Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 4:30 - ಕನ್ನಡ ಸಮಕಾಲಿಕ ಅನುವಾದ

30 ಆಗ ನೀನು ನಿರ್ಜನನಾದಾಗ ಏನು ಮಾಡುವೆ? ನೀನು ಕಡುಕೆಂಪು ಬಣ್ಣದ ವಸ್ತ್ರವನ್ನು ತೊಟ್ಟುಕೊಂಡರೇನು? ಚಿನ್ನದ ಆಭರಣಗಳಿಂದ ನಿನ್ನನ್ನು ಅಲಂಕರಿಸಿಕೊಂಡರೇನು? ಕಾಡಿಗೆಯಿಂದ ಕಣ್ಣುಗಳನ್ನು ಅಗಲಿಸಿಕೊಂಡು ಶೃಂಗರಿಸಿಕೊಂಡರೇನು? ನೀವು ವ್ಯರ್ಥವಾಗಿ ನಿನ್ನನ್ನು ಅಲಂಕರಿಸಿಕೊಳ್ಳುತ್ತಿ. ನಿನ್ನ ಪ್ರೇಮಿಗಳು ನಿನ್ನನ್ನು ತಿರಸ್ಕರಿಸುತ್ತಾರೆ; ಅವರು ನಿನ್ನನ್ನು ಕೊಲ್ಲಲು ಬಯಸುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

30 ಎಲೈ, ನಗರವೇ, ನೀನು ಸೂರೆಯಾಗುವಾಗ ಏನು ಮಾಡುವಿ? ನೀನು ರಕ್ತಾಂಬರವನ್ನು ಹೊದ್ದು ಸುವರ್ಣಾಭರಣಗಳಿಂದ ನಿನ್ನನ್ನು ಅಲಂಕರಿಸಿಕೊಂಡು, ನೀಲಾಂಜನ ಕಾಡಿಗೆಯಿಂದ ಕಣ್ಣುಗಳನ್ನು ಅಗಲಿಸಿಕೊಂಡು ಶೃಂಗರಿಸಿಕೊಂಡರೇನು, ನಿನ್ನನ್ನು ಶೃಂಗಾರಿಸಿಕೊಳ್ಳುವುದು ವ್ಯರ್ಥ. ನಿನ್ನೊಂದಿಗೆ ವ್ಯಭಿಚಾರ ಮಾಡಿದವರೇ ನಿನ್ನನ್ನು ಧಿಕ್ಕರಿಸಿ ನಿನ್ನ ಪ್ರಾಣವನ್ನೇ ಹುಡುಕುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

30 ಎಲೈ ಜೆರುಸಲೇಮ್, ಸೂರೆಯಾಗುವಾಗ ಏನು ಮಾಡುವೆ? ಪಟ್ಟದ ಬಟ್ಟೆಗಳನ್ನು ಉಟ್ಟುಕೊಂಡು ಚಿನ್ನದ ಒಡವೆಗಳನ್ನು ತೊಟ್ಟುಕೊಂಡು ಕಾಡಿಗೆಯಿಂದ ಕಣ್ಣುಗಳನ್ನು ಅಗಲಿಸಿಕೊಂಡು ಶೃಂಗರಿಸಿಕೊಂಡರೆ ಏನು ಪ್ರಯೋಜನ? ಎಲ್ಲವೂ ವ್ಯರ್ಥ ! ನಿನ್ನ ಮಿಂಡರೇ ನಿನ್ನನ್ನು ತಿರಸ್ಕರಿಸಿ ನಿನ್ನ ಪ್ರಾಣಹುಡುಕುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

30 ಎಲೈ, [ನಗರಿಯೇ,] ನೀನು ಸೂರೆಯಾಗುವಾಗ ಏನು ಮಾಡುವಿ? ನೀನು ರಕ್ತಾಂಬರವನ್ನು ಹೊದ್ದು ಸುವರ್ಣಾಭರಣಗಳಿಂದ ನಿನ್ನನ್ನು ಅಲಂಕರಿಸಿಕೊಂಡು ನೀಲಾಂಜನದಿಂದ ವಿಶಾಲಾಕ್ಷಿಯಾದರೇನು, ನಿನ್ನನ್ನು ಸೊಗಸು ಮಾಡಿಕೊಳ್ಳುವದು ವ್ಯರ್ಥ; ನಿನ್ನ ವಿುಂಡರು ನಿನ್ನನ್ನು ಧಿಕ್ಕರಿಸಿ ನಿನ್ನ ಪ್ರಾಣವನ್ನೇ ಹುಡುಕುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

30 ಹಾಳಾಗಿಹೋದ ಯೆಹೂದವೇ, ನೀನು ಮಾಡುತ್ತಿರುವುದೇನು? ಅತ್ಯುತ್ತಮವಾದ ಕೆಂಪುಬಣ್ಣದ ಪೋಷಾಕನ್ನು ನೀನು ಧರಿಸಿಕೊಳ್ಳುತ್ತಿರುವುದೇಕೆ? ಸುವರ್ಣಾಭರಣಗಳಿಂದ ನಿನ್ನನ್ನು ಏಕೆ ಅಲಂಕರಿಸಿಕೊಳ್ಳುತ್ತಿರುವೆ? ಕಣ್ಣಿಗೆ ಕಾಡಿಗೆಯನ್ನು ಏಕೆ ಹಚ್ಚುತ್ತಿರುವೆ? ನೀನು ಅಲಂಕಾರ ಮಾಡಿಕೊಳ್ಳುವದೆಲ್ಲ ವ್ಯರ್ಥ. ನಿನ್ನ ಪ್ರಿಯತಮರು ನಿನ್ನನ್ನು ತಿರಸ್ಕರಿಸುತ್ತಾರೆ. ಅವರು ನಿನ್ನನ್ನು ಕೊಲೆಮಾಡುವ ಪ್ರಯತ್ನದಲ್ಲಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 4:30
27 ತಿಳಿವುಗಳ ಹೋಲಿಕೆ  

ಯೇಹುವು ಇಜ್ರೆಯೇಲಿಗೆ ಬಂದನು. ಅಲ್ಲಿಗೆ ಅವನು ಬಂದಿದ್ದಾನೆಂದು ಈಜೆಬೆಲಳು ಕೇಳಿ, ಅವಳು ತನ್ನ ಕಣ್ಣುಗಳಿಗೆ ಕಾಡಿಗೆ ಹಚ್ಚಿಕೊಂಡು, ತನ್ನ ತಲೆಯನ್ನು ಶೃಂಗರಿಸಿಕೊಂಡು, ಕಿಟಕಿಯಿಂದ ಇಣಿಕಿ ನೋಡಿದಳು.


ನಾನು ನನ್ನ ಪ್ರಿಯರನ್ನು ಕರೆದೆನು. ಆದರೆ ಅವರು ನನ್ನನ್ನು ಮೋಸಗೊಳಿಸಿದರು. ನನ್ನ ಯಾಜಕರು, ನನ್ನ ಹಿರಿಯರು ತಮ್ಮ ಪ್ರಾಣವನ್ನು ಉಳಿಸಿಕೊಳ್ಳುವುದಕ್ಕೆ ರೊಟ್ಟಿಯನ್ನು ಹುಡುಕುತ್ತಾ ನಗರದಲ್ಲಿ ಸತ್ತುಹೋದರು.


ಅವಳು ರಾತ್ರಿಯಲ್ಲಿ ಯಾತನೆಗೊಂಡು ಅಳುತ್ತಾಳೆ, ಆಕೆಯ ಕಣ್ಣೀರು, ಆಕೆಯ ಕೆನ್ನೆಗಳ ಮೇಲಿದೆ. ಆಕೆಯ ಎಲ್ಲಾ ಪ್ರಿಯರಲ್ಲಿ, ಆಕೆಯನ್ನು ಸಂತೈಸುವವರು ಒಬ್ಬರೂ ಇಲ್ಲ. ಆಕೆಯ ಸ್ನೇಹಿತರೆಲ್ಲರೂ, ಆಕೆಗೆ ವಂಚನೆಮಾಡಿ, ಆಕೆಗೆ ಶತ್ರುಗಳಾದರು.


ವಿಚಾರಣೆಯ ದಿನದಲ್ಲಿಯೂ, ದೂರದಿಂದ ಬರುವ ನಾಶನದಲ್ಲಿಯೂ ನೀವು ಏನು ಮಾಡುವಿರಿ? ಸಹಾಯಕ್ಕಾಗಿ ನೀವು ಯಾರ ಬಳಿಗೆ ಓಡುವಿರಿ? ನಿಮ್ಮ ಐಶ್ವರ್ಯವನ್ನು ಎಲ್ಲಿ ಬಿಡುವಿರಿ?


ದೇವರ ತೋಟವಾದ ಏದೆನಿನಲ್ಲಿ ನೀನಿದ್ದೆ. ಮಾಣಿಕ್ಯ, ಪುಷ್ಯರಾಗ, ಪಚ್ಚೆ, ಪೀತರತ್ನ, ವಜ್ರ, ವೈಡೂರ್ಯ, ನೀಲ ಗೋಮೇಧಿಕ, ಕೆಂಪು, ಸ್ಪಟಿಕ ಚಿನ್ನ ಈ ಅಮೂಲ್ಯವಾದವುಗಳಿಂದ ಭೂಷಿತವಾಗಿದ್ದೆ. ನಿನ್ನಲ್ಲಿದ್ದ ದಮ್ಮಡಿಗಳೂ ಕೊಳಲುಗಳೂ ಇವುಗಳ ಕೆಲಸವು ನಿನ್ನಲ್ಲಿದ್ದು ನಿನ್ನ ಸೃಷ್ಟಿಯ ದಿನದಲ್ಲಿ ಸಿದ್ಧವಾದವು.


ನಿಮ್ಮ ವಿಶೇಷ ಮಿತ್ರರಾಗಿ ನೀವು ಬೆಳೆಸಿದವರನ್ನು ಯೆಹೋವ ದೇವರು ನಿನಗೆ ತಲೆಯಾಗಿ ನೇಮಿಸುವಾಗ ಏನು ಹೇಳುವಿ? ವೇದನೆಯು ನಿನ್ನನ್ನು ಹೆರುವವಳೋ ಎಂಬಂತೆ ಹಿಡಿಯುವುದಲ್ಲವೆ?


ಆ ದಿನದಲ್ಲಿ ಕರಾವಳಿಯ ನಿವಾಸಿಗಳು, ‘ಇಗೋ, ಅಸ್ಸೀರಿಯದ ಅರಸರಿಂದ ಬಿಡುಗಡೆಯಾಗಬೇಕೆಂದು ನಾವು ಯಾರನ್ನು ಶರಣಾಗತರಾಗಿ ಆಶ್ರಯಿಸಿ, ನಿರೀಕ್ಷಿಸಿದ್ದೆವೋ ಅವರಿಗೆ ಈ ಗತಿ ಬಂತಲ್ಲಾ ಮತ್ತು ನಾವು ತಪ್ಪಿಸಿಕೊಳ್ಳುವುದು ಹೇಗೆ?’ ಎಂದುಕೊಳ್ಳುವರು.”


ಅವರು ಏಕ ಮನಸ್ಸುಳ್ಳವರಾಗಿ, ಮೃಗಕ್ಕೆ ತಮ್ಮ ಬಲ ಮತ್ತು ಅಧಿಕಾರವನ್ನು ಕೊಡುವರು.


ಆ ಸ್ತ್ರೀಯು ನೇರಳೆ ಮತ್ತು ಕಡುಗೆಂಪು ಬಣ್ಣದ ವಸ್ತ್ರಗಳನ್ನು ಧರಿಸಿಕೊಂಡು ಚಿನ್ನ, ಅಮೂಲ್ಯವಾದ ಹರಳು, ಮುತ್ತುಗಳಿಂದ ಅಲಂಕರಿಸಿಕೊಂಡಿದ್ದಳು. ಆಕೆಯು ತನ್ನ ಕೈಯಲ್ಲಿ ಅಸಹ್ಯವಾದ ವಸ್ತುಗಳಿಂದಲೂ ಮತ್ತು ತನ್ನ ಅಶುದ್ಧ ಅನೈತಿಕತೆಯಿಂದಲೂ ತುಂಬಿದ ಚಿನ್ನದ ಬಟ್ಟಲನ್ನು ಹಿಡಿದುಕೊಂಡಿದ್ದಳು.


ಅವಳೊಂದಿಗೆ ಭೂರಾಜರು ಜಾರತ್ವ ಮಾಡಿದರು. ಭೂನಿವಾಸಿಗಳು ಆಕೆಯ ಜಾರತ್ವವೆಂಬ ದ್ರಾಕ್ಷಾರಸವನ್ನು ಕುಡಿದು ಮತ್ತರಾದರು,” ಎಂದು ಹೇಳಿದನು.


ಇಂತಹ ಮಹಾ ರಕ್ಷಣೆಯನ್ನು ನಾವು ಅಲಕ್ಷ್ಯ ಮಾಡಿದರೆ ತಪ್ಪಿಸಿಕೊಳ್ಳುವುದು ಹೇಗೆ? ಈ ರಕ್ಷಣೆಯನ್ನು ನಮಗೆ ಕರ್ತ ಆಗಿರುವ ಯೇಸುವೇ ಮೊದಲು ತಿಳಿಸಿದ್ದಾರೆ. ಅವರಿಂದ ಕೇಳಿಸಿಕೊಂಡವರೂ ನಮಗೆ ಆ ರಕ್ಷಣೆಯನ್ನು ದೃಢಪಡಿಸಿದ್ದಾರೆ.


ನಿನ್ನನ್ನು ಕೊಲ್ಲಲು ಬರುವವನ ಮುಂದೆ ಇನ್ನು, “ನಾನು ದೇವರು,” ಎಂದು ಹೇಳುವೆಯೋ? ನಿನ್ನನ್ನು ಕೊಲ್ಲುವವನ ಕೈಯಲ್ಲಿ ನೀನು ದೇವರಲ್ಲ ನರಪ್ರಾಣಿಯೇ;


ನಮಗಾದರೋ ನಮ್ಮ ಕಣ್ಣುಗಳು ನಮ್ಮ ವ್ಯರ್ಥವಾದ ಸಹಾಯಕ್ಕಾಗಿ ನೋಡಿ ಸೋತು ಹೋದವು. ನಮ್ಮ ಕಣ್ಣುಗಳು ನಮ್ಮನ್ನು ರಕ್ಷಿಸಲಾರದಂಥ ಜನಾಂಗಕ್ಕಾಗಿ ಕಾವಲಾಗಿದ್ದವು.


ಏನೆಂದರೆ, ಪ್ರವಾದಿಗಳು ಸುಳ್ಳಾಗಿ ಪ್ರವಾದಿಸುತ್ತಾರೆ. ಯಾಜಕರು ತಮ್ಮ ಅಧಿಕಾರದಿಂದ ದೊರೆತನ ಮಾಡುತ್ತಾರೆ. ನನ್ನ ಜನರು ಅದನ್ನು ಪ್ರೀತಿ ಮಾಡುತ್ತಾರೆ. ಆದರೆ ಅಂತ್ಯದಲ್ಲಿ ನೀವು ಏನು ಮಾಡುವಿರಿ?


ಚೀಯೋನಿನಲ್ಲಿರುವ ಪಾಪಿಗಳು ಹೆದರುತ್ತಾರೆ. ಭಯದಿಂದ ಕಪಟಿಗಳು ಆಶ್ಚರ್ಯಕ್ಕೊಳಗಾಗಿ ಹೀಗೆ ಎಂದುಕೊಳ್ಳುವರು, “ನಮ್ಮಲ್ಲಿ ಯಾರು ನುಂಗುವ ಅಗ್ನಿಯ ಸಂಗಡ ವಾಸಿಸಬಲ್ಲರು? ನಮ್ಮಲ್ಲಿ ಯಾರು ಸದಾ ಉರಿಯುವ ಜ್ವಾಲೆಗಳೊಡನೆ ವಾಸಿಸಬಲ್ಲರು?”


ನಿನ್ನ ಹೃದಯ ಅವಳ ಸೌಂದರ್ಯವನ್ನು ಮೋಹಿಸದಿರಲಿ. ಅವಳ ಕಣ್ಣುರೆಪ್ಪೆಗಳಿಂದ ಅವಳು ನಿನ್ನನ್ನು ವಶಮಾಡಿಕೊಳ್ಳದೆ ಇರಲಿ.


ಇಗೋ, ವೇಶ್ಯೆಯ ವಸ್ತ್ರವನ್ನು ಧರಿಸಿಕೊಂಡು ಒಬ್ಬ ಕಪಟ ಸ್ತ್ರೀಯು ಅವನನ್ನು ಎದುರುಗೊಂಡಳು.


ಓ, ‘ಲೆಬನೋನಿನಲ್ಲಿ’ ವಾಸಮಾಡುವವಳೇ, ದೇವದಾರುಗಳಲ್ಲಿ ಗೂಡು ಮಾಡಿಕೊಂಡವಳೇ, ನಿನ್ನ ಮೇಲೆ ಬೇನೆಗಳೂ, ಹೆರುವವಳಂತಿರುವ ವೇದನೆಯೂ ಬರುವಾಗ ಎಷ್ಟೋ ದುಃಖಕರವಾಗಿರುವೆ.


ನಿನ್ನ ಮಿತ್ರರೆಲ್ಲರು ನಿನ್ನನ್ನು ಮರೆತುಬಿಟ್ಟಿದ್ದಾರೆ, ನಿನ್ನನ್ನು ಹುಡುಕುವುದಿಲ್ಲ. ನಿನ್ನ ಅಕ್ರಮಗಳು ಬಹಳವೂ, ನಿನ್ನ ಪಾಪಗಳು ಪ್ರಬಲವೂ ಆಗಿರುವುದರಿಂದ ಶತ್ರುವಿನ ಗಾಯದಿಂದಲೂ, ಕ್ರೂರನ ಶಿಕ್ಷೆಯಿಂದಲೂ ನಾನು ನಿನ್ನನ್ನು ಗಾಯಪಡಿಸಿದ್ದೇನೆ;


ನಿನ್ನ ಸಂಗಡ ಒಡಂಬಟ್ಟ ಮನುಷ್ಯರೆಲ್ಲರು ನಿನ್ನನ್ನು ಮೇರೆಯವರೆಗೂ ತಂದಿದ್ದಾರೆ. ನಿನ್ನ ಸಂಗಡ ಸಮಾಧಾನವಾಗಿದ್ದ ಮನುಷ್ಯರು ನಿನ್ನನ್ನು ಮೋಸಮಾಡಿ ನಿನ್ನ ಮೇಲೆ ಜಯ ಹೊಂದಿದ್ದಾರೆ. ನಿನ್ನ ರೊಟ್ಟಿಯನ್ನು ತಿನ್ನುವವರು ನಿನ್ನ ಕೆಳಗೆ ಬೋನು ಇಟ್ಟಿದ್ದಾರೆ. ಆದರೆ ನೀನು ಅದನ್ನು ತಿಳಿದುಕೊಳ್ಳಲಾರೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು