Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 5:15 - ಕನ್ನಡ ಸಮಕಾಲಿಕ ಅನುವಾದ

15 ಯೆಹೋವ ದೇವರು ಹೀಗೆ ಹೇಳುತ್ತಾರೆ, “ಓ ಇಸ್ರಾಯೇಲ ಮನೆತನವೇ, ನಾನು ದೂರದಿಂದ ನಿಮ್ಮ ಮೇಲೆ ಒಂದು ಜನಾಂಗವನ್ನು ತರಿಸುತ್ತೇನೆ. ಅದು ಬಲವಾದ ಜನಾಂಗವು. ಪೂರ್ವಕಾಲದ ಜನಾಂಗವು, ಆ ಜನಾಂಗದ ಭಾಷೆಯನ್ನು ನೀನರಿಯೆ; ಇಲ್ಲವೆ ಅವರು ಹೇಳುವಂಥದ್ದು ನಿನಗೆ ತಿಳಿಯದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

15 ಇಗೋ, ಇಸ್ರಾಯೇಲ್ ವಂಶವೇ, ಯೆಹೋವನ ಮಾತನ್ನು ಕೇಳು, ನಾನು ಒಂದು ಜನಾಂಗವನ್ನು ದೂರದಿಂದ ನಿಮ್ಮ ಮೇಲೆ ಬರಮಾಡುವೆನು. ಅದು ತಲತಲಾಂತರಗಳಿಂದ ಸ್ಥಿರವಾದ ಜನಾಂಗ, ಅದರ ಭಾಷೆಯು ನಿನಗೆ ತಿಳಿಯದು, ಅದು ಆಡುವ ಮಾತುಗಳನ್ನು ನೀನು ಗ್ರಹಿಸಲಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

15 ಇಸ್ರಯೇಲ್ ವಂಶವೇ, ಸರ್ವೇಶ್ವರ ಸ್ವಾಮಿಯ ಮಾತನ್ನು ಗಮನದಿಂದ ಕೇಳು : “ನಾನು ಒಂದು ರಾಷ್ಟ್ರವನ್ನು ದೂರದಿಂದ ನಿನ್ನ ವಿರುದ್ಧ ಬರಮಾಡುವೆನು. ಅದು ಪ್ರಾಚೀನ ಹಾಗೂ ಪ್ರಬಲ ರಾಷ್ಟ್ರ. ಅದರ ಭಾಷೆ ನಿನಗೆ ತಿಳಿಯದು. ಅದು ಆಡುವ ಮಾತು ನಿನಗೆ ಅರ್ಥವಾಗದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

15 ಇಗೋ, ಇಸ್ರಾಯೇಲ್ ವಂಶವೇ, ಯೆಹೋವನ ಮಾತನ್ನು ಕೇಳು, ನಾನು ಒಂದು ಜನಾಂಗವನ್ನು ದೂರದಿಂದ ನಿಮ್ಮ ಮೇಲೆ ಬರಮಾಡುವೆನು; ಅದು ತಲತಲಾಂತರಗಳಿಂದ ಸ್ಥಿರವಾದ ಜನಾಂಗ, ಅದರ ಭಾಷೆಯು ನಿನಗೆ ತಿಳಿಯದು, ಅದು ಆಡುವ ಮಾತುಗಳನ್ನು ನೀನು ಗ್ರಹಿಸಲಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

15 ಇದು ಯೆಹೋವನ ಮಾತು: “ಇಸ್ರೇಲ್ ಮನೆತನವೇ, ನಿನ್ನ ಮೇಲೆ ಧಾಳಿ ಮಾಡುವುದಕ್ಕೆ ನಾನು ಬಹಳ ದೂರದಿಂದ ಒಂದು ಜನಾಂಗವನ್ನು ತರುತ್ತೇನೆ. ಅದು ಒಂದು ಬಲಿಷ್ಠ ಜನಾಂಗ; ಅದೊಂದು ಪುರಾತನ ಕಾಲದಿಂದ ಬಂದ ಜನಾಂಗ. ಆ ಜನಾಂಗದವರು ಮಾತನಾಡುವ ಭಾಷೆ ನಿನಗೆ ತಿಳಿಯುವದಿಲ್ಲ. ಅವರು ಹೇಳುವುದು ನಿನಗೆ ಅರ್ಥವಾಗುವದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 5:15
27 ತಿಳಿವುಗಳ ಹೋಲಿಕೆ  

ಯೆಹೋವ ದೇವರು ದೂರದಿಂದ ಅಂದರೆ, ಭೂಮಿಯ ಕೊನೆಯಿಂದ ರಣಹದ್ದು ಹೇಗೆ ಹಾರಿಬರುವುದೋ ಹಾಗೆಯೇ, ನಿಮಗೆ ತಿಳಿಯದ ಭಾಷೆಯನ್ನಾಡುವ ಒಂದು ಜನಾಂಗವನ್ನು ನಿಮ್ಮ ಮೇಲೆ ಬರುವಂತೆ ಮಾಡುವರು.


“ಜನಾಂಗಗಳಿಗೆ ತಿಳಿಸಿರಿ. ಇಗೋ, ಯೆರೂಸಲೇಮಿಗೆ ವಿರೋಧವಾಗಿ ತಿಳಿಯಪಡಿಸಿರಿ. ಏನೆಂದರೆ, ‘ಮುತ್ತಿಗೆ ಹಾಕುವ ಸೈನ್ಯದವರು ದೂರದೇಶದಿಂದ ಬರುತ್ತಾರೆ, ಯೆಹೂದದ ಪಟ್ಟಣಗಳಿಗೆ ವಿರೋಧವಾಗಿ ಯುದ್ಧದ ಕೂಗನ್ನು ಎಬ್ಬಿಸುತ್ತಾರೆ.


ನೀನು ತಿಳಿಯಲಾಗದ ಹಾಗೆ ಕಠಿಣ ಭಾಷೆಯೂ, ಗ್ರಹಿಸಲಾಗದ ಹಾಗೆ ಅಪರೂಪವಾದ ಮಾತನ್ನು ಆಡಿದ ಜನರನ್ನೂ ಇನ್ನು ಮುಂದೆ ನೀನು ನೋಡುವುದಿಲ್ಲ.


ತೊದಲು ಮಾತಿನವರು, ಅನ್ಯಭಾಷಿಗಳು ಇವರ ಮೂಲಕವಾಗಿಯೇ ಆತನು ಈ ಜನರೊಡನೆ ಮಾತನಾಡುತ್ತಾನೆ.


ಅವರು ದೂರದ ಜನಾಂಗದವರಿಗೆ ಗುರುತಿಗಾಗಿ ಧ್ವಜವನ್ನೆತ್ತಿ, ಭೂಮಿಯ ಕಟ್ಟಕಡೆಯಿಂದ ಅವರಿಗೆ ಸೀಟಿ ಹಾಕುವರು. ಇಗೋ, ಅವರು ತ್ವರೆಯಾಗಿ ಫಕ್ಕನೆ ಬರುವರು,


ಇಗೋ, ನಾನು ಕಳುಹಿಸಿ ಉತ್ತರ ದಿಕ್ಕಿನ ಗೋತ್ರಗಳೆಲ್ಲವನ್ನೂ, ನನ್ನ ಸೇವಕನಾದ ಬಾಬಿಲೋನಿನ ಅರಸನಾದ ನೆಬೂಕದ್ನೆಚ್ಚರನನ್ನೂ ತೆಗೆದುಕೊಂಡು, ಈ ದೇಶಕ್ಕೆ ವಿರೋಧವಾಗಿಯೂ, ಅವರ ನಿವಾಸಿಗಳಿಗೆ ವಿರೋಧವಾಗಿಯೂ ಸುತ್ತಲಿರುವ ಈ ಎಲ್ಲಾ ಜನಾಂಗಗಳಿಗೆ ವಿರೋಧವಾಗಿಯೂ ತರಿಸಿ, ಅವರನ್ನು ಸಂಪೂರ್ಣ ನಾಶಮಾಡಿ ಅವರನ್ನು ಭಯಕ್ಕೂ, ಪರಿಹಾಸ್ಯಕ್ಕೂ ಗುರಿಮಾಡಿ ನಿತ್ಯ ನಾಶಮಾಡುವೆನು.


ಏಕೆಂದರೆ ನಾನು ಉತ್ತರದಲ್ಲಿರುವ ರಾಜ್ಯಗಳ ಕುಲಗಳನ್ನೆಲ್ಲಾ ಕರೆಯುತ್ತೇನೆ. “ಅವರು ಬಂದು ತಮ್ಮ ತಮ್ಮ ಸಿಂಹಾಸನಗಳನ್ನು ಯೆರೂಸಲೇಮಿನ ಬಾಗಿಲುಗಳ ಪ್ರವೇಶದಲ್ಲಿಯೂ, ಅದರ ಸುತ್ತಲಾಗಿರುವ ಗೋಡೆಗಳಿಗೆ ಎದುರಾಗಿಯೂ ಯೆಹೂದದ ಎಲ್ಲಾ ಪಟ್ಟಣಗಳಿಗೆ ಎದುರಾಗಿಯೂ ಇರಿಸುವರು.


“ಬೇರೆಭಾಷೆಯವರ ಮೂಲಕವಾಗಿಯೂ ವಿದೇಶದವರ ತುಟಿಗಳಿಂದಲೂ ನಾನು ಈ ಜನರೊಡನೆ ಮಾತಾಡುವೆನು, ಆದರೂ ಅವರು ನನಗೆ ಕಿವಿಗೊಡುವುದಿಲ್ಲವೆಂದು ಕರ್ತದೇವರು ಹೇಳುತ್ತಾರೆ,” ಎಂದು ನಿಯಮದಲ್ಲಿ ಬರೆದಿದೆ.


ನೀವು ಮಾಡುವ ದುಷ್ಕೃತ್ಯಗಳನ್ನೆಲ್ಲಾ ನಿಮ್ಮಿಂದ ಎಸೆದುಬಿಡಿರಿ. ಹೊಸ ಹೃದಯವನ್ನೂ, ಹೊಸ ಆತ್ಮವನ್ನೂ ನೀವು ಪಡೆದುಕೊಳ್ಳಿರಿ. ಇಸ್ರಾಯೇಲಿನ ಮನೆತನದವರೇ, ನೀವು ಸಾಯುವುದೇಕೆ?


ಯೆಹೋವ ದೇವರು ಹೀಗೆ ಹೇಳುತ್ತಾರೆ: “ಇಗೋ, ಒಂದು ಜನಾಂಗವು ಉತ್ತರ ದಿಕ್ಕಿನಿಂದ ಬರುವುದು. ದೊಡ್ಡ ಜನಾಂಗವು ಲೋಕದ ಕಟ್ಟಕಡೆಯಿಂದ ಎದ್ದು ಬರುತ್ತದೆ.


ಇಸ್ರಾಯೇಲನ ಮನೆತನದವರೂ, ಯೆಹೂದನ ಮನೆತನದವರೂ ನನಗೆ ಬಹಳ ವಂಚನೆ ಮಾಡಿದ್ದಾರೆ, ಎಂದು ಯೆಹೋವ ದೇವರು ಹೇಳುತ್ತಾರೆ.


“ಕಳ್ಳನು ಸಿಕ್ಕಿದ ಮೇಲೆ ನಾಚಿಕೆಪಡುವ ಪ್ರಕಾರ ಇಸ್ರಾಯೇಲ್ ಜನರಿಗೆ ನಾಚಿಕೆ ಆಯಿತು. ಅವರ ಅರಸರು, ಅಧಿಪತಿಗಳು, ಯಾಜಕರು, ಪ್ರವಾದಿಗಳು, ಇವರೆಲ್ಲರೂ ನಾಚಿಕೆಗೆ ಈಡಾಗುವರು.


ಸೇನಾಧೀಶ್ವರ ಯೆಹೋವ ದೇವರು ಗುಡುಗಿನಿಂದಲೂ, ಮಹಾಶಬ್ದದಿಂದಲೂ, ಬಿರುಗಾಳಿ ಸುಳಿಗಾಳಿಯಿಂದಲೂ, ದಹಿಸುವ ಅಗ್ನಿಜ್ವಾಲೆಯಿಂದಲೂ ಪ್ರತ್ಯಕ್ಷರಾಗುವರು.


ಸುತ್ತಲೂ ದಂಡಿಳಿಸಿ ನಿನಗೆ ವಿರುದ್ಧವಾಗಿ ಕೋಟೆಗಳನ್ನು ಎಬ್ಬಿಸಿ, ದಿಬ್ಬ ಹಾಕಿ ನಿನ್ನ ಮೇಲೆ ಮುತ್ತಿಗೆ ಹಾಕುವೆನು.


ಸೇನಾಧೀಶ್ವರ ಯೆಹೋವ ದೇವರ ದ್ರಾಕ್ಷಿತೋಟವು ಇಸ್ರಾಯೇಲಿನ ಮನೆತನವು. ಯೆಹೂದದ ಜನವೋ ದೇವರ ಇಷ್ಟದ ಗಿಡವು. ಅವರು ನ್ಯಾಯವನ್ನು ನಿರೀಕ್ಷಿಸಲು, ಹಿಂಸೆಯೂ, ನೀತಿಯನ್ನು ನಿರೀಕ್ಷಿಸಲು ಗೋಳಾಟವು ಸಿಕ್ಕಿತು.


“ತರುವಾಯ ರಾತ್ರಿಯ ದರ್ಶನದಲ್ಲಿ ನಾನು ನೋಡಲಾಗಿ, ನಾಲ್ಕನೆಯ ಮೃಗವು ಭಯಂಕರವೂ, ಘೋರವೂ, ಬಹು ಬಲವುಳ್ಳದ್ದೂ ಆಗಿತ್ತು. ಅದಕ್ಕೆ ದೊಡ್ಡ ಕಬ್ಬಿಣದ ಹಲ್ಲುಗಳು ಇವೆ. ಅದು ತಿಂದು ತುಂಡುತುಂಡು ಮಾಡಿ, ಮಿಕ್ಕದ್ದನ್ನು ತನ್ನ ಕಾಲುಗಳ ಕೆಳಗೆ ಹಾಕಿ ತುಳಿಯಿತು. ಅದು ಮೊದಲಿನ ಎಲ್ಲಾ ಮೃಗಗಳಿಗಿಂತ ವ್ಯತ್ಯಾಸವುಳ್ಳದ್ದೂ, ಹತ್ತು ಕೊಂಬುಗಳುಳ್ಳದ್ದೂ ಆಗಿತ್ತು.


ನಾವು ಇಳಿದು ಹೋಗಿ, ಇವರು ಒಬ್ಬರ ಮಾತನ್ನು ಒಬ್ಬರು ತಿಳಿಯದಂತೆ, ಇವರ ಭಾಷೆಯನ್ನು ಗಲಿಬಿಲಿ ಮಾಡೋಣ,” ಎಂದರು.


ನಿಮ್ಮ ಭೂಮಿಯ ಫಲವನ್ನೂ, ನಿಮ್ಮ ಎಲ್ಲಾ ಆದಾಯವನ್ನೂ ನಿಮ್ಮನ್ನರಿಯದ ಜನರು ತಿಂದುಬಿಡುವರು. ನೀವು ಯಾವಾಗಲೂ ಬಲಾತ್ಕಾರವನ್ನೂ, ಸಂಕಟವನ್ನೂ ಅನುಭವಿಸುವಿರಿ.


ದೇವರು ಈಜಿಪ್ಟಿಗೆ ವಿರೋಧವಾಗಿ ಹೊರಟಾಗ, ಅದನ್ನು ಯೋಸೇಫನಲ್ಲಿ ಸಾಕ್ಷಿಯಾಗಿ ನೇಮಿಸಿದನು. ನಾವು ತಿಳಿಯದ ಭಾಷೆಯನ್ನು ಕೇಳಿದಾಗ:


ಆಗ ಪ್ರವಾದಿಯಾದ ಯೆಶಾಯನು ಅರಸನಾದ ಹಿಜ್ಕೀಯನ ಬಳಿಗೆ ಬಂದು ಅವನಿಗೆ, “ಆ ಮನುಷ್ಯರು ಎಲ್ಲಿಂದ ಬಂದವರು ಮತ್ತು ಅವರು ನಿನಗೆ ಏನು ಹೇಳಿದರು?” ಎಂದು ಕೇಳಿದನು. ಹಿಜ್ಕೀಯನು, “ಅವರು ಬಹುದೂರ ದೇಶವಾದ ಬಾಬಿಲೋನಿನಿಂದ ನನ್ನ ಬಳಿಗೆ ಬಂದವರು,” ಎಂದು ಹೇಳಿದನು.


ಶಾರೀರಿಕ ನ್ಯೂನತೆ ಇಲ್ಲದವರಾಗಿಯೂ, ಸುಂದರವಾಗಿಯೂ, ಅವರು ಎಲ್ಲಾ ರೀತಿಯ ವಿಷಯಗಳನ್ನು ಕಲಿಯುವ ಸಾಮರ್ಥ್ಯವನ್ನು ಹೊಂದಿರಬೇಕು. ಅವರು ವಿವೇಕವುಳ್ಳವರಾಗಿಯೂ ಮತ್ತು ತ್ವರಿತವಾಗಿ ಅರ್ಥಮಾಡಿಕೊಳ್ಳುವವರಾಗಿಯೂ, ಅರಸನ ಅರಮನೆಯಲ್ಲಿ ಸೇವೆ ಮಾಡಲು ಸಾಮರ್ಥ್ಯವುಳ್ಳವರಾಗಿಯೂ ಇರುವ ಯೌವನಸ್ಥರನ್ನು ತಂದು ಬಾಬಿಲೋನಿಯರ ವಿದ್ಯೆಯನ್ನೂ, ಭಾಷೆಯನ್ನೂ ಅವರಿಗೆ ಬೋಧಿಸಬೇಕೆಂದು ಆಜ್ಞಾಪಿಸಿದನು.


ಸರ್ವಶಕ್ತರಾದ ಯೆಹೋವ ದೇವರು ಹೀಗೆ ಹೇಳುತ್ತಾರೆ: ಇಸ್ರಾಯೇಲಿನ ಮನೆತನದವರೇ, ಜನಾಂಗವನ್ನು ನಿಮಗೆ ವಿರೋಧವಾಗಿ ಎಬ್ಬಿಸುವೆನು. ಲೆಬೊ ಹಮಾತಿನ ಪ್ರದೇಶದಿಂದ ಅರಾಬಾ ತಗ್ಗಿನ ನದಿಯವರೆಗೂ ನಿಮ್ಮನ್ನು ಹಿಂಸಿಸುವರು.


ನಾನು ಕೇಳಿದಾಗ ನನ್ನ ಹೃದಯ ಬಡಿದುಕೊಂಡಿತು; ಆ ಶಬ್ದಕ್ಕೆ ನನ್ನ ತುಟಿಗಳು ಕದಲಿದವು; ನನ್ನ ಎಲುಬುಗಳು ಕ್ಷಯಗೊಂಡವು; ನನ್ನ ಕಾಲುಗಳು ನಡುಗಿದವು; ಆದರೂ ನಮ್ಮ ಮೇಲೆ ದಾಳಿಮಾಡುವ ಜನರ ಮೇಲೆ ನಾಶನ ಬರುವುದನ್ನು ನೋಡಲು ತಾಳ್ಮೆಯಿಂದ ಕಾದಿರುವೆನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು