Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 51:21 - ಕನ್ನಡ ಸಮಕಾಲಿಕ ಅನುವಾದ

21 ನಿನ್ನಿಂದ ಕುದುರೆಯನ್ನೂ, ಅದರ ಮೇಲೆ ಹತ್ತಿದವನನ್ನೂ ಚೂರುಚೂರಾಗಿ ಒಡೆದು ಬಿಡುತ್ತೇನೆ; ನಿನ್ನಿಂದ ರಥವನ್ನೂ, ಅದರಲ್ಲಿ ಸವಾರಿ ಮಾಡುವವನನ್ನೂ ಚೂರುಚೂರಾಗಿ ಒಡೆದು ಬಿಡುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

21 ನಿನ್ನಿಂದ ರಾಜ್ಯಗಳನ್ನು ಅಳಿಸುತ್ತೇನೆ; ನಿನ್ನಿಂದ ಕುದುರೆಯನ್ನೂ ಮತ್ತು ಸವಾರನನ್ನೂ ಅಳಿಸಿಬಿಡುತ್ತೇನೆ; ನಿನ್ನಿಂದ ರಥವನ್ನೂ, ಸಾರಥಿಯನ್ನೂ ನಾಶಮಾಡುತ್ತೇನೆ;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

21 ಈ ಗದೆಯಿಂದ ಒಡೆದುಬಿಡುವೆನು ಕುದುರೆಯನ್ನೂ ಸವಾರನನ್ನೂ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

21 ನಿನ್ನಿಂದ ರಾಜ್ಯಗಳನ್ನು ಅಳಿಸುತ್ತೇನೆ; ನಿನ್ನಿಂದ ಕುದುರೆಯನ್ನೂ ಸವಾರನನ್ನೂ ಒಡೆದುಬಿಡುತ್ತೇನೆ; ನಿನ್ನಿಂದ ರಥವನ್ನೂ ಸಾರಥಿಯನ್ನೂ ಒಡೆದುಬಿಡುತ್ತೇನೆ; ನಿನ್ನಿಂದ ಸ್ತ್ರೀಪುರುಷರನ್ನು ಒಡೆದುಬಿಡುತ್ತೇನೆ;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

21 ಕುದುರೆಗಳನ್ನೂ ಅದರ ಸವಾರರನ್ನೂ ಜಜ್ಜಿಹಾಕಲು ನಾನು ನಿನ್ನನ್ನು ಬಳಸುತ್ತೇನೆ. ರಥಗಳನ್ನೂ ಸಾರಥಿಗಳನ್ನೂ ಪುಡಿಪುಡಿ ಮಾಡಲು ನಾನು ನಿನ್ನನ್ನು ಬಳಸುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 51:21
14 ತಿಳಿವುಗಳ ಹೋಲಿಕೆ  

ಆಗ ಮೋಶೆ ಮತ್ತು ಇಸ್ರಾಯೇಲರು ಯೆಹೋವ ದೇವರಿಗೆ ಈ ಹಾಡನ್ನು ಹಾಡಿದರು: “ನಾನು ಯೆಹೋವ ದೇವರಿಗೆ ಹಾಡುತ್ತೇನೆ. ಏಕೆಂದರೆ ಅವರು ಪ್ರಭಾವದಿಂದ ಜಯಶಾಲಿಯಾದರು. ಕುದುರೆಗಳನ್ನೂ ರಾಹುತರನ್ನೂ ಸಮುದ್ರದಲ್ಲಿ ದಬ್ಬಿದ್ದಾರೆ.


ಅವರು ಯುದ್ಧದಲ್ಲಿ ಶತ್ರುವನ್ನು ಕೆಸರಿನ ಬೀದಿಗಳಲ್ಲಿ ತುಳಿಯುವ ಶೂರರ ಹಾಗಿರುವರು. ಯೆಹೋವ ದೇವರು ಅವರ ಸಂಗಡ ಇರುವುದರಿಂದ ಯುದ್ಧಮಾಡುವರು. ಕುದುರೆಗಳ ಮೇಲೆ ಸವಾರಿ ಮಾಡುವ ಶತ್ರುವನ್ನು ನಾಚಿಕೆ ಪಡಿಸುವರು.


ಆ ದಿನದಲ್ಲಿ, ನಾನು ಅವರ ಕುದುರೆಗಳಿಗೆಲ್ಲಾ ತಬ್ಬಿಬ್ಬನ್ನು ಉಂಟುಮಾಡುವೆನು, ಅದರ ರಾಹುತರನ್ನು ಭ್ರಮೆಗೊಳಿಸುವೆನು,” ಎಂದು ಯೆಹೋವ ದೇವರು ಹೇಳುತ್ತಾರೆ. ಯೆಹೂದ ವಂಶವನ್ನು ಕಟಾಕ್ಷಿಸಿ ಜನಾಂಗಗಳ ಕುದುರೆಗಳನ್ನೆಲ್ಲಾ ಕುರುಡು ಮಾಡುವೆನು.


ರಾಜ್ಯಗಳ ಸಿಂಹಾಸನವನ್ನು ಕೆಡವಿಹಾಕುವೆನು. ನಾನು ಇತರ ಜನಾಂಗಗಳ, ರಾಜ್ಯಗಳ ಬಲವನ್ನು ನಾಶಮಾಡುವೆನು. ರಥಗಳನ್ನೂ, ಅವುಗಳಲ್ಲಿ ಸವಾರಿ ಮಾಡುವವರನ್ನೂ ಕೆಡವಿಹಾಕುವೆನು. ಕುದುರೆಗಳೂ ಅದರ ಸವಾರರೂ ಪ್ರತಿಯೊಬ್ಬನೂ ತನ್ನ ಸಹೋದರನ ಖಡ್ಗದಿಂದ ಬೀಳುವನು.


ಸೇನಾಧೀಶ್ವರ ಯೆಹೋವ ದೇವರು ಹೀಗೆ ಹೇಳುತ್ತಾರೆ: “ಇಗೋ, ನಾನು ನಿನಗೆ ವಿರೋಧವಾಗಿದ್ದೇನೆ. ನಿನ್ನ ರಥಗಳನ್ನು ಹೊಗೆಯಾಗಲು ಸುಡುತ್ತೇನೆ. ಖಡ್ಗವು ನಿನ್ನ ಎಳೆಯ ಸಿಂಹಗಳನ್ನು ನುಂಗಿಬಿಡುವುದು. ನಿನಗೆ ಸಿಕ್ಕಿದ ಬೇಟೆಯನ್ನು ಭೂಮಿಯ ಮೇಲಿನಿಂದ ತೆಗೆದುಬಿಡುತ್ತೇನೆ. ನಿನ್ನ ರಾಯಭಾರಿಗಳ ಧ್ವನಿಯು ಇನ್ನು ಕೇಳಿಸದು.”


ಯೆಹೋವ ದೇವರು ಹೀಗೆ ಘೋಷಿಸುತ್ತಾರೆ: “ಆ ದಿವಸದಲ್ಲಿ, ನಾನು ನಿನ್ನ ಮಧ್ಯದೊಳಗಿರುವ ನಿನ್ನ ಕುದುರೆಗಳನ್ನು ಕಡಿದುಬಿಟ್ಟು ನಿನ್ನ ರಥಗಳನ್ನು ನಾಶಮಾಡುವೆನು.


ರಾಜರು, ಸಹಸ್ರಾಧಿಪತಿಗಳು, ಪರಾಕ್ರಮಶಾಲಿಗಳು, ಅಶ್ವಗಳು, ಅಶ್ವಾರೂಢರು, ಸ್ವತಂತ್ರರು, ದಾಸರು, ದೊಡ್ಡವರು, ಚಿಕ್ಕವರು, ಇವರೆಲ್ಲರ ಮಾಂಸವನ್ನು ತಿನ್ನುವುದಕ್ಕೆ ಬನ್ನಿರಿ!” ಎಂದು ಹೇಳಿದನು.


ದೇವರು ಯುದ್ಧಗಳನ್ನು ಭೂಮಿಯ ಅಂತ್ಯದವರೆಗೆ ನಿಲ್ಲಿಸುತ್ತಾರೆ. ಬಿಲ್ಲನ್ನೂ ಭಲ್ಲೆಯನ್ನೂ ಮುರಿದು ಹಾಕಿದ್ದಾರೆ. ರಥಗಳನ್ನು ಬೆಂಕಿಯಿಂದ ಸುಡುತ್ತಾರೆ.


ನಾನು ಸಿದ್ಧಪಡಿಸುವ ಆ ಔತಣದಲ್ಲಿ ಕುದುರೆ ರಾಹುತ ಶೂರ ಸಕಲ ವಿಧವಾದ ಸೈನಿಕ ಇವರನ್ನು ಬೇಕಾದಷ್ಟು ಭಕ್ಷಿಸುವಿರಿ,’ ಇದು ಸಾರ್ವಭೌಮ ಯೆಹೋವ ದೇವರ ನುಡಿ.


ಅದರ ಕುದುರೆಗಳಿಗೆ ವಿರೋಧವಾಗಿಯೂ, ಅವರ ರಥಗಳಿಗೆ ವಿರೋಧವಾಗಿಯೂ, ಅವರೊಳಗಿರುವ ಎಲ್ಲಾ ಸಕಲ ಜನರಿಗೆ ವಿರೋಧವಾಗಿಯೂ ಖಡ್ಗ ಉಂಟು; ಅವರ ಹೆಂಗಸರಂತೆ ಅಶಕ್ತರಾಗುವರು; ಅದರ ಬೊಕ್ಕಸಗಳಿಗೆ ವಿರೋಧವಾಗಿ ಖಡ್ಗ ಉಂಟು; ಅವು ಕೊಳ್ಳೆಯಾಗುವುವು.


ಯಾಕೋಬನ ದೇವರೇ, ನಿಮ್ಮ ಗದರಿಕೆಯಿಂದ ರಥವೂ ಕುದುರೆಯೂ ಚಲನೆಯಿಲ್ಲದೆ ಬಿದ್ದಿವೆ.


ಮಿರ್ಯಾಮಳು ಅವರಿಗೆ ಹೀಗೆ ಹಾಡಿದಳು: “ಯೆಹೋವ ದೇವರಿಗೆ ನೀವು ಹಾಡಿರಿ, ಅವರು ಮಹೋನ್ನತದಲ್ಲಿದ್ದಾರೆ; ಕುದುರೆಯನ್ನೂ ಸವಾರರನ್ನೂ ಸಮುದ್ರದಲ್ಲಿ ಮುಣುಗಿಸಿಬಿಟ್ಟರು.”


ಅವರು ಫರೋಹನ ರಥಗಳನ್ನೂ, ಅವನ ಸ್ಯೆನ್ಯವನ್ನೂ ಸಮುದ್ರದಲ್ಲಿ ಅಲ್ಲಾಡಿಸಿ ಎಸೆದಿದ್ದಾರೆ. ಫರೋಹನ ಅತ್ಯುತ್ತಮ ಅಧಿಕಾರಿಗಳು ಸಹ ಕೆಂಪು ಸಮುದ್ರದಲ್ಲಿ ಮುಳುಗಿ ಹೋದರು.


ರಥಗಳನ್ನು, ಕುದುರೆಗಳನ್ನು, ದಂಡನ್ನು, ಪರಾಕ್ರಮಶಾಲಿಗಳನ್ನು ಹೊರಡಿಸಿ, ಅವು ಒಟ್ಟಿಗೆ ಬಿದ್ದು ಏಳಲಾರದಂತೆಯೂ, ದೀಪದ ಬತ್ತಿ ನಂದಿ ಆರಿಹೋಗುವಂತೆಯೂ ಮಾಡಿದಾತನು ಇಂತೆನ್ನುತ್ತಾನೆ:


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು