Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 48:33 - ಕನ್ನಡ ಸಮಕಾಲಿಕ ಅನುವಾದ

33 ಫಲವುಳ್ಳ ಹೊಲದಿಂದಲೂ, ಮೋವಾಬಿನ ದೇಶದಿಂದಲೂ ಸಂತೋಷವೂ, ಉಲ್ಲಾಸವೂ ತೆಗೆಯಲಾಗಿವೆ; ಏಕೆಂದರೆ ದ್ರಾಕ್ಷಿ ಆಲೆಗಳೊಳಗಿಂದ ದ್ರಾಕ್ಷಾರಸವನ್ನು ನಿಲ್ಲಿಸಿದ್ದೇನೆ; ಅವರ ಆರ್ಭಟದ ಸಂಗಡ ಅವರು ಯಾರೂ ತುಳಿಯುವುದಿಲ್ಲ; ಆರ್ಭಟವೇ ಆರ್ಭಟವಾಗುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

33 ಹರ್ಷಾನಂದಗಳು ತೋಟಗಳಿಂದಲೂ, ಮೋವಾಬಿನ ಇಡೀ ದೇಶದಿಂದಲೂ ತೊಲಗಿವೆ; ತೊಟ್ಟಿಗಳಲ್ಲಿ ದ್ರಾಕ್ಷಾರಸವು ಇಲ್ಲದಂತೆ ಮಾಡಿದ್ದೇನೆ; ಯಾರೂ ದ್ರಾಕ್ಷಿತೊಟ್ಟಿಯಲ್ಲಿ ತುಳಿಯುತ್ತಾ ಹರ್ಷಧ್ವನಿಗೈಯರು; ಕೇಳಿಸುವ ಧ್ವನಿ ಹರ್ಷಧ್ವನಿಯಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

33 ಹರ್ಷಾನಂದಗಳು ತೋಟಗಳಿಂದಲೂ ಮೋವಾಬಿನ ಇಡೀ ನಾಡಿನಿಂದಲೂ ತೊಲಗಿವೆ. ತೊಟ್ಟಿಗಳಲ್ಲಿ ದ್ರಾಕ್ಷಾರಸ ಇಲ್ಲದಂತಾಗಿದೆ. ಯಾರೂ ತೊಟ್ಟಿಯಲ್ಲಿ ತುಳಿಯುತ್ತಾ ಆನಂದ ಧ್ವನಿಗೈಯುತ್ತಿಲ್ಲ. ಕೇಳಿಸುವಾ ಧ್ವನಿ ಆನಂದ ಧ್ವನಿ ಅಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

33 ಹರ್ಷಾನಂದಗಳು ತೋಟಗಳಿಂದಲೂ ಮೋವಾಬಿನ ಇಡೀ ದೇಶದಿಂದಲೂ ತೊಲಗಿವೆ; ತೊಟ್ಟಿಗಳಲ್ಲಿ ದ್ರಾಕ್ಷಾರಸವು ಇಲ್ಲದಂತೆ ಮಾಡಿದ್ದೇನೆ; ಯಾರೂ ತೊಟ್ಟಿಯಲ್ಲಿ ತುಳಿಯುತ್ತಾ ಹರ್ಷಧ್ವನಿಗೈಯರು; ಕೇಳಿಸುವ ಧ್ವನಿ ಹರ್ಷಧ್ವನಿಯಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

33 ಮೋವಾಬಿನ ದೊಡ್ಡದೊಡ್ಡ ದ್ರಾಕ್ಷಿತೋಟಗಳಿಂದ ಹರ್ಷವೂ ಆನಂದವೂ ಕಣ್ಮರೆಯಾಗಿವೆ. ದ್ರಾಕ್ಷಿಗಾಣದಿಂದ ದ್ರಾಕ್ಷಾರಸ ಹರಿಯುವದನ್ನು ನಾನು ನಿಲ್ಲಿಸಿದ್ದೇನೆ. ದ್ರಾಕ್ಷಾರಸವನ್ನು ಮಾಡಲು ದ್ರಾಕ್ಷಿಯನ್ನು ತುಳಿಯುವ ಜನರ ಹಾಡು ಮತ್ತು ನೃತ್ಯ ಕಂಡುಬರುವದಿಲ್ಲ. ಸಂತೋಷದ ಧ್ವನಿ ಕೇಳಿಬರುತ್ತಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 48:33
13 ತಿಳಿವುಗಳ ಹೋಲಿಕೆ  

ಆ ದಿನಗಳು ಇದ್ದದ್ದು ಮೊದಲುಗೊಂಡು, ಒಬ್ಬನು ಇಪ್ಪತ್ತು ಸೇರಿನ ರಾಶಿಗೆ ಬಂದಾಗ, ಹತ್ತು ಸೇರು ಮಾತ್ರ ಸಿಕ್ಕುತ್ತಿತ್ತು. ಒಬ್ಬನು ಐವತ್ತು ಪಾತ್ರೆ ದ್ರಾಕ್ಷಾರಸವನ್ನು ತುಂಬಿಸುವುದಕ್ಕೆ ತೊಟ್ಟಿಗೆ ಬಂದಾಗ, ಇಪ್ಪತ್ತು ಮಾತ್ರ ದೊರೆಯುತ್ತಿತ್ತಷ್ಟೆ.


ಹತ್ತು ಎಕರೆ ದ್ರಾಕ್ಷಿತೋಟ ಕೇವಲ ಇಪ್ಪತ್ತೆರಡು ಲೀಟರ್ ದ್ರಾಕ್ಷಾರಸವನ್ನು ಕೊಡುವುದು. ಸುಮಾರು ನೂರಾ ಅರವತ್ತು ಕಿಲೋಗ್ರಾಂ ಬೀಜಬಿತ್ತಿದರೆ, ಕೇವಲ ಹದಿನಾರು ಕಿಲೋಗ್ರಾಂ ಧಾನ್ಯ ಮಾತ್ರ ಸಿಗುವುದು.”


ನಮ್ಮ ಕಣ್ಣೆದುರೇ ಆಹಾರವು ಹಾಳಾಯಿತಲ್ಲಾ. ಸಂತೋಷವೂ ಉಲ್ಲಾಸವೂ ನಮ್ಮ ದೇವರ ಆಲಯವನ್ನು ಬಿಟ್ಟುಹೋಯಿತಲ್ಲವೇ?


ಅಮಲೇರಿದವರೇ, ಎಚ್ಚೆತ್ತು ಅಳಿರಿ; ದ್ರಾಕ್ಷಾರಸ ಕುಡಿಯುವವರೆಲ್ಲರೇ, ಹೊಸ ದ್ರಾಕ್ಷಾರಸದ ನಿಮಿತ್ತ ಗೋಳಾಡಿರಿ; ಏಕೆಂದರೆ, ಅದು ನಿಮ್ಮ ಬಾಯಿಗೆ ಇನ್ನು ದೊರಕುವುದಿಲ್ಲ.


ನೀವು ಜನಾಂಗವನ್ನು ವೃದ್ಧಿಗೊಳಿಸಿದ್ದೀರಿ ಮತ್ತು ಸಂತೋಷವನ್ನು ಹೆಚ್ಚಿಸಿದ್ದೀರಿ. ಸುಗ್ಗಿ ಕಾಲದ ಸಂತೋಷದಂತೆಯೂ, ಕೊಳ್ಳೆಯನ್ನು ಹಂಚಿಕೊಳ್ಳುವಾಗ ಉಲ್ಲಾಸಿಸುವ ಹಾಗೆಯೂ ನಿಮ್ಮ ಮುಂದೆ ಸಂತೋಷಿಸುವರು.


ಆ ದಿನದಲ್ಲಿ ಸಾವಿರ ಬೆಳ್ಳಿ ನಾಣ್ಯಗಳ ಬೆಲೆಯ ಸಮಸ್ತ ದ್ರಾಕ್ಷಿಬಳ್ಳಿಗಳು ಬೆಳೆಯುವ ಪ್ರತಿಯೊಂದು ಪ್ರದೇಶವು ಮುಳ್ಳು ಮತ್ತು ದತ್ತೂರಿಗಳಿಂದ ಆಗುವುದು.


ಎಲ್ಲಾ ದ್ರಾಕ್ಷಿ ತೋಟಗಳಲ್ಲೂ ಗೋಳಾಟವು ಇರುವುದು. ಏಕೆಂದರೆ ನಾನು ನಿನ್ನ ಮಧ್ಯೆ ಹಾದು ಹೋಗುವೆನು,” ಎಂದು ಯೆಹೋವ ದೇವರು ಹೇಳುತ್ತಾರೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು