Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 51:12 - ಕನ್ನಡ ಸಮಕಾಲಿಕ ಅನುವಾದ

12 ಬಾಬಿಲೋನಿನ ಗೋಡೆಯ ಮೇಲೆ ಧ್ವಜವನ್ನೆತ್ತಿರಿ; ಪಹರೆಯನ್ನು ಬಲಪಡಿಸಿರಿ; ಕಾವಲುಗಾರರನ್ನು ನಿಲ್ಲಿಸಿರಿ; ಹೊಂಚಿಕೊಳ್ಳುವವರನ್ನು ಸಿದ್ಧಮಾಡಿರಿ; ಏಕೆಂದರೆ ಯೆಹೋವ ದೇವರು ಬಾಬಿಲೋನಿನ ನಿವಾಸಿಗಳಿಗೆ ವಿರೋಧವಾಗಿ ತಾನು ಹೇಳಿದ್ದನ್ನು ಯೋಚಿಸಿದ್ದನ್ನು ಮಾಡಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

12 ಬಾಬೆಲ್ ಕೋಟೆಗೆ ಎದುರಾಗಿ ಧ್ವಜವನ್ನೆತ್ತಿರಿ, ಪಹರೆಯನ್ನು ಬಲಪಡಿಸಿರಿ, ಕಾವಲುಗಾರರನ್ನು ನಿಲ್ಲಿಸಿರಿ, ಹೊಂಚುಗಾರರನ್ನು ಗೊತ್ತುಮಾಡಿರಿ; ಯೆಹೋವನು ಬಾಬೆಲಿನವರ ವಿಷಯದಲ್ಲಿ ನುಡಿದದ್ದನ್ನು ನೆನಪಿಸಿಕೊಂಡು ನೆರವೇರಿಸಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

12 ಬಾಬಿಲೋನಿನ ಕೋಟೆಗೆ ಎದುರಾಗಿ ಧ್ವಜವೆತ್ತಿರಿ. ಪಹರೆಯನ್ನು ಬಲಪಡಿಸಿರಿ. ಕಾವಲುಗಾರರನ್ನು ನಿಲ್ಲಿಸಿರಿ. ಹೊಂಚುಗಾರರನ್ನು ಗೊತ್ತುಮಾಡಿರಿ!’ ಸರ್ವೇಶ್ವರ ಸ್ವಾಮಿ ಬಾಬಿಲೋನಿನವರ ವಿಷಯದಲ್ಲಿ ನುಡಿದಿದ್ದನ್ನು ನೆನಪಿಗೆ ತಂದುಕೊಂಡು ನೆರವೇರಿಸಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

12 ಬಾಬೆಲ್ ಕೋಟೆಗೆ ಎದುರಾಗಿ ಧ್ವಜವೆತ್ತಿರಿ, ಠಾಣ್ಯವನ್ನು ಬಲಪಡಿಸಿರಿ, ಕಾವಲುಗಾರರನ್ನು ನಿಲ್ಲಿಸಿರಿ, ಹೊಂಚುಗಾರರನ್ನು ಗೊತ್ತುಮಾಡಿರಿ; ಯೆಹೋವನು ಬಾಬೆಲಿನವರ ವಿಷಯದಲ್ಲಿ ನುಡಿದದ್ದನ್ನು ಚಿತ್ತಕ್ಕೆ ತಂದು ನೆರವೇರಿಸಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

12 ಬಾಬಿಲೋನಿನ ಕೋಟೆಗೋಡೆಯ ವಿರುದ್ಧ ಧ್ವಜವನ್ನು ಎತ್ತಿ ಹಾರಿಸಿರಿ. ಹೆಚ್ಚಿನ ಸಂಖ್ಯೆಯಲ್ಲಿ ಕಾವಲುಗಾರರನ್ನು ಕರೆದುತನ್ನಿರಿ. ಯೋಧರನ್ನು ಅವರವರ ಸ್ಥಾನಗಳಲ್ಲಿ ನಿಲ್ಲಿಸಿರಿ. ಗುಪ್ತವಾಗಿ ಧಾಳಿ ಮಾಡುವುದಕ್ಕೆ ಸಿದ್ಧರಾಗಿರಿ. ಯೆಹೋವನು ತನ್ನ ಯೋಜನೆಗಳಂತೆ ಕಾರ್ಯ ನೆರವೇರಿಸುವನು. ಯೆಹೋವನು ಬಾಬಿಲೋನಿನ ಜನರ ವಿರುದ್ಧ ಹೇಳಿರುವಂತೆಯೇ ಮಾಡುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 51:12
18 ತಿಳಿವುಗಳ ಹೋಲಿಕೆ  

“ಬಾಣಗಳನ್ನು ಮೆರುಗು ಮಾಡಿರಿ; ಡಾಲುಗಳನ್ನು ಎತ್ತಿಕೊಳ್ಳಿರಿ, ಯೆಹೋವ ದೇವರು ಮೇದ್ಯರ ಅರಸರ ಆತ್ಮವನ್ನು ಎಬ್ಬಿಸಿದ್ದಾರೆ; ಆತನ ಆಲೋಚನೆ ಬಾಬಿಲೋನಿಗೆ ವಿರೋಧವಾಗಿ ಅದನ್ನು ನಾಶಮಾಡುವುದಕ್ಕೆ ಇದೆ. ಏಕೆಂದರೆ ಇದು ಯೆಹೋವ ದೇವರ ಪ್ರತಿದಂಡನೆಯು, ಅವರ ದೇವಾಲಯದ ಪ್ರತಿದಂಡನೆಯಾಗಿದೆ.


ಶತ್ರುಗಳು ಬಂದು ಶ್ರೇಷ್ಠರ ದ್ವಾರಗಳೊಳಗೆ ಹೋಗುವಂತೆ ಎತ್ತರವಾದ ಪರ್ವತದ ಮೇಲೆ ನೀವು ಧ್ವಜವನ್ನೆತ್ತಿ ಅವರಿಗೆ ನಿಮ್ಮ ಶಬ್ದವನ್ನು ಕೇಳಿಸುವಂತೆ ಜೋರಾಗಿ ಕೂಗಿ ಕರೆಯಿರಿ.


ನಿನೆವೆಯೇ, ಮುತ್ತಿಗೆ ಹಾಕುವವನು ನಿನಗೆ ವಿರೋಧವಾಗಿ ಹೊರಟಿದ್ದಾನೆ, ಕೋಟೆಯನ್ನು ಭದ್ರಪಡಿಸು; ದಾರಿಯನ್ನು ಕಾಯಿ; ನಡುವನ್ನು ಬಲಪಡಿಸಿಕೋ; ನಿನ್ನ ಶಕ್ತಿಯನ್ನು ಬಲವಾಗಿ ಗಟ್ಟಿಮಾಡಿಕೋ.


ಆಗ ದೇಶವು ನೊಂದು ನಡುಗುವುದು. ಏಕೆಂದರೆ ಬಾಬಿಲೋನ್ ದೇಶವು ನಿರ್ಜನವಾಗಲಿ ಎಂದು ಅದರ ವಿರೋಧವಾಗಿ ಯೆಹೋವ ದೇವರ ಉದ್ದೇಶಗಳು ಸ್ಥಿರವಾಗಿವೆ.


ನಾನು ಎಲ್ಲಾ ಜನಾಂಗಗಳನ್ನು ಕೂಡಿಸುವೆನು. ಯೆಹೋಷಾಫಾಟನ ತಗ್ಗಿಗೆ ಅವರನ್ನು ತರುವೆನು. ಅಲ್ಲಿ ನನ್ನ ಜನರೂ ನನ್ನ ಬಾಧ್ಯತೆಯೂ ಆಗಿರುವ ಇಸ್ರಾಯೇಲಿನ ವಿಷಯವಾಗಿ ಅವರ ಸಂಗಡ ವ್ಯಾಜ್ಯವಾಡುವೆನು. ಅವರು ಅವರನ್ನು ಜನಾಂಗಗಳಲ್ಲಿ ಚದುರಿಸಿ, ನನ್ನ ದೇಶವನ್ನು ಹಂಚಿಕೊಂಡರು.


ಯೆಹೋವ ದೇವರು ತಾವು ಸಂಕಲ್ಪಿಸಿದ್ದನ್ನು ಮಾಡಿದ್ದಾರೆ. ಅವರು ಪುರಾತನ ಕಾಲದ ದಿನಗಳಲ್ಲಿ ಆಜ್ಞಾಪಿಸಿದ ತಮ್ಮ ವಾಕ್ಯವನ್ನು ಪೂರೈಸಿದ್ದಾರೆ. ಅವರು ಕೆಡವಿ ಕನಿಕರಿಸಲಿಲ್ಲ. ಅವರು ನಿನ್ನ ಶತ್ರುವನ್ನು ನಿನ್ನ ವಿಷಯವಾಗಿ ಸಂತೋಷಪಡುವ ಹಾಗೆ ಮಾಡಿದ್ದಾರೆ. ಆತನು ನಿನ್ನ ವೈರಿಗಳ ಕೊಂಬನ್ನು ಎತ್ತಿದ್ದಾರೆ.


“ದೇಶದಲ್ಲಿ ಧ್ವಜವನ್ನೆತ್ತಿರಿ; ಜನಾಂಗಗಳಲ್ಲಿ ತುತೂರಿಯನ್ನೂದಿರಿ; ಅದಕ್ಕೆ ವಿರೋಧವಾಗಿ ಜನಾಂಗಗಳನ್ನು ಸಿದ್ಧಮಾಡಿರಿ; ಅರಾರಾಟ್, ಮಿನ್ನಿ, ಅಷ್ಕೆನಜ್ ರಾಜ್ಯಗಳನ್ನು ಅದಕ್ಕೆ ವಿರೋಧವಾಗಿ ಕರೆಯಿರಿ; ಅದಕ್ಕೆ ವಿರೋಧವಾಗಿ ಸೈನ್ಯಾಧಿಪತಿಯನ್ನು ನೇಮಿಸಿರಿ; ಬಿರುಸಾದ ಮಿಡತೆ ದಂಡಿನಂತೆ ಕುದುರೆಗಳನ್ನು ಬರಮಾಡಿರಿ.


“ಜನಾಂಗಗಳಲ್ಲಿ ಪ್ರಚುರಪಡಿಸಿರಿ, ಧ್ವಜವನ್ನೆತ್ತಿ ಪ್ರಕಟಿಸಿರಿ; ಮರೆಮಾಡದೇ ಹೀಗೆ ಸಾರಿರಿ, ‘ಬಾಬಿಲೋನ್ ಶತ್ರುವಶವಾಯಿತು; ಬೇಲ್ ದೇವತೆಗೆ ನಾಚಿಕೆಯಾಯಿತು; ಮೆರೋದಾಕ್ ತುಂಡುತುಂಡಾಗಿ ಮುರಿದು ಹೋದನು. ಅವಳ ವಿಗ್ರಹಗಳಿಗೆ ನಾಚಿಕೆಯಾಯಿತು. ಮತ್ತು ಅವಳ ವಿಗ್ರಹಗಳು ಭಯದಿಂದ ತುಂಬಿವೆ.’


ಯೆಹೋವ ದೇವರಿಗೆ ವಿರೋಧವಾಗಿ ಯಾವ ಜ್ಞಾನವೂ, ವಿವೇಕವೂ, ಯೋಜನೆಯೂ ಇಲ್ಲ.


ಆಯಿ ಎಂಬ ಪಟ್ಟಣದ ಅರಸನು ಇದನ್ನು ಕಂಡಾಗ, ಆ ಪಟ್ಟಣದ ಜನರು ತ್ವರೆಪಟ್ಟು, ಉದಯಕಾಲದಲ್ಲಿ ಎದ್ದು, ನಿಶ್ಚಯಿಸಿದ ವೇಳೆಯಲ್ಲಿ ಆಯಿ ಎಂಬ ಪಟ್ಟಣದ ಅರಸನೂ ಅವನ ಜನರೆಲ್ಲರೂ ಇಸ್ರಾಯೇಲಿಗೆ ಎದುರಾಗಿ ಯುದ್ಧಮಾಡಲು ಬಯಲಿಗೆ ಹೊರಟರು. ಅವನೂ ಅವನ ಜನರೂ ಅರಾಬಾ ಎಂಬ ತಗ್ಗಾದ ಪ್ರದೇಶವು ಕಾಣುವ ಸ್ಥಳಕ್ಕೆ ಬಂದರು. ಆದರೆ ಅವನು ಪಟ್ಟಣದ ಹಿಂದೆ ತನಗೋಸ್ಕರ ಹೊಂಚಿಕೊಂಡಿರುವವರನ್ನು ಅರಿಯದೆ ಇದ್ದನು.


ಇದರ ನಿಮಿತ್ತ ಭೂಮಿಯು ದುಃಖಿಸುವುದು. ಮೇಲಿರುವ ಆಕಾಶವು ಕಪ್ಪಾಗುವುದು. ಏಕೆಂದರೆ ನಾನು ಅದನ್ನು ಹೇಳಿದ್ದರಿಂದ ನಿಶ್ಚಯಿಸಿದ್ದೇನೆ. ಮಾನಸಾಂತರ ಪಡುವುದಿಲ್ಲ. ಇಲ್ಲವೆ ಅದರಿಂದ ಹಿಂದಿರುಗುವುದಿಲ್ಲ.”


ಆತನು ತನ್ನ ಹೃದಯದ ಆಲೋಚನೆಗಳನ್ನು ನಡೆಸಿ ತೀರಿಸುವವರೆಗೂ ಯೆಹೋವ ದೇವರ ಕೋಪವು ತಿರುಗುವುದಿಲ್ಲ. ಅಂತ್ಯ ದಿವಸಗಳಲ್ಲಿ ನೀವು ಅದನ್ನು ಸಂಪೂರ್ಣವಾಗಿ ಗ್ರಹಿಸುವಿರಿ.


ಯೆಹೋವ ದೇವರು ತನ್ನ ಆಯುಧ ಶಾಲೆಯನ್ನು ತೆರೆದು, ತನ್ನ ರೋಷದ ಆಯುಧಗಳನ್ನು ಹೊರಗೆ ತಂದಿದ್ದಾರೆ. ಏಕೆಂದರೆ ಬಾಬಿಲೋನಿನ ದೇಶದಲ್ಲಿ ಸಾರ್ವಭೌಮ ಸೇನಾಧೀಶ್ವರ ಯೆಹೋವ ದೇವರಿಗೆ ಕೆಲಸವಿದೆ.


ಜನಾಂಗಗಳಿಗೆ ಗುರುತಾಗಿ ಧ್ವಜವನ್ನೆತ್ತಿ ಇಸ್ರಾಯೇಲಿನಿಂದ ತಳ್ಳಿಬಿಟ್ಟವರನ್ನು ಕೂಡಿಸುವನು. ಯೆಹೂದದಿಂದ ಚದರಿದವರನ್ನು ಭೂಮಿಯ ನಾಲ್ಕು ಕಡೆಗಳಿಂದ ಒಟ್ಟುಗೂಡಿಸುವನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು