Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 48:32 - ಕನ್ನಡ ಸಮಕಾಲಿಕ ಅನುವಾದ

32 ಸಿಬ್ಮದ ದ್ರಾಕ್ಷಾಲತೆಯೇ, ಯಜ್ಜೇರಿನ ನಿಮಿತ್ತ ಅಳುವುದಕ್ಕಿಂತಲು ನಿನ್ನ ನಿಮಿತ್ತವಾಗಿ ಅಳುವೆನು; ನಿನ್ನ ಬಳ್ಳಿಗಳು ಸಮುದ್ರವನ್ನು ದಾಟಿದವು. ಯಜ್ಜೇರಿನ ಸಮುದ್ರಕ್ಕೆ ಮುಟ್ಟಿದವು; ನಿನ್ನ ಹಣ್ಣುಗಳ ಮೇಲೆಯೂ, ನಿನ್ನ ದ್ರಾಕ್ಷಿ ಸುಗ್ಗಿಯ ಮೇಲೆಯೂ ವಿನಾಶ ಮಾಡುವವನು ಬಿದ್ದಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

32 ಸಿಬ್ಮದ ದ್ರಾಕ್ಷಾಲತೆಯೇ, ಯಜ್ಜೇರಿನ ನಿಮಿತ್ತ ಅಳುವುದಕ್ಕಿಂತಲೂ ನಿನ್ನನ್ನು ಕಂಡು ಹೆಚ್ಚಾಗಿ ಅಳುವೆನು; ನಿನ್ನ ಶಾಖೆಗಳು ಸಮುದ್ರದಾಚೆಗೂ ಯಜ್ಜೇರಿನ ಸರೋವರದವರೆಗೂ ವ್ಯಾಪಿಸಿದ್ದವಲ್ಲಾ; ಈಗ ನಿನ್ನ ಹಣ್ಣುಹಂಪಲುಗಳ ಮೇಲೆಯೂ ಮತ್ತು ದ್ರಾಕ್ಷಿಯ ಸುಗ್ಗಿಯ ಮೇಲೆಯೂ ಸೂರೆಗಾರನು ಬಿದ್ದಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

32 ‘ಸಿಬ್ಮ’ದ ದ್ರಾಕ್ಷಾಲತೆಯೇ, ಯಜ್ಜೇರಿನ ನಿಮಿತ್ತ ದುಃಖಿಸುವುದಕ್ಕಿಂತಲು ನಿನ್ನನ್ನು ಕಂಡು ಹೆಚ್ಚಾಗಿ ದುಃಖಿಸುತ್ತೇನೆ. ನಿನ್ನ ಶಾಖೆಗಳು ಸಮುದ್ರದಾಚೆಗೂ ಯಜ್ಜೇರಿನ ಸರೋವರದವರೆಗೂ ವ್ಯಾಪಿಸಿವೆ. ಈಗ ನಿನ್ನ ಹಣ್ಣುಹಂಪಲುಗಳ ಮೇಲೆ ಹಾಗು ದ್ರಾಕ್ಷೆಯ ಸುಗ್ಗಿಯ ಮೇಲೆ ಸೂರೆಗಾರ ಬಂದೆರಗಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

32 ಸಿಬ್ಮದ ದ್ರಾಕ್ಷಾಲತೆಯೇ, ಯಜ್ಜೇರಿನ ನಿವಿುತ್ತ ಅಳುವದಕ್ಕಿಂತಲೂ ನಿನ್ನನ್ನು ಕಂಡು ಹೆಚ್ಚಾಗಿ ಅಳುವೆನು; ನಿನ್ನ ಶಾಖೆಗಳು ಸಮುದ್ರದಾಚೆಗೂ ಯಜ್ಜೇರಿನ ಸರೋವರದವರೆಗೂ ವ್ಯಾಪಿಸಿದ್ದವಲ್ಲಾ; ಈಗ ನಿನ್ನ ಹಣ್ಣುಹಂಪಲ ಮೇಲೆಯೂ ದ್ರಾಕ್ಷೆಯ ಸುಗ್ಗಿಯ ಮೇಲೆಯೂ ಸೂರೆಗಾರನು ಬಿದ್ದಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

32 ನಾನು ಯೆಜ್ಜೇರಿನ ಜನರೊಂದಿಗೆ ಯೆಜ್ಜೇರಿಗಾಗಿ ಪ್ರಲಾಪಿಸುವೆನು. ಸಿಬ್ಮವೇ, ನಿನ್ನ ದ್ರಾಕ್ಷಿಬಳ್ಳಿಗಳು ಸಮುದ್ರದವರೆಗೂ ಹಬ್ಬಿದ್ದವು; ಅವು ಯೆಜ್ಜೇರ್ ಪಟ್ಟಣದವರೆಗೂ ಚಾಚಿದ್ದವು. ಆದರೆ ವಿನಾಶಕನು ನಿನ್ನ ಹಣ್ಣುಗಳನ್ನು ಮತ್ತು ದ್ರಾಕ್ಷಿಗಳನ್ನು ಕಿತ್ತುಕೊಂಡಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 48:32
13 ತಿಳಿವುಗಳ ಹೋಲಿಕೆ  

ಇದಲ್ಲದೆ ಮೋಶೆಯು ಯಜ್ಜೇರನ್ನು ಸಂಚರಿಸಿ ನೋಡುವುದಕ್ಕೆ ಗೂಢಚಾರರನ್ನು ಕಳುಹಿಸಿದನು. ಅವರು ಅವರ ಗ್ರಾಮಗಳನ್ನು ವಶಪಡಿಸಿಕೊಂಡು, ಅಲ್ಲಿರುವ ಅಮೋರಿಯರನ್ನು ಹೊರಡಿಸಿಬಿಟ್ಟರು.


ಕಿರ್ಯಾತಯಿಮ್, ಸಿಬ್ಮಾ, ತಗ್ಗಿನ ಬೆಟ್ಟದಲ್ಲಿರುವ ಚೆರೆತ್ ಶಹರ್,


“ದೀಬೋನಿನ ನಿವಾಸಿಯಾದ ಮಗಳೇ, ನಿನ್ನ ವೈಭವದಿಂದ ಇಳಿದು ಬಾ; ಒಣಭೂಮಿಯ ಬಾಯಾರಿದವಳಂತೆ ಕೂತುಕೋ, ಏಕೆಂದರೆ ಮೋವಾಬನ್ನು ವಿನಾಶ ಮಾಡುವವನು ನಿನ್ನ ಮೇಲೆ ಬರುವನು; ನಿನ್ನ ಬಲವಾದ ಕೋಟೆಗಳನ್ನು ಕೆಡಿಸಿಬಿಡುವನು.


ಮೋವಾಬು ಸೂರೆಯಾಯಿತು. ಅದರ ಪಟ್ಟಣಗಳು ಏರಿ ಹೋದವು, ಅದರ ಶ್ರೇಷ್ಠ ಯೌವನಸ್ಥರು ಹತರಾಗುವುದಕ್ಕೆ ಹೋಗಿದ್ದಾರೆ,” ಎಂದು ಸರ್ವಶಕ್ತ ಯೆಹೋವ ಎಂಬ ಹೆಸರುಳ್ಳ ರಾಜಾಧಿರಾಜರ ನುಡಿ.


ಒಂದೊಂದು ಪಟ್ಟಣದ ಮೇಲೆ ವಿನಾಶಕನು ಬರುವನು; ಯೆಹೋವ ದೇವರು ಹೇಳಿದ ಹಾಗೆಯೇ, ಒಂದು ಪಟ್ಟಣವಾದರೂ ತಪ್ಪಿಸಿಕೊಳ್ಳಲಾರದು. ತಗ್ಗೂ ಸಹ ನಾಶವಾಗುವುದು; ಮತ್ತು ಬಯಲು ಹಾಳಾಗುವುದು.


ನಾನಾದರೋ ಇಗೋ, ನಾನು ನಮ್ಮ ಬಳಿಗೆ ಬರುವ ಬಾಬಿಲೋನಿಯರ ಹತ್ತಿರ ಕಾದುಕೊಳ್ಳುವುದಕ್ಕೆ ಮಿಚ್ಪದಲ್ಲಿ ವಾಸಮಾಡುವೆನು. ಆದರೆ ನೀವು ದ್ರಾಕ್ಷಾರಸವನ್ನೂ, ಹಣ್ಣುಗಳನ್ನೂ, ಎಣ್ಣೆಯನ್ನೂ ಕೂಡಿಸಿ, ನಿಮ್ಮ ಪಾತ್ರೆಗಳಲ್ಲಿ ಇಟ್ಟು, ನೀವು ಹಿಡಿದಿರುವ ನಿಮ್ಮ ಪಟ್ಟಣಗಳಲ್ಲಿ ವಾಸವಾಗಿರಿ,” ಎಂಬುದು.


ಹೆಷ್ಬೋನನ್ನೂ ಯಜ್ಜೇರನ್ನೂ ಹೀಗೆ ನಾಲ್ಕು ಪಟ್ಟಣಗಳನ್ನು ಅವುಗಳ ಗೋಮಾಳ ಸಹಿತವಾಗಿ ಕೊಡಲಾಯಿತು.


ನೆಬೋ, ಬಾಳ್ ಮೆಯೋನ್ ಎಂದು ಬೇರೆ ಈ ಹೆಸರು ಹೊಂದಿದ ಈ ಪಟ್ಟಣಗಳನ್ನೂ ಸಿಬ್ಮಾವನ್ನೂ ಕಟ್ಟಿ, ತಾವು ಕಟ್ಟಿದ ಪಟ್ಟಣಗಳಿಗೆ ಬೇರೆ ಹೆಸರುಗಳನ್ನು ಇಟ್ಟರು.


ಅಟ್ರೋತ್ಷೋಫಾನ್, ಯಜ್ಜೇರ್, ಯೊಗ್ಬೆಹಾ,


ರೂಬೇನನ ಮಕ್ಕಳಿಗೂ ಗಾದನ ಮಕ್ಕಳಿಗೂ ಅಧಿಕ ಸಂಖೆಯಲ್ಲಿ ಪಶುಗಳು ಇದ್ದವು. ಅವರು ಯಜ್ಜೇರ್, ಗಿಲ್ಯಾದ್ ಎಂಬ ದೇಶಗಳನ್ನು ನೋಡಿದಾಗ, ಅದು ಪಶುಗಳಿಗೆ ತಕ್ಕ ಸ್ಥಳವೆಂದು ತಿಳಿದುಕೊಂಡರು.


ಯಜ್ಜೇರ್ ಪ್ರದೇಶ, ಗಿಲ್ಯಾದಿನ ಸಮಸ್ತ ಪಟ್ಟಣಗಳೂ ರಬ್ಬಾ ಊರಿನ ಎದುರಾಗಿರುವ ಅರೋಯೇರ್ ಪಟ್ಟಣವರೆಗೂ ಇರುವ ಅಮ್ಮೋನಿಯರ ಅರ್ಧ ದೇಶವು.


“ಅಟಾರೋತ್, ದೀಬೋನ್, ಯಜ್ಜೇರ್, ನಿಮ್ರಾ, ಹೆಷ್ಬೋನ್, ಎಲೆಯಾಲೆ, ಸೆಬಾಮ್, ನೆಬೋ, ಬೆಯೋನ್ ಎಂಬವುಗಳು,


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು