Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 46:17 - ಕನ್ನಡ ಸಮಕಾಲಿಕ ಅನುವಾದ

17 ಈಜಿಪ್ಟಿನ ಅರಸನಾದ ಫರೋಹನು ನಾಶವಾದನು; ಸಮಯವನ್ನು ತಪ್ಪಿಸಿದ್ದಾನೆಂದು ಅಲ್ಲಿ ಕೂಗುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

17 ಐಗುಪ್ತದ ಅರಸನಾದ ಫರೋಹನು ಧಡಮ್ಮನೆ ಬಿದ್ದವನು, ಸದಾವಕಾಶವನ್ನು ಉಪೇಕ್ಷಿಸಿದವನು” ಎಂದು ಅಲ್ಲಿ ಕೂಗಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

17 ಈಜಿಪ್ಟಿನ ಅರಸನು ಗಡಿಬಿಡಿಯ ಮಾತಾಡಿ ಸದಾವಕಾಶವನ್ನು ಕಳೆದುಕೊಂಡವನೆಂದು ಕರೆಸಿಕೊಂಡ ವ್ಯಕ್ತಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

17 ಐಗುಪ್ತದ ಅರಸನಾದ ಫರೋಹನು ಧಡಮ್ಮನೆ ಬಿದ್ದವನು, ಯುಕ್ತಸಮಯವನ್ನು ಉಪೇಕ್ಷಿಸಿದವನು ಎಂದು ಅಲ್ಲಿ ಕೂಗಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

17 ‘ಈಜಿಪ್ಟಿನ ರಾಜನಾದ ಫರೋಹನು ಕೇವಲ ಒಂದು ಪೊಳ್ಳು ಧ್ವನಿ. ಅವನ ವೈಭವದ ದಿನಗಳು ಮುಗಿದವು’” ಎಂದು ಆ ಸೈನಿಕರು ತಮ್ಮ ಜನ್ಮಭೂಮಿಯಲ್ಲಿ ಹೇಳುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 46:17
11 ತಿಳಿವುಗಳ ಹೋಲಿಕೆ  

ಆಗ ಬೆನ್ಹದದನು ದೂತರನ್ನು ಕಳುಹಿಸಿ ಅಹಾಬನಿಗೆ, “ನನ್ನ ಸೈನಿಕರು ಸಮಾರ್ಯದ ಒಂದು ಹಿಡಿ ಧೂಳನ್ನು ಬಿಡುವುದಿಲ್ಲ. ಬಿಟ್ಟರೆ ದೇವರುಗಳು ನನಗೆ ಇದಕ್ಕಿಂತ ಹೆಚ್ಚಾಗಿ ನನಗೆ ಕೆಟ್ಟದ್ದನ್ನು ಮಾಡಲಿ,” ಎಂದು ಅವನಿಗೆ ಇನ್ನೊಂದು ಸುದ್ದಿಯನ್ನು ಹೇಳಿ ಕಳುಹಿಸಿದನು.


ಶತ್ರುವು ಹೆಮ್ಮೆಯಿಂದ ಹೀಗೆ ಮಾತನಾಡಿಕೊಳ್ಳುತ್ತಿದ್ದರು, ‘ನಾನು ಹಿಂದಟ್ಟುವೆನು, ಅವರನ್ನು ಹಿಡಿಯುವೆನು, ನಾನು ಅವರ ಕೊಳ್ಳೆಯನ್ನು ಹಂಚುವೆನು; ನನ್ನ ಆಶೆಗಳು ಅವರಿಂದ ತೃಪ್ತಿ ಹೊಂದುವುವು; ನಾನು ನನ್ನ ಖಡ್ಗವನ್ನು ಹಿರಿಯುವೆನು; ನನ್ನ ಕೈ ಅವರನ್ನು ಸಂಹಾರ ಮಾಡುವುದು.’


“ ‘ನೀನು ಹೀಗೆ ಘನತೆಯಿಂದಲೂ ದೊಡ್ಡಸ್ತಿಕೆಯಿಂದಲೂ ಏದೆನಿನ ಯಾವ ಮರಗಳಿಗೆ ಸಮನಾಗಿರುವೆ? ಆದರೂ ನೀನು ಏದೆನಿನ ಮರಗಳ ಸಂಗಡ ಭೂಮಿಯ ಕೆಳಭಾಗಗಳಿಗೆ ದೂಡಿದವನಾಗುವೆ. ಸುನ್ನತಿಯಿಲ್ಲದವರ ಮಧ್ಯದಲ್ಲಿ ಖಡ್ಗದಿಂದ ಹತರಾದವರ ಸಂಗಡ ಮಲಗುವೆ. “ ‘ಇದೇ ಫರೋಹನನೂ ಅವನ ಎಲ್ಲಾ ಜನಸಮೂಹವೂ ಆಗಿವೆ ಎಂದು ಸಾರ್ವಭೌಮ ಯೆಹೋವ ದೇವರು ಹೇಳುತ್ತಾರೆ.’ ”


ನೀನು ಮಾತನಾಡಿ ಹೇಳಬೇಕಾದದ್ದೇನೆಂದರೆ, ‘ಸಾರ್ವಭೌಮ ಯೆಹೋವ ದೇವರು ಹೀಗೆ ಹೇಳುತ್ತಾರೆ: “ ‘ಈಜಿಪ್ಟಿನ ಅರಸನಾದ ಫರೋಹನೇ, ತನ್ನ ನದಿಗಳ ಮಧ್ಯದಲ್ಲಿ ಮಲಗಿಕೊಂಡು ಈ ನೈಲ್ ನದಿ ನನ್ನದು, ನಾನೇ ಅದನ್ನು ನನಗೋಸ್ಕರ ಮಾಡಿಕೊಂಡಿದ್ದೇನೆಂದು ಹೇಳಿಕೊಂಡ ದೊಡ್ಡ ಘಟಸರ್ಪವೇ, ಇಗೋ, ನಾನು ನಿನಗೆ ವಿರುದ್ಧವಾಗಿದ್ದೇನೆ.


ಈಜಿಪ್ಟಿನವರು ಮನುಷ್ಯ ಮಾತ್ರದವರೇ, ದೇವರಲ್ಲ; ಅವರ ಅಶ್ವಗಳು ಆತ್ಮವಲ್ಲ, ಮೂಳೆಮಾಂಸವೇ. ಹೀಗಿರುವುದರಿಂದ ಯೆಹೋವ ದೇವರು ತನ್ನ ಕೈಚಾಚುವಾಗ ಸಹಾಯ ಮಾಡಿದವನು ಮತ್ತು ಸಹಾಯ ಪಡೆದವನೂ ಬಿದ್ದುಹೋಗುವನು. ಅಂತೂ ಎಲ್ಲರೂ ಒಟ್ಟಿಗೆ ಲಯವಾಗುವರು.


ಆಗ ಅವರು, “ಅವರು ಸಮಾಧಾನಕ್ಕೋಸ್ಕರ ಹೊರಟು ಬಂದಿದ್ದರೆ, ಅವರನ್ನು ಜೀವಿತರಾಗಿ ಹಿಡಿಯಿರಿ. ಯುದ್ಧಕ್ಕೋಸ್ಕರ ಹೊರಟು ಬಂದಿದ್ದರೆ, ಅವರನ್ನು ಜೀವಿತರಾಗಿ ಹಿಡಿಯಿರಿ,” ಎಂದನು.


ನೀವು ನಿಮ್ಮ ಶ್ವಾಸ ಊದಿದಾಗ ಸಮುದ್ರವು ಅವರನ್ನು ನುಂಗಿಕೊಂಡಿತು. ಅವರು ಸೀಸದಂತೆ ಮಹಾಸಾಗರದಲ್ಲಿ ಮುಳುಗಿ ಹೋದರು.


ಅದಕ್ಕೆ ಇಸ್ರಾಯೇಲಿನ ಅರಸನು ಉತ್ತರವಾಗಿ, “ಅವನಿಗೆ ಹೇಳು, ‘ತನ್ನ ಆಯುಧಗಳನ್ನು ಅದನ್ನು ಬಿಚ್ಚಿಡುವ ಜಯಶಾಲಿಯಂತೆ ಹೊಗಳಿಕೊಳ್ಳದೆ ಇರಲಿ’ ” ಎಂದನು.


ಪ್ರತಿಯೊಂದಕ್ಕೂ ಒಂದೊಂದು ಸಮಯವಿದೆ. ಆಕಾಶದ ಕೆಳಗೆ ಪ್ರತಿಯೊಂದು ಕಾರ್ಯಕ್ಕೂ ಒಂದು ಕಾಲವಿದೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು