Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 50:5 - ಕನ್ನಡ ಸಮಕಾಲಿಕ ಅನುವಾದ

5 ಚೀಯೋನಿನ ಕಡೆಗೆ ಅಭಿಮುಖರಾಗಿ ಅದರ ಮಾರ್ಗವನ್ನು ವಿಚಾರಿಸಿ ಬನ್ನಿ; ಮರೆತು ಹೋಗದ ನಿತ್ಯವಾದ ಒಡಂಬಡಿಕೆಯಿಂದ ಯೆಹೋವ ದೇವರನ್ನು ಸೇರಿಕೊಳ್ಳೋಣ, ಅನ್ನುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

5 ಚೀಯೋನಿಗೆ ಅಭಿಮುಖರಾಗಿ ಮಾರ್ಗವನ್ನು ವಿಚಾರಿಸಿ, ಬನ್ನಿರಿ, ಯೆಹೋವನನ್ನು ಆಶ್ರಯಿಸಿ, ಎಂದಿಗೂ ಮರೆಯದ ಶಾಶ್ವತವಾದ ಒಡಂಬಡಿಕೆಯನ್ನು ಆತನೊಂದಿಗೆ ಮಾಡಿಕೊಳ್ಳೋಣ’ ಎಂದು ಹೇಳುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

5 ಸಿಯೋನಿಗೆ ಅಭಿಮುಖರಾಗಿ, ಮಾರ್ಗವನ್ನು ವಿಚಾರಿಸುತ್ತಾ, ‘ಬನ್ನಿ, ಸರ್ವೇಶ್ವರನನ್ನು ಆಶ್ರಯಿಸಿ, ಎಂದಿಗೂ ಮರೆಯಲಾಗದ ಶಾಶ್ವತ ಒಡಂಬಡಿಕೆಯನ್ನು ಅವರೊಂದಿಗೆ ಮಾಡಿಕೊಳ್ಳೋಣ’ ಎಂದು ಹೇಳುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

5 ಚೀಯೋನಿಗೆ ಅಭಿಮುಖರಾಗಿ ಮಾರ್ಗವನ್ನು ವಿಚಾರಿಸಿ - ಬನ್ನಿರಿ, ಯೆಹೋವನನ್ನು ಆಶ್ರಯಿಸಿ ಎಂದಿಗೂ ಮರೆಯದ ಶಾಶ್ವತವಾದ ಒಡಂಬಡಿಕೆಯನ್ನು ಆತನೊಂದಿಗೆ ಮಾಡಿಕೊಳ್ಳೋಣ ಎಂದು ಹೇಳುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

5 ಅವರು ಚೀಯೋನಿಗೆ ಹೋಗುವ ಮಾರ್ಗವನ್ನು ವಿಚಾರಿಸುವರು. ಆ ದಿಕ್ಕಿನಲ್ಲಿ ಹೋಗಲು ಪ್ರಾರಂಭಿಸುವರು. ‘ಬನ್ನಿ, ನಾವೆಲ್ಲರೂ ಯೆಹೋವನ ಆಶ್ರಯಪಡೆಯೋಣ. ಆತನೊಂದಿಗೆ ಶಾಶ್ವತವಾದ ಮತ್ತು ನಾವೆಂದೂ ಮರೆಯಲಾಗದ ಒಡಂಬಡಿಕೆಯನ್ನು ಮಾಡಿಕೊಳ್ಳೋಣ’ ಎಂದು ಅವರು ಹೇಳುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 50:5
26 ತಿಳಿವುಗಳ ಹೋಲಿಕೆ  

ಅವರಿಗೆ ಒಳ್ಳೆಯದನ್ನು ಮಾಡುವ ಹಾಗೆ ನಾನು ತಿರುಗಿಸಿಬಿಡೆನೆಂದು ನಿತ್ಯವಾದ ಒಡಂಬಡಿಕೆಯನ್ನು ಅವರ ಸಂಗಡ ಮಾಡುತ್ತೇನೆ. ಅವರು ನನ್ನನ್ನು ಬಿಡದ ಹಾಗೆ ಭಯವನ್ನು ಅವರ ಹೃದಯದಲ್ಲಿ ಇಡುತ್ತೇನೆ.


ಕಿವಿಯನ್ನು ಇತ್ತ ತಿರುಗಿಸಿರಿ, ನನ್ನ ಬಳಿಗೆ ಬನ್ನಿರಿ, ಆಲಿಸಿದರೆ ಬದುಕಿ ಬಾಳುವಿರಿ. ದಾವೀದನಿಗೆ ಖಂಡಿತವಾಗಿ ವಾಗ್ದಾನ ಮಾಡಿದ ಕೃಪಾವರಗಳನ್ನು ನಿಮಗೆ ಕೊಡುತ್ತೇನೆಂಬ ಶಾಶ್ವತವಾದ ಒಡಂಬಡಿಕೆಯನ್ನು ನಿಮ್ಮೊಂದಿಗೆ ಮಾಡಿಕೊಳ್ಳುವೆನು.


ಅಲ್ಲಿ ರಾಜಮಾರ್ಗ ಇರುವುದು. ಅದು ಪರಿಶುದ್ಧ ಮಾರ್ಗ ಎನಿಸಿಕೊಳ್ಳುವುದು. ಯಾವ ಅಶುದ್ಧನು ಅದರ ಮೇಲೆ ಹಾದು ಹೋಗನು. ಆದರೆ ಅದು ದೇವಜನರಿಗಾಗಿ ಇರುವುದು. ಅಲ್ಲಿ ಹೋಗುವ ಮೂಢನೂ ದಾರಿ ತಪ್ಪನು.


ಯೆಹೋವ ದೇವರು ಹೀಗೆ ಹೇಳುತ್ತಾರೆ: “ಮಾರ್ಗಗಳಲ್ಲಿ ನಿಂತುಕೊಂಡು ನೋಡಿರಿ, ಮೊದಲಿನ ಹಾದಿಗಳನ್ನು ಕೇಳಿಕೊಳ್ಳಿರಿ, ಒಳ್ಳೆಯ ಮಾರ್ಗ ಎಲ್ಲಿದೆಯೋ ಅದರಲ್ಲಿ ನಡೆಯಿರಿ. ಆಗ ನಿಮ್ಮ ಪ್ರಾಣಗಳಿಗೆ ವಿಶ್ರಾಂತಿ ಸಿಕ್ಕುವುದು, ಆದರೆ ಅವರು, ‘ನಾವು ನಡೆಯುವುದಿಲ್ಲ,’ ಎಂದರು.


ಇದಲ್ಲದೆ ನಿನಗೂ ನಿನ್ನ ಸಂತತಿಗೂ ದೇವರಾಗಿರುವೆನು. ಈ ನನ್ನ ಒಡಂಬಡಿಕೆಯನ್ನು ನಿನಗೋಸ್ಕರವೂ ನಿನ್ನ ತರುವಾಯ ಬರುವ ನಿನ್ನ ಸಂತತಿಗೋಸ್ಕರವೂ ತಲತಲಾಂತರದವರೆಗೂ ನಿತ್ಯವಾದ ಒಡಂಬಡಿಕೆಯಾಗಿ ಸ್ಥಾಪಿಸುವೆನು.


ಇವೆಲ್ಲವನ್ನೂ ನಾವು ನೆನಸಿದ್ದಕ್ಕಿಂತಲೂ ಅವರು ಹೆಚ್ಚಾಗಿಯೇ ಮಾಡಿದರು. ಹೇಗೆಂದರೆ ಮೊದಲು ಅವರು ತಮ್ಮನ್ನೇ ಕರ್ತ ಯೇಸುವಿಗೆ ಒಪ್ಪಿಸಿಕೊಟ್ಟರು. ಅನಂತರ ದೇವರ ಚಿತ್ತಾನುಸಾರವಾಗಿ ತಮ್ಮನ್ನು ನಮಗೂ ಒಪ್ಪಿಸಿಕೊಟ್ಟರು.


ಅವನು ಅಲ್ಲಿಗೆ ಬಂದು ದೇವರ ಕೃಪೆಯನ್ನು ಕಂಡು ಹರ್ಷಭರಿತನಾಗಿ, ಅವರೆಲ್ಲರೂ ಕರ್ತನಿಗೆ ಹೃದಯಪೂರ್ವಕವಾಗಿ ಭಯಭಕ್ತಿ ಉಳ್ಳವರಾಗಿರಬೇಕೆಂದು ಅವರನ್ನು ಪ್ರೋತ್ಸಾಹಿಸಿದನು.


ಯಾರಾದರೂ ದೇವರ ಚಿತ್ತವನ್ನು ಮಾಡಬಯಸುವುದಾದರೆ ಈ ಬೋಧನೆಯು ದೇವರದೋ ಅಥವಾ ನನ್ನಷ್ಟಕ್ಕೆ ನಾನೇ ಮಾತನಾಡುತ್ತೇನೋ ಎಂಬುದು ಅವರಿಗೆ ತಿಳಿಯುವುದು.


ಅವರು ಬಲದಿಂದ ಬಲಕ್ಕೆ ಸಾಗಿ, ಚೀಯೋನಿನಲ್ಲಿ ದೇವರ ಮುಂದೆ ಕಾಣಿಸಿಕೊಳ್ಳುತ್ತಾರೆ.


ಅದಕ್ಕೆ ಅವನು, “ಸರ್ವಶಕ್ತ ದೇವರಾದ ಯೆಹೋವ ದೇವರೇ, ಇಸ್ರಾಯೇಲರಿಗೋಸ್ಕರ ನಾನು ಬಹು ರೋಷವುಳ್ಳವನಾಗಿದ್ದೇನೆ. ಏಕೆಂದರೆ ಇಸ್ರಾಯೇಲರು ನಿಮ್ಮ ಒಡಂಬಡಿಕೆಯನ್ನು ಬಿಟ್ಟು, ನಿಮ್ಮ ಬಲಿಪೀಠಗಳನ್ನು ಕೆಡವಿ, ನಿಮ್ಮ ಪ್ರವಾದಿಗಳನ್ನು ಖಡ್ಗದಿಂದ ಕೊಂದುಹಾಕಿದ್ದಾರೆ. ನಾನೊಬ್ಬನೇ ಉಳಿದಿದ್ದೇನೆ. ಆದರೆ ಅವರು ನನ್ನ ಪ್ರಾಣವನ್ನೂ ತೆಗೆಯಲು ಹುಡುಕುತ್ತಿದ್ದಾರೆ,” ಎಂದನು.


ಅದಕ್ಕೆ ಅವನು, “ಸರ್ವಶಕ್ತ ದೇವರಾದ ಯೆಹೋವ ದೇವರೇ, ಇಸ್ರಾಯೇಲರಿಗೋಸ್ಕರ ನಾನು ಬಹು ರೋಷವುಳ್ಳವನಾಗಿದ್ದೇನೆ. ಏಕೆಂದರೆ ಇಸ್ರಾಯೇಲರು ನಿಮ್ಮ ಒಡಂಬಡಿಕೆಯನ್ನು ಬಿಟ್ಟು, ನಿಮ್ಮ ಬಲಿಪೀಠಗಳನ್ನು ಕೆಡವಿ, ನಿಮ್ಮ ಪ್ರವಾದಿಗಳನ್ನು ಖಡ್ಗದಿಂದ ಕೊಂದುಹಾಕಿದ್ದಾರೆ. ನಾನೊಬ್ಬನೇ ಉಳಿದಿದ್ದೇನೆ. ಆದರೆ ಅವರು ನನ್ನ ಪ್ರಾಣವನ್ನೂ ತೆಗೆಯಲು ಹುಡುಕುತ್ತಿದ್ದಾರೆ,” ಎಂದನು.


“ನನ್ನ ಮನೆ ದೇವರೊಂದಿಗೆ ಸರಿಯಾಗಿರದಿದ್ದರೆ, ನಿಶ್ಚಯವಾಗಿಯೂ ಅವರು ನನ್ನೊಂದಿಗೆ ಶಾಶ್ವತವಾದ ಒಡಂಬಡಿಕೆಯನ್ನು ಮಾಡಿಕೊಳ್ಳುತ್ತಿರಲಿಲ್ಲ, ಪ್ರತಿಯೊಂದು ವಿಭಾಗದಲ್ಲಿಯೂ ವ್ಯವಸ್ಥೆಗೊಳಿಸಲಾಗಿದೆ ಮತ್ತು ಭದ್ರಪಡಿಸಲಾಗಿದೆ. ದೇವರು ನಿಶ್ಚಯವಾಗಿಯೂ ನನ್ನ ರಕ್ಷಣೆಯನ್ನು ಪೂರ್ತಿಗೊಳಿಸುವುದಿಲ್ಲ. ದೇವರು ನನ್ನ ಎಲ್ಲಾ ಅಪೇಕ್ಷೆಗಳನ್ನು ಪೂರೈಸುವುದಿಲ್ಲ.


ಆ ಕಾಲದಲ್ಲಿ ಯೆಹೂದದ ವಂಶವು ಇಸ್ರಾಯೇಲ್ ವಂಶದೊಡನೆ ಜೊತೆಯಾಗಿ ಬಾಳುವುದು. ಈ ಎರಡು ವಂಶಗಳೂ ಉತ್ತರ ಪ್ರಾಂತಗಳನ್ನು ಬಿಟ್ಟು, ನಾನು ನಿಮ್ಮ ಪೂರ್ವಜರಿಗೆ ಬಾಧ್ಯವಾಗಿ ಕೊಟ್ಟ ನಾಡಿಗೆ ಬರುವುವು.”


ಒಂದು ದಿನ ಬರುವದು, ಆಗ ಎಫ್ರಾಯೀಮನ ಪರ್ವತಗಳ ಮೇಲಿರುವ ಕಾವಲುಗಾರರು, ‘ಏಳಿರಿ, ಚೀಯೋನಿಗೆ, ನಮ್ಮ ಯೆಹೋವ ದೇವರ ಬಳಿಗೆ ಹೋಗೋಣ,’ ” ಎಂದು ಕೂಗುವರು.


“ನಿನಗೋಸ್ಕರ ದಾರಿ ತೋರುವ ಕಂಬಗಳನ್ನೂ ಮತ್ತು ಕೈಮರಗಳನ್ನೂ ನಿಲ್ಲಿಸಿಕೋ ಹೆದ್ದಾರಿಯ ಕಡೆಗೆ ನೀನು ಹೋದ ದಾರಿಗೂ ನಿನ್ನ ಹೃದಯವನ್ನು ಇಟ್ಟುಕೋ. ಇಸ್ರಾಯೇಲಿನ ಕನ್ಯಾ ಸ್ತ್ರೀಯೇ, ತಿರುಗಿಕೋ, ಈ ಪಟ್ಟಣಗಳಿಗೆ ತಿರುಗು.


ಆಗ ನೀನು ನಿನ್ನ ಮಾರ್ಗಗಳನ್ನು ಜ್ಞಾಪಕಮಾಡಿಕೊಂಡು, ನಿನ್ನ ಸಹೋದರಿಗಳಾದ ನಿನ್ನ ಅಕ್ಕತಂಗಿಯರನ್ನು ಸೇರುವಾಗ ನಾಚಿಕೆಪಡುವೆ. ಅವರನ್ನು ನಿನ್ನ ಪುತ್ರಿಯರಂತೆ ಕೊಡುವೆನು. ಆದರೆ ಇದು ನಿನ್ನ ಒಡಂಬಡಿಕೆಯಿಂದಲ್ಲ.


ನಾನು ಅವರನ್ನು ಇಸ್ರಾಯೇಲ್ ಪರ್ವತಗಳಿರುವ ದೇಶದಲ್ಲಿ ಒಂದೇ ಜನಾಂಗವನ್ನಾಗಿ ಮಾಡುತ್ತೇನೆ. ಅವರೆಲ್ಲರಿಗೂ ಒಬ್ಬನೇ ಅರಸನಾಗಿರುವನು. ಇನ್ನು ಮೇಲೆ ಅವರು ಎರಡು ಜನಾಂಗದವರಾಗಿಯೂ, ಭಿನ್ನರಾಜ್ಯದವರಾಗಿಯೂ ಇರುವುದಿಲ್ಲ.


ಆಗ ಯೆಹೂದದ ಜನರು ಮತ್ತು ಇಸ್ರಾಯೇಲ್ ಜನರು ಒಟ್ಟುಗೂಡಿಕೊಂಡು ತಮಗೆ ಒಬ್ಬ ನಾಯಕನನ್ನು ನೇಮಕ ಮಾಡಿಕೊಂಡು, ದೇಶದೊಳಗಿಂದ ಹೊರಗೆ ಬರುವರು. ಏಕೆಂದರೆ ಇಜ್ರೆಯೇಲಿನ ಆ ದಿನವು ಮಹಾದಿನವಾಗಿರುವುದು.


ಆಮೇಲೆ ಇಸ್ರಾಯೇಲರು ತಿರುಗಿಕೊಂಡು ಅವರ ದೇವರಾದ ಯೆಹೋವ ದೇವರನ್ನು ಮತ್ತು ಅವರ ಅರಸನಾದ ದಾವೀದನನ್ನು ಹುಡುಕಿಕೊಂಡು, ಅಂತ್ಯ ದಿವಸಗಳಲ್ಲಿ ಯೆಹೋವ ದೇವರನ್ನೂ, ಆತನ ಒಳ್ಳೆಯತನವನ್ನೂ ಭಯಭಕ್ತಿಯಿಂದ ಪಡೆಯುವರು.


ಬನ್ನಿರಿ, ನಾವು ಯೆಹೋವ ದೇವರ ಕಡೆಗೆ ತಿರುಗಿಕೊಳ್ಳೋಣ. ಅವರು ನಮ್ಮನ್ನು ಗಾಯಗೊಳಿಸಿದ್ದಾರೆ, ಅವರೇ ನಮ್ಮನ್ನು ಸ್ವಸ್ಥ ಮಾಡುವರು. ಅವರು ಹೊಡೆದಿದ್ದಾನೆ, ಅವರೇ ನಮ್ಮನ್ನು ಕಟ್ಟುವರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು