Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 50:29 - ಕನ್ನಡ ಸಮಕಾಲಿಕ ಅನುವಾದ

29 “ಬಾಬಿಲೋನಿಗೆ ವಿರೋಧವಾಗಿ ಬಿಲ್ಲುಬಾಣಗಾರರನ್ನೆಲ್ಲ ಒಟ್ಟಾಗಿ ಕರೆಯಿರಿ; ಅದರ ಸುತ್ತಲು ದಂಡಿಳಿಸಿರಿ ಅದರ ನಿವಾಸಿಗಳಲ್ಲಿ ಯಾರೂ ತಪ್ಪಿಸಿಕೊಳ್ಳದ ಹಾಗಿರಲಿ. ಅದರ ಕೃತ್ಯಕ್ಕೆ ತಕ್ಕಂತೆ ಮುಯ್ಯಿತೀರಿಸಿರಿ ಅದು ಮಾಡಿದಂತೆಯೇ ಅದಕ್ಕೆ ಮಾಡಿ. ಏಕೆಂದರೆ ಅದು ಅಹಂಕಾರದಿಂದ ಇಸ್ರಾಯೇಲರ ಪರಿಶುದ್ಧ ಯೆಹೋವ ದೇವರನ್ನು ಅಸಡ್ಡೆಮಾಡಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

29 ಬಿಲ್ಲನ್ನು ಬೊಗ್ಗಿಸಿ, ಬಾಣಬಿಡುವವರನ್ನೆಲ್ಲಾ ಬಾಬಿಲೋನಿಗೆ ಕರೆಯಿರಿ; ಅದರ ಸುತ್ತಲು ದಂಡಿಳಿಸಿರಿ; ಅದರ ನಿವಾಸಿಗಳಲ್ಲಿ ಯಾರೂ ತಪ್ಪಿಸಿಕೊಳ್ಳದ ಹಾಗಿರಲಿ; ಅದರ ಕೃತ್ಯಕ್ಕೆ ತಕ್ಕಂತೆ ಮುಯ್ಯಿತೀರಿಸಿರಿ; ಅದು ಮಾಡಿದಂತೆಯೇ ಅದಕ್ಕೆ ಮಾಡಿರಿ; ಅದು ಸೊಕ್ಕೇರಿ ಇಸ್ರಾಯೇಲರ ಸದಮಲಸ್ವಾಮಿಯಾದ ಯೆಹೋವನನ್ನು ಅಸಡ್ಡೆ ಮಾಡಿತಲ್ಲಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

29 “ಬಿಲ್ಲುಬಾಣಗಾರರನ್ನೆಲ್ಲ ಬಾಬಿಲೋನಿಗೆ ಕರೆಯಿರಿ. ಅದರ ಸುತ್ತಲು ದಂಡಿಳಿಸಿರಿ. ಅದರ ನಿವಾಸಿಗಳಲ್ಲಿ ಯಾರೂ ತಪ್ಪಿಸಿಕೊಳ್ಳದ ಹಾಗಿರಲಿ. ಅದರ ಕೃತ್ಯಕ್ಕೆ ತಕ್ಕಂತೆ ಮುಯ್ಯಿತೀರಿಸಿರಿ. ಅದು ಮಾಡಿದಂತೆಯೇ ಅದಕ್ಕೆ ಮಾಡಿ. ಏಕೆಂದರೆ ಗರ್ವದಿಂದ ಅದು ಇಸ್ರಯೇಲರ ಪರಮ ಪಾವನನಾದ ಸರ್ವೇಶ್ವರನನ್ನು ಅಸಡ್ಡೆಮಾಡಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

29 ಬಿಲ್ಲನ್ನು ಬೊಗ್ಗಿಸಿ ಬಾಣಬಿಡುವವರನ್ನೆಲ್ಲಾ ಬಾಬೆಲಿಗೆ ಕರೆಯಿರಿ; ಅದರ ಸುತ್ತಲು ದಂಡಿಳಿಸಿರಿ; ಅದರ ನಿವಾಸಿಗಳಲ್ಲಿ ಯಾರೂ ತಪ್ಪಿಸಿಕೊಳ್ಳದ ಹಾಗಿರಲಿ; ಅದರ ಕೃತ್ಯಕ್ಕೆ ತಕ್ಕಂತೆ ಮುಯ್ಯಿತೀರಿಸಿರಿ; ಅದು ಮಾಡಿದಂತೆಯೇ ಅದಕ್ಕೆ ಮಾಡಿರಿ; ಅದು ಸೊಕ್ಕೇರಿ ಇಸ್ರಾಯೇಲ್ಯರ ಸದಮಲಸ್ವಾವಿುಯಾದ ಯೆಹೋವನನ್ನು ಅಸಡ್ಡೆಮಾಡಿತಲ್ಲಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

29 “ಬಾಬಿಲೋನಿನ ಮೇಲೆ ಬಾಣ ಪ್ರಯೋಗ ಮಾಡಲು ಬಿಲ್ಲುಗಾರರಿಗೆ ಹೇಳಿರಿ. ಆ ಜನರಿಗೆ ನಗರವನ್ನು ಮುತ್ತಲು ಹೇಳಿರಿ. ಯಾರೂ ತಪ್ಪಿಸಿಕೊಂಡು ಹೋಗದಂತೆ ನೋಡಿಕೊಳ್ಳಿ. ಅದು ಮಾಡಿದ ದುಷ್ಕೃತ್ಯಗಳಿಗಾಗಿ ಮುಯ್ಯಿತೀರಿಸಿರಿ. ಬೇರೆ ಜನಾಂಗಗಳಿಗೆ ಅದು ಮಾಡಿದಂತೆ ಅದಕ್ಕೆ ಮಾಡಿರಿ. ಬಾಬಿಲೋನ್ ಯೆಹೋವನನ್ನು ಗೌರವಿಸಲಿಲ್ಲ. ಪರಿಶುದ್ಧನಿಗೆ ಅವಮಾನ ಮಾಡಿದೆ. ಆದ್ದರಿಂದ ಬಾಬಿಲೋನನ್ನು ಶಿಕ್ಷಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 50:29
28 ತಿಳಿವುಗಳ ಹೋಲಿಕೆ  

ಏಕೆಂದರೆ ವಿನಾಶ ಮಾಡುವವನು ಅದರ ಮೇಲೆ ಅಂದರೆ ಬಾಬಿಲೋನಿನ ಮೇಲೆಯೇ ಬಂದಿದ್ದಾನೆ. ಅದರ ಪರಾಕ್ರಮಶಾಲಿಗಳು ಸೆರೆಯಾಗಿಬಿಟ್ಟಿದ್ದಾರೆ. ಅವಳ ಬಿಲ್ಲುಗಳು ಮುರಿದುಹೋಗಿವೆ. ಏಕೆಂದರೆ ಪ್ರತಿದಂಡನೆಗಳ ದೇವರಾದ ಯೆಹೋವ ದೇವರು ನಿಶ್ಚಯವಾಗಿ ಮುಯ್ಯಿಗೆ ಮುಯ್ಯಿ ತೀರಿಸುವರು.


ಏಕೆಂದರೆ ನೀನು ನಿನ್ನ ಕೆಟ್ಟತನದಲ್ಲಿ ನಂಬಿಕೆ ಇಟ್ಟು, ‘ನನ್ನನ್ನು ಯಾರೂ ನೋಡುವುದಿಲ್ಲ’ ಎಂದು ಹೇಳಿದೆ. ನಿನ್ನ ಜ್ಞಾನ, ನಿನ್ನ ತಿಳುವಳಿಕೆ ನಿನ್ನನ್ನು ದಾರಿ ತಪ್ಪಿಸಿದ್ದರಿಂದ, ನಿನ್ನ ಹೃದಯದಲ್ಲಿ: ‘ಈಗ ಇರುವವಳು ನಾನೇ. ನನ್ನ ಹೊರತು ಇನ್ನು ಯಾರೂ ಇಲ್ಲ,’ ಎಂದುಕೊಂಡೆ.


ಆಕೆಯು ನಿಮಗೆ ಕೊಟ್ಟಿದ್ದಕ್ಕೆ ಸರಿಯಾಗಿ ಹಿಂದಕ್ಕೆ ಕೊಡಿರಿ. ಕೃತ್ಯಗಳಿಗೆ ಸರಿಯಾಗಿ ಎರಡರಷ್ಟು ಅವಳಿಗೆ ಕೊಡಿರಿ. ಆಕೆಯ ಬಟ್ಟಲಿನಿಂದಲೇ ಎರಡರಷ್ಟು ಆಕೆಗೆ ಕಲಸಿ ಕೊಡಿರಿ.


ಈಗ ನೆಬೂಕದ್ನೆಚ್ಚರನಾದ ನಾನು ಪರಲೋಕದ ಅರಸರನ್ನು ಸ್ತುತಿಸಿ, ಹೆಚ್ಚಿಸಿ ಘನಪಡಿಸುತ್ತೇನೆ. ಅವರ ಕ್ರಿಯೆಗಳೆಲ್ಲಾ ಸತ್ಯವೇ. ಅವರ ಮಾರ್ಗಗಳು ನ್ಯಾಯವೇ. ಗರ್ವದಲ್ಲಿ ನಡೆಯುವವರನ್ನು ಅವರೇ ತಗ್ಗಿಸಬಲ್ಲರು.


ಮೋಶೆ ಆರೋನರು ಫರೋಹನ ಬಳಿಗೆ ಬಂದು ಅವನಿಗೆ, “ಹಿಬ್ರಿಯರ ದೇವರಾದ ಯೆಹೋವ ದೇವರು ಹೀಗೆ ಹೇಳುತ್ತಾರೆ, ‘ನನ್ನ ಸನ್ನಿಧಿಯಲ್ಲಿ ನೀನು ಎಷ್ಟು ಕಾಲ ತಲೆ ತಗ್ಗಿಸದಿರುವೆ? ನನ್ನನ್ನು ಆರಾಧಿಸುವಂತೆ ನನ್ನ ಜನರನ್ನು ಹೋಗಗೊಡಿಸು.


ಅವರು ನಿಮ್ಮ ಭಕ್ತರ ಮತ್ತು ನಿಮ್ಮ ಪ್ರವಾದಿಗಳ ರಕ್ತವನ್ನು ಸುರಿಸಿದ್ದಾರೆ. ನೀವು ಅವರಿಗೆ ಕುಡಿಯುವುದಕ್ಕೆ ರಕ್ತವನ್ನೇ ಕೊಟ್ಟಿರುವಿರಿ. ಅವರು ಅದಕ್ಕೆ ಪಾತ್ರರು.” ಎಂದು ಹೇಳುವುದನ್ನು ಕೇಳಿದೆನು.


ದೇವರೆಣಿಸಿಕೊಳ್ಳುವ ಎಲ್ಲವನ್ನೂ ಆರಾಧಿಸಲಾಗುವ ಪ್ರತಿಯೊಂದನ್ನೂ ಅವನು ವಿರೋಧಿಸಿ ನಿಲ್ಲುವನು. ದೇವರಿಗೆ ಸಂಬಂಧಿಸಿದ ಇವೆಲ್ಲವುಗಳ ಮೇಲೆ ತನ್ನನ್ನು ಹೆಚ್ಚಿಸಿಕೊಳ್ಳುವನು. ತಾನೇ ದೇವರೆಂದು ಘೋಷಿಸಿ ದೇವರ ಆಲಯದಲ್ಲಿ ಕೂತುಕೊಳ್ಳುವನು.


ಅರಸನು ತನ್ನ ಇಷ್ಟದ ಪ್ರಕಾರ ಮಾಡುವನು. ತನ್ನನ್ನು ತಾನೇ ಹೆಚ್ಚಿಸಿಕೊಂಡು, ತನ್ನನ್ನು ಎಲ್ಲಾ ದೇವರುಗಳಿಗಿಂತಲೂ ದೊಡ್ಡವನನ್ನಾಗಿ ಮಾಡಿಕೊಂಡು, ದೇವರುಗಳ ದೇವರಿಗೆ ವಿರೋಧವಾಗಿ ಆಶ್ಚರ್ಯವಾದ ಸಂಗತಿಗಳನ್ನು ಮಾತನಾಡಿ, ರೋಷವು ತೀರುವವರೆಗೂ ವೃದ್ಧಿಯಾಗಿರುವನು. ಹೀಗೆ ನಿಶ್ಚಯವಾದದ್ದು ನೆರವೇರಲೇಬೇಕು.


ಪರಲೋಕದ ಒಡೆಯನಿಗೆ ವಿರೋಧವಾಗಿ ನಿನ್ನನ್ನು ಹೆಚ್ಚಿಸಿಕೊಂಡಿರುವಿ. ಅವರ ಆಲಯದ ಪಾತ್ರೆಗಳನ್ನು ನಿನ್ನ ಸನ್ನಿಧಿಗೆ ತಂದರು. ಆಗ ನೀನು ನಿನ್ನ ಪ್ರಧಾನರು ಮತ್ತು ಪತ್ನಿಉಪಪತ್ನಿಯರ ಸಂಗಡ ಅವುಗಳಲ್ಲಿ ದ್ರಾಕ್ಷಾರಸವನ್ನು ಕುಡಿದು, ಬುದ್ಧಿ, ಕಣ್ಣು ಕಿವಿಗಳಿಲ್ಲದ ಬೆಳ್ಳಿಬಂಗಾರ ಕಂಚು ಕಬ್ಬಿಣ ಮರ ಕಲ್ಲುಗಳ ದೇವರುಗಳನ್ನು ಸ್ತುತಿಸಿದಿರಿ. ಆದರೆ ನಿನ್ನ ಪ್ರಾಣವು ಯಾರ ಕೈಯಲ್ಲಿದೆಯೋ ನಿನ್ನ ಸ್ಥಿತಿಗತಿಗಳು ಯಾರ ಅಧೀನದಲ್ಲಿವೆಯೋ, ಆ ದೇವರನ್ನು ಘನಪಡಿಸಲೇ ಇಲ್ಲ.


ಅಹಂಕಾರದಿಂದ ಕೂಡಿದ ರಾಜ್ಯ ಎಡವಿ ಬೀಳುವುದು. ಅದನ್ನು ಯಾರೂ ಎತ್ತರು. ಅದರ ನಗರಗಳಿಗೆ ಬೆಂಕಿ ಹೊತ್ತಿಸುವೆನು. ಅದು ಸುತ್ತಮುತ್ತಣದನ್ನೆಲ್ಲ ನುಂಗಿಬಿಡುವುದು.”


ಕಟ್ಟಕಡೆಯ ಮೇರೆಯಿಂದ ಅದಕ್ಕೆ ವಿರೋಧವಾಗಿ ಬನ್ನಿ. ಅದರ ಕಣಜಗಳನ್ನು ತೆರೆಯಿರಿ. ಅದನ್ನು ದಿಬ್ಬಗಳಂತೆ ತುಳಿಯಿರಿ. ಸಂಪೂರ್ಣವಾಗಿ ನಾಶಮಾಡಿರಿ. ಅದಕ್ಕೆ ಒಂದೂ ಉಳಿಯದಿರಲಿ.


ನಾನು ಬೋನನ್ನು ಇಟ್ಟೆನು; ಹೌದು, ಬಾಬಿಲೋನೇ ನೀನು ಸಿಕ್ಕಿಕೊಂಡೆ. ಆದರೆ ನಿನಗೆ ತಿಳಿಯದೆ ಇತ್ತು. ನೀನು ಯೆಹೋವ ದೇವರಿಗೆ ವಿರೋಧವಾಗಿ ಜಗಳವಾಡಿದ್ದರಿಂದಲೇ ಸಿಕ್ಕಿಕೊಂಡೆ ಮತ್ತು ವಶವಾದೆ.


ಏಕೆಂದರೆ ಇಗೋ, ನಾನು ಉತ್ತರ ದೇಶದಿಂದ ದೊಡ್ಡ ಜನಾಂಗಗಳ ಸಭೆ ಸೇರಿಸಿ, ಬಾಬಿಲೋನಿಗೆ ವಿರೋಧವಾಗಿ ಏಳುವಂತೆ ಮಾಡುತ್ತೇನೆ. ಅವರು ಅದಕ್ಕೆ ವಿರೋಧವಾಗಿ ಯುದ್ಧ ಸಿದ್ಧಮಾಡುವರು. ಅಲ್ಲಿಂದ ಅದು ಹಿಡಿಯಲಾಗುವುದು. ಅವರ ಬಾಣಗಳು ಬಲಿಷ್ಠನಾದ ಪ್ರವೀಣ ಶೂರನಂತಿರುವುವು. ಯಾವುದೂ ವ್ಯರ್ಥವಾಗಿ ತಿರುಗದು.


ನೀನು ಯಾರನ್ನು ನಿಂದಿಸಿ ಯಾರನ್ನು ದೂಷಿಸಿದೆ? ಯಾರಿಗೆ ವಿರೋಧವಾಗಿ ನಿನ್ನ ಧ್ವನಿಯನ್ನು ಎತ್ತಿದ್ದೀ? ನಿನ್ನ ಕಣ್ಣುಗಳು ಗರ್ವದಿಂದ ನೋಡಿದ್ದು ಯಾರನ್ನು? ಇಸ್ರಾಯೇಲಿನ ಪರಿಶುದ್ಧ ದೇವರಿಗೆ ವಿರೋಧವಾಗಿಯಲ್ಲವೇ?


ನಿಮ್ಮನ್ನು ಸಂಕಟ ಪಡಿಸುವವರಿಗೆ ದೇವರು ಪ್ರತಿಯಾಗಿ ಸಂಕಟವನ್ನೂ ಮತ್ತು


ಬಂಡೆಯ ಬಿರುಕುಗಳಲ್ಲಿ ವಾಸಮಾಡುವವನೇ, ಉನ್ನತದಲ್ಲಿ ನಿವಾಸಮಾಡಿಕೊಂಡವನೇ, ನಿನ್ನ ಭಯಂಕರವೂ ನಿನ್ನ ಹೃದಯದ ಗರ್ವವೂ ನಿನ್ನನ್ನು ಮೋಸಗೊಳಿಸಿದೆ. ನೀನು ಹದ್ದಿನಂತೆ ನಿನ್ನ ಗೂಡನ್ನು ಎತ್ತರ ಸ್ಥಳದಲ್ಲಿ ಕಟ್ಟಿದರೂ, ಅಲ್ಲಿಂದ ನಿನ್ನನ್ನು ಇಳಿಸುವೆನು,” ಎಂದು ಯೆಹೋವ ದೇವರು ಹೇಳುತ್ತಾರೆ.


ಬಿಲ್ಲು ಬಗ್ಗಿಸುವವನಿಗೆ ವಿರೋಧವಾಗಿಯೂ, ಕವಚದಲ್ಲಿ ತನ್ನನ್ನು ಹೆಚ್ಚಿಸಿಕೊಳ್ಳುವವನಿಗೆ ವಿರೋಧವಾಗಿಯೂ ಬಿಲ್ಲಿನವನು ತನ್ನ ಬಿಲ್ಲನ್ನು ಬಗ್ಗಿಸಲಿ; ಅದರ ಯೌವನಸ್ಥರನ್ನು ಕನಿಕರಿಸಬೇಡಿರಿ; ಅದರ ಸೈನ್ಯವನ್ನೆಲ್ಲಾ ಸಂಪೂರ್ಣವಾಗಿ ನಾಶಮಾಡಿರಿ.


“ಬಾಬಿಲೋನಿನವರು ಮತ್ತು ಕಸ್ದೀಯರು ಚೀಯೋನಿನಲ್ಲಿ ಮಾಡಿದ ಎಲ್ಲಾ ಕೇಡಿಗೆ ಪ್ರತಿಯಾಗಿ ನಾನು ಅವರೆಲ್ಲರಿಗೂ ಚೀಯೋನಿನವರ ಕಣ್ಣೆದುರಿಗೆ ಮುಯ್ಯಿತೀರಿಸುವೆನು” ಎಂದು ಯೆಹೋವ ದೇವರು ಹೇಳುತ್ತಾರೆ.


“ಬಾಬಿಲೋನ್‌ನಿಂದಾಗಿ ಭೂಮಿಯಲ್ಲೆಲ್ಲಾ ಹತರಾದಂತೆಯೇ, ಇಸ್ರಾಯೇಲಿನ ಹತ್ಯೆಯಿಂದಾಗಿ ಬಾಬಿಲೋನ್ ಬೀಳಬೇಕು.


“ಯೆಹೋವ ದೇವರ ದಿವಸವು ಎಲ್ಲಾ ಜನಾಂಗಗಳ ಮೇಲೆ ಸಮೀಪವಾಗಿದೆ. ನೀನು ಮಾಡಿದ ಹಾಗೆಯೇ ನಿನಗೂ ಮಾಡಲಾಗುವುದು. ನಿನ್ನ ಕಾರ್ಯಗಳು ನಿನ್ನ ತಲೆಯ ಮೇಲೆ ತಿರುಗುವುವು.


ಅನೇಕ ಜನಾಂಗಗಳೂ, ದೊಡ್ಡ ಅರಸರೂ ಅವರಿಂದ ಸೇವೆ ಮಾಡಿಸಿಕೊಳ್ಳುವರು. ಅವರ ಕ್ರಿಯೆಗಳ ಪ್ರಕಾರವೂ, ಅವರ ಕೈಕೆಲಸದ ಪ್ರಕಾರವೂ ನಾನು ಅವರಿಗೆ ಪ್ರತಿಫಲ ಕೊಡುವೆನು,” ಎಂದು ಯೆಹೋವ ದೇವರು ಹೇಳುತ್ತಾರೆ.


“ಅದನ್ನು ನೀವು ಅಮಲೇರಿಸಿರಿ; ಏಕೆಂದರೆ ಯೆಹೋವ ದೇವರಿಗೆ ವಿರೋಧವಾಗಿ ತನ್ನನ್ನು ಹೆಚ್ಚಿಸಿಕೊಂಡಿದೆ; ಮೋವಾಬು ಸಹ ತಾನೇ ವಾಂತಿ ಮಾಡಿದ್ದರಲ್ಲಿ ಹೊರಳಾಡುವುದು; ಅದೇ ಹಾಸ್ಯಕ್ಕಾಗಿರುವುದು.


ಅವಳ ಅಶುದ್ಧವು ಅವಳ ನೆರಿಗೆಗೆ ಅಂಟಿಕೊಂಡಿದೆ. ಅವಳು ತನ್ನ ಭವಿಷ್ಯವನ್ನು ಜ್ಞಾಪಕಮಾಡಿಕೊಳ್ಳುವುದಿಲ್ಲ. ಆದ್ದರಿಂದ ಅವಳು ಭಯಂಕರವಾಗಿ ಇಳಿದು ಬಂದಳು. ಅವಳನ್ನು ಆದರಿಸುವವರು ಯಾರೂ ಇಲ್ಲ. “ಓ ಯೆಹೋವ ದೇವರೇ, ನನ್ನ ಸಂಕಟವನ್ನು ನೋಡಿರಿ, ಶತ್ರುವು ಜಯಿಸಿದ್ದಾನೆ.”


ಯೆಹೋವ ದೇವರೇ, ಅವರ ಕೈಕೆಲಸಗಳ ಪ್ರಕಾರ ಅವರಿಗೆ ಪ್ರತಿಫಲವನ್ನು ಕೊಡಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು