Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 40:12 - ಕನ್ನಡ ಸಮಕಾಲಿಕ ಅನುವಾದ

12 ಯೆಹೂದ್ಯರೆಲ್ಲರೂ, ಅವರು ಓಡಿಸಲಾಗಿದ್ದ ಎಲ್ಲಾ ಸ್ಥಳಗಳಿಂದ ತಿರುಗಿಕೊಂಡು, ಯೆಹೂದ ದೇಶಕ್ಕೆ ಗೆದಲ್ಯನ ಬಳಿಗೆ ಮಿಚ್ಪಕ್ಕೆ ಬಂದು, ಬಹು ಅಧಿಕವಾಗಿ ದ್ರಾಕ್ಷಾರಸವನ್ನೂ, ಬೇಸಿಗೆ ಕಾಲದ ಹಣ್ಣುಗಳನ್ನೂ ಕೂಡಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

12 ವರ್ತಮಾನವನ್ನು ಕೇಳಿ ತಾವು ಅಟ್ಟಲ್ಪಟ್ಟು ಸೇರಿದ್ದ ಎಲ್ಲಾ ಸ್ಥಳಗಳಿಂದಲೂ ಯೆಹೂದಕ್ಕೆ ಹಿಂದಿರುಗಿ ಮಿಚ್ಪದಲ್ಲಿ ವಾಸವಾಗಿದ್ದ ಗೆದಲ್ಯನ ಬಳಿಗೆ ಬಂದು ದ್ರಾಕ್ಷಾರಸವನ್ನೂ, ಹಣ್ಣುಗಳನ್ನೂ ಸಮೃದ್ಧಿಯಾಗಿ ಸಂಗ್ರಹಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

12 ತಾವು ಹೊರದೂಡಲ್ಪಟ್ಟು ವಾಸಮಾಡುತ್ತಿದ್ದ ಎಲ್ಲಾ ಊರುಗಳಿಂದ ಜುದೇಯಕ್ಕೆ ಹಿಂದಿರುಗಿದರು. ಮಿಚ್ಪದಲ್ಲಿ ವಾಸವಾಗಿದ್ದ ಗೆದಲ್ಯನ ಬಳಿಗೆ ಬಂದು ಸೇರಿಕೊಂಡರು. ದ್ರಾಕ್ಷಾರಸವನ್ನೂ ಹಣ್ಣುಹಂಪಲುಗಳನ್ನೂ ಹೇರಳವಾಗಿ ಕೂಡಿಸಿಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

12 ತಾವು ಅಟ್ಟಲ್ಪಟ್ಟು ಸೇರಿದ್ದ ಎಲ್ಲಾ ಸ್ಥಳಗಳಿಂದಲೂ ಯೆಹೂದಕ್ಕೆ ಹಿಂದಿರುಗಿ ವಿುಚ್ಪದಲ್ಲಿ ವಾಸವಾಗಿದ್ದ ಗೆದಲ್ಯನ ಬಳಿಗೆ ಬಂದು ದ್ರಾಕ್ಷಾರಸವನ್ನೂ ಹಣ್ಣುಗಳನ್ನೂ ಸಮೃದ್ಧಿಯಾಗಿ ಸಂಗ್ರಹಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

12 ಯೆಹೂದದ ಆ ಜನರು ಈ ಸಮಾಚಾರವನ್ನು ಕೇಳಿದ ಕೂಡಲೆ ತಾವು ಚದುರಿಹೋಗಿದ್ದ ಎಲ್ಲಾ ದೇಶಗಳಿಂದ ಯೆಹೂದ ಪ್ರದೇಶಕ್ಕೆ ಹಿಂತಿರುಗಿ ಮಿಚ್ಫದಲ್ಲಿ ಗೆದಲ್ಯನ ಬಳಿಗೆ ಬಂದರು. ಅವರು ದ್ರಾಕ್ಷಾರಸವನ್ನು ಮತ್ತು ಹಣ್ಣುಗಳನ್ನು ಸಮೃದ್ಧಿಯಾಗಿ ಸಂಗ್ರಹಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 40:12
8 ತಿಳಿವುಗಳ ಹೋಲಿಕೆ  

ಆದರೆ ಕಾರೇಹನ ಮಗ ಯೋಹಾನಾನನೂ, ಸೈನ್ಯಾಧಿಪತಿಗಳೆಲ್ಲರೂ ತಾವು ಅಟ್ಟಿಬಿಟ್ಟಿದ್ದ ಎಲ್ಲಾ ಜನಾಂಗಗಳಿಂದ ಯೆಹೂದ ದೇಶದಲ್ಲಿ ವಾಸಮಾಡುವುದಕ್ಕೆ ತಿರುಗಿ ಬಂದ ಯೆಹೂದದಲ್ಲಿ ಉಳಿದವರನ್ನು,


ಒಣಹುಲ್ಲನ್ನು ಕೊಯ್ದು ನಂತರ ಹೊಸ ಬೆಳೆ ಕಾಣಿಸಿಕೊಂಡಾಗ ಮತ್ತು ಬೆಟ್ಟಗಳಿಂದ ಹುಲ್ಲು ಸಂಗ್ರಹಿಸಿದಾಗ,


ಆದಕಾರಣ ಸಿಬ್ಮದ ದ್ರಾಕ್ಷಾಲತೆಯ ನಿಮಿತ್ತ ಯಜ್ಜೇರ್ ಪಟ್ಟಣದೊಂದಿಗೆ ಅಳುವೆನು. ಓ ಹೆಷ್ಬೋನ್ ಮತ್ತು ಎಲೆಯಾಲೆ ಪಟ್ಟಣಗಳೇ, ನಿಮ್ಮನ್ನು ನನ್ನ ಕಣ್ಣೀರಿನಿಂದ ತೋಯಿಸುವೆನು! ಏಕೆಂದರೆ ಶತ್ರುಗಳು ಬಿದ್ದುಹೋದ ನಿಮ್ಮ ಬೇಸಿಗೆಯ ಫಲಗಳಿಗೂ, ಬೆಳೆಗಳಿಗೂ ಆರ್ಭಟಿಸುತ್ತಾರೆ.


ನಾನಾದರೋ ಇಗೋ, ನಾನು ನಮ್ಮ ಬಳಿಗೆ ಬರುವ ಬಾಬಿಲೋನಿಯರ ಹತ್ತಿರ ಕಾದುಕೊಳ್ಳುವುದಕ್ಕೆ ಮಿಚ್ಪದಲ್ಲಿ ವಾಸಮಾಡುವೆನು. ಆದರೆ ನೀವು ದ್ರಾಕ್ಷಾರಸವನ್ನೂ, ಹಣ್ಣುಗಳನ್ನೂ, ಎಣ್ಣೆಯನ್ನೂ ಕೂಡಿಸಿ, ನಿಮ್ಮ ಪಾತ್ರೆಗಳಲ್ಲಿ ಇಟ್ಟು, ನೀವು ಹಿಡಿದಿರುವ ನಿಮ್ಮ ಪಟ್ಟಣಗಳಲ್ಲಿ ವಾಸವಾಗಿರಿ,” ಎಂಬುದು.


ಇದಲ್ಲದೆ ಕಾರೇಹನ ಮಗ ಯೋಹಾನಾನನೂ, ಸೀಮೆಯಲ್ಲಿದ್ದ ಎಲ್ಲಾ ಸೇನಾಧಿಪತಿಗಳೂ ಗೆದಲ್ಯನ ಬಳಿಗೆ ಮಿಚ್ಪಕ್ಕೆ ಬಂದು,


ಇಷ್ಮಾಯೇಲನು ಮಿಚ್ಪದಲ್ಲಿದ್ದ ಜನರ ಉಳಿದವರನ್ನೆಲ್ಲಾ ಅರಸನ ಪುತ್ರಿಯರನ್ನೂ, ಕಾವಲಿನವರ ಅಧಿಪತಿಯಾದ ನೆಬೂಜರದಾನನು ಅಹೀಕಾಮನ ಮಗನಾದ ಗೆದಲ್ಯನಿಗೆ ಒಪ್ಪಿಸಿಕೊಟ್ಟು, ಉಳಿದ ಜನರೆಲ್ಲರನ್ನು ಸೆರೆಯಾಗಿ ಒಯ್ದನು. ನೆತನ್ಯನ ಮಗನಾದ ಇಷ್ಮಾಯೇಲನು ಅವರನ್ನು ಸೆರೆಯಾಗಿ ಒಯ್ದು, ಅಮ್ಮೋನ್ಯರ ಬಳಿಗೆ ದಾಟಿಹೋಗುವುದಕ್ಕೆ ಹೊರಟನು.


ಆದರೆ ನಾವು ಗಗನದ ಒಡತಿಗೆ ಧೂಪ ಸುಡುವುದನ್ನೂ, ಪಾನಾರ್ಪಣೆಗಳನ್ನೂ ಅವಳಿಗೆ ಹೊಯ್ಯುವುದನ್ನೂ ಬಿಟ್ಟಂದಿನಿಂದ ನಮಗೆ ಎಲ್ಲಾ ಸಾಲದೆ ಹೋಯಿತು. ಖಡ್ಗದಿಂದಲೂ ಕ್ಷಾಮದಿಂದಲೂ ನಿರ್ಮೂಲವಾದೆವು.”


ನನ್ನ ಕುರಿಗಳು ಎಲ್ಲಾ ಪರ್ವತಗಳ ಮೇಲೆಯೂ ಪ್ರತಿಯೊಂದು ಎತ್ತರವಾದ ಬೆಟ್ಟಗಳ ಮೇಲೆಯೂ ಅಲೆದಾಡುತ್ತಿವೆ. ಹೌದು, ನನ್ನ ಮಂದೆಯು ಎಲ್ಲಾ ಭೂಮಿಯ ಮೇಲೆಲ್ಲಾ ಚದರಿಹೋಗಿದೆ. ಯಾವನೂ ಅವುಗಳಿಗಾಗಿ ವಿಚಾರಿಸಲಿಲ್ಲ ಅಥವಾ ಹುಡುಕಲಿಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು