Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 49:11 - ಕನ್ನಡ ಸಮಕಾಲಿಕ ಅನುವಾದ

11 ನಿನ್ನ ದಿಕ್ಕಿಲ್ಲದ ಮಕ್ಕಳನ್ನು ಬಿಡು. ನಾನೇ ರಕ್ಷಿಸುವೆನು. ನಿನ್ನ ವಿಧವೆಯರು ನನ್ನಲ್ಲಿ ನಂಬಿಕೆ ಇಡಲಿ.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

11 ನೀನು ನಿನ್ನ ಅನಾಥರನ್ನು ಬಿಡು, ನಾನೇ ಅವರನ್ನು ಉಳಿಸುವೆನು; ನಿನ್ನ ವಿಧವೆಯರು ನನ್ನಲ್ಲಿ ಭರವಸೆಯಿಡಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

11 ನೀನು ನಿನ್ನ ಅನಾಥರನ್ನು ನನಗೆ ಬಿಡು. ನಾನೇ ಅವರನ್ನು ನೋಡಿಕೊಳ್ಳುತ್ತೇನೆ. ನಿನ್ನ ವಿಧವೆಯರು ನನ್ನಲ್ಲಿ ಭರವಸೆ ಇಡಲಿ.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

11 ನೀನು ನಿನ್ನ ಅನಾಥರನ್ನು ಬಿಡು, ನಾನೇ ಅವರನ್ನು ಉಳಿಸುವೆನು; ನಿನ್ನ ವಿಧವೆಯರು ನನ್ನಲ್ಲಿ ಭರವಸವಿಡಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

11 ನಿನ್ನ ಅನಾಥಮಕ್ಕಳನ್ನು ನಾನು ಸಂರಕ್ಷಿಸುವೆನು. ನಿನ್ನ ವಿಧವೆಯರು ನನ್ನಲ್ಲಿ ಭರವಸೆ ಇಡಲಿ.”

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 49:11
12 ತಿಳಿವುಗಳ ಹೋಲಿಕೆ  

ದೇವರು ತಮ್ಮ ಪರಿಶುದ್ಧ ಸ್ಥಳದಲ್ಲಿ ದಿಕ್ಕಿಲ್ಲದವರಿಗೆ ತಂದೆ, ವಿಧವೆಯರಿಗೆ ರಕ್ಷಕರಾಗಿದ್ದಾರೆ.


ದಿಕ್ಕಿಲ್ಲದವರನ್ನೂ ವಿಧವೆಯರನ್ನೂ ಅವರ ಸಂಕಟದಲ್ಲಿ ಪರಾಮರಿಸಿ, ತನಗೆ ಪ್ರಪಂಚದ ದೋಷವು ಹತ್ತದಂತೆ ನೋಡಿಕೊಂಡಿರುವುದೇ ತಂದೆ ದೇವರ ಸನ್ನಿಧಾನದಲ್ಲಿ ಶುದ್ಧವೂ ನಿರ್ದೋಷವೂ ಆಗಿರುವ ಭಕ್ತಿ.


ಅಸ್ಸೀರಿಯ ನಮ್ಮನ್ನು ರಕ್ಷಿಸುವುದಿಲ್ಲ. ನಾವು ಕುದುರೆಗಳ ಮೇಲೆ ಸವಾರಿ ಮಾಡುವುದಿಲ್ಲ. ನಮ್ಮ ಕೈಗಳಿಂದ ಉಂಟು ಮಾಡಿದವುಗಳಿಗೆ, ‘ನೀವು ನಮ್ಮ ದೇವರುಗಳೇ,’ ಎಂದು ನಾವು ಇನ್ನು ಮುಂದೆ ಹೇಳುವುದೇ ಇಲ್ಲ. ಏಕೆಂದರೆ ನಿಮ್ಮಲ್ಲಿ ದಿಕ್ಕಿಲ್ಲದವರಿಗೆ ಅನುಕಂಪ ದೊರೆಯುತ್ತದೆ.”


ನಿಜವಾಗಿಯೂ ಕಷ್ಟದಲ್ಲಿರುವ ವಿಧವೆಯು ದೇವರ ಮೇಲೆ ನಿರೀಕ್ಷೆಯನ್ನಿಟ್ಟು ಹಗಲು ಇರುಳು ವಿಜ್ಞಾಪನೆಗಳಲ್ಲಿಯೂ ಪ್ರಾರ್ಥನೆಗಳಲ್ಲಿಯೂ ನೆಲೆಗೊಂಡಿರುವಳು.


“ನಾನು ನ್ಯಾಯತೀರಿಸುವದಕ್ಕೆ ನಿಮ್ಮ ಬಳಿಗೆ ಬರುತ್ತೇನೆ. ಆಗ ಮಾಟಗಾರರಿಗೆ, ವ್ಯಭಿಚಾರರಿಗೆ, ಸುಳ್ಳು ಹೇಳುವವರಿಗೆ, ಕೂಲಿಹಿಡಿದು ಕಾರ್ಮಿಕರನ್ನು ಮೋಸಗೊಳಿಸುವವರಿಗೆ, ವಿಧವೆಯರನ್ನು ಮತ್ತು ಅನಾಥರನ್ನು ಬಾಧಿಸುವವರಿಗೆ, ಪ್ರವಾಸಿಗಳಿಗೆ ಅನ್ಯಾಯ ಮಾಡುವವರಿಗೆ, ಮತ್ತು ನನಗೆ ಭಯಪಡದಿರುವವರಿಗೂ ನ್ಯಾಯತೀರಿಸಿ, ಶೀಘ್ರಸಾಕ್ಷಿಯಾಗಿರುವೆನು,” ಎಂದು ಸೇನಾಧೀಶ್ವರ ಯೆಹೋವ ದೇವರು ಹೇಳುತ್ತಾರೆ.


ಹಾಗಾದರೆ ಎಡಬಲ ಕೈಗಳನ್ನು ತಿಳಿಯದವರಾದ ಲಕ್ಷದ ಇಪ್ಪತ್ತು ಸಾವಿರಕ್ಕಿಂತ ಹೆಚ್ಚಾದ ಜನರು ಬಹಳ ಪಶುಪ್ರಾಣಿಗಳೂ ಸಹ ಇರುವ ಆ ದೊಡ್ಡ ಪಟ್ಟಣವಾದ ನಿನೆವೆಯನ್ನು ನಾನು ಚಿಂತಿಸಬಾರದೋ?” ಎಂದರು.


ಯೆಹೋವ ದೇವರು ಪರದೇಶಸ್ಥರನ್ನು ಕಾಪಾಡುತ್ತಾರೆ. ದಿಕ್ಕಿಲ್ಲದವರನ್ನೂ, ವಿಧವೆಯರನ್ನೂ ಉದ್ಧರಿಸುತ್ತಾರೆ. ಆದರೆ ದುಷ್ಟರ ಮಾರ್ಗವನ್ನು ಬೇಸರಪಡಿಸುತ್ತಾರೆ.


ದರಿದ್ರನನ್ನೂ ದಿಕ್ಕಿಲ್ಲದವನನ್ನೂ ಕಾಪಾಡಿರಿ. ದೀನನಿಗೂ, ಬಡವನಿಗೂ ನ್ಯಾಯವನ್ನು ಕೊಡಿರಿ.


ಅವರು ತಂದೆ ಇಲ್ಲದವರಿಗೂ, ವಿಧವೆಯರಿಗೂ ನ್ಯಾಯ ದೊರಕಿಸುತ್ತಾರೆ. ಪರದೇಶಿಯರನ್ನು ಪ್ರೀತಿಸಿ ಅನ್ನ, ವಸ್ತ್ರ ಕೊಡುತ್ತಾರೆ.


ವಿಧವೆಗೂ, ದಿಕ್ಕಿಲ್ಲದವನಿಗೂ, ಅನ್ಯನಿಗೂ, ಬಡವನಿಗೂ ಹಿಂಸಾಚಾರ ಮಾಡಬೇಡಿರಿ; ಯಾರೂ ತನ್ನ ಹೃದಯದಲ್ಲಿ ತನ್ನ ಸಹೋದರನ ಮೇಲೆ ಕೆಟ್ಟದ್ದನ್ನು ಕಲ್ಪಿಸದೆ ಇರಲಿ,’ ” ಎಂಬುದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು