Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 49:1 - ಕನ್ನಡ ಸಮಕಾಲಿಕ ಅನುವಾದ

1 ಅಮ್ಮೋನ್ಯರನ್ನು ಕುರಿತದ್ದು: ಯೆಹೋವ ದೇವರು ಹೀಗೆ ಹೇಳುತ್ತಾರೆ: “ಇಸ್ರಾಯೇಲಿಗೆ ಪುತ್ರರಿಲ್ಲವೋ? ಅವನಿಗೆ ಬಾಧ್ಯಸ್ಥನಿಲ್ಲವೋ? ಮಲ್ಕಾಮ್ ದೇವತೆಯು ಗಾದನ್ನು ಬಾಧ್ಯವಾಗಿ ತೆಗೆದುಕೊಳ್ಳುವುದು ಏಕೆ? ಅವನ ಜನರು ಅದರ ಪಟ್ಟಣಗಳಲ್ಲಿ ವಾಸಮಾಡುವುದು ಏಕೆ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

1 ಅಮ್ಮೋನ್ಯರನ್ನು ಕುರಿತು ಯೆಹೋವನು ಇಂತೆನ್ನುತ್ತಾನೆ, “ಇಸ್ರಾಯೇಲಿಗೆ ಮಕ್ಕಳಿಲ್ಲವೋ? ಬಾಧ್ಯನು ಇಲ್ಲವೋ? ಮಲ್ಕಾಮ್ ದೇವತೆಯು ಗಾದಿನ ಸೀಮೆಯನ್ನು ಸ್ವಾಧೀನ ಮಾಡಿಕೊಂಡಿರುವುದೇಕೆ? ಮಲ್ಕಾಮನ ಪ್ರಜೆಗಳು ಗಾದಿನ ಪಟ್ಟಣಗಳಲ್ಲಿ ಏಕೆ ವಾಸಿಸುತ್ತಾರೆ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

1 ಅಮ್ಮೋನ್ಯರನ್ನು ಕುರಿತು ಸರ್ವೇಶ್ವರ ಹೀಗೆನ್ನುತ್ತಾರೆ: “ಇಸ್ರಯೇಲಿಗೆ ಮಕ್ಕಳಿಲ್ಲವೆ? ಅದಕ್ಕೆ ನೆರವಾಗಲು ನೆಂಟನಿಲ್ಲವೆ? ಮಲ್ಕಾಮ್ ದೇವತೆಯು ಗಾದಿನ ನಾಡನ್ನು ಸ್ವಾಧೀನ ಮಾಡಿಕೊಂಡಿರುವುದೇಕೆ? ಮಲ್ಕಾಮನ ಪ್ರಜೆಗಳು ಗಾದಿನ ನಗರಗಳಲ್ಲಿ ವಾಸಿಸುತ್ತಿರುವುದೇಕೆ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

1 ಅಮ್ಮೋನ್ಯರನ್ನು ಕುರಿತದ್ದು. ಯೆಹೋವನು ಇಂತೆನ್ನುತ್ತಾನೆ - ಇಸ್ರಾಯೇಲಿಗೆ ಮಕ್ಕಳಿಲ್ಲವೋ? ಬಾಧ್ಯನು ಇಲ್ಲವೋ? ಮಲ್ಕಾಮ್ ದೇವತೆಯು ಗಾದಿನ ಸೀಮೆಯನ್ನು ಸ್ವಾಧೀನಮಾಡಿಕೊಂಡಿರುವದೇಕೆ, ಮಲ್ಕಾಮನ ಪ್ರಜೆಗಳು ಗಾದಿನ ಪಟ್ಟಣಗಳಲ್ಲಿ ಏಕೆ ವಾಸಿಸುತ್ತಾರೆ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

1 ಈ ಸಂದೇಶ ಅಮ್ಮೋನ್ಯರನ್ನು ಕುರಿತದ್ದು. ಯೆಹೋವನು ಹೀಗೆ ಹೇಳಿದನು: “ಅಮ್ಮೋನ್ಯರೇ, ಇಸ್ರೇಲಿನ ಜನರಿಗೆ ಮಕ್ಕಳಿಲ್ಲವೆಂದು ನೀವು ತಿಳಿದುಕೊಂಡಿರುವಿರೇನು? ತಂದೆತಾಯಿಗಳು ಸತ್ತಮೇಲೆ ಭೂಮಿಯನ್ನು ತೆಗೆದುಕೊಳ್ಳುವದಕ್ಕೆ ಅವರ ವಾರಸುದಾರರು ಇಲ್ಲವೆಂದು ನೀವು ತಿಳಿದುಕೊಂಡಿರುವಿರೇನು? ಅದಕ್ಕಾಗಿಯೇ ಮಲ್ಕಾಮ್ ದೇವತೆಯು ಗಾದನ ಸೀಮೆಯನ್ನು ಸ್ವಾಧೀನ ಮಾಡಿಕೊಂಡಳೇ?”

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 49:1
32 ತಿಳಿವುಗಳ ಹೋಲಿಕೆ  

ಅಮ್ಮೋನಿಯರು ಇಲ್ಲವೆ ಮೋವಾಬ್ಯರು ಯೆಹೋವ ದೇವರ ಸಭೆಗೆ ಸೇರಬಾರದು; ಹತ್ತನೆಯ ತಲಾಂತರವರೆಗೆ ಅವರು ಯೆಹೋವ ದೇವರ ಸಭೆಯಲ್ಲಿ ಸೇರಬಾರದು.


ಎದೋಮ್ಯರನ್ನು ಕುರಿತದ್ದು: ಸೇನಾಧೀಶ್ವರ ಯೆಹೋವ ದೇವರು ಹೀಗೆ ಹೇಳುತ್ತಾರೆ. “ತೇಮಾನ್‌ನಲ್ಲಿ ಇನ್ನು ಮೇಲೆ ಜ್ಞಾನವಿರುವುದಿಲ್ಲವೋ? ವಿವೇಕಿಗಳಿಂದ ಆಲೋಚನೆಯು ನಾಶವಾಯಿತೋ? ಅವರ ಜ್ಞಾನವು ಕ್ಷೀಣಿಸಿದೆಯೇ?


ಎದೋಮಿಗೂ, ಮೋವಾಬಿಗೂ, ಅಮ್ಮೋನ್ಯರಿಗೂ,


ಇದರ ತರುವಾಯ ಮೋವಾಬ್ಯರೂ, ಅಮ್ಮೋನಿಯರೂ, ಮೆಗೂನ್ಯರೂ ಯೆಹೋಷಾಫಾಟನ ಮೇಲೆ ಯುದ್ಧಮಾಡಲು ಬಂದರು.


ಬಾಬಿಲೋನಿನ ಅರಸನಾದ ನೆಬೂಕದ್ನೆಚ್ಚರನು ದಾಳಿಮಾಡಿದ ಕೇದಾರ್ ಹಾಗೂ ಹಾಚೋರ್ ರಾಜ್ಯಗಳನ್ನು ಕುರಿತದ್ದು: ಯೆಹೋವ ದೇವರು ಹೀಗೆ ಹೇಳುತ್ತಾರೆ, “ಏಳಿರಿ, ಕೇದಾರಿನ ಬಳಿಗೆ ಏರಿ ಹೋಗಿರಿ. ಪೂರ್ವದಿಕ್ಕಿನ ಮನುಷ್ಯರನ್ನು ಸುಲಿದುಕೊಳ್ಳಿರಿ.


ದಮಸ್ಕದ ವಿಷಯವಾಗಿ: “ಹಮಾತ್ ಮತ್ತು ಅರ್ಪಾದ್ ನಗರಗಳು ಆಶಾಭಂಗಗೊಂಡಿವೆ, ಅವು ಕೆಟ್ಟ ಸುದ್ದಿಯನ್ನು ಕೇಳಿ ಅಧೈರ್ಯಪಟ್ಟಿವೆ; ಸಮುದ್ರದಂತೆ ಕಳವಳಪಡುತ್ತದೆ; ಅದು ಸುಮ್ಮನಿರಲಾರದು.


ಮೋವಾಬನ್ನು ಕುರಿತದ್ದು: ಇಸ್ರಾಯೇಲಿನ ದೇವರಾದ ಸೇನಾಧೀಶ್ವರ ಯೆಹೋವ ದೇವರು ಹೀಗೆ ಹೇಳುತ್ತಾರೆ: “ನೆಬೋ ಊರಿನವರಿಗೆ ಕಷ್ಟ! ಆ ಊರು ಸೂರೆಯಾಯಿತು; ಕಿರ್ಯಾತಯಿಮು ಶತ್ರುವಿನ ಕೈವಶವಾಗಿ ಅವಮಾನಕ್ಕೆ ಗುರಿಯಾಗಿದೆ; ಬಲವಾದ ಕೋಟೆಯು ಸಹ ಚದರಿ ನಾಚಿಕೆಗೆ ಈಡಾಗಿದೆ.


ಅವುಗಳನ್ನು ಎದೋಮಿನ ಅರಸನಿಗೂ, ಮೋವಾಬಿನ ಅರಸನಿಗೂ, ಅಮ್ಮೋನ್ಯರ ಅರಸನಿಗೂ, ಟೈರಿನ ಅರಸನಿಗೂ, ಸೀದೋನಿನ ಅರಸನಿಗೂ, ಯೆಹೂದದ ಅರಸನಾದ ಚಿದ್ಕೀಯನ ಬಳಿಗೆ ಯೆರೂಸಲೇಮಿನಲ್ಲಿ ಬಂದಿರುವ ರಾಯಭಾರಿಗಳ ಕೈಯಿಂದ ಕಳುಹಿಸು.


ಇಗೋ, ನಾನು ಕಳುಹಿಸಿ ಉತ್ತರ ದಿಕ್ಕಿನ ಗೋತ್ರಗಳೆಲ್ಲವನ್ನೂ, ನನ್ನ ಸೇವಕನಾದ ಬಾಬಿಲೋನಿನ ಅರಸನಾದ ನೆಬೂಕದ್ನೆಚ್ಚರನನ್ನೂ ತೆಗೆದುಕೊಂಡು, ಈ ದೇಶಕ್ಕೆ ವಿರೋಧವಾಗಿಯೂ, ಅವರ ನಿವಾಸಿಗಳಿಗೆ ವಿರೋಧವಾಗಿಯೂ ಸುತ್ತಲಿರುವ ಈ ಎಲ್ಲಾ ಜನಾಂಗಗಳಿಗೆ ವಿರೋಧವಾಗಿಯೂ ತರಿಸಿ, ಅವರನ್ನು ಸಂಪೂರ್ಣ ನಾಶಮಾಡಿ ಅವರನ್ನು ಭಯಕ್ಕೂ, ಪರಿಹಾಸ್ಯಕ್ಕೂ ಗುರಿಮಾಡಿ ನಿತ್ಯ ನಾಶಮಾಡುವೆನು.


ಗೆಬಾಲ್ಯರು, ಅಮ್ಮೋನಿಯರು, ಅಮಾಲೇಕ್ಯರು, ಟೈರಿನವರು, ಫಿಲಿಷ್ಟಿಯರು,


ವೈರಿಯನ್ನು ವಿನಾಶವು ನಿರಂತರವಾಗಿ ಬೆನ್ನಟ್ಟಿದೆ, ನೀವು ಅವರ ಪಟ್ಟಣಗಳನ್ನು ಕೆಡವಿದ್ದೀರಿ; ಅವರ ಸ್ಮರಣೆಯು ಅವರೊಂದಿಗೇ ನಾಶವಾಯಿತು.


ಯೆರೂಸಲೇಮಿನ ಗೋಡೆಯ ದುರಸ್ತಿಕಾರ್ಯ ಮುಂದುವರಿದಿದೆ ಹಾಗು ಅದರ ಸಂದುಗಳು ಮತ್ತೆ ಮುಚ್ಚಿಕೊಳ್ಳುತ್ತಿವೆ ಎಂದು ಸನ್ಬಲ್ಲಟನೂ ಟೋಬೀಯನೂ ಅರಬಿಯರೂ ಅಮ್ಮೋನ್ಯರೂ ಅಷ್ಡೋದ್ಯರೂ ಕೇಳಿದಾಗ ಬಹು ಕೋಪಗೊಂಡರು.


ಆದರೆ ಹೋರೋನಿನವನಾದ ಸನ್ಬಲ್ಲಟನೂ, ಅಮ್ಮೋನ್ಯ ದಾಸನಾದ ಟೋಬೀಯನೂ, ಅರಬಿಯನಾದ ಗೆಷೆಮನೂ ಇದನ್ನು ಕೇಳಿದಾಗ, ಅವರು ನಮ್ಮನ್ನು ಗೇಲಿಮಾಡಿ ತಿರಸ್ಕರಿಸಿ, “ನೀವು ಮಾಡುವ ಈ ಕಾರ್ಯವೇನು? ನೀವು ಅರಸನಿಗೆ ವಿರೋಧವಾಗಿ ತಿರುಗಿಬೀಳುವಿರೋ?” ಎಂದರು.


ಅಮ್ಮೋನಿಯರು, ಮೋವಾಬ್ಯರು ಸೇಯೀರ್ ಪರ್ವತದ ನಿವಾಸಿಗಳನ್ನು ಸಂಪೂರ್ಣವಾಗಿ ನಾಶಮಾಡಲು ನಿಂತರು. ಅವರು ಸೇಯೀರನ ನಿವಾಸಿಗಳನ್ನು ಪೂರ್ಣವಾಗಿ ವಧಿಸಿದ ತರುವಾಯ, ತಾವೇ ಒಬ್ಬರನ್ನೊಬ್ಬರು ಕೊಲ್ಲುವುದಕ್ಕೆ ಪ್ರಾರಂಭಿಸಿದರು.


ಯೆಹೋವ ದೇವರು ಬಾಬಿಲೋನಿಯರನ್ನೂ, ಅರಾಮ್ಯರನ್ನೂ, ಮೋವಾಬ್ಯರನ್ನೂ, ಅಮ್ಮೋನಿಯರನ್ನೂ ಅವನ ಮೇಲೆ ಕಳುಹಿಸಿದನು. ಯೆಹೋವ ದೇವರು ಪ್ರವಾದಿಗಳಾದ ತನ್ನ ಸೇವಕರ ಮುಖಾಂತರ ಹೇಳಿದ ಮಾತಿನ ಪ್ರಕಾರ, ಯೆಹೂದವನ್ನು ನಾಶಮಾಡುವಂತೆ ಅದರ ಮೇಲೆ ಅವರನ್ನು ಬರಮಾಡಿದನು.


ಪೂರ್ವದಲ್ಲಿ ಯೊರ್ದನ್ ಮೊದಲುಗೊಂಡು ಗಾದ್ಯರೂ, ರೂಬೇನ್ಯರೂ ನಿವಾಸವಾಗಿದ್ದ ಗಿಲ್ಯಾದಿನ ಸಮಸ್ತ ದೇಶವನ್ನೂ, ಅರ್ನೋನ್ ನದಿಯ ಬಳಿಯಲ್ಲಿರುವ ಅರೋಯೇರ್ ಮೊದಲುಗೊಂಡು ಮನಸ್ಸೆಯವರು ನಿವಾಸವಾಗಿದ್ದ ಗಿಲ್ಯಾದ್ ಬಾಷಾನಿನಲ್ಲಿರುವವರನ್ನೂ ಹಜಾಯೇಲನು ಸಂಹರಿಸಿದನು.


ಅಮ್ಮೋನ್ಯರ ಹತ್ತಿರಕ್ಕೆ ನೀವು ಬಂದಾಗ, ಅವರಿಗೆ ಕಿರುಕುಳ ನೀಡಬೇಡಿರಿ ಅಥವಾ ಅವರನ್ನು ಯುದ್ಧಕ್ಕೆ ಪ್ರಚೋದಿಸಬೇಡಿರಿ. ನಾನು ಆ ದೇಶವನ್ನು ಲೋಟನ ವಂಶದವರಾದ ಅಮ್ಮೋನಿಯರಿಗೆ ಸೊತ್ತಾಗಿ ಕೊಟ್ಟಿರುವದರಿಂದ ನಿಮಗೆ ಅದರಲ್ಲಿ ಯಾವ ಭಾಗವನ್ನೂ ಕೊಡುವುದಿಲ್ಲ” ಎಂದರು.


ಚಿಕ್ಕವಳು ಸಹ ಮಗನನ್ನು ಹೆತ್ತು, ಅವನಿಗೆ ಬೆನಮ್ಮಿ ಎಂದು ಹೆಸರಿಟ್ಟಳು. ಈಗಿನ ಅಮ್ಮೋನಿಯರಿಗೂ ಇವನೇ ತಂದೆ.


ಗಾದನ ಸಂತತಿಯವರಲ್ಲಿ: ಯುದ್ಧಕ್ಕೆ ಶಕ್ತರಾದ ಪುರುಷರೆಲ್ಲರೂ ಅಂದರೆ ಇಪ್ಪತ್ತು ವರ್ಷ ಅಥವಾ ಅದಕ್ಕಿಂತ ಮೇಲ್ಪಟ್ಟ ವಯಸ್ಸಿನವರು ಗೋತ್ರ ಹಾಗೂ ಕುಟುಂಬಗಳ ಪ್ರಕಾರ ಒಬ್ಬೊಬ್ಬರಾಗಿ ಹೆಸರೆಸರಾಗಿ ಪಟ್ಟಿಮಾಡಲಾದರು.


ಏಕೆಂದರೆ ನೀವು ಈಜಿಪ್ಟನ್ನು ಬಿಟ್ಟು ಬರುವಾಗ, ಅವರು ನಿಮಗೆ ರೊಟ್ಟಿಯನ್ನೂ ನೀರನ್ನೂ ಕೊಡುವುದಕ್ಕೆ ಎದುರುಗೊಳ್ಳಲಿಲ್ಲ. ನಿಮ್ಮನ್ನು ಶಪಿಸುವುದಕ್ಕೆ ಮೆಸೊಪೊತಾಮ್ಯದಲ್ಲಿರುವ ಪೆತೋರಿನಿಂದ ಬೆಯೋರನ ಮಗ ಬಿಳಾಮನಿಗೆ ಕೂಲಿ ಕೊಟ್ಟು ನಿಮಗೆ ವಿರೋಧವಾಗಿ ಕರೆಸಿದರು.


ಯೆಹೋವ ದೇವರ ಸ್ವಜನರಾದ ಇಸ್ರಾಯೇಲರಿಗೆ ದಯಪಾಲಿಸಿದ ಸೊತ್ತಿಗೆ ಕೈಹಾಕುವ ಕೆಟ್ಟ ನೆರೆಯವರಿಗೆ ಕೊಟ್ಟ ಎಚ್ಚರಿಕೆ: “ಈ ನಾಡಿನವರನ್ನು ಅವರವರ ನಾಡಿನಿಂದಲೇ ಸಸಿಯಂತೆ ಕಿತ್ತುಬಿಡುವೆನು. ಯೆಹೂದ ವಂಶವನ್ನು ಅವರ ಮಧ್ಯೆಯಿಂದ ಕಿತ್ತುಬಿಡುವೆನು.


ಮಾಳಿಗೆಗಳ ಮೇಲೆ ತಲೆಬಾಗಿಸಿ ಆಕಾಶದ ನಕ್ಷತ್ರಗಣಕ್ಕೆ ಆರಾಧಿಸುವವರನ್ನೂ ಯೆಹೋವ ದೇವರ ಮೇಲೆಯೂ ಮಲ್ಕಾಮನ ಮೇಲೆಯೂ ಆಣೆ ಇಟ್ಟುಕೊಳ್ಳುವವರನ್ನೂ


“ ‘ದುಷ್ಟನಾದ ಭ್ರಷ್ಟ ಇಸ್ರಾಯೇಲಿನ ರಾಜಕುಮಾರನೇ, ನೀನು ಮಾಡಿದ ಅಕ್ರಮಗಳಿಂದ ನಿನಗೆ ಅಂತ್ಯ ದಿವಸವು ಬಂದಿತು.


ಯೆಹೋವ ದೇವರ ವಾಕ್ಯವು ನನಗೆ ಬಂದಿತು,


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು