Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 49:8 - ಕನ್ನಡ ಸಮಕಾಲಿಕ ಅನುವಾದ

8 ದೇದಾನಿನ ನಿವಾಸಿಗಳೇ, ಓಡಿಹೋಗಿರಿ; ತಿರುಗಿಕೊಳ್ಳಿರಿ; ಆಳವಾದ ಗುಹೆಯಲ್ಲಿ ವಾಸಮಾಡಿರಿ; ಏಕೆಂದರೆ ಏಸಾವನ ಆಪತ್ತನ್ನೂ, ನಾನು ಅವನನ್ನು ಶಿಕ್ಷಿಸುವ ಕಾಲವನ್ನೂ ಅವನ ಮೇಲೆ ಬರಮಾಡುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

8 ದೆದಾನಿನವರೇ, ಹಿಂದಿರುಗಿರಿ, ಓಡಿಹೋಗಿರಿ; ಒಳಪ್ರಾಂತ್ಯದಲ್ಲಿ ವಾಸಿಸಿರಿ; ಏಕೆಂದರೆ ನಾನು ಎದೋಮನ್ನು ದಂಡಿಸುವ ಕಾಲದಲ್ಲಿ ಏಸಾವನಿಗೆ ವಿಧಿಸಿದ ಆಪತ್ತನ್ನು ಅದರ ಮೇಲೆ ಬರಮಾಡುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

8 ದೇದಾನಿನವರೇ, ಹಿಂದಿರುಗಿ ಓಡಿಹೋಗಿರಿ. ಒಳ ಪ್ರಾಂತ್ಯವನ್ನು ಸೇರಿ ವಾಸಿಸಿರಿ. ಏಕೆಂದರೆ ನಾನು ಎದೋಮನ್ನು ದಂಡಿಸುವೆನು. ಏಸಾವನಿಗೆ ವಿಧಿಸಿದ್ದ ಆಪತ್ತನ್ನು ಅದರ ಮೇಲೆ ಬರಮಾಡುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

8 ದೆದಾನಿನವರೇ, ಹಿಂದಿರುಗಿರಿ, ಓಡಿಹೋಗಿರಿ, ಒಳಪ್ರಾಂತ್ಯದಲ್ಲಿ ವಾಸಿಸಿರಿ; ಏಕಂದರೆ ನಾನು ಎದೋಮನ್ನು ದಂಡಿಸುವ ಕಾಲದಲ್ಲಿ ಏಸಾವನಿಗೆ ವಿಧಿಸಿದ ಆಪತ್ತನ್ನು ಅದರ ಮೇಲೆ ಬರಮಾಡುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

8 ದೆದಾನಿನ ನಿವಾಸಿಗಳೇ, ಓಡಿಹೋಗಿರಿ, ಅಡಗಿಕೊಳ್ಳಿರಿ; ಏಕೆಂದರೆ ಏಸಾವನು ಮಾಡಿದ ತಪ್ಪಿಗಾಗಿ ನಾನು ಅವನನ್ನು ದಂಡಿಸುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 49:8
22 ತಿಳಿವುಗಳ ಹೋಲಿಕೆ  

ದೆದಾನಿಗೂ, ತೇಮಾಕ್ಕೂ, ಬೂಜಿಗೂ, ಕಟ್ಟಕಡೆಯ ಮೂಲೆಯವರೆಗೂ,


ಅದರೊಳಗಿರುವ ಅದರ ಸಂಬಳದವರು ಕೊಬ್ಬಿದ ಕರುಗಳಂತಿದ್ದಾರೆ; ಅವರು ಸಹ ಹಿಂದಕ್ಕೆ ತಿರುಗಿಕೊಂಡು ಏಕವಾಗಿ ಓಡಿಹೋಗುತ್ತಾರೆ; ಅವರು ನಿಲ್ಲಲಿಲ್ಲ; ಏಕೆಂದರೆ ಅವರ ಆಪತ್ತಿನ ದಿವಸವೂ, ಅವರ ವಿಚಾರಣೆಯ ಕಾಲವೂ ಅವರ ಮೇಲೆ ಬಂತು.


“ಹಾಚೋರಿನ ನಿವಾಸಿಗಳೇ, ಓಡಿಹೋಗಿರಿ, ದೂರಕ್ಕೆ ಹೋಗಿ ಬಿಡಿರಿ, ಆಳವಾದ ಗುಹೆಯಲ್ಲಿ ವಾಸವಾಗಿರಿ,” ಎಂದು ಯೆಹೋವ ದೇವರು ಹೇಳುತ್ತಾರೆ. ಏಕೆಂದರೆ ಬಾಬಿಲೋನಿನ ಅರಸನಾದ ನೆಬೂಕದ್ನೆಚ್ಚರನು ನಿಮಗೆ ವಿರೋಧವಾಗಿ ಒಳಸಂಚು ಮಾಡಿದ್ದಾನೆ; ನಿಮಗೆ ವಿರೋಧವಾಗಿ ಯೋಜನೆಯನ್ನು ಮಾಡಿದ್ದಾನೆ.


ಅರೇಬಿಯದ ವಿಷಯವಾದ ಪ್ರವಾದನೆ: ಓ ದೇದಾನ್ಯರ ವ್ಯಾಪಾರಿಗಳ ಗುಂಪಿನವರೇ ಅರೇಬಿಯದ ಕಾಡಿನಲ್ಲಿ ಇಳಿದುಕೊಳ್ಳಿರಿ.


ಅನಂತರ ಭೂರಾಜರುಗಳು, ಮಹಾಪುರುಷರು, ಸಹಸ್ರಾಧಿಪತಿಗಳು, ಐಶ್ವರ್ಯವಂತರು, ಬಲಿಷ್ಠರು, ದಾಸರು ಹಾಗೂ ಸ್ವತಂತ್ರರು, ಗವಿ ಮತ್ತು ಬೆಟ್ಟಗಳ ಬಂಡೆಗಳಲ್ಲಿ ತಮ್ಮನ್ನು ಮರೆಮಾಡಿಕೊಂಡು,


ಅದರ ಹೋರಿಗಳನ್ನೆಲ್ಲಾ ಕೊಲ್ಲಿರಿ, ಅವು ವಧ್ಯಸ್ಥಾನಕ್ಕೆ ಹೋಗಲಿ, ಅವುಗಳ ಗತಿಯನ್ನು ಏನೆಂದು ಹೇಳಲಿ! ಅವುಗಳಿಗೆ ವಿಪತ್ಕಾಲವು ಒದಗಿದೆ. ದಂಡನೆಯ ದಿನವು ಸಂಭವಿಸಿದೆ.


ಅವರ ಒಂಟೆಗಳು ಕೊಳ್ಳೆಯಾಗುವುವು; ಅವರ ದನಗಳ ಸಮೂಹವು ಸುಲಿಗೆಯಾಗುವುದು; ಕಟ್ಟಕಡೆಯ ಮೂಲೆಗಳಲ್ಲಿ ಇರುವವರನ್ನು ಎಲ್ಲಾ ದಿಕ್ಕುಗಳಿಗೂ ಚದರಿಸುತ್ತೇನೆ; ಸರ್ವಕಡೆಯಿಂದ ಅವರ ಮೇಲೆ ಆಪತ್ತನ್ನು ತರಿಸುತ್ತೇನೆ,” ಎಂದು ಯೆಹೋವ ದೇವರು ಹೇಳುತ್ತಾರೆ.


“ಹೆದರಿಕೆಗೆ ಓಡಿಹೋಗುವವನು ಗುಂಡಿಯಲ್ಲಿ ಬೀಳುವನು. ಗುಂಡಿಯೊಳಗಿಂದ ಏರಿಬರುವವನು, ಬೋನಿನಲ್ಲಿ ಸಿಕ್ಕಿಬೀಳುವನು. ಏಕೆಂದರೆ ನಾನು ಅದರ ಮೇಲೆ ಅಂದರೆ, ಮೋವಾಬಿನ ಮೇಲೆಯೇ ಅವರ ದಂಡನೆಯ ವರ್ಷವನ್ನು ತರುವೆನು,” ಎಂದು ಯೆಹೋವ ದೇವರು ಹೇಳುತ್ತಾರೆ.


ಮೋವಾಬಿನಲ್ಲಿ ವಾಸವಾಗಿರುವವರೇ, ಪಟ್ಟಣಗಳನ್ನು ಬಿಟ್ಟು ಬಂಡೆಯಲ್ಲಿ ವಾಸವಾಗಿರಿ; ಸಂದುಗಳ ಬಾಯಿಗಳ ಪಕ್ಕಗಳಲ್ಲಿ ಗೂಡು ಕಟ್ಟುವ ಪಾರಿವಾಳದ ಹಾಗಿರಿ.


ಓಡಿಹೋಗಿರಿ, ನಿಮ್ಮ ಪ್ರಾಣಗಳನ್ನು ತಪ್ಪಿಸಿಕೊಳ್ಳಿರಿ; ಮರುಭೂಮಿಯಲ್ಲಿರುವ ಒಣ ಗಿಡದ ಹಾಗಿರಿ.


“ಓ ಬೆನ್ಯಾಮೀನನ ಮಕ್ಕಳೇ! ನಿಮ್ಮ ಸುರಕ್ಷತೆಗಾಗಿ ಯೆರೂಸಲೇಮಿನಿಂದ ಓಡಿಹೋಗಿರಿ, ತೆಕೋವದಲ್ಲಿ ತುತೂರಿ ಊದಿರಿ; ಬೇತ್ ಹಕ್ಕೆರೆಮಿನಲ್ಲಿ ಧ್ವಜವನ್ನೆತ್ತಿರಿ. ಏಕೆಂದರೆ ಕೇಡೂ ದೊಡ್ಡ ನಾಶವೂ ಉತ್ತರದ ಕಡೆಯಿಂದ ತೋರುತ್ತವೆ.


ಯೆಹೋವ ದೇವರು ಭೂಮಿಯನ್ನು ನಡುಗಿಸಲು ಎದ್ದಾಗ, ಯೆಹೋವ ದೇವರ ಭಯಕ್ಕೂ, ಅವರ ಮಹಿಮೆಯ ಘನಕ್ಕೂ ಹೆದರಿ ಬಂಡೆಗಳ ಸಂದುಗಳಿಗೂ, ಎತ್ತರವಾಗಿರುವ ಬಂಡೆಗಳ ಕಡಿದಾದ ಸ್ಥಳಗಳಿಗೂ ಜನರು ನುಗ್ಗುವರು.


ಆಗ ಇಸ್ರಾಯೇಲ್ ಜನರು ತಮಗೆ ಶ್ರಮೆ ಉಂಟಾದದ್ದರಿಂದ ತಾವು ಇಕ್ಕಟ್ಟಿನಲ್ಲಿ ಇರುವುದನ್ನು ಕಂಡು, ಗವಿಗಳಲ್ಲಿಯೂ, ಮುಳ್ಳಿನ ಪೊದೆಗಳಲ್ಲಿಯೂ, ಗುಡ್ಡಗಳಲ್ಲಿಯೂ, ಕುಣಿಗಳಲ್ಲಿಯೂ ಬಾವಿಗಳಲ್ಲಿಯೂ ಅಡಗಿಕೊಂಡರು.


ಮಿದ್ಯಾನ್ಯರ ಕೈ ಇಸ್ರಾಯೇಲಿಗೆ ವಿರೋಧವಾಗಿ ಬಲವಾದ್ದರಿಂದ ಇಸ್ರಾಯೇಲರು ಮಿದ್ಯಾನ್ಯರ ನಿಮಿತ್ತ ತಮಗೆ ಪರ್ವತಗಳಲ್ಲಿ ಇರುವ ಬಂಡೆಯ ಬಿರುಕುಗಳನ್ನೂ, ಗವಿಗಳನ್ನೂ, ಬಲವಾದ ಸ್ಥಾನಗಳನ್ನೂ ಮಾಡಿಕೊಂಡರು.


ನನ್ನ ಖಡ್ಗವು ಪರಲೋಕದಲ್ಲಿ ರೋಷಪಾನ ಮಾಡುವುದು. ಇಗೋ, ಅದು ಎದೋಮಿನ ಮತ್ತು ನಾನು ಶಪಿಸಿದ ಜನರ ಮೇಲೆಯೂ, ನ್ಯಾಯತೀರಿಸುವುದಕ್ಕಾಗಿ ಕೆಳಗೆ ಇಳಿದು ಬರುವುದು.


ಆದ್ದರಿಂದ ಸಾರ್ವಭೌಮ ಯೆಹೋವ ದೇವರು ಹೀಗೆ ಹೇಳುತ್ತಾರೆ: ನಾನು ಎದೋಮಿನ ವಿರುದ್ಧ ನನ್ನ ಕೈಯನ್ನು ಚಾಚುತ್ತೇನೆ: ಅದರೊಳಗಿನಿಂದ ಮನುಷ್ಯರನ್ನೂ ಮೃಗಗಳನ್ನೂ ಕಡಿದುಬಿಡುತ್ತೇನೆ. ಅದನ್ನು ಕಾಡನ್ನಾಗಿ ಮಾಡುತ್ತೇನೆ, ತೇಮಾನು ಮೊದಲುಗೊಂಡು ದೆದಾನಿಯವರು ಖಡ್ಗದಿಂದ ಬೀಳುವರು.


ಏಸಾವನನ್ನು ದ್ವೇಷ ಮಾಡಿದೆನು. ಅವನ ಬೆಟ್ಟಗಳನ್ನು ಹಾಳು ಮಾಡಿ, ಅವನ ಸೊತ್ತನ್ನು ಅಡವಿಯ ನರಿಗಳಿಗೆ ಕೊಟ್ಟೆನು.”


ಎದೋಮ್ಯರು, “ನಾವು ಬಡಕಲಾದೆವು, ಆದರೆ ನಾವು ಮತ್ತೆ ಹಾಳಾದ ಸ್ಥಳಗಳನ್ನು ಕಟ್ಟುವೆವು,” ಎಂದು ಹೇಳಬಹುದು. ಸೇನಾಧೀಶ್ವರ ಯೆಹೋವ ದೇವರು ಹೀಗೆ ಹೇಳುತ್ತಾರೆ, “ಅವರು ಕಟ್ಟಬಹುದು, ಆದರೆ ನಾನು ಕೆಡವಿಬಿಡುವೆನು. ಜನರು ಅವರನ್ನು ದುಷ್ಟತನದ ನಾಡೆಂದೂ, ಯೆಹೋವ ದೇವರು ಎಂದೆಂದಿಗೂ ಸಿಟ್ಟು ಮಾಡುವ ಜನವೆಂದೂ ಕರೆಯುವರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು