ಮಧ್ಯದಲ್ಲಿ ಬಿದ್ದವು. ಮುಳ್ಳುಗಿಡಗಳು ಬೆಳೆದು ಆ ಎಳೆಯ ಸಸಿಗಳನ್ನು ಅಡಗಿಸಿಬಿಟ್ಟಿದ್ದರಿಂದ ಅವು ಫಲ ಕೊಡಲಿಲ್ಲ.


ಮುಳ್ಳುಗಿಡಗಳಲ್ಲಿ ಬಿತ್ತಲಾಗಿರುವ ಬೀಜವಾಗಿರುವವರು ವಾಕ್ಯವನ್ನು ಕೇಳುತ್ತಾರೆ, ಆದರೆ ಈ ಜೀವನದ ಚಿಂತೆಗಳೂ ಐಶ್ವರ್ಯದ ವ್ಯಾಮೋಹವೂ ವಾಕ್ಯವನ್ನು ಅಡಗಿಸುವುದರಿಂದ, ವಾಕ್ಯವು ಫಲವನ್ನು ಕೊಡುವುದಿಲ್ಲ.


ಭೂಮಿಯಲ್ಲಿ ಮುಳ್ಳುಗಿಡಗಳೂ ಕಳ್ಳಿಗಳೂ ಬೆಳೆಯುವುವು. ನೀನು ಹೊಲದ ಬೆಳೆಯನ್ನು ಉಣ್ಣುವೆ.


ಆದರೆ ಏಳನೆಯ ವರುಷದಲ್ಲಿ ಅದಕ್ಕೆ ವಿಶ್ರಾಂತಿಯನ್ನು ಕೊಟ್ಟು, ಅದನ್ನು ಬೀಳುಬಿಡಬೇಕು. ಆಗ ನಿಮ್ಮ ಜನರಲ್ಲಿರುವ ಬಡವರು ಅದರಲ್ಲಿ ಬೆಳೆದದ್ದನ್ನು ತಿನ್ನಲಿ. ಅವರು ಬಿಟ್ಟದ್ದನ್ನು ಕಾಡುಮೃಗಗಳು ತಿನ್ನಲಿ. ನಿಮ್ಮ ದ್ರಾಕ್ಷಿತೋಟದ, ಓಲಿವ್ ಮರಗಳ ವಿಷಯದಲ್ಲಿಯೂ ಹಾಗೆಯೇ ಮಾಡಬೇಕು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು