Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 50:15 - ಕನ್ನಡ ಸಮಕಾಲಿಕ ಅನುವಾದ

15 ಸುತ್ತಲೂ ಅದಕ್ಕೆ ವಿರೋಧವಾಗಿ ಆರ್ಭಟಿಸಿರಿ; ಅದರ ಬುರುಜುಗಳು ಬಿದ್ದು ಹೋದವು; ಅದರ ಪೌಳಿಗೋಡೆಯನ್ನು ಕೆಡವಲಾಯಿತು. ಅದು ಯೆಹೋವ ದೇವರ ಪ್ರತಿದಂಡನೆ; ಆದ್ದರಿಂದ ನೀವೂ ಅದಕ್ಕೆ ಮುಯ್ಯಿತೀರಿಸಿರಿ. ಅದು ಇತರರಿಗೆ ಮಾಡಿದ ಹಾಗೆಯೇ ಅದಕ್ಕೆ ಮಾಡಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

15 ಅದರ ಸುತ್ತಲು ಜಯಘೋಷಮಾಡಿರಿ, ಅಧೀನವಾಯಿತು, ಅದರ ಕೊತ್ತಲುಗಳು ಬಿದ್ದವು, ಅದರ ಪೌಳಿಗೋಡೆಯು ಕೆಡವಲ್ಪಟ್ಟಿತು. ಯೆಹೋವನು ಅದಕ್ಕೆ ಮುಯ್ಯಿತೀರಿಸಿದ್ದಾನೆ; ಮುಯ್ಯಿತೀರಿಸಿರಿ; ಅದು ಮಾಡಿದಂತೆಯೇ ಅದಕ್ಕೆ ಮಾಡಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

15 ಆದರ ಸುತ್ತಲು ರಣಘೋಷಮಾಡಿರಿ. ಇಗೋ, ಅದು ಶರಣಾಗತವಾಯಿತು! ಅದರ ಕೋಟೆಕೊತ್ತಲಗಳು ಬಿದ್ದವು. ಅದರ ಪೌಳಿಗೋಡೆಯನ್ನು ಕೆಡವಲಾಯಿತು. ಸರ್ವೇಶ್ವರನಾದ ನಾನು ಅದಕ್ಕೆ ಮುಯ್ಯಿತೀರಿಸಿದ್ದೇನೆ. ನೀವೂ ಮುಯ್ಯಿತೀರಿಸಿರಿ. ಅದು ಮಾಡಿದಂತೆಯೇ ಅದಕ್ಕೆ ಮಾಡಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

15 ಅದರ ಸುತ್ತಲು ಜಯಘೋಷಮಾಡಿರಿ, ಅಧೀನವಾಯಿತು, ಅದರ ಕೊತ್ತಲಗಳು ಬಿದ್ದವು, ಅದರ ಪೌಳಿಗೋಡೆಯು ಕೆಡವಲ್ಪಟ್ಟಿತು; ಯೆಹೋವನು ಅದಕ್ಕೆ ಮುಯ್ಯಿತೀರಿಸಿದ್ದಾನೆ; ಮುಯ್ಯಿತೀರಿಸಿರಿ; ಅದು ಮಾಡಿದಂತೆಯೇ ಅದಕ್ಕೆ ಮಾಡಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

15 ಬಾಬಿಲೋನಿನ ಸುತ್ತಲೂ ಇರುವ ಸೈನಿಕರೇ, ಜಯಘೋಷಮಾಡಿರಿ. ಈಗ ಬಾಬಿಲೋನ್ ಶರಣಾಗತವಾಗಿದೆ. ಅದರ ಪೌಳಿಗೋಡೆಗಳನ್ನು ಮತ್ತು ಕೊತ್ತಲಗಳನ್ನು ಬೀಳಿಸಲಾಗಿದೆ. ಯೆಹೋವನು ಅವರಿಗೆ ತಕ್ಕ ಶಿಕ್ಷೆಯನ್ನು ಕೊಡುತ್ತಿದ್ದಾನೆ. ಎಲ್ಲಾ ಜನಾಂಗಗಳವರು ಬಾಬಿಲೋನಿಗೆ ತಕ್ಕ ಶಿಕ್ಷೆಯನ್ನು ಕೊಡಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 50:15
44 ತಿಳಿವುಗಳ ಹೋಲಿಕೆ  

ಮಾತ್ರವಲ್ಲದೆ ಸೇನಾಧೀಶ್ವರ ಯೆಹೋವ ದೇವರು ಹೇಳುವುದೇನೆಂದರೆ: “ಬಾಬಿಲೋನಿನ ಅಗಲವಾದ ಪೌಳಿಗೋಡೆ ಪೂರ್ಣವಾಗಿ ನೆಲಸಮವಾಗುವುದು. ಅವಳ ಎತ್ತರವಾದ ಬಾಗಿಲುಗಳು ಬೆಂಕಿಯಿಂದ ಸುಟ್ಟುಹೋಗುವುವು; ಜನರು ವ್ಯರ್ಥಕ್ಕಾಗಿಯೂ, ಪ್ರಜೆಗಳು ಬೆಂಕಿಗಾಗಿಯೂ ಕಷ್ಟಪಟ್ಟು ಆಯಾಸಪಡುವರು.”


ಆಕೆಯು ನಿಮಗೆ ಕೊಟ್ಟಿದ್ದಕ್ಕೆ ಸರಿಯಾಗಿ ಹಿಂದಕ್ಕೆ ಕೊಡಿರಿ. ಕೃತ್ಯಗಳಿಗೆ ಸರಿಯಾಗಿ ಎರಡರಷ್ಟು ಅವಳಿಗೆ ಕೊಡಿರಿ. ಆಕೆಯ ಬಟ್ಟಲಿನಿಂದಲೇ ಎರಡರಷ್ಟು ಆಕೆಗೆ ಕಲಸಿ ಕೊಡಿರಿ.


“ಬಾಬಿಲೋನಿನೊಳಗಿಂದ ಓಡಿಹೋಗಿರಿ; ಒಬ್ಬೊಬ್ಬನು ತನ್ನ ತನ್ನ ಪ್ರಾಣವನ್ನು ತಪ್ಪಿಸಿಕೊಳ್ಳಲಿ; ಅದರ ಪಾಪದಲ್ಲಿ ನಾಶವಾಗಬೇಡಿರಿ; ಏಕೆಂದರೆ ಇದು ಯೆಹೋವ ದೇವರ ಪ್ರತಿದಂಡನೆಯ ಕಾಲವು; ಆತನೇ ಅದಕ್ಕೆ ಮುಯ್ಯಿಗೆ ಮುಯ್ಯಿ ಕೊಡುತ್ತಾನೆ.


ಏಕೆಂದರೆ ಇದು ಸೇನಾಧೀಶ್ವರ ಯೆಹೋವನಾದ ದೇವರ ದಿವಸವೇ. ಆತನು ತನ್ನ ಶತ್ರುಗಳಿಗೆ ಮುಯ್ಯಿಗೆ ಮುಯ್ಯಿ ತೀರಿಸುವ ದಿವಸವು, ಖಡ್ಗವು ಸಂಹರಿಸಿ ಅವರ ರಕ್ತದಿಂದ ತೃಪ್ತಿಯಾಗಿ ಮತ್ತವಾಗುವುದು. ಏಕೆಂದರೆ ಉತ್ತರ ದೇಶದಲ್ಲಿ ಯೂಫ್ರೇಟೀಸ್ ನದಿಯ ಬಳಿಯಲ್ಲಿ ಸೇನಾಧೀಶ್ವರ ಯೆಹೋವರಾದ ದೇವರಿಗೆ ಬಲಿ ಆಗುತ್ತದೆ.


ಸಾಕಷ್ಟು ರೊಟ್ಟಿಯನ್ನು ಪಡೆಯಲು ನಾವು ಈಜಿಪ್ಟ್ ಮತ್ತು ಅಸ್ಸೀರಿಯಕ್ಕೆ ಅಧೀನರಾಗಿದ್ದೇವೆ.


ಏಕೆಂದರೆ ನಾನು ಬಾಬಿಲೋನಿನಲ್ಲಿರುವ ಬೇಲ್‌ನನ್ನು ದಂಡಿಸಿ, ಅವನು ನುಂಗಿದ್ದನ್ನು ಅವನ ಬಾಯೊಳಗಿಂದ ಹೊರಗೆ ಕಕ್ಕಿಸುವೆನು. ಇನ್ನು ಮೇಲೆ ಜನಾಂಗಗಳು ಅವನ ಬಳಿಗೆ ಪ್ರವಾಹವಾಗಿ ಬರುವುದಿಲ್ಲ. ಹೌದು, ಬಾಬಿಲೋನಿನ ಗೋಡೆ ಬೀಳುವುದು.


ಸೇನಾಧೀಶ್ವರ ಯೆಹೋವ ದೇವರು ತಮ್ಮ ಮೇಲೆ ಆಣೆಯಿಟ್ಟು: ನಿಶ್ಚಯವಾಗಿ ನಾನು ಮಿಡತೆಗಳಷ್ಟು ಅಸಂಖ್ಯ ಜನರಿಂದ ನಿನ್ನನ್ನು ತುಂಬಿಸುತ್ತೇನೆಂದು ಅವರು ನಿನಗೆ ವಿರೋಧವಾಗಿ ಆರ್ಭಟವನ್ನು ಎತ್ತುವರು.


“ಬಾಣಗಳನ್ನು ಮೆರುಗು ಮಾಡಿರಿ; ಡಾಲುಗಳನ್ನು ಎತ್ತಿಕೊಳ್ಳಿರಿ, ಯೆಹೋವ ದೇವರು ಮೇದ್ಯರ ಅರಸರ ಆತ್ಮವನ್ನು ಎಬ್ಬಿಸಿದ್ದಾರೆ; ಆತನ ಆಲೋಚನೆ ಬಾಬಿಲೋನಿಗೆ ವಿರೋಧವಾಗಿ ಅದನ್ನು ನಾಶಮಾಡುವುದಕ್ಕೆ ಇದೆ. ಏಕೆಂದರೆ ಇದು ಯೆಹೋವ ದೇವರ ಪ್ರತಿದಂಡನೆಯು, ಅವರ ದೇವಾಲಯದ ಪ್ರತಿದಂಡನೆಯಾಗಿದೆ.


ಆದ್ದರಿಂದ ನಿಮ್ಮ ಪಿತೃಗಳ ಹಾಗೆ ನಿಮ್ಮನ್ನು ಕಠಿಣಪಡಿಸಿಕೊಳ್ಳಬೇಡಿರಿ. ಯೆಹೋವ ದೇವರಿಗೆ ಅಧೀನರಾಗಿ ಅವರು ಯುಗಯುಗಕ್ಕೂ ಪ್ರತಿಷ್ಠೆ ಮಾಡಿದ ಪರಿಶುದ್ಧ ಸ್ಥಾನದಲ್ಲಿ ಪ್ರವೇಶಿಸಿದ ನಿಮ್ಮ ದೇವರಾದ ಯೆಹೋವ ದೇವರನ್ನು ಸೇವಿಸಿರಿ. ಆಗ ದೇವರು ತಮ್ಮ ಕೋಪವನ್ನು ಬಿಟ್ಟು ನಿಮ್ಮ ಕಡೆಗೆ ತಿರುಗುವರು.


ಎಲ್ಲಾ ಪ್ರಧಾನರೂ, ಪರಾಕ್ರಮಶಾಲಿಗಳೂ, ಅರಸನಾದ ದಾವೀದನ ಸಮಸ್ತ ಪುತ್ರರೂ ಅರಸನಾದ ಸೊಲೊಮೋನನಿಗೆ ಅಧೀನರಾದರು.


ಏಕೆಂದರೆ ದೇವರ ನ್ಯಾಯತೀರ್ಪುಗಳು ಸತ್ಯವೂ ನ್ಯಾಯವೂ ಆಗಿವೆ. ಏಕೆಂದರೆ ತನ್ನ ಅನೈತಿಕತೆಯಿಂದ ಭೂಲೋಕವನ್ನು ಕೆಡಿಸುತ್ತಿದ್ದ ಆ ಮಹಾ ಜಾರಸ್ತ್ರೀಗೆ ದೇವರು ನ್ಯಾಯತೀರಿಸಿ, ಆಕೆಯು ದೇವರ ದಾಸರನ್ನು ಹಿಂಸಿಸಿ, ಚೆಲ್ಲಿಸಿದ ರಕ್ತಕ್ಕಾಗಿ ಅವಳಿಗೆ ಪ್ರತಿದಂಡನೆಯನ್ನು ಮಾಡಿದ್ದಾರೆ.”


ಅವರು ನಿಮ್ಮ ಭಕ್ತರ ಮತ್ತು ನಿಮ್ಮ ಪ್ರವಾದಿಗಳ ರಕ್ತವನ್ನು ಸುರಿಸಿದ್ದಾರೆ. ನೀವು ಅವರಿಗೆ ಕುಡಿಯುವುದಕ್ಕೆ ರಕ್ತವನ್ನೇ ಕೊಟ್ಟಿರುವಿರಿ. ಅವರು ಅದಕ್ಕೆ ಪಾತ್ರರು.” ಎಂದು ಹೇಳುವುದನ್ನು ಕೇಳಿದೆನು.


ಕರುಣೆ ತೋರಿಸದೆ ಇರುವವರಿಗೆ ಕರುಣೆಯಿಲ್ಲದ ನ್ಯಾಯತೀರ್ಪಾಗುವುದು. ಕರುಣೆವುಳ್ಳವರೋ ನ್ಯಾಯತೀರ್ಪಿನ ಮೇಲೆಯೇ ವಿಜಯವನ್ನು ಸಾಧಿಸುವರು.


ಅವರು ದೇವರನ್ನು ಅರಿಯದವರಿಗೂ ನಮಗೆ ಕರ್ತ ಆಗಿರುವ ಯೇಸುವಿನ ಸುವಾರ್ತೆಗೆ ಅವಿಧೇಯರಾದವರಿಗೂ ಪ್ರತೀಕಾರ ಮಾಡುವರು.


ಪ್ರಿಯರೇ, ಮುಯ್ಯಿಗೆ ಮುಯ್ಯಿ ತೀರಿಸದೆ, ಅದನ್ನು ದೇವರ ಕೋಪಕ್ಕೆ ಬಿಟ್ಟುಬಿಡಿರಿ. ಏಕೆಂದರೆ, “ಮುಯ್ಯಿ ತೀರಿಸುವುದು ನನಗೆ ಸೇರಿದ್ದು. ನಾನು ಅದನ್ನು ತೀರಿಸುವೆನು, ಎಂದು ಕರ್ತನು ಹೇಳುತ್ತಾರೆ,” ಎಂದು ಪವಿತ್ರ ವೇದದಲ್ಲಿ ಬರೆಯಲಾಗಿದೆ.


ಹೀಗೆ ನಮ್ಮ ಅನೀತಿಯೂ ದೇವರ ನೀತಿಯನ್ನು ಪ್ರಸಿದ್ಧಿಗೆ ತರುವುದಾದರೆ, ಕೋಪವನ್ನು ಸುರಿಸುವ ದೇವರು ಅನ್ಯಾಯಗಾರರೇನು? ನಾನು ಮಾನವ ರೀತಿಯಲ್ಲಿ ಮಾತನಾಡಿದ್ದೇನೆ.


ಏಕೆಂದರೆ ಪವಿತ್ರ ವೇದದಲ್ಲಿ ಬರೆದಿರುವವುಗಳೆಲ್ಲವೂ ನೆರವೇರಲು, ಇವು ದಂಡನೆಯ ದಿವಸಗಳಾಗಿವೆ.


ನೀವು ಇತರರ ಬಗ್ಗೆ ಕೊಡುವ ತೀರ್ಪಿನ ಪ್ರಕಾರವೇ ನಿಮಗೂ ತೀರ್ಪಾಗುವುದು, ನೀವು ಅಳೆಯುವ ಅಳತೆಯಿಂದಲೇ ನಿಮಗೂ ಅಳೆದುಕೊಡಲಾಗುವುದು.


ಯೆಹೋವ ದೇವರು ಅಸೂಯೆಪಡುವ ಮತ್ತು ಸೇಡು ತೀರಿಸಿಕೊಳ್ಳುವ ದೇವರು. ಅವರು ತಮ್ಮನ್ನು ಎದುರಿಸುವವರನ್ನು ಎದುರಿಸುತ್ತಾರೆ. ಯೆಹೋವ ದೇವರು ರೋಷದಿಂದ ಮುಯ್ಯಿಗೆ ಮುಯ್ಯಿ ತೀರಿಸುತ್ತಾರೆ. ಯೆಹೋವ ದೇವರು ತಮ್ಮ ವೈರಿಗಳಿಗೆ ಮುಯ್ಯಿಗೆ ಮುಯ್ಯಿ ತೀರಿಸಿ, ತಮ್ಮ ಶತ್ರುಗಳ ಮೇಲೆ ಕೋಪವನ್ನು ಪ್ರಕಟಿಸಿಕೊಳ್ಳುತ್ತಾರೆ.


ಅವನ ಬಲಗೈಯಲ್ಲಿ ಯೆರೂಸಲೇಮಿಗಾಗಿ ಶಕುನವು ಇತ್ತು. ಅಲ್ಲಿ ಅವನು ಬಡಿಯುವ ಆಯುಧಗಳನ್ನಿಟ್ಟು, ಬಾಯಿಬಿಟ್ಟು ಸಂಹಾರ ಧ್ವನಿಗೈದು, ಆರ್ಭಟವಿಟ್ಟು ಬಾಗಿಲುಗಳ ಎದುರಾಗಿ ಬಡಿಯುವ ಆಯುಧಗಳನ್ನಿಟ್ಟು ದಿಬ್ಬ ಹಾಕಿ, ಒಡ್ಡು ಕಟ್ಟಿದ್ದು ಸೂಚನೆಯಾಗಿದೆ.


ಅವನು ಒಡಂಬಡಿಕೆಯನ್ನು ಮುರಿದು, ಪ್ರಮಾಣ ವಚನವನ್ನು ತಿರಸ್ಕರಿಸಿದನು. ಅವನು ಒಡಂಬಡಿಕೆಯಲ್ಲಿ ತನ್ನ ಹಸ್ತವನ್ನಿಟ್ಟಿದ್ದರೂ ಈ ಎಲ್ಲಾ ಸಂಗತಿಗಳನ್ನು ಮಾಡಿದ್ದರಿಂದ ಅವನು ತಪ್ಪಿಸಿಕೊಳ್ಳಲಾರನು.


ಹೀಗೆ ಹೇಳು, ‘ಈ ಪ್ರಕಾರ ಬಾಬಿಲೋನ್ ಮುಳುಗಿ ಹೋಗುವುದು. ನಾನು ಅವಳ ಮೇಲೆ ತರುವ ಕೇಡಿನೊಳಗಿಂದ ಏಳದು. ಅವರು ಬೀಳುವರು.’ ” ಇಲ್ಲಿಯ ತನಕ ಯೆರೆಮೀಯನ ವಾಕ್ಯಗಳು.


ಆದ್ದರಿಂದ ಯೆಹೋವ ದೇವರು ಹೀಗೆ ಹೇಳುತ್ತಾರೆ. “ಇಗೋ, ನಾನು ನಿನ್ನ ನಿಮಿತ್ತ ವ್ಯಾಜ್ಯವಾಡುತ್ತೇನೆ. ನಿನಗೋಸ್ಕರ ಪ್ರತಿದಂಡನೆ ಮಾಡುತ್ತೇನೆ. ಅದರ ಸಮುದ್ರವನ್ನು ಒಣಗಿಸುತ್ತೇನೆ. ಅದರ ಬುಗ್ಗೆಯನ್ನು ಬತ್ತಿಹೋಗುವಂತೆ ಮಾಡುತ್ತೇನೆ.


“ಲೋಕವನ್ನೆಲ್ಲಾ ನಾಶಮಾಡುವ ನಾಶಕ ಪರ್ವತವೇ, ಇಗೋ, ನಾನು ನಿನಗೆ ವಿರೋಧವಾಗಿದ್ದೇನೆ” ಎಂದು ಯೆಹೋವ ದೇವರು ಹೇಳುತ್ತಾರೆ. “ನಿನ್ನ ಮೇಲೆ ನನ್ನ ಕೈಯನ್ನು ಚಾಚಿ, ಬಂಡೆಗಳ ಮೇಲಿನಿಂದ ನಿನ್ನನ್ನು ಹೊರಳಿಸಿ, ನಿನ್ನನ್ನು ಸುಟ್ಟ ಬೆಟ್ಟವಾಗಿ ಮಾಡುತ್ತೇನೆ.


“ಬಿಲ್ಲನ್ನು ಬಗ್ಗಿಸುವವರೇ, ಬಾಬಿಲೋನಿಗೆ ವಿರೋಧವಾಗಿ ಸುತ್ತಲೂ ಯುದ್ಧ ಸಿದ್ಧಮಾಡಿರಿ; ಅದಕ್ಕೆ ಎಸೆಯಿರಿ; ಬಾಣಗಳನ್ನು ಕಡಿಮೆ ಮಾಡಬೇಡಿರಿ; ಏಕೆಂದರೆ ಯೆಹೋವ ದೇವರಿಗೆ ವಿರೋಧವಾಗಿ ಪಾಪಮಾಡಿತಲ್ಲಾ.


ಏಕೆಂದರೆ ಮುಯ್ಯಿಗೆ ಮುಯ್ಯಿ ತೀರಿಸುವ ದಿವಸವು ನನ್ನ ಹೃದಯದಲ್ಲಿದೆ. ನಾನು ವಿಮೋಚಿಸಿದವರ ವರುಷವು ಬಂತು.


ಯೆಹೋವ ದೇವರ ಮೆಚ್ಚುಗೆಯ ವರ್ಷವನ್ನು ಸಾರಿ ಹೇಳುವುದಕ್ಕೂ, ನಮ್ಮ ದೇವರು ಮುಯ್ಯಿಗೆ ಮುಯ್ಯಿ ಕೊಡುವ ದಿವಸವನ್ನು ಪ್ರಸಿದ್ಧ ಮಾಡುವುದಕ್ಕೂ, ದುಃಖವುಳ್ಳವರೆಲ್ಲರನ್ನು ಆದರಿಸುವುದಕ್ಕೂ,


ಅವನು ನೀತಿಯನ್ನು ಕವಚದ ಹಾಗೆ ಧರಿಸಿಕೊಂಡು, ರಕ್ಷಣೆಯ ಶಿರಸ್ತ್ರಾಣವನ್ನು ತನ್ನ ತಲೆಯ ಮೇಲೆ ಇಟ್ಟುಕೊಂಡನು. ಪ್ರತೀಕಾರದ ವಸ್ತ್ರಗಳನ್ನು ಹೊದಿಕೆಯಾಗಿ ಹೊದ್ದುಕೊಂಡು, ಆಸಕ್ತಿಯನ್ನು ಮೇಲಂಗಿಯಾಗಿ ತೊಟ್ಟುಕೊಂಡನು.


ಜನಾಂಗಗಳಲ್ಲಿ ನ್ಯಾಯ ಪ್ರತೀಕಾರವಾಗಲಿ, ಅಪರಾಧಿಗಳಿಗೆ ಶಿಕ್ಷೆಯಾಗಲಿ.


ಯೆಹೋವ ದೇವರೇ, ನೀವು ಪ್ರತೀಕಾರ ಸಲ್ಲಿಸುವ ದೇವರಾಗಿದ್ದೀರಿ. ಮುಯ್ಯಿ ತೀರಿಸುವವರು ನೀವೇ; ದೇವರೇ, ನ್ಯಾಯ ತೀರಿಸುವಂತೆ ನಿಮ್ಮನ್ನು ಪ್ರಕಟಿಸಿಕೊಳ್ಳಿರಿ.


ಆದರೆ ಸಮುಯೇಲನು ಅವನಿಗೆ, “ನಿನ್ನ ಖಡ್ಗವು ಹೇಗೆ ಸ್ತ್ರೀಯರನ್ನು ಮಕ್ಕಳಿಲ್ಲದವರಾಗಿ ಮಾಡಿತೋ, ಹಾಗೆಯೇ ಸ್ತ್ರೀಯರಲ್ಲಿ ನಿನ್ನ ತಾಯಿಯು ಮಕ್ಕಳಿಲ್ಲದವಳಾಗುವಳು,” ಎಂದು ಹೇಳಿ, ಸಮುಯೇಲನು ಗಿಲ್ಗಾಲಿನಲ್ಲಿ ಯೆಹೋವ ದೇವರ ಮುಂದೆ ಅಗಾಗನಿಗೆ ಮರಣದಂಡನೆ ವಿಧಿಸಿದನು.


ಕೂಡಲೆ ಯಾಜಕರು ತುತೂರಿಗಳನ್ನು ಊದಿದಾಗ ಜನರು ಆರ್ಭಟಿಸಿದರು. ತುತೂರಿಯ ಶಬ್ದವನ್ನು ಜನರು ಕೇಳಿ ಮಹಾಧ್ವನಿಯಿಂದ ಆರ್ಭಟಿಸಿದಾಗ ಗೋಡೆಯು ನೆಲಸಮವಾಗಿ ಕೆಳಗೆ ಬಿತ್ತು. ಹೀಗೆ ಜನರಲ್ಲಿ ಪ್ರತಿಯೊಬ್ಬನು ಮುಂದೆ ನೇರವಾಗಿ ಒಳಗೆ ನುಗ್ಗಿದರು. ಆಗ ಪಟ್ಟಣವು ಅವರಿಗೆ ಸ್ವಾಧೀನವಾಯಿತು.


ಅವರು ಟಗರು ಕೊಂಬುಗಳ ತುತೂರಿಗಳಿಂದ ದೀರ್ಘಧ್ವನಿಗೈಯುವಾಗ, ಆ ತುತೂರಿಯ ಧ್ವನಿಯನ್ನು ಕೇಳುವ ಜನರೆಲ್ಲರೂ ಮಹಾ ರಭಸದಿಂದ ಆರ್ಭಟಿಸಬೇಕು. ಆಗ ಆ ಪಟ್ಟಣದ ಗೋಡೆಯು ನೆಲಸಮವಾಗಿ ಬಿದ್ದುಹೋಗುವುದು. ಜನರಲ್ಲಿ ಪ್ರತಿಯೊಬ್ಬನು ತನ್ನ ಮುಂದೆ ನೇರವಾಗಿ ಒಳಗೆ ನುಗ್ಗಿಹೋಗಬಹುದು,” ಎಂದು ಹೇಳಿದರು.


ಎಲ್ಲಾ ಜನಾಂಗಗಳೇ, ದೇವಜನರ ಸಂಗಡ ಹರ್ಷಿಸಿರಿ. ಏಕೆಂದರೆ ದೇವರು ತಮ್ಮ ದಾಸರ ರಕ್ತಕ್ಕೋಸ್ಕರ ಮುಯ್ಯಿ ತೀರಿಸುವರು. ತಮ್ಮ ಶತ್ರುಗಳಿಗೆ ಮುಯ್ಯಿಗೆ ಮುಯ್ಯಿ ತೀರಿಸಿ, ತಮ್ಮ ದೇಶಕ್ಕೋಸ್ಕರವೂ, ತಮ್ಮ ಜನರಿಗೋಸ್ಕರವೂ ದೋಷಪರಿಹಾರ ಮಾಡುವರು.


ನಾನು ಮಿಂಚುವ ಖಡ್ಗವನ್ನು ಹದಮಾಡಿ, ನನ್ನ ಕೈ ನ್ಯಾಯವನ್ನು ಹಿಡಿದುಕೊಳ್ಳುವಾಗ, ನನ್ನ ಶತ್ರುಗಳಿಗೆ ಮುಯ್ಯಿಗೆ ಮುಯ್ಯಿ ತೀರಿಸಿ, ನನ್ನನ್ನು ದ್ವೇಷಿಸುವವರಿಗೆ ಮುಯ್ಯಿತೀರಿಸುವೆನು.


ಮುಯ್ಯಿಗೆ ಮುಯ್ಯಿ ತೀರಿಸುವುದೂ, ಪ್ರತಿಫಲ ಕೊಡುವುದೂ ನನ್ನದೇ. ತಕ್ಕ ಕಾಲದಲ್ಲಿ ಅವರ ಕಾಲು ಜಾರುವುದು. ಅವರ ವಿನಾಶದ ದಿವಸ ಸಮೀಪವಾಗಿದೆ. ಅವರಿಗೆ ಸಿದ್ಧವಾದ ದುರ್ಗತಿಯ ಕಾಲ ಬೇಗ ಬರುತ್ತವೆ.”


ಯೆಹೋವ ದೇವರು ತನ್ನ ಆಯುಧ ಶಾಲೆಯನ್ನು ತೆರೆದು, ತನ್ನ ರೋಷದ ಆಯುಧಗಳನ್ನು ಹೊರಗೆ ತಂದಿದ್ದಾರೆ. ಏಕೆಂದರೆ ಬಾಬಿಲೋನಿನ ದೇಶದಲ್ಲಿ ಸಾರ್ವಭೌಮ ಸೇನಾಧೀಶ್ವರ ಯೆಹೋವ ದೇವರಿಗೆ ಕೆಲಸವಿದೆ.


ಇಗೋ, ಅವನು ಸಿಂಹದ ಹಾಗೆ ಯೊರ್ದನಿನ ದಟ್ಟ ಅಡವಿಯಿಂದ ಬಲವಾದ ಗೋಮಾಳಕ್ಕೆ ವಿರೋಧವಾಗಿ ಏರಿ ಬರುವನು; ಆದರೆ ನಾನು ಕ್ಷಣಮಾತ್ರದಲ್ಲಿ ಆ ಬಾಬಿಲೋನಿಯರನ್ನು ಅಲ್ಲಿಂದ ದೂರವಾಗಿ ಓಡಿಸಿಬಿಡುವೆನು; ಅದನ್ನು ಕಾಯುವುದಕ್ಕೆ ನಾನು ಆರಿಸಿಕೊಂಡವನನ್ನೇ ನೇಮಿಸುವೆನು. ನನಗೆ ಸಮಾನನು ಯಾರು? ನನ್ನನ್ನು ನ್ಯಾಯವಿಚಾರಣೆಗೆ ಕರೆಯುವವನು ಯಾರು? ನನಗೆ ಎದುರಾಗಿ ನಿಲ್ಲತಕ್ಕ ಕುರುಬನು ಯಾರು?”


“ಬಾಬಿಲೋನಿನವರು ಮತ್ತು ಕಸ್ದೀಯರು ಚೀಯೋನಿನಲ್ಲಿ ಮಾಡಿದ ಎಲ್ಲಾ ಕೇಡಿಗೆ ಪ್ರತಿಯಾಗಿ ನಾನು ಅವರೆಲ್ಲರಿಗೂ ಚೀಯೋನಿನವರ ಕಣ್ಣೆದುರಿಗೆ ಮುಯ್ಯಿತೀರಿಸುವೆನು” ಎಂದು ಯೆಹೋವ ದೇವರು ಹೇಳುತ್ತಾರೆ.


ಬಾಬಿಲೋನಿನ ಪರಾಕ್ರಮಶಾಲಿಗಳು ಯುದ್ಧಮಾಡುವುದನ್ನು ಬಿಟ್ಟಿದ್ದಾರೆ; ಅವರ ಭದ್ರಸ್ಥಾನಗಳಲ್ಲಿ ನಿಂತಿದ್ದಾರೆ. ಅವರ ಪರಾಕ್ರಮತನ ತಪ್ಪಿತು; ಅವರು ಬಲಹೀನರಾಗಿದ್ದಾರೆ. ಆ ದೇಶದ ನಿವಾಸಗಳನ್ನು ಸುಟ್ಟಿದ್ದಾರೆ; ಅದರ ಹೆಬ್ಬಾಗಿಲುಗಳು ಮುರಿದುಹೋಗಿವೆ.


ಅವರ ಕ್ರಿಯೆಗಳ ಪ್ರಕಾರವೇ ಸರಿಯಾಗಿ ಸಲ್ಲಿಸುವನು. ತನ್ನ ವೈರಿಗಳಿಗೆ ಉರಿಯನ್ನೂ, ತನ್ನ ಶತ್ರುಗಳಿಗೆ ಪ್ರತಿಫಲವನ್ನೂ, ದ್ವೀಪಗಳಿಗೆ ಪ್ರತಿಫಲವನ್ನೂ ಸಲ್ಲಿಸುವನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು