Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 51:20 - ಕನ್ನಡ ಸಮಕಾಲಿಕ ಅನುವಾದ

20 “ನೀನು ನನ್ನ ಗದೆಯೂ, ನನ್ನ ಯುದ್ಧದ ಆಯುಧಗಳೇ, ನಿನ್ನಿಂದ ಜನಾಂಗಗಳನ್ನು ಚೂರುಚೂರಾಗಿ ಒಡೆದು ಬಿಡುತ್ತೇನೆ, ನಿನ್ನಿಂದ ರಾಜ್ಯಗಳನ್ನು ನಾಶಮಾಡುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

20 ಬಾಬೆಲೇ, ನೀನು ನನಗೆ ಗದೆಯು ಮತ್ತು ಶಸ್ತ್ರವು, ನಾನು ನಿನ್ನಿಂದ ಜನಾಂಗಗಳನ್ನು ಒಡೆದುಬಿಡುತ್ತೇನೆ;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

20 “ಬಾಬಿಲೋನೇ, ನೀನು ನನಗೊಂದು ಯುದ್ಧಾಸ್ತ್ರ, ಒಂದು ಗದೆ. ಈ ಗದೆಯಿಂದ ರಾಷ್ಟ್ರಗಳನ್ನು ಬಡಿದುಬಿಡುವೆನು, ರಾಜ್ಯಗಳನ್ನು ಅಳಿಸಿಬಿಡುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

20 [ಬಾಬೆಲೇ,] ನೀನು ನನಗೆ ಗದೆಯು, ಶಸ್ತ್ರವು, ನಾನು ನಿನ್ನಿಂದ ಜನಾಂಗಗಳನ್ನು ಒಡೆದುಬಿಡುತ್ತೇನೆ;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

20 ಯೆಹೋವನು ಹೀಗೆನ್ನುತ್ತಾನೆ: “ಬಾಬಿಲೋನೇ, ನೀನು ನನ್ನ ಗದೆ. ಜನಾಂಗಗಳನ್ನು ಜಜ್ಜಿಹಾಕಲೂ ರಾಜ್ಯಗಳನ್ನು ಧ್ವಂಸ ಮಾಡಲೂ ನಾನು ನಿನ್ನನ್ನು ಬಳಸುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 51:20
20 ತಿಳಿವುಗಳ ಹೋಲಿಕೆ  

ಚೀಯೋನ್ ಪುತ್ರಿಯೇ, ಎದ್ದು ತುಳಿ. ಏಕೆಂದರೆ ನಿನ್ನ ಕೊಂಬನ್ನು ಕಬ್ಬಿಣವಾಗಿಯೂ ನಿನ್ನ ಗೊರಸುಗಳನ್ನು ಕಂಚಿನದಾಗಿಯೂ ಮಾಡುವೆನು. ನೀನು ಅನೇಕ ಜನಾಂಗಗಳನ್ನು ಚೂರುಚೂರಾಗಿ ಮಾಡುವೆ. ಅವರ ಕೊಳ್ಳೆಹೊಡೆದು ಸಂಪಾದಿಸಿದ್ದ ಸ್ವತ್ತನ್ನು ಯೆಹೋವ ದೇವರಿಗೂ ಅವರ ಸಂಪತ್ತನ್ನು ಲೋಕದ ಕರ್ತ ದೇವರಿಗೂ ಪ್ರತಿಷ್ಠೆಮಾಡುವೆನು.


“ಹೀಗಾಗಬೇಕೆಂದು ಬಹಳ ದಿನಗಳ ಹಿಂದೆಯೇ ನಿರ್ಣಯಿಸಿದ್ದನ್ನು ನೀನು ಕೇಳಲಿಲ್ಲವೋ? ಪುರಾತನ ದಿನಗಳಲ್ಲಿ ನಾನು ಯೋಚಿಸಿದ್ದನ್ನು, ಈಗ ನಾನು ಅದನ್ನು ನೆರವೇರಿಸಿದ್ದೇನೆ. ಆದ್ದರಿಂದಲೇ ನೀನು ಕೋಟೆಗಳುಳ್ಳ ಪಟ್ಟಣಗಳನ್ನು ಹಾಳಾದ ದಿಬ್ಬಗಳಾಗಿ ಮಾಡಿಬಿಟ್ಟಿರುವೆ


ಆದರೆ ಅರಸನು ಅದನ್ನು ಕೇಳಿ ಬಹುಕೋಪಗೊಂಡು ತನ್ನ ಸೈನ್ಯಗಳನ್ನು ಕಳುಹಿಸಿ ಆ ಕೊಲೆಗಾರರನ್ನು ಸಂಹರಿಸಿ ಅವರ ಪಟ್ಟಣವನ್ನು ಸುಟ್ಟುಬಿಟ್ಟನು.


ಇಗೋ, ಲೋಕವನ್ನೆಲ್ಲಾ ಹೊಡೆದ ಸುತ್ತಿಗೆಯು ಮುರಿದು ತುಂಡುತುಂಡಾಯಿತು! ಹೇಗೆ ಬಾಬೆಲ್ ರಾಜ್ಯವು ಜನಾಂಗಗಳ ನಡುವೆ ಹಾಳಾಯಿತಲ್ಲಾ!


ಇಗೋ, ನಾನು ಕಳುಹಿಸಿ ಉತ್ತರ ದಿಕ್ಕಿನ ಗೋತ್ರಗಳೆಲ್ಲವನ್ನೂ, ನನ್ನ ಸೇವಕನಾದ ಬಾಬಿಲೋನಿನ ಅರಸನಾದ ನೆಬೂಕದ್ನೆಚ್ಚರನನ್ನೂ ತೆಗೆದುಕೊಂಡು, ಈ ದೇಶಕ್ಕೆ ವಿರೋಧವಾಗಿಯೂ, ಅವರ ನಿವಾಸಿಗಳಿಗೆ ವಿರೋಧವಾಗಿಯೂ ಸುತ್ತಲಿರುವ ಈ ಎಲ್ಲಾ ಜನಾಂಗಗಳಿಗೆ ವಿರೋಧವಾಗಿಯೂ ತರಿಸಿ, ಅವರನ್ನು ಸಂಪೂರ್ಣ ನಾಶಮಾಡಿ ಅವರನ್ನು ಭಯಕ್ಕೂ, ಪರಿಹಾಸ್ಯಕ್ಕೂ ಗುರಿಮಾಡಿ ನಿತ್ಯ ನಾಶಮಾಡುವೆನು.


“ಅಯ್ಯೋ, ನನ್ನ ಕೋಪದ ಕೋಲಾದ ಅಸ್ಸೀರಿಯವೇ, ನನ್ನ ಕೈಯಲ್ಲಿರುವ ಬೆತ್ತವು ನನ್ನ ಕೋಪವೇ.


ಈ ದೇಶವೆಲ್ಲಾ ಹಾಳಾಗಿ ಭಯಕ್ಕೆ ಗುರಿಯಾಗುವುದು. ಈ ಜನಾಂಗಗಳು ಬಾಬಿಲೋನಿನ ಅರಸನನ್ನು ಎಪ್ಪತ್ತು ವರ್ಷ ಸೇವಿಸುವರು.


ಕೊಡಲಿಯು ಕಡಿಯುವವನಿಗೆ ವಿರುದ್ಧವಾಗಿ ಕೊಚ್ಚಿಕೊಂಡೀತೆ? ಇಲ್ಲವೆ ಗರಗಸವು ತನ್ನನ್ನು ಎಳೆಯುವವನ ಮೇಲೆ ಹೆಚ್ಚಿಸಿಕೊಂಡೀತೆ? ಕೋಲು ತನ್ನನ್ನು ಎತ್ತಿದವನ ಮೇಲೆಯೇ ಬೀಸುವಂತೆ ಕೋಲು ಹಿಡಿದವನನ್ನೇ ಹೊಡೆದಂತಾಯಿತು! ನಿರ್ಜೀವ ಬೆತ್ತ ಸಜೀವ ಮನುಷ್ಯನನ್ನೇ ಬಡಿದಂತಾಯಿತು!


ಯೆಹೋವ ದೇವರು ಮತ್ತು ಅವರ ರೋಷಕ್ಕೆ ಆಯುಧಗಳಾದವರು ದೂರದೇಶದಿಂದ ಎಂದರೆ, ಆಕಾಶಮಂಡಲದ ಕಟ್ಟಕಡೆಯಿಂದ ದೇಶವನ್ನೆಲ್ಲಾ ಹಾಳುಮಾಡುವುದಕ್ಕಾಗಿ ಬರುತ್ತಾರೆ.


ಜನಾಂಗಗಳೇ, ನೀವು ಯುದ್ಧವನ್ನು ಘೋಷಿಸಿರಿ, ಆದರೂ ಚದರಿಹೋಗುವಿರಿ! ಎಲ್ಲಾ ದೂರ ದೇಶದವರೇ ಕಿವಿಗೊಡಿರಿ. ನಡುಕಟ್ಟಿಕೊಳ್ಳಿರಿ, ಆದರೂ ಚದರಿಹೋಗುವಿರಿ! ನಡುಕಟ್ಟಿಕೊಳ್ಳಿರಿ, ಆದರೂ ಚದರಿಹೋಗುವಿರಿ!


“ಯೆಹೋವ ದೇವರು ತಾವೇ ಅಭಿಷೇಕಿಸಿದ ಕೋರೆಷನಿಗೆ ಹೇಳುವುದೇನೆಂದರೆ: ರಾಷ್ಟ್ರಗಳನ್ನು ನೀನು ತುಳಿದು, ರಾಜರ ನಡುಕಟ್ಟನ್ನು ಬಿಚ್ಚಿ, ಮುಚ್ಚಲಾಗದ ಹಾಗೆ ಬಾಗಿಲು ಹೆಬ್ಬಾಗಿಲುಗಳನ್ನು ತೆರೆಯಲು ನಾನು ನಿನ್ನ ಬಲಗೈಯನ್ನು ಹಿಡಿದು ನಡೆಸುವೆನು.


ನನ್ನ ಕ್ರೋಧವನ್ನು ನಿನ್ನ ಮೇಲೆ ಸುರಿಸುವೆನು. ನನ್ನ ಉಗ್ರವಾದ ಬೆಂಕಿ ನಿನ್ನ ಮೇಲೆ ಊದಿ ನಾಶಪಡಿಸುವುದರಲ್ಲಿ ಗಟ್ಟಿಗರಾದ ಕ್ರೂರ ಜನರ ಕೈಗೆ ನಿನ್ನನ್ನು ಒಪ್ಪಿಸುವೆನು.


ಆದರೆ ಯೆಹೋವ ದೇವರ ಯೋಚನೆಗಳು ಅವರಿಗೆ ತಿಳಿದಿಲ್ಲ. ಆತನ ಆಲೋಚನೆಯನ್ನು ಅವರು ಗ್ರಹಿಸಲಿಲ್ಲ. ಏಕೆಂದರೆ ಕಣದಲ್ಲಿ ಸಿವುಡುಗಳ ಹಾಗೆ ಅವರನ್ನು ಕೂಡಿಸುವರು.


ನಿನೆವೆಯೇ, ಮುತ್ತಿಗೆ ಹಾಕುವವನು ನಿನಗೆ ವಿರೋಧವಾಗಿ ಹೊರಟಿದ್ದಾನೆ, ಕೋಟೆಯನ್ನು ಭದ್ರಪಡಿಸು; ದಾರಿಯನ್ನು ಕಾಯಿ; ನಡುವನ್ನು ಬಲಪಡಿಸಿಕೋ; ನಿನ್ನ ಶಕ್ತಿಯನ್ನು ಬಲವಾಗಿ ಗಟ್ಟಿಮಾಡಿಕೋ.


ಆ ಕುಲದಿಂದಲೇ ಮೂಲೆಗಲ್ಲೂ, ಗುಡಾರದ ಮೊಳೆಯೂ, ಯುದ್ಧದ ಬಿಲ್ಲೂ, ಸಕಲ ಅಧಿಕಾರಿಗಳೂ ಕೂಡಿಕೊಂಡು ಹೊರಬರುವರು.


“ ‘ಖಡ್ಗವು ಕೈಯಲ್ಲಿ ಅದು ಹಿಡಿಯಲಾಗುವ ಹಾಗೆ ಮಸೆಯಲು ಕೊಡಲಾಗಿದೆ. ಕೊಲ್ಲುವವನ ಕೈಗೆ ಕೊಡುವ ಹಾಗೆ ಆ ಖಡ್ಗಕ್ಕೆ ಹದವನ್ನೂ, ಸಾಣೆಯನ್ನೂ ಮಾಡಲಾಗಿದೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು