Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 5:18 - ಕನ್ನಡ ಸಮಕಾಲಿಕ ಅನುವಾದ

18 “ಆದರೂ ಆ ದಿವಸಗಳಲ್ಲಿಯೂ ನಾನು ನಿಮ್ಮನ್ನು ಸಂಪೂರ್ಣವಾಗಿ ಅಳಿಸಿಬಿಡುವುದಿಲ್ಲ,” ಎಂದು ಯೆಹೋವ ದೇವರು ಅನ್ನುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

18 ಆದರೆ ಆ ದಿನಗಳಲ್ಲಿಯೂ ನಾನು ನಿಮ್ಮನ್ನು ಸಂಪೂರ್ಣವಾಗಿ ನಿರ್ಮೂಲಮಾಡೆನು, ಇದು ಯೆಹೋವನೆಂಬ ನನ್ನ ನುಡಿ” ಎಂದು ಹೇಳುತ್ತಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

18 “ಆದರೂ ಆ ದಿನಗಳಲ್ಲಿ ನಾನು ನಿಮ್ಮನ್ನು ಸಂಪೂರ್ಣವಾಗಿ ನಿರ್ಮೂಲ ಮಾಡುವುದಿಲ್ಲ. ಇದು ಸರ್ವೇಶ್ವರನಾದ ನನ್ನ ನುಡಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

18 ಆದರೆ ಆ ದಿನಗಳಲ್ಲಿಯೂ ನಾನು ನಿಮ್ಮನ್ನು ಸಂಪೂರ್ಣವಾಗಿ ನಿರ್ಮೂಲಮಾಡೆನು; ಇದು ಯೆಹೋವನೆಂಬ ನನ್ನ ನುಡಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

18 “ಯೆಹೂದವೇ, ಆ ಭಯಂಕರ ದಿನಗಳು ಬಂದಾಗ ನಾನು ನಿನ್ನನ್ನು ಸಂಪೂರ್ಣವಾಗಿ ನಾಶಮಾಡುವದಿಲ್ಲ, ಎಂದು ಯೆಹೋವನು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 5:18
10 ತಿಳಿವುಗಳ ಹೋಲಿಕೆ  

ಅವಳ ದ್ರಾಕ್ಷಿತೋಟಗಳ ಮೂಲಕ ಹೋಗಿ ಅವುಗಳನ್ನು ಹಾಳುಮಾಡಿರಿ. ಆದರೆ ಸಂಪೂರ್ಣವಾಗಿ ನಾಶಮಾಡಬೇಡಿರಿ. ಅದರ ರೆಂಬೆಗಳನ್ನು ತೆಗೆದುಹಾಕಿರಿ ಏಕೆಂದರೆ ಅವು ಯೆಹೋವ ದೇವರಿಗೆ ಸೇರಿದವುಗಳಲ್ಲ.


ಏಕೆಂದರೆ ಯೆಹೋವ ದೇವರು ಹೀಗೆ ಹೇಳಿದ್ದಾರೆ: “ದೇಶವೆಲ್ಲಾ ಹಾಳಾಗುವುದು. ಆದರೂ ನಾನು ಅದನ್ನು ಪೂರ್ಣ ನಾಶ ಮಾಡಿಲ್ಲ.


ನಾನು ಪ್ರವಾದಿಸುತ್ತಿರುವಾಗ, ಬೆನಾಯನ ಮಗನಾದ ಪೆಲಟೀಯನು ಸತ್ತನು. ಆಗ ನಾನು ಮುಖ ಕೆಳಗಾಗಿ ಬಿದ್ದು, ಗಟ್ಟಿಯಾಗಿ ಕೂಗಿ, “ಸಾರ್ವಭೌಮ ಯೆಹೋವ ದೇವರೇ, ನೀವು ಇಸ್ರಾಯೇಲಿನಲ್ಲಿ ಉಳಿದವರನ್ನು ಪೂರ್ಣವಾಗಿ ಮುಗಿಸಿಬಿಡುತ್ತೀರೋ?” ಎಂದು ಹೇಳಿದನು.


ಅವರು ಹೊಡೆಯುತ್ತಿರುವಾಗ ಅಲ್ಲಿ ಒಂಟಿಗನಾಗಿ ಉಳಿದ ನಾನು ಅಡ್ಡಬಿದ್ದು, “ಅಯ್ಯೋ, ಸಾರ್ವಭೌಮ ಯೆಹೋವ ದೇವರೇ, ನೀವು ಯೆರೂಸಲೇಮಿನ ಮೇಲೆ ನಿಮ್ಮ ಕೋಪಾಗ್ನಿಯನ್ನು ಸುರಿದು, ಇಸ್ರಾಯೇಲರಲ್ಲಿ ಉಳಿದವರನ್ನೆಲ್ಲಾ ನಾಶಮಾಡುವಿರಾ?” ಎಂದೆನು.


ನಿನ್ನ ಪುತ್ರರು, ನಿನ್ನ ಪುತ್ರಿಯರು ನಿನ್ನ ಪೈರನ್ನೂ, ನಿನ್ನ ರೊಟ್ಟಿಯನ್ನೂ ನುಂಗಿಬಿಡುವರು. ನಿನ್ನ ಕುರಿಗಳನ್ನೂ, ನಿನ್ನ ದನಗಳನ್ನೂ ನುಂಗಿಬಿಡುವರು. ನಿನ್ನ ದ್ರಾಕ್ಷಿ ಲತೆಗಳನ್ನೂ, ಅಂಜೂರದ ಗಿಡಗಳನ್ನೂ ನುಂಗಿಬಿಡುವರು. ನೀನು ನಂಬಿಕೊಂಡಿದ್ದ ಕೋಟೆಯುಳ್ಳ ಪಟ್ಟಣಗಳನ್ನು ಖಡ್ಗದಿಂದ ಹಾಳುಮಾಡುವರು.


“ ‘ನಮ್ಮ ದೇವರಾದ ಯೆಹೋವ ದೇವರು ನಮಗೆ ಯಾತಕ್ಕೆ ಇವುಗಳನ್ನೆಲ್ಲಾ ಮಾಡುತ್ತಾರೆ,’ ಎಂದು ನೀವು ಕೇಳುವಾಗ, ನೀನು ಅವರಿಗೆ ಹೀಗೆ ಹೇಳಬೇಕು: ‘ನೀವು ನನ್ನನ್ನು ಬಿಟ್ಟು, ನಿಮ್ಮ ದೇಶದಲ್ಲಿ ಬೇರೆ ದೇವರುಗಳನ್ನು ಸೇವಿಸಿದ ಹಾಗೆ, ನಿಮ್ಮದಲ್ಲದ ದೇಶದಲ್ಲಿ ಅನ್ಯರನ್ನು ಸೇವಿಸುವಿರಿ.’


ಏಕೆಂದರೆ ನಿನ್ನನ್ನು ರಕ್ಷಿಸುವುದಕ್ಕೆ ನಾನು ನಿನ್ನ ಸಂಗಡ ಇದ್ದೇನೆ,’ ಎಂದು ಯೆಹೋವ ದೇವರು ಹೇಳುತ್ತಾರೆ. ‘ನಿನ್ನನ್ನು ಎಲ್ಲಿ ಚದರಿಸಿದೆನೋ, ಆ ಎಲ್ಲಾ ಜನಾಂಗಗಳನ್ನು ನಾನು ಸಂಪೂರ್ಣವಾಗಿ ಮುಗಿಸಿಬಿಟ್ಟಾಗ್ಯೂ ನಿನ್ನನ್ನು ಸಂಪೂರ್ಣವಾಗಿ ಮುಗಿಸಿಬಿಡುವುದಿಲ್ಲ. ಮಿತಿಯಲ್ಲಿ ನಿನ್ನನ್ನು ಸರಿಪಡಿಸುವೆನು. ನಾನು ಶಿಕ್ಷಿಸದೆ ಬಿಡುವುದಿಲ್ಲ.’


ಆದರೂ ಅವರನ್ನು ನಾನು ನಾಶಮಾಡದ ಹಾಗೆ ನನ್ನ ಕಣ್ಣು ಕನಿಕರಿಸಿತು. ನಾನು ಅವರನ್ನು ಮರುಭೂಮಿಯಲ್ಲಿ ಅಂತ್ಯಗೊಳಿಸಲಿಲ್ಲ.


ಯೆಹೋವ ದೇವರೇ, ನೀವು ಅನಾದಿಕಾಲದಿಂದ ಬಂದವರಲ್ಲವೇ? ನನ್ನ ದೇವರೇ, ನನ್ನ ಪರಿಶುದ್ಧರೇ, ನೀನು ಎಂದಿಗೂ ಸಾಯುವುದಿಲ್ಲ. ಯೆಹೋವ ದೇವರೇ, ನ್ಯಾಯತೀರ್ಪನ್ನು ಜಾರಿಗೊಳಿಸಲು ಅವರನ್ನು ನೇಮಿಸಿದ್ದೀರಿ. ನನ್ನ ಬಂಡೆಯೇ, ನೀವು ಶಿಕ್ಷಿಸಲು ಅವರನ್ನು ನೇಮಕ ಮಾಡಿದ್ದೀರಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು