Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 51:8 - ಕನ್ನಡ ಸಮಕಾಲಿಕ ಅನುವಾದ

8 ಇದ್ದಕ್ಕಿದ್ದ ಹಾಗೆ ಬಾಬಿಲೋನ್ ಬಿದ್ದು ಹಾಳಾಗಿದೆ; ಅದರ ವಿಷಯ ಗೋಳಾಡಿರಿ; ಅದರ ನೋವಿಗೆ ತೈಲ ತೆಗೆದುಕೊಳ್ಳಿರಿ; ಒಂದು ವೇಳೆ ವಾಸಿಯಾದೀತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

8 ಬಾಬೆಲ್ ತಟ್ಟನೆ ಬಿದ್ದು ಹಾಳಾಯಿತು! ಅದಕ್ಕಾಗಿ ಗೋಳಾಡಿರಿ; ಅದರ ನೋವನ್ನು ನೀಗಿಸುವುದಕ್ಕೆ ಔಷಧವನ್ನು ಸಂಪಾದಿಸಿರಿ, ಗುಣವಾದೀತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

8 ಬಾಬಿಲೋನ್ ತಟ್ಟನೆ ಬಿದ್ದು ಹಾಳಾಯಿತು. ಅದಕ್ಕಾಗಿ ಗೋಳಾಡಿ. ಅದರ ನೋವನ್ನು ನೀಗಿಸಲು ಔಷಧವನ್ನು ತನ್ನಿ. ಒಂದು ವೇಳೆ ಅದು ಗುಣವಾದೀತು!

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

8 ಬಾಬೆಲ್ ತಟ್ಟನೆ ಬಿದ್ದು ಹಾಳಾಯಿತು! ಅದಕ್ಕಾಗಿ ಅರಿಚಿರಿ; ಅದರ ನೋವನ್ನು ನೀಗಿಸುವದಕ್ಕೆ ಔಷಧವನ್ನು ಸಂಪಾದಿಸಿರಿ, ಗುಣವಾದೀತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

8 ಬಾಬಿಲೋನ್ ಬೀಳುವುದು; ಬೇಗನೆ ಮುರಿದುಹೋಗುವುದು. ಅದರ ಸಲುವಾಗಿ ಗೋಳಾಡಿರಿ. ಅದರ ನೋವಿಗಾಗಿ ಔಷಧಿಯನ್ನು ತೆಗೆದುಕೊಂಡು ಬನ್ನಿ, ಒಂದುವೇಳೆ ಅದು ಗುಣಹೊಂದಬಹುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 51:8
20 ತಿಳಿವುಗಳ ಹೋಲಿಕೆ  

“ಈಜಿಪ್ಟಿನ ಮಗಳಾದ ಕನ್ನಿಕೆಯೇ, ಗಿಲ್ಯಾದಿಗೆ ಹೋಗಿ ತೈಲವನ್ನು ತೆಗೆದುಕೋ. ನೀನು ಬಹಳ ಔಷಧವನ್ನು ತೆಗೆದುಕೊಳ್ಳುವುದು ವ್ಯರ್ಥವಾಗಿದೆ. ಏಕೆಂದರೆ ನಿನಗೆ ಗುಣವಾಗುವುದಿಲ್ಲ!


ಇಗೋ, ಎರಡು ಕುದುರೆಗಳನ್ನು ಹೊಂದಿರುವ ರಥದಲ್ಲಿ ಒಬ್ಬ ವ್ಯಕ್ತಿ ಸವಾರಿ ಮಾಡಿ ಬರುತ್ತಿದ್ದಾನೆ ಬಾಬಿಲೋನ್ ಬಿದ್ದುಹೋಯಿತು, ಬಾಬಿಲೋನ್ ಬಿದ್ದುಹೋಯಿತು! ಅದರ ಕೆತ್ತಿದ ದೇವತೆಗಳ ವಿಗ್ರಹಗಳೆಲ್ಲ ಮುರಿದು ನೆಲಸಮವಾಗಿವೆ.”


ಅವನ ಹಿಂದೆ ಎರಡನೆಯವನಾದ ಒಬ್ಬ ದೇವದೂತನು ಬಂದು, “ ‘ಬಿದ್ದಳು, ಬಾಬಿಲೋನ್ ಮಹಾನಗರಿಯು ಬಿದ್ದಳು!’ ಆಕೆಯು ಸಕಲ ಜನಾಂಗಗಳಿಗೆ ತನ್ನ ಅತ್ಯಾಸಕ್ತಿಯ ಅನೈತಿಕತೆವೆಂಬ ದ್ರಾಕ್ಷಾರಸವನ್ನು ಕುಡಿಸಿದಳು,” ಎಂದು ಹೇಳಿದನು.


ಅವನು ಮಹಾಧ್ವನಿಯಿಂದ: “ ‘ಬಿದ್ದಳು! ಬಾಬಿಲೋನ್ ಮಹಾನಗರಿಯು ಬಿದ್ದಳು!’ ಆಕೆಯು ದೆವ್ವಗಳಿಗೆ ವಾಸಸ್ಥಾನವೂ ಎಲ್ಲಾ ದುರಾತ್ಮಗಳಿಗೂ ಅಶುದ್ಧವಾದ ಹಾಗೂ ಅಸಹ್ಯವಾದ ಪ್ರತಿಯೊಂದು ಪ್ರಾಣಿಪಕ್ಷಿಗಳಿಗೂ ನಿವಾಸವಾಗಿದ್ದಾಳೆ.


“ಜನಾಂಗಗಳಲ್ಲಿ ಪ್ರಚುರಪಡಿಸಿರಿ, ಧ್ವಜವನ್ನೆತ್ತಿ ಪ್ರಕಟಿಸಿರಿ; ಮರೆಮಾಡದೇ ಹೀಗೆ ಸಾರಿರಿ, ‘ಬಾಬಿಲೋನ್ ಶತ್ರುವಶವಾಯಿತು; ಬೇಲ್ ದೇವತೆಗೆ ನಾಚಿಕೆಯಾಯಿತು; ಮೆರೋದಾಕ್ ತುಂಡುತುಂಡಾಗಿ ಮುರಿದು ಹೋದನು. ಅವಳ ವಿಗ್ರಹಗಳಿಗೆ ನಾಚಿಕೆಯಾಯಿತು. ಮತ್ತು ಅವಳ ವಿಗ್ರಹಗಳು ಭಯದಿಂದ ತುಂಬಿವೆ.’


ಮೋವಾಬು ಚದರಿಹೋಯಿತೆಂದು ನಾಚಿಕೆಗೆ ಈಡಾಗಿದೆ. ಗೋಳಾಡಿರಿ, ಕೂಗಿರಿ; ಮೋವಾಬು ಹಾಳಾಯಿತೆಂದು ಅರ್ನೋನಿನಲ್ಲಿ ತಿಳಿಸಿರಿ.


ನಿನ್ನ ಗಾಯಕ್ಕೆ ಮದ್ದಿಲ್ಲ, ನಿನ್ನ ಗಾಯ ಪ್ರಾಣನಾಶಕ. ನಿನ್ನ ಸುದ್ದಿಯನ್ನು ಕೇಳುವವರೆಲ್ಲರೂ ನಿನ್ನ ಪತನಕ್ಕಾಗಿ ಕೈ ತಟ್ಟುವರು. ಏಕೆಂದರೆ ನಿನ್ನ ಕೆಡುಕಿಗೆ ನಿತ್ಯವೂ ಗುರಿಯಾಗದವರು ಯಾರಿದ್ದಾರೆ?


ಮೇದ್ಯನಾದ ದಾರ್ಯಾವೆಷನು ತನ್ನ ಅರವತ್ತೆರಡು ವಯಸ್ಸಿನಲ್ಲಿ ರಾಜ್ಯವನ್ನು ವಶಪಡಿಸಿಕೊಂಡನು.


ಅದಕ್ಕಾಗಿಯೇ ಆತನು ಕಳುಹಿಸಿದ ಕೈಯ ಭಾಗವು ಬಂದು ಆ ಬರಹವನ್ನು ಬರೆದಿದೆ.


“ಮನುಷ್ಯಪುತ್ರನೇ, ಪ್ರವಾದಿಸು ಮತ್ತು ಹೇಳು: ‘ಸಾರ್ವಭೌಮ ಯೆಹೋವ ದೇವರು ಹೀಗೆ ಹೇಳುತ್ತಾರೆ: “ ‘ “ಅಯ್ಯೋ ಆ ದಿನ!” ಎಂದು, ಅಳುತ್ತಾ ಹೇಳಿರಿ.


“ಶೇಷಕ್ ಹೇಗೆ ಶತ್ರುವಶವಾಗಿದೆ, ಸಮಸ್ತ ಭೂಮಿಯ ಹೊಗಳಿಕೆಯು ಆಶ್ಚರ್ಯಗೊಂಡಿದೆ; ಬಾಬಿಲೋನ್ ಜನಾಂಗಗಳೊಳಗೆ ಹೇಗೆ ಎಷ್ಟು ನಿರ್ಜನವಾಯಿತು!


ಆದ್ದರಿಂದ ನಾನು ಮೋವಾಬಿನ ನಿಮಿತ್ತ ಗೋಳಿಡುವೆನು; ಸಮಸ್ತ ಮೋವಾಬಿನ ನಿಮಿತ್ತ ಕೂಗುವೆನು; ಕೀರ್ ಹೆರೆಸಿನ ಮನುಷ್ಯರ ನಿಮಿತ್ತ ನನ್ನ ಹೃದಯವು ದುಃಖಿಸುವುದು.


ಗಿಲ್ಯಾದಿನಲ್ಲಿ ಮುಲಾಮು ಇಲ್ಲವೋ? ಅಲ್ಲಿ ವೈದ್ಯನಿಲ್ಲವೋ? ಹಾಗಾದರೆ ನನ್ನ ಜನರ ಗಾಯಕ್ಕೆ ಏಕೆ ಸ್ವಸ್ಥತೆ ಇಲ್ಲ?


ಒಂದೇ ದಿನದೊಳಗೆ, ಒಂದು ಕ್ಷಣದಲ್ಲೇ, ಪುತ್ರ ಶೋಕ ಮತ್ತು ವಿಧವೆಯ ಸ್ಥಿತಿಯು ಇವೆರಡೂ ನಿನಗೆ ಬರುವುದು. ನಿನ್ನ ಮಂತ್ರಗಳು ಬಹಳವಾಗಿರುವುದರಿಂದಲೂ, ನಿನ್ನ ಮಾಟಗಳು ಹೆಚ್ಚಾಗಿರುವುದರಿಂದಲೂ, ಅವು ಸಂಪೂರ್ಣವಾಗಿ ನಿನ್ನ ಮೇಲೆ ಬರುವುವು.


ಆದ್ದರಿಂದ ನಿನ್ನ ಮಂತ್ರಕ್ಕೂ ಮೀರಿದ ಕೇಡು ನಿನ್ನ ಮೇಲೆ ಬರುವುದು. ನೀನು ಪರಿಹರಿಸಲಾಗದ ವಿಪತ್ತು ನಿನ್ನ ಮೇಲೆ ಬೀಳುವುದು. ನಿನಗೆ ತಿಳಿಯದ ನಾಶನವು ಫಕ್ಕನೆ ನಿನ್ನ ಮೇಲೆ ಬರುವುದು.”


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು