Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 44:25 - ಕನ್ನಡ ಸಮಕಾಲಿಕ ಅನುವಾದ

25 ಇಸ್ರಾಯೇಲಿನ ದೇವರಾದ ಸೇನಾಧೀಶ್ವರ ಯೆಹೋವ ದೇವರು ಹೀಗೆ ಹೇಳುತ್ತಾರೆ: ‘ನೀವೂ, ನಿಮ್ಮ ಹೆಂಡತಿಯರೂ ಗಗನದ ಒಡತಿಗೆ ಧೂಪ ಸುಡುತ್ತೇವೆಂದೂ, ಅವಳಿಗೆ ಪಾನಾರ್ಪಣೆಗಳನ್ನು ಹೊಯ್ಯುತ್ತೇವೆಂದೂ ನಾವು ಮಾಡಿರುವ ಪ್ರಮಾಣಗಳನ್ನು ನಿಶ್ಚಯವಾಗಿ ನಡೆಸುವೆವೆಂದೂ, ನಿಮ್ಮ ಬಾಯಿಗಳಿಂದ ಹೇಳಿ ನಿಮ್ಮ ಕೈಗಳಿಂದ ಸಹ ಈಡೇರಿಸಿದ್ದೀರಿ.’ “ನಿಮ್ಮ ಪ್ರಮಾಣಗಳನ್ನು ನಿಶ್ಚಯವಾಗಿ ನಡೆಸುವಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

25 ಇಸ್ರಾಯೇಲಿನ ದೇವರೂ ಸೇನಾಧೀಶ್ವರನೂ ಆದ ಯೆಹೋವನು ಇಂತೆನ್ನುತ್ತಾನೆ, ಗಗನದ ಒಡತಿಗೆ ಧೂಪಹಾಕಿ ಪಾನನೈವೇದ್ಯವನ್ನು ಸುರಿಯುವೆವು ಎಂದು ನಾವು ಮಾಡಿಕೊಂಡ ಹರಕೆಗಳನ್ನು ಖಂಡಿತವಾಗಿ ತೀರಿಸುವೆವು ಎಂಬುದಾಗಿ ನೀವೂ, ನಿಮ್ಮ ಹೆಂಡತಿಯರೂ ಬಾಯಿಂದ ಪ್ರತಿಜ್ಞೆಮಾಡಿ ಕೈಯಿಂದ ನೆರವೇರಿಸಿದ್ದೀರಲ್ಲಾ; ನಿಮ್ಮ ಹರಕೆಗಳನ್ನು ಖಂಡಿತವಾಗಿ ತೀರಿಸಿರಿ, ನೆರವೇರಿಸೇ ನೆರವೇರಿಸಿರಿ!

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

25 ಇಸ್ರಾಯೇಲಿನ ದೇವರೂ ಸೇನಾಧೀಶ್ವರನೂ ಆದ ಯೆಹೋವನು ಇಂತೆನ್ನುತ್ತಾನೆ - ಗಗನದ ಒಡತಿಗೆ ಧೂಪಹಾಕಿ ಪಾನನೈವೇದ್ಯವನ್ನು ಸುರಿಯುವೆವು ಎಂದು ನಾವು ಮಾಡಿಕೊಂಡ ಹರಕೆಗಳನ್ನು ಖಂಡಿತವಾಗಿ ತೀರಿಸುವೆವು ಎಂಬದಾಗಿ ನೀವೂ ನಿಮ್ಮ ಹೆಂಡಿರೂ ಬಾಯಿಂದ ಪ್ರತಿಜ್ಞೆಮಾಡಿ ಕೈಯಿಂದ ನೆರವೇರಿಸಿದ್ದೀರಲ್ಲಾ; ನಿಮ್ಮ ಹರಕೆಗಳನ್ನು ತೀರಿಸೇ ತೀರಿಸಿರಿ, ನೆರವೇರಿಸೇ ನೆರವೇರಿಸಿರಿ!

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

25 ಇಸ್ರೇಲರ ಸರ್ವಶಕ್ತನಾದ ಯೆಹೋವನು ಹೀಗೆ ಹೇಳುತ್ತಾನೆ: ‘ಸ್ತ್ರೀಯರೇ “ಹರಕೆ ಹೊತ್ತಂತೆ ನಡೆದುಕೊಳ್ಳುವೆವು. ನಾವು ಮಾಡಿದ ಹರಕೆಗಳನ್ನು ಈಡೇರಿಸುವೆವು. ನಾವು ಸ್ವರ್ಗದ ರಾಣಿಗೆ ನೈವೇದ್ಯವನ್ನು ಮತ್ತು ಪಾನನೈವೇದ್ಯವನ್ನು ಮಾಡುತ್ತೇವೆಂದು ಹರಕೆ ಹೊತ್ತಿದ್ದೆವು” ಎಂದು ನೀವು ಹೇಳಿದ ಹಾಗೆ ಮಾಡಿರಿ. ನೀವು ಹರಕೆ ಹೊತ್ತ ಹಾಗೆ ಮಾಡಿರಿ. ನಿಮ್ಮ ಹರಕೆಗಳನ್ನು ಪೂರ್ಣಗೊಳಿಸಿರಿ.’

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 44:25
9 ತಿಳಿವುಗಳ ಹೋಲಿಕೆ  

ಆಗ ಅರಸನು ದುಃಖಪಟ್ಟರೂ ತನ್ನ ಪ್ರಮಾಣದ ನಿಮಿತ್ತವಾಗಿ ಮತ್ತು ಭೋಜನಕ್ಕೆ ಬಂದ ಅತಿಥಿಗಳ ನಿಮಿತ್ತವಾಗಿ ಅದನ್ನು ಅವಳಿಗೆ ಕೊಡುವಂತೆ ಅಪ್ಪಣೆಕೊಟ್ಟನು.


ಸ್ವಂತ ಅವಮಾನವೆಂಬ ನೊರೆಯನ್ನು ಕಾರುವ ಸಮುದ್ರದ ಹುಚ್ಚುತೆರೆಗಳೂ ಆಗಿದ್ದಾರೆ. ಅಲೆಯುವ ನಕ್ಷತ್ರಗಳಾದ ಇವರ ಪಾಲಿಗೆ ಕಾರ್ಗತ್ತಲೆಯು ಸದಾಕಾಲಕ್ಕೆ ಇಡಲಾಗಿದೆ.


“ ‘ನಿಮ್ಮ ವಿಷಯವಾಗಿ, ಓ ಇಸ್ರಾಯೇಲಿನ ಮನೆತನದವರೇ, ಸಾರ್ವಭೌಮ ಯೆಹೋವ ದೇವರು ಹೀಗೆ ಹೇಳುತ್ತಾರೆ: ಹೋಗಿರಿ, ನಿಮ್ಮ ನಿಮ್ಮ ವಿಗ್ರಹಗಳನ್ನು ಸೇವಿಸಿರಿ. ಆದರೆ ನಂತರ ನೀವು ಖಂಡಿತವಾಗಿಯೂ ನನ್ನ ಮಾತನ್ನು ಕೇಳುತ್ತೀರಿ ಮತ್ತು ನಿಮ್ಮ ದಾನಗಳಿಂದಲೂ, ನಿಮ್ಮ ವಿಗ್ರಹಗಳಿಂದಲೂ ಇನ್ನು ಮೇಲೆ ನನ್ನ ಪರಿಶುದ್ಧ ಹೆಸರನ್ನು ಅಪವಿತ್ರಪಡಿಸಬೇಡಿರಿ.


“ಮರಣದ ಸಂಗಡ ಒಡಂಬಡಿಕೆಯನ್ನು ಮಾಡಿದ್ದೇವೆ. ಪಾತಾಳದ ಸಂಗಡ ಒಪ್ಪಂದ ಮಾಡಿಕೊಂಡಿದ್ದೇವೆ. ವಿಪರೀತವಾದ ಶಿಕ್ಷೆಯು ಹಾದುಹೋಗುವಾಗ, ಅದು ನಮ್ಮನ್ನು ಮುಟ್ಟದು; ನಮ್ಮ ಅಸತ್ಯವನ್ನು ಆಶ್ರಯವಾಗಿ ಮಾಡಿಕೊಂಡು, ಮೋಸದಲ್ಲಿ ಅಡಗಿಕೊಂಡಿದ್ದೇವೆ,” ಎನ್ನುತ್ತೀರಲ್ಲಾ?


ಆದ್ದರಿಂದ ದೇವರ ದೃಷ್ಟಿಯಿಂದ ದುಷ್ಟರು ಅಡಗಿಕೊಳ್ಳಲು, ಗಾಢಾಂಧಕಾರವೂ ಇಲ್ಲ, ನೆರಳೂ ಇರುವುದಿಲ್ಲ.


ಈ ಪಟ್ಟಣಕ್ಕೆ ವಿರೋಧವಾಗಿ ಯುದ್ಧಮಾಡುವ ಬಾಬಿಲೋನಿಯರು ಬಂದು, ಈ ಪಟ್ಟಣಕ್ಕೆ ಬೆಂಕಿ ಹಚ್ಚಿ; ಅದನ್ನೂ ಮತ್ತು ಯಾವ ಮನೆಗಳ ಮಾಳಿಗೆಗಳ ಮೇಲೆ ಬಾಳನಿಗೆ ಧೂಪವನ್ನರ್ಪಿಸಿ, ನನಗೆ ಕೋಪೋದ್ರೇಕ ಎಬ್ಬಿಸುವ ಹಾಗೆ, ಬೇರೆ ದೇವರುಗಳಿಗೆ ಪಾನದ ಅರ್ಪಣೆಗಳನ್ನು ಹೊಯ್ದಿದ್ದಾರೋ ಅವುಗಳನ್ನೂ ಸುಟ್ಟುಬಿಡುವರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು