Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 44:22 - ಕನ್ನಡ ಸಮಕಾಲಿಕ ಅನುವಾದ

22 ಹೀಗೆ ನಿಮ್ಮ ಕೃತ್ಯಗಳ ಕೆಟ್ಟತನವನ್ನೂ, ನೀವು ಮಾಡಿದ ಅಸಹ್ಯಗಳನ್ನೂ ಯೆಹೋವ ದೇವರು ಇನ್ನು ತಾಳಲಾರದ್ದರಿಂದ, ನಿಮ್ಮ ದೇಶವು ಈ ದಿನ ಇರುವ ಪ್ರಕಾರ, ನಿವಾಸಿಗಳಿಲ್ಲದೆ ಹಾಳಾಗಿಯೂ, ವಿಸ್ಮಯವಾಗಿಯೂ, ಶಾಪವಾಗಿಯೂ ಇದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

22 ನೀವು ನಡೆಸಿದ ದುರಾಚಾರಗಳನ್ನೂ, ಅಸಹ್ಯಕಾರ್ಯಗಳನ್ನೂ ಯೆಹೋವನು ಇನ್ನು ಸಹಿಸಲಾರದೆ ಹೋದುದರಿಂದ ನಿಮ್ಮ ದೇಶವು ಹಾಳುಬಿದ್ದು ಜನವಿಲ್ಲದೆ ನಾಶಕ್ಕೂ, ಶಾಪಕ್ಕೂ ಆಸ್ಪದವಾಯಿತು; ಈಗಲೂ ಹಾಗೆಯೇ ಇದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

22 ನೀವು ನಡೆಸಿದ ದುರಾಚಾರಗಳನ್ನು ಹಾಗು ಅಸಹ್ಯಕಾರ್ಯಗಳನ್ನು ಸರ್ವೇಶ್ವರ ಇನ್ನು ಸಹಿಸಲಾರದೆ ಹೋದುದರಿಂದಲೇ ನಿಮ್ಮ ನಾಡು ಹಾಳುಬಿದ್ದಿದೆ. ನಿರ್ಜನವಾಗಿ ಭಯಭೀತಿಗೆ ಎಡೆ ಆಗಿದೆ. ಅದರ ಸ್ಥಿತಿ ಈಗಲೂ ಬದಲಾಗಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

22 ನೀವು ನಡಿಸಿದ ದುರಾಚಾರಗಳನ್ನೂ ಅಸಹ್ಯಕಾರ್ಯಗಳನ್ನೂ ಯೆಹೋವನು ಇನ್ನು ಸಹಿಸಲಾರದೆ ಹೋದದರಿಂದ ನಿಮ್ಮ ದೇಶವು ಹಾಳುಬಿದ್ದು ಜನವಿಲ್ಲದೆ ಬೆರಗಿಗೂ ಶಾಪಕ್ಕೂ ಆಸ್ಪದವಾಯಿತು; ಈಗಲೂ ಹಾಗೆಯೇ ಇದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

22 ಯೆಹೋವನು ಇನ್ನು ಮುಂದೆ ತಾಳ್ಮೆಯಿಂದ ಇರಲಾರನು. ನೀವು ಮಾಡಿದ ಅಸಹ್ಯಕೃತ್ಯಗಳನ್ನು ಯೆಹೋವನು ದ್ವೇಷಿಸುತ್ತಾನೆ. ಆದ್ದರಿಂದ ಆತನು ನಿಮ್ಮ ದೇಶವನ್ನು ಬರಿದಾದ ಮರುಭೂಮಿಯನ್ನಾಗಿ ಮಾಡಿದ್ದಾನೆ, ಈಗ ಅಲ್ಲಿ ಯಾರೂ ವಾಸಿಸುವದಿಲ್ಲ. ಬೇರೆಯವರು ಆ ದೇಶದ ಬಗ್ಗೆ ಕೆಟ್ಟ ಮಾತುಗಳನ್ನಾಡುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 44:22
40 ತಿಳಿವುಗಳ ಹೋಲಿಕೆ  

ಯೆರೂಸಲೇಮಿಗೂ, ಯೆಹೂದದ ಪಟ್ಟಣಗಳಿಗೂ, ಅದರ ಅರಸುಗಳಿಗೂ, ಅಧಿಕಾರಿಗಳಿಗೂ ಅವರನ್ನು ಇಂದಿನ ಪ್ರಕಾರ ಹಾಳು ಮಾಡಿ, ಭಯಕ್ಕೂ, ಪರಿಹಾಸ್ಯಕ್ಕೂ, ಶಾಪಕ್ಕೂ ಗುರಿ ಮಾಡುವ ಹಾಗೆ ಕುಡಿಸಿದೆನು.


“ನಿಮ್ಮ ಮಾತುಗಳಿಂದ ಯೆಹೋವ ದೇವರಿಗೆ ಬೇಸರ ಮಾಡಿದ್ದೀರಿ. “ಆದರೂ, ನಾವು ಯಾವುದರಲ್ಲಿ ಆತನಿಗೆ ಬೇಸರ ಮಾಡಿದ್ದೇವೆ?” ಎಂದು ಕೇಳುತ್ತೀರಿ. “ಕೆಟ್ಟದ್ದನ್ನು ಮಾಡುವವರೆಲ್ಲರು, ಯೆಹೋವ ದೇವರ ದೃಷ್ಟಿಯಲ್ಲಿ ಒಳ್ಳೆಯವರು, ಅವರಲ್ಲಿ ಆತನು ಮೆಚ್ಚುತ್ತಾನೆ ಎಂದೂ, ನ್ಯಾಯದ ದೇವರು ಎಲ್ಲಿ? ಎಂದೂ ನೀವು ಹೇಳುವುದರಿಂದಲೇ.”


ಈಜಿಪ್ಟ್ ದೇಶಕ್ಕೆ ಹೋಗಿ ಅಲ್ಲಿ ತಂಗಬೇಕೆಂದು ತಮ್ಮ ಮುಖಗಳನ್ನು ಇಟ್ಟಿರುವ ಯೆಹೂದದಲ್ಲಿ ಉಳಿದಿರುವವರನ್ನು ತೆಗೆದುಕೊಳ್ಳುತ್ತೇನೆ. ಅವರೆಲ್ಲರು ಈಜಿಪ್ಟ್ ದೇಶದಲ್ಲಿ ನಾಶವಾಗುವರು. ಖಡ್ಗದಿಂದಲೂ ಕ್ಷಾಮದಿಂದಲೂ ಅಳಿದುಹೋಗುವರು. ಚಿಕ್ಕವನು ಮೊದಲುಗೊಂಡು ದೊಡ್ಡವನವರೆಗೂ ಖಡ್ಗದಿಂದಲೂ ಕ್ಷಾಮದಿಂದಲೂ ಸಾಯುವರು. ಅಸಹ್ಯವೂ ಭಯವೂ ಶಾಪವೂ ನಿಂದೆಯೂ ಆಗುವುವು.


ಅವರು ಸಿಂಹದಂತೆ ತಮ್ಮ ಗವಿಯನ್ನು ತೊರೆದುಬಿಟ್ಟಿದ್ದಾರೆ. ಏಕೆಂದರೆ ಉಪದ್ರವ ಪಡಿಸುವವನ ಉರಿಯ ನಿಮಿತ್ತವೂ, ಅವರ ಕೋಪದ ಉರಿಯ ನಿಮಿತ್ತವೂ ಅವರ ದೇಶವು ಹಾಳಾಯಿತು.


ಈ ದೇಶವೆಲ್ಲಾ ಹಾಳಾಗಿ ಭಯಕ್ಕೆ ಗುರಿಯಾಗುವುದು. ಈ ಜನಾಂಗಗಳು ಬಾಬಿಲೋನಿನ ಅರಸನನ್ನು ಎಪ್ಪತ್ತು ವರ್ಷ ಸೇವಿಸುವರು.


ಹೀಗೆ ತಮ್ಮ ದೇಶವನ್ನು ಹಾಳಾಗಿಯೂ, ನಿತ್ಯವಾದ ಹಾಸ್ಯಾಸ್ಪದವಾಗಿಯೂ ಮಾಡಿದ್ದಾರೆ. ಅದನ್ನು ಹಾದುಹೋಗುವವರೆಲ್ಲರೂ ವಿಸ್ಮಿತರಾಗಿ ತಲೆ ಅಲ್ಲಾಡಿಸುವರು.


ನೀನು ನನಗೋಸ್ಕರ ಹಣದಿಂದ ಪರಿಮಳ ತೈಲವನ್ನು ಕೊಂಡುಕೊಳ್ಳಲಿಲ್ಲ. ನಿನ್ನ ಯಜ್ಞಪಶುಗಳ ಕೊಬ್ಬಿನಿಂದ ನನ್ನನ್ನು ತೃಪ್ತಿಪಡಿಸಲಿಲ್ಲ. ಆದರೆ ನಿನ್ನ ಪಾಪಗಳಿಂದ ನನ್ನನ್ನು ನೀನು ತೊಂದರೆಗೆ ಗುರಿಮಾಡಿರುವೆ. ನಿನ್ನ ಅಕ್ರಮಗಳಿಂದ ನನ್ನನ್ನು ಬೇಸರಗೊಳಿಸಿದ್ದೀ.


ಅದಕ್ಕೆ ಯೆಶಾಯನು, “ದಾವೀದನ ವಂಶದವರೇ! ಈಗ ಕೇಳಿರಿ, ಮನುಷ್ಯರ ತಾಳ್ಮೆಯನ್ನು ಪರೀಕ್ಷಿಸುವುದು ಸಾಕಾಗುವುದಿಲ್ಲವೇ? ನೀವು ನನ್ನ ದೇವರ ತಾಳ್ಮೆಯನ್ನು ಪರೀಕ್ಷಿಸುವಿರಾ?


ನಾಶಕ್ಕೂ, ಕೋಪಾಗ್ನಿಗೂ ಪಾತ್ರೆಯಾಗಿರುವುದರ ಮೇಲೆ ದೇವರು ತಮ್ಮ ಕೋಪವನ್ನು ತೋರಿಸಿ ತಮ್ಮ ಸಾಮರ್ಥ್ಯವನ್ನು ತಿಳಿಯಪಡಿಸಬೇಕೆಂದಿದ್ದರೂ ಬಹು ಸಹನೆಯಿಂದ ತಾಳಿಕೊಂಡಿರಲು ಬಯಸಿದರೆ, ಯಾರು ಏನು ಮಾಡಬಹುದು?


“ಇಗೋ, ಸಿವುಡು ತುಂಬಿದ ಬಂಡಿ ಒತ್ತುವ ಪ್ರಕಾರ, ನಾನು ನಿಮ್ಮನ್ನು ಕೆಳಗೆ ಹಾಕಿ ಒತ್ತುವೆನು.


ಅವರು ನಮಗೂ, ನಮಗೆ ನ್ಯಾಯ ತೀರಿಸಿದ ನ್ಯಾಯಾಧಿಪತಿಗಳಿಗೂ ವಿರೋಧವಾಗಿ ತಾವು ಹೇಳಿದ ಮಾತುಗಳನ್ನು ನೆರವೇರಿಸಿ, ನಮ್ಮ ಮೇಲೆ ದೊಡ್ಡ ವಿನಾಶ ಬರುವ ಹಾಗೆ ಮಾಡಿದ್ದಾರೆ. ಯೆರೂಸಲೇಮಿನಲ್ಲಿ ನಡೆದ ಹಾಗೆ ಇಡೀ ಆಕಾಶದ ಕೆಳಗೆ ಎಲ್ಲೂ ನಡೆಯಲಿಲ್ಲ.


“ಈ ಪ್ರಕಾರ ನನ್ನ ಕೋಪವನ್ನು ತೀರಿಸಿಕೊಳ್ಳುವೆನು. ನನ್ನ ರೋಷವನ್ನು ಅವರ ಮೇಲೆ ಕಾರಿ, ಸಮಾಧಾನ ಹೊಂದುವೆನು. ಹೀಗೆ ನಾನು ನನ್ನ ರೋಷವನ್ನು ಅವರ ಮೇಲೆ ತೀರಿಸಿದ ತರುವಾಯ, ಯೆಹೋವ ದೇವರಾದ ನಾನು ರೋಷದಿಂದ ಮಾತನಾಡಿದ್ದೇನೆ ಎಂದು ಅವರು ತಿಳಿಯುವರು.


ಆದ್ದರಿಂದ ನನ್ನ ರೌದ್ರವೂ ನನ್ನ ಕೋಪವೂ ಸುರಿದು, ಯೆಹೂದದ ಪಟ್ಟಣಗಳಲ್ಲಿಯೂ, ಯೆರೂಸಲೇಮಿನ ಬೀದಿಗಳಲ್ಲಿಯೂ ಉರಿಯಿತು. ಅವು ಈ ದಿನದವರೆಗೂ ಹಾಳೂ, ಬೀಳೂ ಆದವು.


“ಇಸ್ರಾಯೇಲಿನ ದೇವರಾದ ಸೇನಾಧೀಶ್ವರ ಯೆಹೋವ ದೇವರು ಹೀಗೆ ಹೇಳುತ್ತಾರೆ: ನಾನು ಯೆರೂಸಲೇಮಿನ ಮೇಲೆಯೂ, ಯೆಹೂದದ ಎಲ್ಲಾ ಪಟ್ಟಣಗಳ ಮೇಲೆಯೂ ಬರಮಾಡಿದ ಎಲ್ಲಾ ಕೇಡನ್ನು ನೀವು ಕಂಡಿದ್ದೀರಿ.


ಏಕೆಂದರೆ ಅವರು ನನ್ನ ವಾಕ್ಯಗಳನ್ನು ಕೇಳಲಿಲ್ಲ. ನಾನು ಅವರಿಗೆ ನನ್ನ ಸೇವಕರಾದ ಪ್ರವಾದಿಗಳನ್ನು ಬೆಳಿಗ್ಗೆ ಪುನಃ ಕಳುಹಿಸಿದೆನು. ಆದರೆ ಅವರು ಕೇಳಲಿಲ್ಲ,” ಎಂದು ಯೆಹೋವ ದೇವರು ಹೇಳುತ್ತಾರೆ.


ಆಗ ನಾನು ಈ ಆಲಯವನ್ನು ಶೀಲೋವಿನ ಗತಿಗೆ ಇಳಿಸುವೆನು. ಈ ನಗರವು ವಿಶ್ವದ ಜನರಿಗೆಲ್ಲಾ ಶಾಪಗ್ರಸ್ತ ನಗರವಾಗುವಂತೆ ಮಾಡುವೆನು.’ ”


‘ನಾನು ಅವರನ್ನು ಅಸಹ್ಯಪಡಿಸುತ್ತೇನೆ. ನಿಂದೆಗೂ, ಗಾದೆಗೂ, ಹಾಸ್ಯಕ್ಕೂ, ಶಾಪಕ್ಕೂ ಗುರಿಮಾಡಿ ಅವರನ್ನು ಭೂಮಿಯ ಸಮಸ್ತ ರಾಜ್ಯಗಳಿಂದ ತೆಗೆದು ಕೇಡಿಗೆ ಒಪ್ಪಿಸುವೆನು.


ನೀನು ನನ್ನನ್ನು ಬಿಟ್ಟುಬಿಟ್ಟಿದ್ದೀ,” ಎಂದು ಯೆಹೋವ ದೇವರು ಹೇಳುತ್ತಾರೆ. “ನೀನು ಹಿಂಜಾರಿದೆ. ಆದ್ದರಿಂದ ನನ್ನ ಕೈಯನ್ನು ನಿನಗೆ ವಿರೋಧವಾಗಿ ಚಾಚಿ, ನಿನ್ನನ್ನು ನಾಶಮಾಡುವೆನು. ನಿನಗೆ ಅನುಕಂಪ ತೋರಿಸುವುದರಲ್ಲಿ ದಣಿದಿದ್ದೇನೆ.


ಆದ್ದರಿಂದ ಸರ್ವಶಕ್ತರಾದ ದೇವರೂ, ಇಸ್ರಾಯೇಲಿನ ಪರಾಕ್ರಮಿಯೂ ಆದ ಯೆಹೋವ ದೇವರು ಹೇಳುವುದೇನೆಂದರೆ, “ಆಹಾ! ನನ್ನ ವೈರಿಗಳ ಮೇಲೆ ನನ್ನ ಕೋಪವನ್ನು ಹೊರಹಾಕುತ್ತೇನೆ ಮತ್ತು ನನ್ನ ಶತ್ರುಗಳ ಮೇಲೆ ಸೇಡು ತೀರಿಸಿಕೊಳ್ಳುತ್ತೇನೆ.


ಏಕೆಂದರೆ ಈ ಸ್ಥಳದವರ ಕೂಗು ಯೆಹೋವ ದೇವರ ಸನ್ನಿಧಿಯಲ್ಲಿ ದೊಡ್ಡದಾಗಿರುವುದರಿಂದ ನಾವು ಇದನ್ನು ನಾಶ ಮಾಡುತ್ತೇವೆ. ಯೆಹೋವ ದೇವರು ನಮ್ಮನ್ನು ಕಳುಹಿಸಿದ್ದಾರೆ.”


ಆಗ ಯೆಹೋವ ದೇವರು, “ನನ್ನ ಆತ್ಮವು ಮನುಷ್ಯರಲ್ಲಿ ನಿತ್ಯವಾಗಿ ಇರುವುದಿಲ್ಲ. ಏಕೆಂದರೆ ಅವರು ಮರ್ತ್ಯರೇ. ಆದರೂ ಅವರ ಆಯುಷ್ಯವು ನೂರ ಇಪ್ಪತ್ತು ವರ್ಷಗಳಾಗಿರುವುದು,” ಎಂದರು.


ಯೆಹೂದದವರೇ, ಯೆರೂಸಲೇಮಿನ ನಿವಾಸಿಗಳೇ, ಯೆಹೋವ ದೇವರಿಗೋಸ್ಕರ ಸುನ್ನತಿ ಮಾಡಿಕೊಳ್ಳಿರಿ; ನಿಮ್ಮ ಹೃದಯಗಳ ಮುಂದೊಗಲನ್ನು ತೆಗೆದುಹಾಕಿರಿ. ಇಲ್ಲದಿದ್ದರೆ ನನ್ನ ಉಗ್ರವು ಬೆಂಕಿಯ ಹಾಗೆ ಹೊರಟು, ನಿಮ್ಮ ಕ್ರಿಯೆಗಳ ಕೆಟ್ಟತನದ ನಿಮಿತ್ತ ಯಾರೂ ಆರಿಸಲಾಗದ ಹಾಗೆ ಉರಿಯುವುದು.”


ದಾವೀದನ ಮನೆಯವರೇ, ಯೆಹೋವ ದೇವರು ಹೇಳುವುದೇನೆಂದರೆ, “ ‘ಬೆಳಿಗ್ಗೆ ನ್ಯಾಯತೀರಿಸಿರಿ, ಸುಲಿಗೆಯಾದವನನ್ನು ಬಲಾತ್ಕಾರಿಯ ಕೈಯೊಳಗಿಂದ ತಪ್ಪಿಸಿರಿ. ಇಲ್ಲದಿದ್ದರೆ ನನ್ನ ಕೋಪವು ಬೆಂಕಿಯ ಹಾಗೆ ಹೊರಟು, ನಿಮ್ಮ ಕ್ರಿಯೆಗಳ ಕೆಟ್ಟತನದ ನಿಮಿತ್ತ ಯಾರೂ ಆರಿಸಲಾಗದ ಹಾಗೆ ಉರಿಯುವುದು.


ಆದ್ದರಿಂದ ಇಸ್ರಾಯೇಲಿನ ದೇವರಾದ ಯೆಹೋವ ದೇವರು ತನ್ನ ಜನರನ್ನು ಮೇಯಿಸುವ ಕುರುಬರಿಗೆ ವಿರೋಧವಾಗಿ ಹೀಗೆ ಹೇಳುತ್ತಾರೆ: “ನೀವು ನನ್ನ ಮಂದೆಯನ್ನು ಚದರಿಸಿ ಓಡಿಸಿಬಿಟ್ಟು ಮತ್ತು ಅವುಗಳ ಮೇಲೆ ಕಾಳಜಿ ತೋರಿಸಲಿಲ್ಲ. ಇಗೋ, ನೀನು ಮಾಡಿದ ಕೆಟ್ಟತನಕ್ಕಾಗಿ ನಾನು ನಿನಗೆ ಶಿಕ್ಷೆಯನ್ನು ಕೊಡುತ್ತೇನೆ,” ಎಂದು ಯೆಹೋವ ದೇವರು ಹೇಳುತ್ತಾರೆ.


ಖಡ್ಗದಿಂದಲೂ ಕ್ಷಾಮದಿಂದಲೂ ವ್ಯಾಧಿಯಿಂದಲೂ ಅವರನ್ನು ಹಿಂಸಿಸಿ, ನಾನು ಅವರನ್ನು ಓಡಿಸಿಬಿಟ್ಟ ಎಲ್ಲಾ ಜನಾಂಗಗಳಲ್ಲಿ ಶಾಪಕ್ಕೂ ಭಯಕ್ಕೂ ಪರಿಹಾಸ್ಯಕ್ಕೂ ನಿಂದೆಗೂ ಗುರಿಯಾಗುವ ಹಾಗೆ ಒಪ್ಪಿಸಿಬಿಡುವೆನು.


ನಿನ್ನ ಮಿತ್ರರೆಲ್ಲರು ನಿನ್ನನ್ನು ಮರೆತುಬಿಟ್ಟಿದ್ದಾರೆ, ನಿನ್ನನ್ನು ಹುಡುಕುವುದಿಲ್ಲ. ನಿನ್ನ ಅಕ್ರಮಗಳು ಬಹಳವೂ, ನಿನ್ನ ಪಾಪಗಳು ಪ್ರಬಲವೂ ಆಗಿರುವುದರಿಂದ ಶತ್ರುವಿನ ಗಾಯದಿಂದಲೂ, ಕ್ರೂರನ ಶಿಕ್ಷೆಯಿಂದಲೂ ನಾನು ನಿನ್ನನ್ನು ಗಾಯಪಡಿಸಿದ್ದೇನೆ;


ಯೆಹೋವ ದೇವರು ಹೇಳುತ್ತಾರೆ, ಇಗೋ, ನಾನು ಆಜ್ಞಾಪಿಸಿ ಅವರನ್ನು ಈ ಪಟ್ಟಣದ ಬಳಿಗೆ ತಿರುಗಿ ಬರಮಾಡುವೆನು; ಅವರು ಅದಕ್ಕೆ ವಿರೋಧವಾಗಿ ಯುದ್ಧಮಾಡಿ, ಅದನ್ನು ಹಿಡಿದು ಬೆಂಕಿಯಿಂದ ಸುಡುವರು ಮತ್ತು ಯೆಹೂದದ ಪಟ್ಟಣಗಳನ್ನು ನಿವಾಸಿಗಳಿಲ್ಲದೆ ಹಾಳಾಗಿ ಮಾಡುವೆನು.”


ಇಸ್ರಾಯೇಲಿನ ದೇವರೂ, ಸರ್ವಶಕ್ತರೂ ಆದ ಯೆಹೋವ ದೇವರು ಹೀಗೆ ಹೇಳುತ್ತಾರೆ: ‘ನನ್ನ ರೌದ್ರ ಕೋಪಾಗ್ನಿಯು ಯೆರೂಸಲೇಮಿನ ಮೇಲೆ ಹೇಗೆ ಸುರಿಯಿತೋ, ಹಾಗೆಯೇ ನೀವು ಈಜಿಪ್ಟಿನಲ್ಲಿ ಕಾಲಿಟ್ಟ ಕೂಡಲೇ, ನನ್ನ ಕೋಪಾಗ್ನಿ ನಿಮ್ಮ ಮೇಲೆಯೂ ಸುರಿಯುವುದು. ನೀವು ಅಪವಾದ, ಅಪಹಾಸ್ಯಕ್ಕೂ, ಶಾಪ, ನಿಂದೆ, ದೂಷಣೆಗಳಿಗೂ ಗುರಿಯಾಗುವಿರಿ. ಈ ಸ್ಥಳವನ್ನು ನೀವು ಮತ್ತೆ ನೋಡಲಾರಿರಿ.’


ಹಾರಿಹೋಗುವ ಹಾಗೆ ಮೋವಾಬಿಗೆ ರೆಕ್ಕೆಗಳನ್ನು ಕೊಡಿರಿ; ಏಕೆಂದರೆ ಅದರ ಪಟ್ಟಣಗಳು ಹಾಳಾಗುವುವು; ಅವುಗಳಲ್ಲಿ ನಿವಾಸಿಗಳಿರುವುದಿಲ್ಲ.


ಇಸ್ರಾಯೇಲನ ಮನೆತನದವರು ತಮ್ಮ ಅಕ್ರಮಗಳ ನಿಮಿತ್ತವಾಗಿ ಸೆರೆಗೆ ಹೋದರೆಂದು ಇತರ ಜನಾಂಗಗಳು ತಿಳಿಯುವುವು. ಅವರು ನನಗೆ ವಿರೋಧವಾಗಿ ವಿಶ್ವಾಸದ್ರೋಹಮಾಡಿದ್ದರಿಂದ ನಾನು ಅವರಿಗೆ ನನ್ನ ಮುಖವನ್ನು ಮರೆಮಾಡಿಕೊಂಡು ಅವರನ್ನು ಅವರ ವೈರಿಗಳ ಕೈಗೆ ಒಪ್ಪಿಸಿದೆನು. ಹೀಗೆ ಅವರೆಲ್ಲರೂ ಖಡ್ಗದಿಂದ ಹತರಾದರು.


ದೇವರ ಕಟ್ಟಳೆಗಳನ್ನೂ, ದೇವರು ತಮ್ಮ ಪಿತೃಗಳ ಸಂಗಡ ಮಾಡಿದ ಒಡಂಬಡಿಕೆಯನ್ನೂ, ಅವರಿಗೆ ಹೇಳಿದ ಎಚ್ಚರಿಕೆಯನ್ನೂ ತಿರಸ್ಕರಿಸಿದರು. ಅವರು ವ್ಯರ್ಥವಾದ ವಿಗ್ರಹಗಳನ್ನು ಹಿಂಬಾಲಿಸಿ, ನಿಷ್ಪ್ರಯೋಜಕರಾದರು. “ನೀವು ಅವರ ಹಾಗೆ ಮಾಡಬೇಡಿರಿ,” ಎಂದು ಯೆಹೋವ ದೇವರು ಅವರಿಗೆ ಆಜ್ಞಾಪಿಸಿದ್ದರೂ, ಅವರು ತಮ್ಮ ಸುತ್ತಲಿನ ಜನರನ್ನೇ ಅನುಸರಿಸಿದರು.


ಇವುಗಳ ನಿಮಿತ್ತ ನಾನು ಶಿಕ್ಷಿಸಬಾರದೇ? ಇಂಥಾ ಜನಾಂಗಕ್ಕೆ ನನ್ನ ಪ್ರಾಣವು ಮುಯ್ಯಿಗೆ ಮುಯ್ಯಿ ತೀರಿಸುವುದಿಲ್ಲವೋ? ಎಂದು ಯೆಹೋವ ದೇವರು ಹೇಳುತ್ತಾರೆ.


ಎಲ್ಲಾ ಇಸ್ರಾಯೇಲರು ನಿಮ್ಮ ನಿಯಮವನ್ನು ಮೀರಿ ನಿಮಗೆ ವಿಧೇಯರಾಗದೇ ತೊಲಗಿ ಹೋದರು. “ಆದ್ದರಿಂದ ಶಾಪವೂ, ದೇವರ ಸೇವಕನಾದ ಮೋಶೆಯು ನಿಯಮದಲ್ಲಿ ಬರೆದ ನ್ಯಾಯ ತೀರ್ಪುಗಳೂ ಅವರಿಗೆ ವಿರುದ್ಧವಾಗಿ ನಾವು ಮಾಡಿದ ಪಾಪದ ನಿಮಿತ್ತ, ನಮ್ಮ ಮೇಲೆ ಸುರಿಯಲಾಗಿದೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು