Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 50:34 - ಕನ್ನಡ ಸಮಕಾಲಿಕ ಅನುವಾದ

34 ಅವರ ವಿಮೋಚಕನು ಬಲಿಷ್ಠನೇ, ಸೇನಾಧೀಶ್ವರ ಯೆಹೋವ ದೇವರೆಂಬುದೇ ಅವರ ಹೆಸರು; ಅವರು ದೇಶಕ್ಕೆ ಶಾಂತಿಯನ್ನು ಕೊಡುವ ಹಾಗೆಯೂ, ಬಾಬಿಲೋನಿನ ನಿವಾಸಿಗಳಿಗೆ ನಡುಗುವಿಕೆಯನ್ನು ಕೊಡುವ ಹಾಗೆಯೂ, ಅವರ ವ್ಯಾಜ್ಯವನ್ನು ಪೂರ್ಣವಾಗಿ ತೀರಿಸುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

34 ಅವರ ರಕ್ಷಕನು ಬಲಿಷ್ಠನು; ಸೇನಾಧೀಶ್ವರನಾದ ಯೆಹೋವನೆಂಬುದೇ ಆತನ ನಾಮಧೇಯ; ಆತನು ಅವರ ವ್ಯಾಜ್ಯವನ್ನು ಜಯಿಸಿ, ಲೋಕವನ್ನು ವಿಶ್ರಾಂತಿಗೊಳಿಸಿ ಬಾಬೆಲಿನವರನ್ನು ಕಳವಳಪಡಿಸುವನು.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

34 ಅವರನ್ನು ಬಿಡಿಸಬಲ್ಲವನು ಬಲಿಷ್ಠನು. ‘ಸೇನಾಧೀಶ್ವರ ಸರ್ವೇಶ್ವರ’ ಎಂಬುದೇ ಆತನ ನಾಮಧೇಯ. ಆತನೇ ಅವರ ವ್ಯಾಜ್ಯವನ್ನು ಜಯಿಸಿ, ನಾಡಿಗೆ ಶಾಂತಿಯನ್ನು ತಂದು, ಬಾಬಿಲೋನಿಯದವರಿಗೆ ಕಳವಳವನ್ನುಂಟುಮಾಡುವನು.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

34 ಅವರ ರಕ್ಷಕನು ಬಲಿಷ್ಠ. ಸೇನಾಧೀಶ್ವರನಾದ ಯೆಹೋವನೆಂಬದೇ ಆತನ ನಾಮಧೇಯ; ಆತನು ಅವರ ವ್ಯಾಜ್ಯವನ್ನು ಜಯಿಸಿ ಲೋಕವನ್ನು ವಿಶ್ರಾಂತಿಗೊಳಿಸಿ ಬಾಬೆಲಿನವರನ್ನು ಕಳವಳಪಡಿಸುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

34 ಆದರೆ ದೇವರು ಅವರನ್ನು ಹಿಂದಕ್ಕೆ ಕರೆತರುವನು. ಆತನ ಹೆಸರು ಸರ್ವಶಕ್ತನಾದ ಯೆಹೋವನು. ಆತನು ಆ ಜನರನ್ನು ನಿಶ್ಚಯವಾಗಿ ಕಾಪಾಡುವನು. ಭೂಮಿಗೆ ವಿಶ್ರಾಂತಿಯನ್ನು ಕೊಡುವ ಉದ್ದೇಶದಿಂದ ಆತನು ಅವರನ್ನು ಕಾಪಾಡುವನು. ಆದರೆ ಬಾಬಿಲೋನಿನಲ್ಲಿ ವಾಸಿಸುವ ಜನರಿಗೆ ಆತನು ವಿಶ್ರಾಂತಿಯನ್ನು ಕೊಡುವದಿಲ್ಲ.”

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 50:34
32 ತಿಳಿವುಗಳ ಹೋಲಿಕೆ  

ನಿನ್ನನ್ನು ಉಂಟುಮಾಡಿದವನೇ ನಿನ್ನ ಪತಿ. ಸೇನಾಧೀಶ್ವರ ಯೆಹೋವ ದೇವರು ಎಂಬುದು ಆತನ ಹೆಸರು. ನಿನ್ನ ವಿಮೋಚಕನು ಇಸ್ರಾಯೇಲಿನ ಪರಿಶುದ್ಧನೇ. ಸಮಸ್ತ ಭೂಮಿಯ ದೇವರು ಎಂದು ಆತನನ್ನು ಕರೆಯಲಾಗುತ್ತದೆ.


ಆದ್ದರಿಂದ ಯೆಹೋವ ದೇವರು ಹೀಗೆ ಹೇಳುತ್ತಾರೆ. “ಇಗೋ, ನಾನು ನಿನ್ನ ನಿಮಿತ್ತ ವ್ಯಾಜ್ಯವಾಡುತ್ತೇನೆ. ನಿನಗೋಸ್ಕರ ಪ್ರತಿದಂಡನೆ ಮಾಡುತ್ತೇನೆ. ಅದರ ಸಮುದ್ರವನ್ನು ಒಣಗಿಸುತ್ತೇನೆ. ಅದರ ಬುಗ್ಗೆಯನ್ನು ಬತ್ತಿಹೋಗುವಂತೆ ಮಾಡುತ್ತೇನೆ.


“ಕೆಟ್ಟವರ ಕೈಯೊಳಗಿಂದ ನಿನ್ನನ್ನು ತಪ್ಪಿಸುತ್ತೇನೆ, ದುಷ್ಟರ ಕೈಯೊಳಗಿಂದ ನಿನ್ನನ್ನು ವಿಮೋಚಿಸುತ್ತೇನೆ.”


ನಮ್ಮ ವಿಮೋಚಕರಿಗೆ ಸೇನಾಧೀಶ್ವರರಾದ ಯೆಹೋವ ದೇವರು ಎಂಬುದೇ ಅವರ ಹೆಸರು. ಅವರೇ ಇಸ್ರಾಯೇಲಿನ ಪರಿಶುದ್ಧರು.


ಹುಳುವಿನಂತಿರುವ ಯಾಕೋಬೇ, ಪುಟ್ಟ ಇಸ್ರಾಯೇಲೇ, ಭಯಪಡಬೇಡ. ನಾನೇ ನಿನಗೆ ಸಹಾಯ ಮಾಡುತ್ತೇನೆ,” ಎಂದು ಯೆಹೋವ ದೇವರು ಹೇಳುತ್ತಾರೆ. ನಿನ್ನ ವಿಮೋಚಕನೂ ಇಸ್ರಾಯೇಲಿನ ಪರಿಶುದ್ಧನೂ ಹೇಳುತ್ತಾರಲ್ಲಾ!


ನಾನು ಯೆಹೋವ ದೇವರಿಗೆ ವಿರೋಧವಾಗಿ ಪಾಪಮಾಡಿದ್ದರಿಂದ ಅವರು ನನ್ನ ವ್ಯಾಜ್ಯವಾಡಿ ನನ್ನ ನ್ಯಾಯವನ್ನು ನಡೆಸುವ ತನಕ ಅವರ ಕೋಪವನ್ನು ತಾಳುವೆನು. ಆತನು ನನ್ನನ್ನು ಬೆಳಕಿಗೆ ತರುವನು. ಆತನ ನೀತಿಯನ್ನು ನೋಡುವೆನು.


ನಿಮ್ಮ ವಿಮೋಚಕನೂ ಇಸ್ರಾಯೇಲಿನ ಪರಿಶುದ್ಧನೂ ಆಗಿರುವ ಯೆಹೋವ ದೇವರು ಹೇಳುವುದೇನೆಂದರೆ: ನಾನು ನಿಮಗೋಸ್ಕರ ಬಾಬಿಲೋನಿಗೆ ಕಳುಹಿಸಿ, ಅವರ ಘನವಂತರನ್ನೆಲ್ಲಾ ಮತ್ತು ಹಡಗುಗಳಲ್ಲಿ ಆರ್ಭಟಿಸುವ ಕಸ್ದೀಯರನ್ನು ತಗ್ಗಿಸಿದೆನು.


ದೇವರೇ, ನನ್ನನ್ನು ನಿರ್ದೋಷಿ ಎಂದು ನಿರ್ಣಯಿಸಿರಿ, ಭಕ್ತಿಹೀನ ಜನತೆಯ ವಿರೋಧವಾಗಿ ನನ್ನ ನ್ಯಾಯವನ್ನು ವಾದಿಸಿರಿ. ಮೋಸವೂ ಅನ್ಯಾಯವೂ ಉಳ್ಳ ಮನುಷ್ಯನಿಂದ ನನ್ನನ್ನು ತಪ್ಪಿಸಿರಿ.


ಯೆಹೋವ ದೇವರೇ, ನನ್ನ ಸಂಗಡ ವ್ಯಾಜ್ಯ ಮಾಡುವವರ ಸಂಗಡ ವ್ಯಾಜ್ಯ ಮಾಡಿರಿ; ನನಗೆ ವಿರೋಧವಾಗಿ ಯುದ್ಧ ಮಾಡುವವರ ಸಂಗಡ ಯುದ್ಧಮಾಡಿರಿ.


ಚೀಯೋನ್ ಪುತ್ರಿಯೇ ಹೆರುವವಳಂತೆ ವೇದನೆ ತಾಳಿಕೋ, ಏಕೆಂದರೆ ಈಗ ಪಟ್ಟಣದೊಳಗಿಂದ ಹೊರಟು ಹೊಲದಲ್ಲಿ ವಾಸಮಾಡಿ ಬಾಬಿಲೋನಿಗೆ ಹೋಗುವೆ, ಅಲ್ಲಿ ನಿನಗೆ ಬಿಡುಗಡೆಯಾಗುವುದು. ಅಲ್ಲಿ ಯೆಹೋವ ದೇವರು ನಿನ್ನನ್ನು ನಿನ್ನ ಶತ್ರುಗಳ ಕೈಯೊಳಗಿಂದ ವಿಮೋಚಿಸುವರು.


ತನ್ನ ಜನರಿಗೋಸ್ಕರ ವಾದಿಸುವ ನಿನ್ನ ದೇವರೂ, ನಿನ್ನ ಸಾರ್ವಭೌಮ ಯೆಹೋವ ದೇವರು ಹೇಳುವುದೇನೆಂದರೆ, “ನಾನು ನಿನ್ನ ಕೈಯೊಳಗಿಂದ ತತ್ತರಿಸುವಂಥ ಪಾತ್ರೆಯನ್ನೂ, ನನ್ನ ಉಗ್ರವಾದ ಪಾತ್ರೆಯ ಮಡ್ಡಿಯನ್ನೂ ತೆಗೆದುಹಾಕಿದ್ದೇನೆ. ಇನ್ನು ಮೇಲೆ ನೀನು ಅದನ್ನು ತಿರುಗಿ ಕುಡಿಯುವುದೇ ಇಲ್ಲ.


“ಇಸ್ರಾಯೇಲಿನ ಅರಸನೂ ವಿಮೋಚಕನೂ, ಸೇನಾಧೀಶ್ವರ ಯೆಹೋವ ದೇವರು ಇಂತೆನ್ನುತ್ತಾರೆ: ನಾನೇ ಮೊದಲನೆಯವನು, ನಾನೇ ಕಡೆಯವನು. ನನ್ನ ಹೊರತು ಬೇರೆ ಯಾವ ದೇವರೂ ಇಲ್ಲ.


ಏಕೆಂದರೆ ಅವನ ವಿಮೋಚಕನು ಬಲಶಾಲಿಯಾಗಿದ್ದಾನೆ; ಅವರ ವ್ಯಾಜ್ಯಕ್ಕಾಗಿ ಆತನು ವಾದಿಸುವನು.


ಏಕೆಂದರೆ ಯೆಹೋವ ದೇವರು ಅವರ ವ್ಯಾಜ್ಯವನ್ನು ನಡೆಸಿ, ಸೂರೆ ಮಾಡಿದವರ ಪ್ರಾಣವನ್ನು ಸೂರೆ ಮಾಡುವರು.


ಆದ್ದರಿಂದ ಒಂದೇ ದಿನದಲ್ಲಿ ಆಕೆಯ ಉಪದ್ರವಗಳಾಗಿರುವ ಮರಣ, ಗೋಳಾಟ ಮತ್ತು ಕ್ಷಾಮವು ಬರುವುವು. ಆಕೆಯನ್ನು ತೀರ್ಪುಮಾಡುವ ಕರ್ತದೇವರು ಶಕ್ತರಾಗಿರುವುದರಿಂದ ಆಕೆಯು ಬೆಂಕಿಯಿಂದ ನಾಶವಾಗುವಳು.”


ಯಾಕೋಬ್ಯರ ಪಾಲಾಗಿರುವವರು ಇವುಗಳ ಹಾಗಲ್ಲ; ಏಕೆಂದರೆ ಅವರು ಎಲ್ಲವನ್ನು ರೂಪಿಸಿದವರೇ, ಇಸ್ರಾಯೇಲ್ ಅವರ ಸ್ವಾಸ್ತ್ಯವಾದ ವಂಶ. ಅವರ ಹೆಸರು ಸೇನಾಧೀಶ್ವರ ಯೆಹೋವ ದೇವರೇ.


“ಆದ್ದರಿಂದ ಇಸ್ರಾಯೇಲರಿಗೆ, ‘ನಾನೇ ಯೆಹೋವ ದೇವರು. ನಾನು ನಿಮ್ಮನ್ನು ಈಜಿಪ್ಟಿನ ಬಿಟ್ಟಿಕೆಲಸದಿಂದ ಅವರಿಗೆ ದಾಸತ್ವದಲ್ಲಿರುವುದರಿಂದ, ನಾನು ಚಾಚಿದ ಬಾಹುವಿನಿಂದಲೂ ಬಲವಾದ ನ್ಯಾಯತೀರ್ಪುಗಳಿಂದಲೂ ನಿಮ್ಮನ್ನು ಬಿಡಿಸುವೆನು.


ನನ್ನ ವಿಮೋಚಕರು ಜೀವಿಸುತ್ತಿದ್ದಾರೆ ಎಂದು ತಿಳಿದಿದ್ದೇನೆ. ಕಡೆಯ ದಿನದಲ್ಲಿ ಭೂಮಿಯ ಮೇಲೆ ನನ್ನ ವಿಮೋಚಕರು ಬಂದು ನಿಲ್ಲುವರೆಂದೂ ತಿಳಿದಿದ್ದೇನೆ.


ಆದರೆ ಯೆಹೋವ ದೇವರು ಹೀಗೆನ್ನುತ್ತಾರೆ: “ಶೂರನ ಸೆರೆಯವರು ಅಪಹರಿಸಲಾಗುವರು. ಭೀಕರನ ಕೊಳ್ಳೆ ಕಸಿದುಕೊಳ್ಳಲಾಗುವುದು. ಏಕೆಂದರೆ ನಿನ್ನೊಡನೆ ಹೋರಾಡುವವನ ಸಂಗಡ ನಾನೇ ಹೋರಾಡಿ, ನಿನ್ನ ಮಕ್ಕಳನ್ನು ನಾನು ರಕ್ಷಿಸುವೆನು.


ಏಕೆಂದರೆ ಯೆಹೋವ ದೇವರು ಯಾಕೋಬ್ಯರನ್ನು ವಿಮೋಚಿಸಿದ್ದಾರೆ. ಅವರಿಗಿಂತ ಬಲಿಷ್ಠರ ಕೈಯೊಳಗಿಂದ ಅವರನ್ನು ಬಿಡಿಸಿದ್ದಾರೆ.


ಇದು ಯೆಹೋವ ದೇವರಾದ ನನ್ನ ನುಡಿ, ಯೆಹೋವ ದೇವರು, ಹಗಲಲ್ಲಿ ಬೆಳಕು ನೀಡಲು ಸೂರ್ಯನನ್ನು ನೇಮಿಸಿದವರು. ಇರುಳಲ್ಲಿ ಬೆಳಕು ನೀಡಲು ಚಂದ್ರ ನಕ್ಷತ್ರಗಳನ್ನು ಏರ್ಪಡಿಸಿದವರು. ಅಲೆಗಳು ಭೋರ್ಗರೆಯುವಷ್ಟು ಸಮುದ್ರವನ್ನು ಕೆರಳಿಸುವವರು, ಸೇನಾಧೀಶ್ವರ ಯೆಹೋವ ದೇವರು ಎಂಬ ನಾಮಧೇಯದಿಂದ ಪ್ರಸಿದ್ಧರು.


ನೀವು ಸಾವಿರಾರು ತಲೆಗಳವರೆಗೆ ಪ್ರೀತಿ, ದಯೆತೋರಿಸಿ, ತಂದೆಗಳ ಅಕ್ರಮಗಳನ್ನು ಅವರ ತರುವಾಯ ಇರುವ ಅವರ ಮಕ್ಕಳ ಎದೆಯಲ್ಲಿ ಸುರಿಸುವವರಾಗಿದ್ದೀರಿ. ಮಹತ್ವವುಳ್ಳವರೂ, ಪರಾಕ್ರಮವುಳ್ಳ ದೇವರೂ, ಸೇನಾಧೀಶ್ವರ ಯೆಹೋವ ದೇವರೂ ಎಂಬುದು ನಿಮ್ಮ ಹೆಸರು.


ಕರ್ತದೇವರೇ, ನೀನು ನನ್ನ ಪ್ರಾಣದ ವ್ಯಾಜ್ಯಗಳನ್ನು ನಡೆಸಿ, ನನ್ನ ಜೀವವನ್ನು ವಿಮೋಚಿಸಿದ್ದೀರಿ.


ಯೆಹೋವ ದೇವರು ತಮ್ಮ ಸೈನ್ಯಕ್ಕೆ ಗುಡುಗಿನಂತೆ ಆಜ್ಞಾಪಿಸುತ್ತಾರೆ. ಅವರ ಸೈನ್ಯ ಬಹು ದೊಡ್ಡದಾಗಿದೆ. ಅವರ ಆಜ್ಞೆಯನ್ನು ಪಾಲಿಸುವವನು ಪರಾಕ್ರಮಿಯು. ಯೆಹೋವ ದೇವರ ದಿವಸವು ದೊಡ್ಡದು, ಮಹಾ ಭಯಂಕರವಾದದ್ದು. ಅದನ್ನು ಸಹಿಸಿಕೊಳ್ಳುವವರು ಯಾರು?


ಆಗ ನೀವು ವಾಸಮಾಡುವ ಪರಲೋಕದಿಂದ ಅವರ ಪ್ರಾರ್ಥನೆಯನ್ನೂ ವಿಜ್ಞಾಪನೆಯನ್ನೂ ಕೇಳಿ ಅವರ ನ್ಯಾಯವನ್ನು ತೀರಿಸಿರಿ, ನಿಮ್ಮ ಜನರು ನಿಮಗೆ ವಿರೋಧವಾಗಿ ಮಾಡಿದ ಪಾಪಗಳನ್ನು ಕ್ಷಮಿಸಿರಿ.


ಯಾಕೋಬ್ಯರ ಪಾಲಾಗಿರುವವರು ಇವುಗಳ ಹಾಗಲ್ಲ. ಏಕೆಂದರೆ ಅವರು ಎಲ್ಲವನ್ನು ರೂಪಿಸಿದವರೇ, ಇಸ್ರಾಯೇಲ್ ಅವರ ಸ್ವಾಸ್ತ್ಯವಾದ ವಂಶ. ಅವರ ಹೆಸರು ಸೇನಾಧೀಶ್ವರ ಯೆಹೋವ ದೇವರೇ.


ಅವರ ಮಕ್ಕಳು ಸಹ ಪೂರ್ವಕಾಲದ ಹಾಗೆ ಇರುವರು. ಅವರ ಸಭೆಯು ನನ್ನ ಮುಂದೆ ಸ್ಥಾಪಿತವಾಗುವುದು. ಅವರನ್ನು ಬಾಧಿಸುವವರೆಲ್ಲರನ್ನು ಶಿಕ್ಷಿಸುವೆನು.


ಮೋವಾಬು ಸೂರೆಯಾಯಿತು. ಅದರ ಪಟ್ಟಣಗಳು ಏರಿ ಹೋದವು, ಅದರ ಶ್ರೇಷ್ಠ ಯೌವನಸ್ಥರು ಹತರಾಗುವುದಕ್ಕೆ ಹೋಗಿದ್ದಾರೆ,” ಎಂದು ಸರ್ವಶಕ್ತ ಯೆಹೋವ ಎಂಬ ಹೆಸರುಳ್ಳ ರಾಜಾಧಿರಾಜರ ನುಡಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು