Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 40:11 - ಕನ್ನಡ ಸಮಕಾಲಿಕ ಅನುವಾದ

11 ಹಾಗೆಯೇ ಮೋವಾಬಿನಲ್ಲಿಯೂ, ಅಮ್ಮೋನನ ಮಕ್ಕಳಲ್ಲಿಯೂ, ಎದೋಮಿನಲ್ಲಿಯೂ, ಸಕಲ ದೇಶಗಳಲ್ಲಿಯೂ ಇದ್ದ ಯೆಹೂದ್ಯರೆಲ್ಲರೂ ಬಾಬಿಲೋನಿನ ಅರಸನು ಯೆಹೂದದ ಒಂದು ಶೇಷವನ್ನು ಬಿಟ್ಟಿದ್ದನೆಂದೂ, ಶಾಫಾನನ ಮೊಮ್ಮಗ ಅಹೀಕಾಮನ ಮಗ ಗೆದಲ್ಯನನ್ನು ಅವರಿಗೆ ಅಧಿಪತಿಯನ್ನಾಗಿ ನೇಮಿಸಿದ್ದಾನೆಂದು ಕೇಳಿದಾಗ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

11 ಇದಲ್ಲದೆ ಅಮ್ಮೋನ್ಯರ ಮಧ್ಯದೊಳಗೂ, ಮೋವಾಬ್ ಮತ್ತು ಎದೋಮ್ ಮೊದಲಾದ ದೇಶಗಳಲ್ಲಿಯೂ ಚದುರಿ ಹೋಗಿದ್ದ ಯೆಹೂದ್ಯರೆಲ್ಲರೂ ಬಾಬೆಲಿನ ಅರಸನು ಯೆಹೂದದಲ್ಲಿ ಕೆಲವರನ್ನು ಉಳಿಸಿ ಅಹೀಕಾಮನ ಮಗನೂ ಶಾಫಾನನ ಮೊಮ್ಮಗನೂ ಆದ ಗೆದಲ್ಯನನ್ನು ಅವರಿಗೆ ಅಧಿಪತಿಯನ್ನಾಗಿ ನೇಮಿಸಿದ್ದಾನೆಂಬ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

11 ಇದಲ್ಲದೆ, ಅಮ್ಮೋನ್, ಮೋವಾಬ್, ಎದೋಮ್ ಮೊದಲಾದ ನಾಡುಗಳಲ್ಲಿ ಚದರಿಹೋಗಿದ್ದ ಯೆಹೂದ್ಯರೆಲ್ಲರು, ಬಾಬಿಲೋನಿನ ಅರಸನು ಯೆಹೂದ್ಯರಲ್ಲಿ ಕೆಲವರನ್ನು ಉಳಿಸಿ, ಅವರಿಗೆ ಅಹೀಕಾಮನ ಮಗನೂ ಶಾಫಾನನ ಮೊಮ್ಮಗನೂ ಆದ ಗೆದಲ್ಯನನ್ನು ರಾಜ್ಯಪಾಲನನ್ನಾಗಿ ನೇಮಿಸಿದ್ದಾನೆಂಬ ಸುದ್ದಿಯನ್ನು ಕೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

11 ಇದಲ್ಲದೆ ಅಮ್ಮೋನ್ಯರ ಮಧ್ಯದೊಳಗೂ ಮೋವಾಬ್ ಎದೋಮ್ ಮೊದಲಾದ ದೇಶಗಳಲ್ಲಿಯೂ ಚದರಿಹೋಗಿದ್ದ ಯೆಹೂದ್ಯರೆಲ್ಲರೂ ಬಾಬೆಲಿನ ಅರಸನು ಯೆಹೂದದಲ್ಲಿ ಕೆಲವರನ್ನು ಉಳಿಸಿ ಅಹೀಕಾಮನ ಮಗನೂ ಶಾಫಾನನ ಮೊಮ್ಮಗನೂ ಆದ ಗೆದಲ್ಯನನ್ನು ಅವರಿಗೆ ಅಧಿಪತಿಯನ್ನಾಗಿ ನೇವಿುಸಿದ್ದಾನೆಂಬ ವರ್ತಮಾನವನ್ನು ಕೇಳಿ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

11 ಬಾಬಿಲೋನಿನ ರಾಜನು ಕೆಲವು ಜನ ಯೆಹೂದಿಯರನ್ನು ಆ ಪ್ರದೇಶದಲ್ಲಿ ಬಿಟ್ಟುಹೋಗಿದ್ದಾನೆ ಮತ್ತು ಅಹೀಕಾಮನ ಮಗನೂ ಶಾಫಾನನ ಮೊಮ್ಮಗನೂ ಆದ ಗೆದಲ್ಯನನ್ನು ಅವರ ಅಧಿಪತಿಯನ್ನಾಗಿ ನೇಮಿಸಿದ್ದಾನೆ ಎಂಬ ಸಮಾಚಾರವನ್ನು ಮೋವಾಬ್, ಎದೋಮ್, ಅಮ್ಮೋನ್ ಮೊದಲಾದ ದೇಶಗಳಲ್ಲಿ ಚದುರಿಹೋಗಿದ್ದ ಯೆಹೂದಿಯರು ಕೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 40:11
23 ತಿಳಿವುಗಳ ಹೋಲಿಕೆ  

ಮೋವಾಬ್ ದೇಶದಿಂದ ವಲಸೆಹೋದವರು ನಿಮ್ಮಲ್ಲಿ ವಾಸಿಸಲಿ. ವಿನಾಶಕರಿಗೆ ವಶವಾಗದಂತೆ ಅವರಿಗೆ ಆಶ್ರಯ ನೀಡಿರಿ. ದಬ್ಬಾಳಿಕೆ ಮುಗಿಯುತ್ತಾ ಬಂತು. ಸೂರೆಮಾಡುವುದು ನಿಲ್ಲುವುದು, ಪೀಡಿಸುವವರು ದೇಶದಿಂದ ಅಳಿದುಹೋಗುವರು.


ಹೇಗೆ ನೀನು ಇಸ್ರಾಯೇಲರ ಸ್ವಾಸ್ತ್ಯದ ನಾಶನಕ್ಕೆ ಹೇಗೆ ಸಂತೋಷಪಟ್ಟೆಯೋ ಹಾಗೆಯೇ ನಿನ್ನ ನಾಶನಕ್ಕೆ ಸಂತೋಷಪಡುವ ಹಾಗೆ ಮಾಡುವೆನು. ಸೇಯೀರ್ ಪರ್ವತವೇ ಮತ್ತು ಸಮಸ್ತ ಎದೋಮೇ ಸಂಪೂರ್ಣವಾಗಿ ಹಾಳಾಗುವೆ. ಆಗ ನಾನೇ ಯೆಹೋವ ದೇವರೆಂದು ನಿಮಗೆ ತಿಳಿಯುವುದು.’ ”


“ ‘ನೀನು ಇಸ್ರಾಯೇಲರ ಮೇಲೆ ದೀರ್ಘ ದ್ವೇಷವಿಟ್ಟು ಅವರ ಅಪರಾಧದ ಕಾಲದಲ್ಲಿ ಅವರನ್ನು ಖಡ್ಗದ ಬಾಯಿಗೆ ಗುರಿಮಾಡಿದ ಕಾರಣ ಅವರ ಶಿಕ್ಷೆಯು ತಪ್ಪದು.


“ಸಾರ್ವಭೌಮ ಯೆಹೋವ ದೇವರು ಹೀಗೆ ಹೇಳುತ್ತಾರೆ, ‘ಏಕೆಂದರೆ ಎದೋಮು ಯೆಹೂದನ ಮನೆತನದವರಿಗೆ ಮುಯ್ಯಿಗೆ ಮುಯ್ಯಿ ತೀರಿಸಿದ್ದರಿಂದ ಅತಿ ಅಪರಾಧಮಾಡಿ ಅವರಲ್ಲಿ ಸೇಡು ತೀರಿಸಿಕೊಂಡಿತು.


“ಸಾರ್ವಭೌಮ ಯೆಹೋವ ದೇವರು ಹೀಗೆ ಹೇಳುತ್ತಾರೆ: ‘ಮೋವಾಬು ಮತ್ತು ಸೇಯೀರು, “ಇಗೋ, ಯೆಹೂದನ ಮನೆಯು ಸಮಸ್ತ ಇತರ ಜನಾಂಗಗಳ ಹಾಗಿದೆ,” ಎಂದು ಹೇಳುವರು.


ಏಕೆಂದರೆ ಸಾರ್ವಭೌಮ ಯೆಹೋವ ದೇವರು ಹೀಗೆ ಹೇಳುತ್ತಾರೆ; ನೀವು ಕೈತಟ್ಟಿ ಕಾಲಿನಿಂದ ತುಳಿದು ಇಸ್ರಾಯೇಲ್ ದೇಶದವರನ್ನು ಮನಃಪೂರ್ವಕವಾಗಿ ತಿರಸ್ಕರಿಸಿ ಅದರ ಸ್ಥಿತಿಗೆ ಸಂತೋಷಪಟ್ಟದ್ದರಿಂದ,


“ಮನುಷ್ಯಪುತ್ರನೇ, ನೀನು ಅಮ್ಮೋನ್ಯರಿಗೆ ಅಭಿಮುಖನಾಗಿ ಅವರಿಗೆ ವಿರೋಧವಾಗಿ ಪ್ರವಾದಿಸು.


ನಿನ್ನಲ್ಲಿಯ ಮೂರನೆಯ ಒಂದು ಪಾಲು ಜನರು ವ್ಯಾಧಿಗಳಿಂದ ಸಾಯುವರು, ಕ್ಷಾಮದಿಂದ ನಿಮ್ಮಲ್ಲಿ ಅವರು ನಾಶವಾಗುವರು. ಮೂರನೆಯ ಒಂದು ಪಾಲು ನಿಮ್ಮ ಸುತ್ತಲೂ ಖಡ್ಗ ಹಿಡಿದು ಬೀಳುವರು. ಮೂರನೆಯ ಒಂದು ಪಾಲನ್ನು ಎಲ್ಲಾ ದಿಕ್ಕುಗಳಿಗೆ ಗಾಳಿಗೆ ತೂರಿ ಚದರಿಸಿ, ಅವರ ಮೇಲೆ ಖಡ್ಗವನ್ನು ಬೀಸುವೆನು.


ನೀನು ಅವುಗಳೊಳಗಿಂದ ಕೆಲವು ಕೂದಲನ್ನು ಲೆಕ್ಕದಲ್ಲಿ ತೆಗೆದು, ನಿನ್ನ ಸೆರಗುಗಳಲ್ಲಿ ಕಟ್ಟು,” ಎಂದನು.


‘ನಾನು ಅವರನ್ನು ಅಸಹ್ಯಪಡಿಸುತ್ತೇನೆ. ನಿಂದೆಗೂ, ಗಾದೆಗೂ, ಹಾಸ್ಯಕ್ಕೂ, ಶಾಪಕ್ಕೂ ಗುರಿಮಾಡಿ ಅವರನ್ನು ಭೂಮಿಯ ಸಮಸ್ತ ರಾಜ್ಯಗಳಿಂದ ತೆಗೆದು ಕೇಡಿಗೆ ಒಪ್ಪಿಸುವೆನು.


“ಆದರೆ ಅಮ್ಮೋನ್ಯರ ಅರಸನಾದ ನಾಹಾಷನು ನಿಮಗೆ ವಿರೋಧವಾಗಿ ಯುದ್ಧಮಾಡಲು ಬರುವುದನ್ನು ಕಂಡಾಗ, ನಿಮ್ಮ ದೇವರಾದ ಯೆಹೋವ ದೇವರೇ ನಿಮಗೆ ಅರಸರಾಗಿದ್ದರು. ಆಗ ನೀವು, ‘ನಮಗೆ ಹಾಗೆ ಬೇಡ, ಒಬ್ಬ ಅರಸನು ನಮ್ಮನ್ನು ಆಳಬೇಕು,’ ಎಂದಿರಿ.


ಅಮ್ಮೋನಿಯನಾದ ನಾಹಾಷನು ದಂಡೆತ್ತಿ ಬಂದು ಗಿಲ್ಯಾದಿನಲ್ಲಿರುವ ಯಾಬೇಷಿಗೆ ಮುತ್ತಿಗೆಹಾಕಿದನು. ಆಗ ಯಾಬೇಷಿನ ಜನರೆಲ್ಲರು ನಾಹಾಷನಿಗೆ, “ನೀನು ನಮ್ಮ ಸಂಗಡ ಒಡಂಬಡಿಕೆ ಮಾಡಿದರೆ, ನಾವು ನಿನಗೆ ಅಧೀನರಾಗಿರುವೆವು,” ಎಂದರು.


ಆಗ ಇಸ್ರಾಯೇಲರು ಶಿಟ್ಟೀಮಿನಲ್ಲಿ ವಾಸವಾಗಿದ್ದಾಗ, ಅವರು ಮೋವಾಬಿನ ಪುತ್ರಿಯರ ಸಂಗಡ ಜಾರತ್ವ ಮಾಡಲಾರಂಭಿಸಿದರು.


ನಂತರ ಇಸ್ರಾಯೇಲರು ಹೊರಟು ಯೊರ್ದನಿಗೆ ಈಚೆಯಲ್ಲಿರುವ ಮೋವಾಬಿನ ಬಯಲುಗಳಲ್ಲಿ ಯೆರಿಕೋ ಪಟ್ಟಣಕ್ಕೆ ಎದುರಾಗಿ ಇಳಿದುಕೊಂಡರು.


ಹೀಗೆ ಎದೋಮನು ಎಂಬ ಏಸಾವನು ಸೇಯೀರ್ ಪರ್ವತದಲ್ಲಿ ವಾಸವಾಗಿದ್ದನು.


ಆ ಮಹಿಳೆಯರು ಇಸ್ರಾಯೇಲರನ್ನು ತಮ್ಮ ದೇವರುಗಳ ಬಲಿಗಳಿಗೆ ಕರೆದರು. ಇವರು ತಿಂದು ಅವರ ದೇವರುಗಳಿಗೆ ಅಡ್ಡಬಿದ್ದರು.


ಆದರೆ ಅವರು ಪಶ್ಚಿಮ ದಿಕ್ಕಿಗೆ ಫಿಲಿಷ್ಟಿಯರ ಇಳಿಜಾರು ಪ್ರದೇಶದ ಮೇಲೆ ಎರಗುವರು. ಅವರು ಜೊತೆಯಾಗಿ ಪೂರ್ವದವರನ್ನು ಸೂರೆ ಮಾಡುವರು, ಅವರು ಎದೋಮಿನ ಮತ್ತು ಮೋವಾಬಿನ ಮೇಲೆ ತಮ್ಮ ಕೈಯನ್ನು ದಾಳಿಮಾಡುವರು ಮತ್ತು ಅಮ್ಮೋನಿಯರು ಅವರಿಗೆ ಅಧೀನರಾಗುವರು.


ಇಷ್ಮಾಯೇಲನು ಮಿಚ್ಪದಲ್ಲಿದ್ದ ಜನರ ಉಳಿದವರನ್ನೆಲ್ಲಾ ಅರಸನ ಪುತ್ರಿಯರನ್ನೂ, ಕಾವಲಿನವರ ಅಧಿಪತಿಯಾದ ನೆಬೂಜರದಾನನು ಅಹೀಕಾಮನ ಮಗನಾದ ಗೆದಲ್ಯನಿಗೆ ಒಪ್ಪಿಸಿಕೊಟ್ಟು, ಉಳಿದ ಜನರೆಲ್ಲರನ್ನು ಸೆರೆಯಾಗಿ ಒಯ್ದನು. ನೆತನ್ಯನ ಮಗನಾದ ಇಷ್ಮಾಯೇಲನು ಅವರನ್ನು ಸೆರೆಯಾಗಿ ಒಯ್ದು, ಅಮ್ಮೋನ್ಯರ ಬಳಿಗೆ ದಾಟಿಹೋಗುವುದಕ್ಕೆ ಹೊರಟನು.


ಆದರೆ ಕಾರೇಹನ ಮಗ ಯೋಹಾನಾನನೂ, ಸೈನ್ಯಾಧಿಪತಿಗಳೆಲ್ಲರೂ ತಾವು ಅಟ್ಟಿಬಿಟ್ಟಿದ್ದ ಎಲ್ಲಾ ಜನಾಂಗಗಳಿಂದ ಯೆಹೂದ ದೇಶದಲ್ಲಿ ವಾಸಮಾಡುವುದಕ್ಕೆ ತಿರುಗಿ ಬಂದ ಯೆಹೂದದಲ್ಲಿ ಉಳಿದವರನ್ನು,


ನನ್ನ ಕುರಿಗಳು ಎಲ್ಲಾ ಪರ್ವತಗಳ ಮೇಲೆಯೂ ಪ್ರತಿಯೊಂದು ಎತ್ತರವಾದ ಬೆಟ್ಟಗಳ ಮೇಲೆಯೂ ಅಲೆದಾಡುತ್ತಿವೆ. ಹೌದು, ನನ್ನ ಮಂದೆಯು ಎಲ್ಲಾ ಭೂಮಿಯ ಮೇಲೆಲ್ಲಾ ಚದರಿಹೋಗಿದೆ. ಯಾವನೂ ಅವುಗಳಿಗಾಗಿ ವಿಚಾರಿಸಲಿಲ್ಲ ಅಥವಾ ಹುಡುಕಲಿಲ್ಲ.


ಅಂದರೆ ಗಂಡಸರನ್ನೂ, ಹೆಂಗಸರನ್ನೂ, ಮಕ್ಕಳನ್ನೂ, ಅರಸನ ಪುತ್ರಿಯರನ್ನೂ, ಕಾವಲಿನವರ ಅಧಿಪತಿಯಾದ ನೆಬೂಜರದಾನನು ಶಾಫಾನನ ಮೊಮ್ಮಗ ಅಹೀಕಾಮನ ಮಗ ಗೆದಲ್ಯನ ಸಂಗಡ ಬಿಟ್ಟವರೆಲ್ಲರನ್ನೂ, ಪ್ರವಾದಿಯಾದ ಯೆರೆಮೀಯನನ್ನೂ, ನೇರೀಯನ ಮಗ ಬಾರೂಕನನ್ನೂ ತೆಗೆದುಕೊಂಡು ಈಜಿಪ್ಟ್ ದೇಶಕ್ಕೆ ಹೋದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು