Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 51:46 - ಕನ್ನಡ ಸಮಕಾಲಿಕ ಅನುವಾದ

46 ನಿಮ್ಮ ಹೃದಯವು ಕುಂದದ ಹಾಗೆ ದೇಶದಲ್ಲಿ ಕಿವಿಗೆ ಬೀಳುವ ಸುದ್ದಿಗೆ ನೀವು ಭಯಪಡದ ಹಾಗೆ, ಒಂದು ವರ್ಷದಲ್ಲಿ ಒಂದು ಸುದ್ದಿಯೂ ಇನ್ನೊಂದು ವರ್ಷದಲ್ಲಿ ಇನ್ನೊಂದು ಸುದ್ದಿಯೂ ಬರುವುದು. ದೇಶದಲ್ಲಿ ಬಲಾತ್ಕಾರವಿರುವುದು, ಆಳುವವನು ಆಳುವವನಿಗೆ ವಿರೋಧವಾಗಿರುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

46 ನಿಮ್ಮ ಎದೆಯು ಕುಂದದಿರಲಿ, ದೇಶದಲ್ಲಿ ಕಿವಿಗೆ ಬೀಳುವ ಸುದ್ದಿಯು ನಿಮ್ಮನ್ನು ಹೆದರಿಸದಿರಲಿ; ಒಂದು ವರ್ಷ ಒಂದು ಸುದ್ದಿಯು, ಮತ್ತೊಂದು ವರ್ಷ ಮತ್ತೊಂದು ಸುದ್ದಿಯು ಹರಡುತ್ತಿರುವವು; ಬಲಾತ್ಕಾರವು ದೇಶದಲ್ಲಿ ಪ್ರಬಲವಾಗುವುದು, ಅಧಿಕಾರಿಯು ಅಧಿಕಾರಿಗೆ ವಿರೋಧಿಯಾಗುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

46 ನಿಮ್ಮ ಎದೆ ಕುಂದದಿರಲಿ. ನಾಡಿನಲ್ಲಿ ಕಿವಿಗೆ ಬೀಳುವ ಸುದ್ದಿ ನಿಮ್ಮನ್ನು ಹೆದರಿಸದಿರಲಿ. ಒಂದು ವರ್ಷ ಒಂದು ಸುದ್ದಿಯಾದರೆ ಮತ್ತೊಂದು ವರ್ಷ ಮತ್ತೊಂದು ಸುದ್ದಿ. ಹಿಂಸಾಚಾರ ಪ್ರಬಲವಾಗುತ್ತಿದೆ ನಾಡಿನಲ್ಲಿ. ಅಧಿಕಾರಿಗೆ ಅಧಿಕಾರಿಯೇ ವಿರೋಧಿ ಅಲ್ಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

46 ನಿಮ್ಮ ಎದೆಯು ಕುಂದದಿರಲಿ, ದೇಶದಲ್ಲಿ ಕಿವಿಗೆ ಬೀಳುವ ಸುದ್ದಿಯು ನಿಮ್ಮನ್ನು ಹೆದರಿಸದಿರಲಿ; ಒಂದು ವರುಷ ಒಂದು ಸುದ್ದಿಯು, ಮತ್ತೊಂದು ವರುಷ ಮತ್ತೊಂದು ಸುದ್ದಿಯು ಹರಡುತ್ತಿರುವವು; ಬಲಾತ್ಕಾರವು ದೇಶದಲ್ಲಿ ಪ್ರಬಲವಾಗುವದು, ಅಧಿಕಾರಿಯು ಅಧಿಕಾರಿಗೆ ವಿರೋಧಿಯಾಗುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

46 “ನನ್ನ ಜನರೇ, ದುಃಖಿಸಬೇಡಿ, ಸುದ್ದಿಗಳು ಹಬ್ಬುತ್ತವೆ. ಆದರೆ ಹೆದರಬೇಡಿ. ಒಂದು ಸುದ್ದಿ ಈ ವರ್ಷ ಬರುವುದು. ಮುಂದಿನ ವರ್ಷ ಮತ್ತೊಂದು ಸುದ್ದಿ ಬರಬಹುದು. ದೇಶದಲ್ಲಿ ಭಯಂಕರವಾದ ಯುದ್ಧದ ಬಗ್ಗೆ ಸುದ್ದಿಗಳು ಕೇಳಿಬರುವವು. ರಾಜರುಗಳು ಬೇರೆ ರಾಜರುಗಳೊಂದಿಗೆ ಯುದ್ಧ ಮಾಡುತ್ತಿರುವ ವದಂತಿಗಳು ಕೇಳಿಬರುವವು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 51:46
16 ತಿಳಿವುಗಳ ಹೋಲಿಕೆ  

ಇದಲ್ಲದೆ ನಾನು ಈಜಿಪ್ಟಿನವನಿಗೆ ವಿರೋಧವಾಗಿ ಈಜಿಪ್ಟಿನವನನ್ನು ಎಬ್ಬಿಸುವೆನು. ಸಹೋದರನಿಗೆ ವಿರುದ್ಧವಾಗಿ ಸಹೋದರನೂ, ನೆರೆಯವನಿಗೆ ವಿರುದ್ಧವಾಗಿ ನೆರೆಯವನೂ, ಪಟ್ಟಣಕ್ಕೆ ವಿರೋಧವಾಗಿ ಪಟ್ಟಣವೂ, ರಾಜ್ಯಕ್ಕೆ ವಿರೋಧವಾಗಿ ರಾಜ್ಯವೂ ಹೊರಾಡುವವು.


ಇಗೋ, ನಾನು ಅವರ ಮೇಲೆ ಆತ್ಮವನ್ನು ಕಳುಹಿಸುವೆನು. ಅವನು ಒಂದು ಸುದ್ದಿಯನ್ನು ಕೇಳಿ ತನ್ನ ದೇಶಕ್ಕೆ ಹಿಂದಿರುಗುವನು. ಇದಲ್ಲದೆ ಅವನು ತನ್ನ ದೇಶದಲ್ಲಿ ಖಡ್ಗಕ್ಕೆ ತುತ್ತಾಗುವಂತೆ ಮಾಡುವೆನು,’ ” ಎಂದು ಹೇಳಿದನು.


ಈ ಸಂಗತಿಗಳು ಸಂಭವಿಸಲು ತೊಡಗುವಾಗ, ತಲೆಯೆತ್ತಿ ನಿಲ್ಲಿರಿ. ಏಕೆಂದರೆ ನಿಮ್ಮ ವಿಮೋಚನೆಯು ಸಮೀಪಿಸಿತು,” ಎಂದರು.


ಅಮ್ಮೋನಿಯರು, ಮೋವಾಬ್ಯರು ಸೇಯೀರ್ ಪರ್ವತದ ನಿವಾಸಿಗಳನ್ನು ಸಂಪೂರ್ಣವಾಗಿ ನಾಶಮಾಡಲು ನಿಂತರು. ಅವರು ಸೇಯೀರನ ನಿವಾಸಿಗಳನ್ನು ಪೂರ್ಣವಾಗಿ ವಧಿಸಿದ ತರುವಾಯ, ತಾವೇ ಒಬ್ಬರನ್ನೊಬ್ಬರು ಕೊಲ್ಲುವುದಕ್ಕೆ ಪ್ರಾರಂಭಿಸಿದರು.


ಮುನ್ನೂರು ಜನರು ತುತೂರಿಗಳನ್ನು ಊದುವಾಗ, ಯೆಹೋವ ದೇವರು ಪಾಳೆಯದಲ್ಲಿ ಎಲ್ಲೆಲ್ಲಿಯೂ ಒಬ್ಬನ ಖಡ್ಗವನ್ನು ಒಬ್ಬನ ಮೇಲೆ ಬರಮಾಡಿದರು. ಪಾಳೆಯ ಚೆರೇರಿನಲ್ಲಿರುವ ಬೇತ್ ಷಿಟ್ಟದವರೆಗೂ, ಟಬ್ಬಾತಿನ ಬಳಿಯಲ್ಲಿರುವ ಆಬೇಲ್ ಮೆಹೋಲಾದ ಮೇರೆಯವರೆಗೂ ಓಡಿಹೋಯಿತು.


“ಆದರೆ ನೀನು, ನನ್ನ ಸೇವಕನಾದ ಯಾಕೋಬನೇ, ನೀನು ಭಯಪಡಬೇಡ; ಇಸ್ರಾಯೇಲೇ, ದಿಗ್ಭ್ರಮೆಗೊಳ್ಳಬೇಡ; ಏಕೆಂದರೆ ಇಗೋ, ನಾನು ನಿನ್ನನ್ನು ದೂರದಿಂದಲೂ, ನಿನ್ನ ಸಂತಾನವನ್ನು ಅವರು ಸೆರೆಯಾಗಿ ಹೋದ ದೇಶದಿಂದಲೂ ರಕ್ಷಿಸುವೆನು; ಅವನನ್ನು ಭಯಪಡಿಸುವುದಕ್ಕೆ ಯಾರು ಇರುವುದಿಲ್ಲ.


ದೇವರು ನನ್ನ ಹೃದಯವನ್ನು ಹೆದರಿಸಿದ್ದಾರೆ; ಸರ್ವಶಕ್ತರು ನನ್ನನ್ನು ಗಾಬರಿಪಡಿಸಿದ್ದಾರೆ.


ಇಕ್ಕಟ್ಟಿನ ಸಮಯದಲ್ಲಿ ನೀನು ಬಳಲಿ ಹೋದರೆ, ನಿನ್ನ ಬಲವು ಕೊಂಚವಾಗಿದೆ.


ಭಯಪಡಬೇಡ, ಏಕೆಂದರೆ ನಾನೇ ನಿನ್ನೊಂದಿಗೆ ಇದ್ದೇನೆ. ನಿನ್ನ ಸಂತತಿಯವರನ್ನು ಪೂರ್ವದಿಂದ ತರುವೆನು. ಪಶ್ಚಿಮದಿಂದ ನಿನ್ನನ್ನು ಕೂಡಿಸುವೆನು.


ನನ್ನ ಸೇವಕನಾದ ಯಾಕೋಬನೇ, ನೀನು ಭಯಪಡಬೇಡ,” ಎಂದು ಯೆಹೋವ ದೇವರು ಹೇಳುತ್ತಾರೆ. “ಏಕೆಂದರೆ ನಾನೇ ನಿನ್ನ ಸಂಗಡ ಇದ್ದೇನೆ; ನಾನು ನಿನ್ನನ್ನು ಎಲ್ಲಿ ಓಡಿಸಿದೆನೋ, ಆ ಜನಾಂಗಗಳನ್ನೆಲ್ಲಾ ಸಂಪೂರ್ಣವಾಗಿ ಮುಗಿಸಿಬಿಡುತ್ತೇನೆ; ಆದರೆ ನಿನ್ನನ್ನು ಸಂಪೂರ್ಣವಾಗಿ ಮುಗಿಸಿಬಿಡುವುದಿಲ್ಲ; ನ್ಯಾಯದಿಂದಲೇ ನಿನ್ನನ್ನು ಶಿಕ್ಷಿಸುತ್ತೇನೆ; ಆದರೂ ನಿನ್ನನ್ನು ಶಿಕ್ಷಿಸದೆ ಬಿಡುವುದಿಲ್ಲ.”


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು