Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 50:1 - ಕನ್ನಡ ಸಮಕಾಲಿಕ ಅನುವಾದ

1 ಬಾಬಿಲೋನಿಯರ ದೇಶವಾದ ಬಾಬಿಲೋನಿಯದ ಕುರಿತು ಪ್ರವಾದಿ ಯೆರೆಮೀಯನಿಂದ ಯೆಹೋವ ದೇವರು ನುಡಿಸಿದ ವಾಕ್ಯ ಇದು:

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

1 ಯೆಹೋವನು ಪ್ರವಾದಿಯಾದ ಯೆರೆಮೀಯನ ಮೂಲಕ ಕಸ್ದೀಯರ ದೇಶವಾದ ಬಾಬೆಲಿನ ವಿಷಯವಾಗಿ ಪ್ರಕಟಿಸಿದ ವಾಕ್ಯ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

1 ಬಾಬಿಲೋನಿಯರ ದೇಶವಾದ ಬಾಬಿಲೋನಿಯದ ಕುರಿತು ಪ್ರವಾದಿ ಯೆರೆಮೀಯನಿಂದ ಸರ್ವೇಶ್ವರ ಸ್ವಾಮಿ ನುಡಿಸಿದ ವಾಕ್ಯ ಇದು:

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

1 ಯೆಹೋವನು ಪ್ರವಾದಿಯಾದ ಯೆರೆಮೀಯನಿಂದ ಕಸ್ದೀಯರ ದೇಶವಾದ ಬಾಬೆಲಿನ ವಿಷಯವಾಗಿ ನುಡಿಸಿದ ವಾಕ್ಯ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

1 ಬಾಬಿಲೋನ್ ಮತ್ತು ಬಾಬಿಲೋನಿನ ಜನರ ಬಗ್ಗೆ ಯೆಹೋವನ ಸಂದೇಶವಿದು. ಈ ಸಂದೇಶವನ್ನು ಯೆಹೋವನು ಯೆರೆಮೀಯನ ಮುಖಾಂತರ ಕೊಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 50:1
22 ತಿಳಿವುಗಳ ಹೋಲಿಕೆ  

ಯಾವ ಪ್ರವಾದನೆಯೂ ಎಂದೂ ಮನುಷ್ಯನ ಚಿತ್ತದಿಂದ ಬರಲಿಲ್ಲ, ಆದರೆ ಪ್ರವಾದಿಗಳು ಪವಿತ್ರಾತ್ಮ ಪ್ರೇರಿತರಾಗಿ ದೇವರಿಂದ ಪಡೆದುಕೊಂಡಿದ್ದನ್ನೇ ಮಾತನಾಡಿದರು.


“ಅದರಂತೆ ಅಬ್ರಹಾಮನು ಕಸ್ದೀಯರ ನಾಡನ್ನು ಬಿಟ್ಟು ಹಾರಾನಿನಲ್ಲಿ ಬಂದು ನೆಲೆಸಿದನು. ಅವನ ತಂದೆಯ ಮರಣದ ನಂತರ ನೀವು ಈಗ ವಾಸಿಸುತ್ತಿರುವ ಈ ನಾಡಿಗೆ ದೇವರು ಅವನನ್ನು ಬರಮಾಡಿದರು.


ಅವನ ದೇಶಕ್ಕೆ ನಿಯಮಿತ ಕಾಲ ಬರುವ ತನಕ, ಎಲ್ಲ ರಾಷ್ಟ್ರಗಳು ಅವನಿಗೂ, ಅವನ ಮಗನಿಗೂ, ಮೊಮ್ಮಗನಿಗೂ ಅಡಿಯಾಳಾಗಿ ಇರಬೇಕು. ಆಮೇಲೆ ಅನೇಕ ರಾಷ್ಟ್ರಗಳೂ, ಮಹಾರಾಜರೂ ಅವನನ್ನೇ ಅಡಿಯಾಳನ್ನಾಗಿ ಮಾಡಿಕೊಳ್ಳುವರು,” ಎಂಬುದು.


ಕಸ್ದೀಯರ ದೇಶವು! ಅಸ್ಸೀರಿಯದವರು ಅದನ್ನು ಕಾಡುಮೃಗಗಳಿಗೆ ಈಡು ಮಾಡುವ ತನಕ ಈ ಜನರು ಇರಲಿಲ್ಲ. ಗೋಪುರಗಳನ್ನು ಕಟ್ಟಿಸಿಕೊಂಡು ಅವರು ಅದರ ಅರಮನೆಗಳನ್ನು ಕಟ್ಟಿಸಿಕೊಂಡು ಅದನ್ನು ನಾಶಮಾಡಿದ್ದಾರೆ.


ನಿಮ್ಮನ್ನು ವಿಶ್ರಾಂತಿಗೊಳಿಸುವ ದಿನದಲ್ಲಿ ಬಾಬಿಲೋನಿನ ರಾಜನಿಗೆ ವಿರುದ್ಧವಾದ ಈ ಪದ್ಯವನ್ನು ನೀವು ಹೀಗೆ ಸ್ವರವೆತ್ತಿ ಹಾಡಬೇಕು: ಹೀಗೆ ದಬ್ಬಾಳಿಕೆಗಾರನು ಕೊನೆಗೊಂಡನು. ಅವನ ಕೋಪ ಹೀಗೆ ಮುಗಿಯಿತು.


ಇವನು ಇನ್ನೂ ಮಾತನಾಡುತ್ತಿರಲು, ಇನ್ನೊಬ್ಬ ದೂತನು ಬಂದು, “ಕಸ್ದೀಯರು ಮೂರು ಗುಂಪುಗಳಾಗಿ ಬಂದು, ಒಂಟೆಗಳ ಮೇಲೆ ದಾಳಿಮಾಡಿ, ಅವುಗಳನ್ನು ತೆಗೆದುಕೊಂಡು ಹೋದರು. ಆಳುಗಳನ್ನು ಖಡ್ಗದಿಂದ ಸಂಹರಿಸಿದರು. ನಾನೊಬ್ಬನು ಮಾತ್ರ ನಿನಗೆ ತಿಳಿಸಲು ತಪ್ಪಿಸಿಕೊಂಡು ಬಂದಿದ್ದೇನೆ,” ಎಂದನು.


“ಯೆಹೋವ ದೇವರ ಆತ್ಮರು ನನ್ನ ಮೂಲಕ ಮಾತನಾಡಿದರು; ಅವರ ನುಡಿ ನನ್ನ ಬಾಯಲ್ಲಿ ಇತ್ತು.


ತೆರಹನು ತನ್ನ ಮಗನಾದ ಅಬ್ರಾಮನನ್ನು ಮತ್ತು ತನಗೆ ಮೊಮ್ಮಗನೂ ಹಾರಾನನಿಗೆ ಮಗನೂ ಆದ ಲೋಟನನ್ನೂ ಹಾಗೂ ತನಗೆ ಸೊಸೆಯೂ ಅಬ್ರಾಮನಿಗೆ ಹೆಂಡತಿಯೂ ಆದ ಸಾರಯಳನ್ನೂ ಕರೆದುಕೊಂಡು ಕಾನಾನ್ ದೇಶಕ್ಕೆ ಹೋಗುವುದಕ್ಕಾಗಿ ಕಸ್ದೀಯರ ಊರ್ ಪಟ್ಟಣವನ್ನು ಬಿಟ್ಟು, ಹಾರಾನ್ ಎಂಬ ಪಟ್ಟಣಕ್ಕೆ ಬಂದು ಅಲ್ಲಿ ವಾಸವಾಗಿದ್ದನು.


ಶಿನಾರ್ ದೇಶದಲ್ಲಿರುವ ಬಾಬಿಲೋನ್, ಯೆರೆಕ್, ಅಕ್ಕದ್, ಕಲ್ನೇ ಎಂಬವು ಅವನ ರಾಜ್ಯದ ಪ್ರಾರಂಭದ ಕೇಂದ್ರಗಳು.


ಅವನ ಹಿಂದೆ ಎರಡನೆಯವನಾದ ಒಬ್ಬ ದೇವದೂತನು ಬಂದು, “ ‘ಬಿದ್ದಳು, ಬಾಬಿಲೋನ್ ಮಹಾನಗರಿಯು ಬಿದ್ದಳು!’ ಆಕೆಯು ಸಕಲ ಜನಾಂಗಗಳಿಗೆ ತನ್ನ ಅತ್ಯಾಸಕ್ತಿಯ ಅನೈತಿಕತೆವೆಂಬ ದ್ರಾಕ್ಷಾರಸವನ್ನು ಕುಡಿಸಿದಳು,” ಎಂದು ಹೇಳಿದನು.


ಆದಕಾರಣ ಅದಕ್ಕೆ, ಬಾಬೆಲ್ ಎಂದು ಹೆಸರಾಯಿತು. ಏಕೆಂದರೆ ಅಲ್ಲಿ ಯೆಹೋವ ದೇವರು ಇಡೀ ಜಗತ್ತಿನ ಭಾಷೆಗಳನ್ನು ಗಲಿಬಿಲಿ ಮಾಡಿದರು. ಅಲ್ಲಿಂದ ಯೆಹೋವ ದೇವರು ಅವರನ್ನು ಭೂಲೋಕದಲ್ಲೆಲ್ಲಾ ಚದರಿಸಿಬಿಟ್ಟರು.


ಅಸ್ಸೀರಿಯದ ಅರಸನು ಬಾಬಿಲೋನ್, ಕೂತಾ, ಅವ್ವಾ, ಹಮಾತ್, ಸೆಫರ್ವಯಿಮ್ ಊರುಗಳ ಜನರನ್ನು ಬರಮಾಡಿ, ಅವರನ್ನು ಇಸ್ರಾಯೇಲರಿಗೆ ಬದಲಾಗಿ ಸಮಾರ್ಯದ ಪಟ್ಟಣಗಳಲ್ಲಿ ಇರಿಸಿದನು. ಅವರು ಸಮಾರ್ಯವನ್ನು ಸ್ವತಂತ್ರಿಸಿಕೊಂಡು, ಅದರ ಪಟ್ಟಣಗಳಲ್ಲಿ ವಾಸಿಸಿದರು.


“ಎಪ್ಪತ್ತು ವರ್ಷ ತುಂಬಿದ ಮೇಲೆ ನಾನು ಬಾಬಿಲೋನಿನ ಅರಸನನ್ನೂ, ಆ ಜನಾಂಗವನ್ನೂ, ಕಸ್ದೀಯರ ದೇಶವನ್ನೂ ಅವರ ಅಕ್ರಮಕ್ಕಾಗಿ ವಿಚಾರಿಸಿ ದಂಡಿಸುವೆನು. ಅದನ್ನು ನಿತ್ಯವಾಗಿ ಹಾಳುಮಾಡುವೆನು.


ಯೆಹೂದದ ಅರಸನಾದ ಯೆಹೋಯಾಕೀಮನ ಆಳಿಕೆಯ ಮೂರನೆಯ ವರ್ಷದಲ್ಲಿ ಬಾಬಿಲೋನಿನ ಅರಸನಾದ ನೆಬೂಕದ್ನೆಚ್ಚರನು ಯೆರೂಸಲೇಮಿಗೆ ಬಂದು ಮುತ್ತಿಗೆಹಾಕಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು