Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 46:6 - ಕನ್ನಡ ಸಮಕಾಲಿಕ ಅನುವಾದ

6 “ವೇಗಶಾಲಿಗಳು ಓಡಿ ಹೋಗದಿರಲಿ; ಪರಾಕ್ರಮಶಾಲಿಯು ತಪ್ಪಿಸಿಕೊಳ್ಳದಿರಲಿ; ಉತ್ತರದಲ್ಲಿ ಯೂಫ್ರೇಟೀಸ್ ನದಿಯ ತೀರದಲ್ಲಿ ಅವರು ಎಡವಿಬೀಳುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

6 ವೇಗಶಾಲಿಗಳೂ ಓಡಿಹೋಗಲಾರರು, ಬಲಿಷ್ಠರೂ ತಪ್ಪಿಸಿಕೊಳ್ಳಲಾರರು. ಉತ್ತರ ದಿಕ್ಕಿನಲ್ಲಿ ಯೂಫ್ರೆಟಿಸ್ ನದಿಯ ಹತ್ತಿರ ಎಡವಿಬಿದ್ದಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

6 “ವೇಗಶಾಲಿಗಳು ಓಡಿಹೋಗಲಾರರು ಬಲಿಷ್ಟರು ತಪ್ಪಿಸಿಕೊಳ್ಳಲಾರರು. ಉತ್ತರದಲ್ಲಿ, ಯೂಫ್ರೆಟಿಸ್ ನದಿಯ ಹತ್ತಿರದಲ್ಲಿ, ಎಡವಿಬಿದ್ದಿರುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

6 ವೇಗಶಾಲಿಗಳೂ ಓಡಿಹೋಗಲಾರರು, ಬಲಿಷ್ಠರೂ ತಪ್ಪಿಸಿಕೊಳ್ಳಲಾರರು; ಬಡಗಲಲ್ಲಿ ಯೂಫ್ರೇಟೀಸ್ ನದಿಯ ಹತ್ತಿರ ಎಡವಿಬಿದ್ದಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

6 “ವೇಗಶಾಲಿಗಳೂ ಓಡಿಹೋಗಲಾರರು. ಶೂರಸೈನಿಕರೂ ತಪ್ಪಿಸಿಕೊಳ್ಳಲಾರರು. ಅವರೆಲ್ಲರೂ ಎಡವಿ ಬಿದ್ದುಬಿಡುವರು. ಇದೆಲ್ಲ ಉತ್ತರದಲ್ಲಿ ಯೂಫ್ರೇಟೀಸ್ ನದಿಯ ಹತ್ತಿರ ನಡೆಯುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 46:6
22 ತಿಳಿವುಗಳ ಹೋಲಿಕೆ  

ಆಗ ಅವನು ತನ್ನ ಸ್ವದೇಶದ ಕೋಟೆಗೆ ಮುಖವನ್ನು ತಿರುಗಿಸುವನು. ಆದರೆ ಅವನು ಎಡವಿಬಿದ್ದು, ಕಾಣದೆ ಹೋಗುವನು.


ಜನಾಂಗಗಳು ನಿನ್ನ ಮಾನಭಂಗವನ್ನು ಕುರಿತು ಕೇಳಿವೆ; ನಿನ್ನ ಕೂಗು ದೇಶವನ್ನು ತುಂಬಿಸಿದೆ. ಏಕೆಂದರೆ ಪರಾಕ್ರಮಶಾಲಿಯು ಪರಾಕ್ರಮಶಾಲಿಯ ಮೇಲೆ ವಿರೋಧವಾಗಿ ಎಡವಿದ್ದಾರೆ. ಇಬ್ಬರೂ ಬಿದ್ದು ಹೋಗಿದ್ದಾರೆ.”


ಅಹಂಕಾರದಿಂದ ಕೂಡಿದ ರಾಜ್ಯ ಎಡವಿ ಬೀಳುವುದು. ಅದನ್ನು ಯಾರೂ ಎತ್ತರು. ಅದರ ನಗರಗಳಿಗೆ ಬೆಂಕಿ ಹೊತ್ತಿಸುವೆನು. ಅದು ಸುತ್ತಮುತ್ತಣದನ್ನೆಲ್ಲ ನುಂಗಿಬಿಡುವುದು.”


ಅವರು ಪದೇಪದೇ ಎಡವುತ್ತಾರೆ. ಹೌದು, ಒಬ್ಬರ ಮೇಲೊಬ್ಬರು ಬಿದ್ದರು. ‘ಅವರು ಉಪದ್ರವ ಪಡಿಸುವವರ ಖಡ್ಗವನ್ನು ಬಿಟ್ಟು, ಸ್ವಂತ ಜನರ ಬಳಿಗೂ, ನಾವು ಹುಟ್ಟಿದ ದೇಶದ ಬಳಿಗೂ ತಿರುಗಿ ಹೋಗೋಣ,’ ಎಂದು ಹೇಳಿದರು.


ಏಕೆಂದರೆ ಇದು ಸೇನಾಧೀಶ್ವರ ಯೆಹೋವನಾದ ದೇವರ ದಿವಸವೇ. ಆತನು ತನ್ನ ಶತ್ರುಗಳಿಗೆ ಮುಯ್ಯಿಗೆ ಮುಯ್ಯಿ ತೀರಿಸುವ ದಿವಸವು, ಖಡ್ಗವು ಸಂಹರಿಸಿ ಅವರ ರಕ್ತದಿಂದ ತೃಪ್ತಿಯಾಗಿ ಮತ್ತವಾಗುವುದು. ಏಕೆಂದರೆ ಉತ್ತರ ದೇಶದಲ್ಲಿ ಯೂಫ್ರೇಟೀಸ್ ನದಿಯ ಬಳಿಯಲ್ಲಿ ಸೇನಾಧೀಶ್ವರ ಯೆಹೋವರಾದ ದೇವರಿಗೆ ಬಲಿ ಆಗುತ್ತದೆ.


ಇಗೋ, ನಾನು ಕಳುಹಿಸಿ ಉತ್ತರ ದಿಕ್ಕಿನ ಗೋತ್ರಗಳೆಲ್ಲವನ್ನೂ, ನನ್ನ ಸೇವಕನಾದ ಬಾಬಿಲೋನಿನ ಅರಸನಾದ ನೆಬೂಕದ್ನೆಚ್ಚರನನ್ನೂ ತೆಗೆದುಕೊಂಡು, ಈ ದೇಶಕ್ಕೆ ವಿರೋಧವಾಗಿಯೂ, ಅವರ ನಿವಾಸಿಗಳಿಗೆ ವಿರೋಧವಾಗಿಯೂ ಸುತ್ತಲಿರುವ ಈ ಎಲ್ಲಾ ಜನಾಂಗಗಳಿಗೆ ವಿರೋಧವಾಗಿಯೂ ತರಿಸಿ, ಅವರನ್ನು ಸಂಪೂರ್ಣ ನಾಶಮಾಡಿ ಅವರನ್ನು ಭಯಕ್ಕೂ, ಪರಿಹಾಸ್ಯಕ್ಕೂ ಗುರಿಮಾಡಿ ನಿತ್ಯ ನಾಶಮಾಡುವೆನು.


ಆದರೆ ಯೆಹೋವ ದೇವರು ಭಯಂಕರವಾದ ಪರಾಕ್ರಮಶಾಲಿಯ ಹಾಗೆ ನನ್ನ ಸಂಗಡ ಇದ್ದಾರೆ. ಆದ್ದರಿಂದ ನನ್ನನ್ನು ಹಿಂಸಿಸುವವರು ಎಡವುವರು, ಗೆಲ್ಲುವುದಿಲ್ಲ. ಅನುಕೂಲವಾಗದೆ ಇದ್ದುದರಿಂದ ಅವರು ಬಹಳವಾಗಿ ನಾಚಿಕೆಪಡುವರು. ಅವರ ಅವಮಾನವು ಎಂದಿಗೂ ಮರೆಯದ ಅವಮಾನವಾಗಿರುವುದು.


“ಓ ಬೆನ್ಯಾಮೀನನ ಮಕ್ಕಳೇ! ನಿಮ್ಮ ಸುರಕ್ಷತೆಗಾಗಿ ಯೆರೂಸಲೇಮಿನಿಂದ ಓಡಿಹೋಗಿರಿ, ತೆಕೋವದಲ್ಲಿ ತುತೂರಿ ಊದಿರಿ; ಬೇತ್ ಹಕ್ಕೆರೆಮಿನಲ್ಲಿ ಧ್ವಜವನ್ನೆತ್ತಿರಿ. ಏಕೆಂದರೆ ಕೇಡೂ ದೊಡ್ಡ ನಾಶವೂ ಉತ್ತರದ ಕಡೆಯಿಂದ ತೋರುತ್ತವೆ.


ಚೀಯೋನಿನ ಕಡೆಗೆ ಧ್ವಜವನ್ನೆತ್ತಿರಿ; ವಿಳಂಬವಿಲ್ಲದೆ ಸುರಕ್ಷತೆಗಾಗಿ ಓಡಿಹೋಗಿರಿ. ಏಕೆಂದರೆ ನಾನು ಉತ್ತರದಿಂದ ಕೇಡನ್ನೂ, ದೊಡ್ಡ ನಾಶವನ್ನೂ ತರುತ್ತೇನೆ.”


ಆಗ ಯೆಹೋವ ದೇವರು ನನಗೆ, “ಉತ್ತರ ಕಡೆಯಿಂದ ದೇಶದ ನಿವಾಸಿಗಳೆಲ್ಲರ ಮೇಲೆ ಕೇಡು ಹೊರಟು ಬರುವುದು.


ಅವರಲ್ಲಿ ಅನೇಕರು ಎಡವಿಬೀಳುವರು, ಮುಗ್ಗರಿಸಿ ಮೂಳೆ ಮುರಿದುಕೊಳ್ಳುವರು, ಬಲೆಗೆ ಸಿಕ್ಕಿ ಬೀಳುವರು.”


ನಾನು ಮತ್ತೆ ಸೂರ್ಯನ ಕೆಳಗೆ ನೋಡಿದ್ದೇನೆಂದರೆ, ವೇಗಿಗಳಿಗೆ ಓಟವೂ ಪರಾಕ್ರಮಶಾಲಿಗಳಿಗೆ ಯುದ್ಧವೂ ಜ್ಞಾನಿಗಳಿಗೆ ಆಹಾರವೂ ವಿವೇಕಿಗಳಿಗೆ ಐಶ್ವರ್ಯವೂ ಪ್ರವೀಣರಿಗೆ ದಯೆಯೂ ಸಿಗುವುದು ಎಂಬ ನಿಶ್ಚಯ ಇಲ್ಲ. ಏಕೆಂದರೆ ಕಾಲವೂ ಅವಕಾಶವೂ ಅವರೆಲ್ಲರಿಗೆ ಒಳಪಟ್ಟಿರುತ್ತವೆ.


ದುಷ್ಟರು ನನ್ನನ್ನು ಬೀಳಿಸಬೇಕೆಂದು ನನಗೆ ವಿರೋಧವಾಗಿ ಸಮೀಪಿಸುವಾಗ, ನನ್ನ ವೈರಿಗಳು ತಾವೇ ಎಡವಿಬಿದ್ದರು.


ಪ್ರವಾಹದಂತಿರುವ ಆ ಸೈನ್ಯವೂ, ಒಡಂಬಡಿಕೆಯ ರಾಜಕುಮಾರನೂ ಅವನ ರಭಸಕ್ಕೆ ಸಿಕ್ಕಿ ಒಡೆದುಹೋಗಿ ನಾಶವಾಗುವರು.


ಅವನ ಕಾಲದಲ್ಲಿ ಈಜಿಪ್ಟಿನ ಅರಸ ಫರೋಹ ನೆಕೋ ಎಂಬವನು ಅಸ್ಸೀರಿಯದ ಅರಸನಿಗೆ ಸಹಾಯಮಾಡಲು ಯೂಫ್ರೇಟೀಸ್ ನದಿಯವರೆಗೆ ಹೋದನು. ಅರಸನಾದ ಯೋಷೀಯನು ಅವನನ್ನು ಯುದ್ಧದಲ್ಲಿ ಎದುರಿಸಲು ಹೋದಾಗ, ನೆಕೋ ಅವನನ್ನು ಎದುರಿಸಿ ಮೆಗಿದ್ದೋವಿನಲ್ಲಿ ಕೊಂದುಹಾಕಿದನು.


ಆದರೆ ಈಜಿಪ್ಟಿನ ಅರಸನು ತನ್ನ ದೇಶದಿಂದ ತಿರುಗಿ ಬರಲಿಲ್ಲ. ಏಕೆಂದರೆ ಈಜಿಪ್ಟ್ ನದಿ ಮೊದಲುಗೊಂಡು ಯೂಫ್ರೇಟೀಸ್ ನದಿಯವರೆಗೂ ಈಜಿಪ್ಟಿನ ಅರಸನಿಗೆ ಇದ್ದದ್ದನ್ನೆಲ್ಲಾ ಬಾಬಿಲೋನಿನ ಅರಸನು ಸ್ವಾಧೀನಮಾಡಿಕೊಂಡಿದ್ದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು