Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 52:9 - ಕನ್ನಡ ಸಮಕಾಲಿಕ ಅನುವಾದ

9 ಅನಂತರ ಬಾಬಿಲೋನಿಯರು ಚಿದ್ಕೀಯನನ್ನು ಹಿಡಿದರು. ಅವನನ್ನು ಹಮಾತ್ ನಾಡಿನ ರಿಬ್ಲದಲ್ಲಿರುವ ತಮ್ಮ ಅರಸನಾದ ನೆಬೂಕದ್ನೆಚ್ಚರನ ಬಳಿಗೆ ತೆಗೆದುಕೊಂಡು ಬಂದು, ಅವನ ಮೇಲೆ ನ್ಯಾಯವನ್ನು ನಿರ್ಣಯಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

9 ಅನಂತರ ಕಸ್ದೀಯರು ಅವನನ್ನು ಹಮಾತ್ ಪ್ರದೇಶದ ರಿಬ್ಲದಲ್ಲಿದ್ದ ಬಾಬೆಲಿನ ಅರಸನ ಬಳಿಗೆ ತೆಗೆದುಕೊಂಡು ಬಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

9 ಅನಂತರ ಬಾಬಿಲೋನಿಯರು ಅವನನ್ನು ತಮ್ಮ ಅರಸ ನೆಬೂಕದ್ನೆಚ್ಚರನ ಬಳಿಗೆ ಎಳೆದುತಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

9 ಅನಂತರ ಕಸ್ದೀಯರು ಅವನನ್ನು ಹಮಾತ್ ಪ್ರದೇಶದ ರಿಬ್ಲದಲ್ಲಿದ್ದ ತಮ್ಮ ಅರಸನ ಬಳಿಗೆ ತೆಗೆದುಕೊಂಡು ಬರಲು ಆ ಅರಸನು ಅವನಿಗೆ ಶಿಕ್ಷೆಯನ್ನು ವಿಧಿಸಿ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

9 ಬಾಬಿಲೋನಿನ ಸೈನಿಕರು ರಾಜನಾದ ಚಿದ್ಕೀಯನನ್ನು ಬಂಧಿಸಿ ಅವನನ್ನು ರಿಬ್ಲದಲ್ಲಿದ್ದ ತಮ್ಮ ರಾಜನ ಬಳಿಗೆ ಹಿಡಿದುಕೊಂಡು ಹೋದರು. ರಿಬ್ಲವು ಹಮಾತ್ ಪ್ರದೇಶದಲ್ಲಿದೆ. ರಿಬ್ಲದಲ್ಲಿ ಬಾಬಿಲೋನಿನ ರಾಜನು ಚಿದ್ಕೀಯನ ಬಗ್ಗೆ ತನ್ನ ತೀರ್ಪನ್ನು ಪ್ರಕಟಪಡಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 52:9
15 ತಿಳಿವುಗಳ ಹೋಲಿಕೆ  

ಆಗ ಕಸ್ದೀಯರ ದಂಡು ಅವರನ್ನು ಹಿಂದಟ್ಟಿ, ಯೆರಿಕೋವಿನ ಬಯಲು ಸ್ಥಳದಲ್ಲಿ ಚಿದ್ಕೀಯನನ್ನು ಹಿಡಿದರು. ಅನಂತರ ಹಮಾತ್ ನಾಡಿನ ರಿಬ್ಲದಲ್ಲಿರುವ ಬಾಬಿಲೋನಿನ ಅರಸನಾದ ನೆಬೂಕದ್ನೆಚ್ಚರನ ಬಳಿಗೆ ಅವನನ್ನು ತೆಗೆದುಕೊಂಡು ಬಂದು, ಅವನ ಮೇಲೆ ನ್ಯಾಯವನ್ನು ನಿರ್ಣಯಿಸಿದರು.


ಆಗ ಅವರು ಏರಿಹೋಗಿ ಚಿನ್ ಎಂಬ ಮರುಭೂಮಿಯಿಂದ ಹಮಾತಿನ ಕಡೆಯಲ್ಲಿರುವ ರೆಹೋಬಿನವರೆಗೂ ದೇಶವನ್ನು ಸಂಚರಿಸಿ ನೋಡಿದರು.


ಅವರು ಅರಸನನ್ನು ಹಿಡಿದುಕೊಂಡರು. ರಿಬ್ಲದಲ್ಲಿರುವ ಬಾಬಿಲೋನಿನ ಅರಸನ ಬಳಿಗೆ ತೆಗೆದುಕೊಂಡು ಬಂದು, ಅವನ ಮೇಲೆ ನ್ಯಾಯವನ್ನು ನಿರ್ಣಯಿಸಿದರು.


ಅದರೊಂದಿಗೆ ಗೆಬಾಲ್ಯರ ಪ್ರಾಂತ್ಯ, ಹೆರ್ಮೋನ್ ಬೆಟ್ಟದ ಕೆಳಗೆ ಇರುವ ಬಾಲ್ಗಾದಿನಿಂದ ಹಮಾತಿನ ದಾರಿಯವರೆಗೂ ಇರುವ ಲೆಬನೋನಿನ ಪೂರ್ವ ಪ್ರದೇಶ.


ಆದಕಾರಣ ಯೆಹೋವ ದೇವರು ಅಸ್ಸೀರಿಯದ ಅರಸನ ಸೈನ್ಯದ ಅಧಿಪತಿಗಳನ್ನೂ ಅವನ ಮೇಲೆ ಬರಮಾಡಿದರು. ಆ ಅಧಿಪತಿಗಳು ಮನಸ್ಸೆಯ ಮೂಗಿಗೆ ಕೊಂಡಿಗಳನ್ನು ಹಾಕಿ, ಅವನಿಗೆ ಕಂಚಿನ ಸಂಕೋಲೆಗಳಿಂದ ಬಂಧಿಸಿ, ಅವನನ್ನು ಬಾಬಿಲೋನಿಗೆ ಒಯ್ದರು.


ಸೊಲೊಮೋನನು ಹಮಾತ್ ಚೋಬವನ್ನು ವಶಪಡಿಸಿಕೊಂಡನು.


ಆದರೆ ಫರೋಹ ನೆಕೋವನು ಇವನನ್ನು ಯೆರೂಸಲೇಮಿನಲ್ಲಿ ಆಳದ ಹಾಗೆ ಹಮಾತ್ ದೇಶದ ರಿಬ್ಲಾ ಎಂಬ ಊರಲ್ಲಿ ಬಂಧಿಸಿಟ್ಟನು. ಯೆಹೂದ್ಯರು ಅವನಿಗೆ ಮೂರು ಸಾವಿರದ ನಾಲ್ಕುನೂರು ಕಿಲೋಗ್ರಾಂ ಬೆಳ್ಳಿಯನ್ನೂ, ಮೂವತ್ತ ನಾಲ್ಕು ಕಿಲೋಗ್ರಾಂ ಬಂಗಾರವನ್ನೂ ದಂಡ ತೆರಬೇಕಾಯಿತು.


ಅದೇ ಕಾಲದಲ್ಲಿ ಸೊಲೊಮೋನನೂ, ಅವನ ಸಂಗಡ ಲೆಬೊ ಹಮಾತಿನ ಪ್ರದೇಶ ಮೊದಲುಗೊಂಡು ಈಜಿಪ್ಟಿನ ನದಿಯವರೆಗೆ ಇರುವ ಮಹಾ ಜನಾಂಗವಾಗಿ ಕೂಡಿಬಂದಿದ್ದ ಸಮಸ್ತ ಇಸ್ರಾಯೇಲರೂ ತಮ್ಮ ದೇವರಾದ ಯೆಹೋವ ದೇವರ ಮುಂದೆ ಏಳೇಳು ದಿನಗಳು ಅಂದರೆ ಹದಿನಾಲ್ಕು ದಿವಸ ಹಬ್ಬವನ್ನು ಆಚರಿಸಿದರು.


ಶೆಫಾಮಿನಿಂದ ಮೇರೆ ಆಯಿನಿನ ಪೂರ್ವದಲ್ಲಿರುವ ರಿಬ್ಲಾಕ್ಕೆ ಇಳಿದು, ಕಿನ್ನೆರೆತ್ ಸಮುದ್ರದ ಪೂರ್ವ ತೀರವನ್ನು ಮುಟ್ಟಲಿ.


ಯೆಹೋವ ದೇವರು ಹೇಳುವುದೇನೆಂದರೆ, ತರುವಾಯ ನಾನು ಯೆಹೂದದ ಅರಸನಾದ ಚಿದ್ಕೀಯನನ್ನೂ, ಅವನ ಸೇವಕರನ್ನೂ, ಜನರನ್ನೂ ಈ ಪಟ್ಟಣದಲ್ಲಿ ವ್ಯಾಧಿಯಿಂದಲೂ, ಖಡ್ಗದಿಂದಲೂ, ಕ್ಷಾಮದಿಂದಲೂ ಉಳಿದವರನ್ನು ಬಾಬಿಲೋನಿನ ಅರಸನಾದ ನೆಬೂಕದ್ನೆಚ್ಚರನ ಕೈಗೂ, ಅವರ ಶತ್ರುಗಳ ಕೈಗೂ ಒಪ್ಪಿಸುವೆನು. ಅವನು ಅವರನ್ನು ಖಡ್ಗದ ಬಾಯಿಂದ ಹೊಡೆಯುವನು. ಅವರ ಮೇಲೆ ಕರುಣೆ ಇಡುವುದಿಲ್ಲ, ಕನಿಕರಿಸುವುದಿಲ್ಲ, ಅಂತಃಕರಣ ಪಡುವುದಿಲ್ಲ.’


ಯಾರ ವಿಷಯವಾಗಿ ನಾವು ಅವನ ನೆರಳಿನ ಕೆಳಗೆ ಬೇರೆ ಜನಾಂಗಗಳೊಳಗೆ ಬದುಕುವೆವು ಎಂದು ಹೇಳಿಕೊಂಡೆವೋ, ನಮ್ಮ ಮೂಗಿನ ಉಸಿರಾದ ಆ ಯೆಹೋವ ದೇವರ ಅಭಿಷಿಕ್ತನು ಅವರ ಬಲೆಗಳಲ್ಲಿ ಸಿಕ್ಕಿಕೊಂಡನು.


ನೀವು ಖಡ್ಗದಿಂದ ನಾಶವಾಗುವಿರಿ. ನಾನು ಇಸ್ರಾಯೇಲಿನ ಮೇರೆಯಲ್ಲಿ ನ್ಯಾಯತೀರಿಸುವೆನು. ಆಗ ನಾನೇ ಯೆಹೋವ ದೇವರೆಂದು ನಿಮಗೆ ತಿಳಿಯುವುದು.


ಅವರು ರಥಗಳ ಸಂಗಡವಾಗಿಯೂ ಬಂಡಿಗಳ ಸಂಗಡವಾಗಿಯೂ ಜನಗಳ ಸಮೂಹದ ಸಂಗಡವಾಗಿಯೂ ಬಲವುಳ್ಳವರಾಗಿ ತಮ್ಮ ಆಯುಧಗಳೊಂದಿಗೆ ನಿನಗೆ ವಿರುದ್ಧವಾಗಿ ಬರುವರು. ಸುತ್ತಲೂ ಖೇಡ್ಯವನ್ನೂ ಗುರಾಣಿಯನ್ನೂ ಶಿರಸ್ತ್ರಾಣವನ್ನೂ ಹಿಡಿದು ನಿನಗೆ ವಿರುದ್ಧವಾಗಿರುವೆನು. ಇದಲ್ಲದೆ ನಾನು ಅವರಿಗೆ ನ್ಯಾಯತೀರ್ಪಿನ ಅಧಿಕಾರ ಕೊಡುವೆನು. ಅವರು ತಮ್ಮ ನ್ಯಾಯಗಳ ಪ್ರಕಾರ ನಿನಗೆ ನ್ಯಾಯತೀರಿಸುವರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು