Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 50:25 - ಕನ್ನಡ ಸಮಕಾಲಿಕ ಅನುವಾದ

25 ಯೆಹೋವ ದೇವರು ತನ್ನ ಆಯುಧ ಶಾಲೆಯನ್ನು ತೆರೆದು, ತನ್ನ ರೋಷದ ಆಯುಧಗಳನ್ನು ಹೊರಗೆ ತಂದಿದ್ದಾರೆ. ಏಕೆಂದರೆ ಬಾಬಿಲೋನಿನ ದೇಶದಲ್ಲಿ ಸಾರ್ವಭೌಮ ಸೇನಾಧೀಶ್ವರ ಯೆಹೋವ ದೇವರಿಗೆ ಕೆಲಸವಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

25 ಸೇನಾಧೀಶ್ವರನಾದ ಯೆಹೋವನೆಂಬ ಕರ್ತನು ಕಸ್ದೀಯರ ದೇಶದಲ್ಲಿ ನಿರ್ವಹಿಸಬೇಕಾದ ಕಾರ್ಯವೊಂದುಂಟು; ಅದಕ್ಕಾಗಿ ಯೆಹೋವನು ತನ್ನ ಆಯುಧ ಶಾಲೆಯನ್ನು ತೆರೆದು ತನ್ನ ರೋಷದ ಅಸ್ತ್ರಶಸ್ತ್ರಗಳನ್ನು ಹೊರಗೆ ತೆಗೆದಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

25 ಸೇನಾಧೀಶ್ವರ ಸರ್ವೇಶ್ವರನೆಂಬ ದೇವರು ಬಾಬಿಲೋನಿನ ದೇಶದಲ್ಲಿ ನಿರ್ವಹಿಸಬೇಕಾದ ಕಾರ್ಯವೊಂದು ಉಂಟು. ಅದಕ್ಕಾಗಿ ಸರ್ವೇಶ್ವರನಾದ ನಾನು ನನ್ನ ಆಯುಧ ಶಾಲೆಯನ್ನು ತೆರೆದಿದ್ದೇನೆ. ನನ್ನ ಕೋಪದ ಅಸ್ತ್ರಶಸ್ತ್ರಗಳನ್ನು ಹೊರಗೆ ತೆಗೆದಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

25 ಸೇನಾಧೀಶ್ವರನಾದ ಯೆಹೋವನೆಂಬ ಕರ್ತನು ಕಸ್ದೀಯರ ದೇಶದಲ್ಲಿ ನಿರ್ವಹಿಸಬೇಕಾದ ಕಾರ್ಯವೊಂದುಂಟು; ಅದಕ್ಕಾಗಿ ಯೆಹೋವನು ತನ್ನ ಆಯುಧ ಶಾಲೆಯನ್ನು ತೆರೆದು ತನ್ನ ರೋಷದ ಅಸ್ತ್ರಶಸ್ತ್ರಗಳನ್ನು ಹೊರಗೆ ತೆಗೆದಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

25 ಯೆಹೋವನು ತನ್ನ ಆಯುಧಶಾಲೆಯನ್ನು ತೆರೆದಿದ್ದಾನೆ. ಆತನು ತನ್ನ ಆಯುಧಶಾಲೆಯಿಂದ ತನ್ನ ರೋಷದ ಶಸ್ತ್ರಾಸ್ತ್ರಗಳನ್ನು ಹೊರತೆಗೆದಿದ್ದಾನೆ. ತಾನು ಮಾಡಬೇಕಾದ ಕಾರ್ಯಕ್ಕಾಗಿ ಸರ್ವಶಕ್ತನಾದ ಆತನು ಆ ಶಸ್ತ್ರಾಸ್ತ್ರಗಳನ್ನು ಹೊರಗೆ ತೆಗೆದಿದ್ದಾನೆ. ಕಸ್ದೀಯರ ದೇಶದಲ್ಲಿ ಆತನು ಮಾಡಬೇಕಾದ ಕಾರ್ಯವೊಂದಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 50:25
17 ತಿಳಿವುಗಳ ಹೋಲಿಕೆ  

ಏಕೆಂದರೆ ಯೆಹೋವ ದೇವರು ಬಾಬಿಲೋನನ್ನು ಸೂರೆಮಾಡಿದ್ದಾರೆ; ಅವಳೊಳಗಿಂದ ಮಹಾ ಶಬ್ದವನ್ನು ತೆಗೆದುಹಾಕಿದ್ದಾರೆ; ಅವಳ ತೆರೆಗಳು ನೀರಿನ ಹಾಗೆ ಘೋಷಿಸುವಾಗ, ಅವುಗಳ ಶಬ್ದದ ಧ್ವನಿಯು ಹೊರಟಿತು.


“ಲೋಕವನ್ನೆಲ್ಲಾ ನಾಶಮಾಡುವ ನಾಶಕ ಪರ್ವತವೇ, ಇಗೋ, ನಾನು ನಿನಗೆ ವಿರೋಧವಾಗಿದ್ದೇನೆ” ಎಂದು ಯೆಹೋವ ದೇವರು ಹೇಳುತ್ತಾರೆ. “ನಿನ್ನ ಮೇಲೆ ನನ್ನ ಕೈಯನ್ನು ಚಾಚಿ, ಬಂಡೆಗಳ ಮೇಲಿನಿಂದ ನಿನ್ನನ್ನು ಹೊರಳಿಸಿ, ನಿನ್ನನ್ನು ಸುಟ್ಟ ಬೆಟ್ಟವಾಗಿ ಮಾಡುತ್ತೇನೆ.


ಸುತ್ತಲೂ ಅದಕ್ಕೆ ವಿರೋಧವಾಗಿ ಆರ್ಭಟಿಸಿರಿ; ಅದರ ಬುರುಜುಗಳು ಬಿದ್ದು ಹೋದವು; ಅದರ ಪೌಳಿಗೋಡೆಯನ್ನು ಕೆಡವಲಾಯಿತು. ಅದು ಯೆಹೋವ ದೇವರ ಪ್ರತಿದಂಡನೆ; ಆದ್ದರಿಂದ ನೀವೂ ಅದಕ್ಕೆ ಮುಯ್ಯಿತೀರಿಸಿರಿ. ಅದು ಇತರರಿಗೆ ಮಾಡಿದ ಹಾಗೆಯೇ ಅದಕ್ಕೆ ಮಾಡಿರಿ.


ಆದ್ದರಿಂದ ಒಂದೇ ದಿನದಲ್ಲಿ ಆಕೆಯ ಉಪದ್ರವಗಳಾಗಿರುವ ಮರಣ, ಗೋಳಾಟ ಮತ್ತು ಕ್ಷಾಮವು ಬರುವುವು. ಆಕೆಯನ್ನು ತೀರ್ಪುಮಾಡುವ ಕರ್ತದೇವರು ಶಕ್ತರಾಗಿರುವುದರಿಂದ ಆಕೆಯು ಬೆಂಕಿಯಿಂದ ನಾಶವಾಗುವಳು.”


ಪಟ್ಟಣದಲ್ಲಿ ಕಹಳೆಯನ್ನು ಊದಿದರೆ, ಜನರು ಹೆದರುವುದಿಲ್ಲವೇ? ಯೆಹೋವ ದೇವರಿಂದಲ್ಲದೆ ಪಟ್ಟಣಕ್ಕೆ ಕೇಡು ತಟ್ಟುವುದುಂಟೇ?


“ನೀನು ನನ್ನ ಗದೆಯೂ, ನನ್ನ ಯುದ್ಧದ ಆಯುಧಗಳೇ, ನಿನ್ನಿಂದ ಜನಾಂಗಗಳನ್ನು ಚೂರುಚೂರಾಗಿ ಒಡೆದು ಬಿಡುತ್ತೇನೆ, ನಿನ್ನಿಂದ ರಾಜ್ಯಗಳನ್ನು ನಾಶಮಾಡುತ್ತೇನೆ.


ನಿಮ್ಮ ಹದವಾದ ಬಾಣಗಳು ರಾಜದ್ರೋಹಿಗಳನ್ನು ಇರಿಯಲಿ. ಜನಾಂಗಗಳು ನಿಮ್ಮ ಪಾದಕ್ಕೆ ಬೀಳಲಿ.


ಪರಾಕ್ರಮಶಾಲಿಯೇ, ನಿಮ್ಮ ಖಡ್ಗವನ್ನು ಸೊಂಟಕ್ಕೆ ಬಿಗಿದುಕೊಳ್ಳಿರಿ. ನಿಮ್ಮ ಮಹಿಮೆಯನ್ನೂ ಘನತೆಯನ್ನೂ ಧರಿಸಿಕೊಳ್ಳಿರಿ.


ಸಿಕ್ಕಿದ ಪ್ರತಿಯೊಬ್ಬನೂ ಇರಿತಕ್ಕೆ ಗುರಿಯಾಗುವನು. ಅಟ್ಟಿಹಿಡಿಯಲಾದ ಪ್ರತಿಯೊಬ್ಬನೂ ಖಡ್ಗಕ್ಕೆ ತುತ್ತಾಗುವನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು